Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 13:2 - ಪರಿಶುದ್ದ ಬೈಬಲ್‌

2 ಆದ್ದರಿಂದ ಸರ್ಕಾರಕ್ಕೆ ವಿರೋಧವಾಗಿರುವ ವ್ಯಕ್ತಿಯು ನಿಜವಾಗಿಯೂ ದೇವರ ಆಜ್ಞೆಗೇ ವಿರೋಧವಾಗಿದ್ದಾನೆ. ಸರ್ಕಾರಕ್ಕೆ ವಿರೋಧವಾಗಿರುವ ಜನರು ತಮ್ಮ ಮೇಲೆ ತಾವೇ ದಂಡನೆಯನ್ನು ಬರಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದುದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮವನ್ನು ಎದುರಿಸುತ್ತಾನೆ. ಎದುರಿಸುವವರು ಶಿಕ್ಷೆಗೊಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆದುದರಿಂದ ಅಧಿಕಾರವನ್ನು ವಿರೋಧಿಸುವವರು ದೇವರ ಆ ನೇಮಕವನ್ನೇ ವಿರೋಧಿಸುತ್ತಾರೆ. ಅಂಥವರು ಶಿಕ್ಷೆಗೆ ಗುರಿಯಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದ್ದರಿಂದ ಅಧಿಕಾರಕ್ಕೆ ಎದುರು ಬೀಳುವವನು ದೇವರ ನೇಮಕವನ್ನು ಎದುರಿಸುವವನಾಗಿರುತ್ತಾನೆ. ಹಾಗೆ ಎದುರಿಸುವವರು ತೀರ್ಪಿಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಜೊ ಕೊನ್ ಅದಿಕಾರ್ಯ್ಯಾಂಚ್ಯಾ ವಿರೊದ್ ಜಾತಾ ತೊ ದೆವಾನ್ ಕರುನ್ ಥವಲ್ಲ್ಯಾ ಯವಸ್ಥಾಚ್ಯಾ ವಿರೊದ್ ಜಾತಾ. ಅನಿ ಜೊ ಕೊನ್ ಅಶೆ ವಿರೊದ್ ಜಾತಾ ತೊ ಅಪ್ನಾಚ್ಯಾ ವರ್‍ತಿಚ್ ಶಿಕ್ಷಾ ಮಾಗುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 13:2
14 ತಿಳಿವುಗಳ ಹೋಲಿಕೆ  

ಈ ಲೋಕದ ಅಧಿಕಾರಿಗಳಿಗೆ ವಿಧೇಯರಾಗಿರಿ. ಪ್ರಭುವಿಗಾಗಿ ಇದನ್ನು ಮಾಡಿರಿ. ಸರ್ವಾಧಿಕಾರಿಯಾದ ರಾಜನಿಗೆ ವಿಧೇಯರಾಗಿರಿ.


ನೀನು ಜನರಿಗೆ ತಿಳಿಸಬೇಕಾದದ್ದೇನೆಂದರೆ: ನಿಮ್ಮ ಅಧಿಪತಿಗಳಿಗೂ ಅಧಿಕಾರಿಗಳಿಗೂ ಅಧೀನರಾಗಿರಿ; ಸಕಲ ಸತ್ಕಾರ್ಯಗಳನ್ನು ಮಾಡಲು ಸಿದ್ಧರಾಗಿರಿ.


ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಅನೇಕರು ಬೋಧಕರಾಗಬಾರದು. ಏಕೆಂದರೆ ಬೋಧಕರಾದ ನಮಗೆ ಇತರ ಜನರಿಗಿಂತ ಕಠಿಣವಾದ ತೀರ್ಪಾಗುತ್ತದೆ ಎಂಬುದು ನಿಮಗೆ ತಿಳಿದಿದೆ.


ಆದ್ದರಿಂದ ನೀವು ಸರ್ಕಾರಕ್ಕೆ ವಿಧೇಯರಾಗಬೇಕು. ನೀವು ದಂಡನೆಗೆ ಗುರಿಯಾಗಬಹುದೆಂಬ ಕಾರಣದಿಂದ ಮಾತ್ರವಲ್ಲದೆ, ನಿಮ್ಮ ಮನಸ್ಸಾಕ್ಷಿಯ ದೆಸೆಯಿಂದಲೂ ನೀವು ಅವರಿಗೆ ವಿಧೇಯರಾಗಬೇಕು.


ಅವರು ವಿಧವೆಯರ ಆಸ್ತಿಯನ್ನು ಕಸಿದುಕೊಳ್ಳುತ್ತಾರೆ. ಉದ್ದುದ್ದ ಪ್ರಾರ್ಥನೆಗಳನ್ನು ಮಾಡುವುದರ ಮೂಲಕ ತಮ್ಮನ್ನು ತಾವೇ ಒಳ್ಳೆಯವರೆಂದು ತೋರಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ದೇವರು ಈ ಜನರನ್ನು ಕಠಿಣವಾಗಿ ಶಿಕ್ಷಿಸುತ್ತಾನೆ” ಎಂದು ಹೇಳಿದನು.


ಆದರೆ ಅವರು ವಿಧವೆಯರಿಗೆ ಮೋಸಮಾಡಿ ಅವರ ಮನೆಗಳನ್ನು ಕಸಿದುಕೊಳ್ಳುತ್ತಾರೆ. ಬಳಿಕ ಉದ್ದವಾದ ಪ್ರಾರ್ಥನೆಗಳನ್ನು ಮಾಡಿ ಒಳ್ಳೆಯವರಂತೆ ನಟಿಸುತ್ತಾರೆ. ದೇವರು ಇವರನ್ನು ಕಠಿಣವಾದ ದಂಡನೆಗೆ ಗುರಿಪಡಿಸುತ್ತಾನೆ” ಎಂದು ಹೇಳಿದನು.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


ಆಗ ಅವರು ದಿನನಿತ್ಯ ನನ್ನನ್ನು ಆರಾಧಿಸಲು ಬರುವರು. ಜನರು ನನ್ನ ವಿಧಿಗಳನ್ನು ಕಲಿತುಕೊಳ್ಳಲು ಇಷ್ಟಪಡುವರು. ಆಗ ಅವರು ಸರಿಯಾಗಿ ಜೀವಿಸುವ ಜನಾಂಗವಾಗುವರು. ಅವರು ದೇವರ ಒಳ್ಳೆಯ ಆಜ್ಞೆಗಳನ್ನು ಬಿಡದೆ ಅನುಸರಿಸುವರು. ಅವರು ಪಕ್ಷಪಾತವಿಲ್ಲದೆ ನ್ಯಾಯತೀರಿಸಲು ನನ್ನನ್ನು ಕೇಳುವರು. ದೇವರ ನಿರ್ಧಾರವನ್ನು ಕೇಳಲು ಆತನ ಬಳಿಗೆ ಹೋಗಲು ಇಚ್ಛಿಸುವರು.


ಅಲ್ಲದೆ ಮೋಶೆಯು, “ನೀವು ಗೊಣಗುಟ್ಟುತ್ತಿರುವುದನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ರಾತ್ರಿಯಲ್ಲಿ ಆತನು ನಿಮಗೆ ಮಾಂಸವನ್ನು ಕೊಡುವನು. ಪ್ರತಿ ಮುಂಜಾನೆ ನಿಮಗೆ ಬೇಕಾದಷ್ಟು ರೊಟ್ಟಿಯು ದೊರಕುವುದು. ನೀವು (ಆರೋನನ ಮೇಲೂ ನನ್ನ ಮೇಲೂ) ಗೊಣಗುಟ್ಟುತ್ತಿದ್ದೀರಿ? ಆದರೆ ನಮಗೆ ದೂರು ಹೇಳಲು ನಾವೆಷ್ಟರವರು? ನೀವು ಯೆಹೋವನ ವಿರುದ್ಧವಾಗಿ ದೂರು ಹೇಳುತ್ತಿದ್ದೀರೆಂಬುದು ನಿಮ್ಮ ಜ್ಞಾಪಕದಲ್ಲಿರಲಿ” ಎಂದು ಹೇಳಿದನು.


“ನಾವು ಮಾಡುವ ಕಾರ್ಯಗಳು ದೇವರ ಹಿಡಿತಕ್ಕೆ ಒಳಗಾಗಿರುವುದಾದರೆ, ನಮ್ಮ ಪಾಪಗಳ ನಿಮಿತ್ತ ದೇವರು ನಮ್ಮನ್ನು ದೂಷಿಸುವುದೇಕೆ?” ಎಂದು ನಿಮ್ಮಲ್ಲಿ ಒಬ್ಬನು ಕೇಳಬಹುದು.


ನೀವೆಲ್ಲರೂ ಸರ್ಕಾರದ ಅಧಿಕಾರಿಗಳಿಗೆ ವಿಧೇಯರಾಗಿರಬೇಕು. ಪ್ರತಿಯೊಬ್ಬ ಅಧಿಕಾರಿಗೆ ಅಧಿಕಾರವನ್ನು ಕೊಟ್ಟಿರುವವನು ದೇವರೇ. ಈಗಿರುವ ಎಲ್ಲಾ ಅಧಿಕಾರಿಗಳಿಗೆ ದೇವರೇ ಅಧಿಕಾರವನ್ನು ಕೊಟ್ಟಿದ್ದಾನೆ.


ಸರಿಯಾದದ್ದನ್ನು ಮಾಡುವ ಜನರಿಗೆ ಅಧಿಕಾರಿಗಳ ಭಯವಿರುವುದಿಲ್ಲ. ಆದರೆ ಕೆಟ್ಟದ್ದನ್ನು ಮಾಡುವ ಜನರಿಗೆ ಅಧಿಕಾರಿಗಳ ಭಯವಿರುತ್ತದೆ. ನೀವು ಅಧಿಕಾರಿಗಳಿಗೆ ಭಯಪಡದವರಾಗಿರಬೇಕೆಂದು ಅಪೇಕ್ಷಿಸುತ್ತೀರೋ? ಹಾಗಾದರೆ ನೀವು ಸರಿಯಾದದ್ದನ್ನೇ ಮಾಡಿರಿ. ಆಗ ಅಧಿಕಾರಿಗಳು ನಿಮ್ಮನ್ನು ಹೊಗಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು