Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:19 - ಪರಿಶುದ್ದ ಬೈಬಲ್‌

19 ಆದ್ದರಿಂದ ಸಮಾಧಾನವನ್ನು ಉಂಟುಮಾಡುವ ಕಾರ್ಯಗಳನ್ನು ನಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಮಾಡಲು ನಾವು ಪ್ರಯತ್ನಿಸೋಣ. ಪರಸ್ಪರ ಸಹಾಯಕವಾದ ಕಾರ್ಯಗಳನ್ನೇ ಮಾಡಲು ನಾವು ಪ್ರಯತ್ನಿಸೋಣ. ದೇವರ ಕಾರ್ಯವನ್ನು ನಾಶಪಡಿಸಲು ಆಹಾರಕ್ಕೆ ಅವಕಾಶ ಕೊಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದ್ದರಿಂದ ನಾವು ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದ್ದರಿಂದ ಶಾಂತಿಸಮಾಧಾನಕ್ಕೂ ಪರಸ್ಪರ ಅಭ್ಯುದಯಕ್ಕೂ ಹಿತಕರವಾದವುಗಳನ್ನೇ ಅರಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದದರಿಂದ ನಾವು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವವುಗಳನ್ನು ಸಾಧಿಸಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದ್ದರಿಂದ ಯಾವುದು ನಮ್ಮನ್ನು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ನಡೆಸುತ್ತದೋ ಅದನ್ನೇ ಮಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅಶೆ ರ್‍ಹಾತಾನಾ, ಅಮಿ ಸಮಾದಾನ್ ಹಾನ್ತಲ್ಯಾ ಅನಿ ಎಕಾಮೆಕಾಕ್ ಆದಾರ್ ಹೊತಲ್ಯಾ ವಿಶಯಾಂಚ್ಯಾಸಾಟ್ನಿ ರಾಬುವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:19
28 ತಿಳಿವುಗಳ ಹೋಲಿಕೆ  

ನಿಮ್ಮ ಬಾಯಿಂದ ಕೆಟ್ಟ ಮಾತುಗಳು ಬಾರದಿರಲಿ. ಭಕ್ತಿಯನ್ನು ವೃದ್ಧಿಮಾಡುವಂಥ ಕಾಲೋಚಿತವಾದ ಮಾತು ಇದ್ದರೆ ಕೇಳುವವರ ಹಿತಕ್ಕಾಗಿ ಅದನ್ನು ಆಡಿರಿ.


ಎಲ್ಲಾ ಜನರೊಂದಿಗೆ ಶಾಂತಿಯಿಂದ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಪ್ರಯತ್ನಿಸಿರಿ.


ಕೆಟ್ಟದ್ದನ್ನು ಬಿಟ್ಟು ಒಳ್ಳೆಯವುಗಳನ್ನು ಮಾಡಿರಿ. ಸಮಾಧಾನವನ್ನು ಬಯಸಿ ಅದನ್ನು ಪಡೆದುಕೊಳ್ಳಲು ಪ್ರಯತ್ನಿಸಿರಿ.


ನಮ್ಮಲ್ಲಿ ಪ್ರತಿಯೊಬ್ಬರು ತಮ್ಮ ನೆರೆಯವರ ಹಿತವನ್ನು ನೋಡಿಕೊಳ್ಳಬೇಕು. ನಂಬಿಕೆಯಲ್ಲಿ ಬಲಹೀನರಾಗಿರುವವರನ್ನು ಬಲಗೊಳಿಸಲು ನೆರವಾಗಿರಬೇಕು.


ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.


ಸಹೋದರ ಸಹೋದರಿಯರೇ, ನಿಮಗೆ ವಂದನೆಗಳು. ಪರಿಪೂರ್ಣರಾಗಿರಲು ಪ್ರಯತ್ನಿಸಿ. ನಾನು ಕೇಳಿಕೊಂಡ ಕಾರ್ಯಗಳನ್ನು ಮಾಡಿರಿ. ಒಂದೇ ಮನಸ್ಸು ಉಳ್ಳವರಾಗಿದ್ದು ಸಮಾಧಾನದಿಂದ ಜೀವಿಸಿರಿ. ಆಗ ಪ್ರೀತಿಸ್ವರೂಪನೂ ಶಾಂತಿದಾಯಕನೂ ಆದ ದೇವರು ನಿಮ್ಮೊಂದಿಗೆ ಇರುವನು.


“ಉಪ್ಪು ಒಳ್ಳೆಯದು. ಆದರೆ ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ, ಅದನ್ನು ಮತ್ತೆ ನೀವು ಉಪ್ಪನ್ನಾಗಿ ಮಾಡಲಾರಿರಿ. ಆದ್ದರಿಂದ ಒಳ್ಳೆಯತನದಿಂದ ತುಂಬಿದವರಾಗಿರಿ ಮತ್ತು ಒಬ್ಬರೊಡನೊಬ್ಬರು ಸಮಾಧಾನದಿಂದಿರಿ” ಎಂದು ಹೇಳಿದನು.


ಸಮಾಧಾನಪಡಿಸುವವರು ಧನ್ಯರು. ಅವರು ‘ದೇವರ ಮಕ್ಕಳು’ ಎನಿಸಿಕೊಳ್ಳುವರು.


ಅವನು ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಲಿ. ಅವನು ಶಾಂತಿಯನ್ನು ಎದುರುನೋಡುತ್ತಾ ಅದನ್ನು ಪಡೆಯಲು ಪ್ರಯತ್ನಿಸಲಿ.


ಆದ್ದರಿಂದ ಸಹೋದರ ಸಹೋದರಿಯರೇ, ನೀವು ಮಾಡತಕ್ಕದ್ದೇನು? ನೀವು ಸಭೆಸೇರಿದಾಗ, ಒಬ್ಬನು ಹಾಡುತ್ತಾನೆ; ಒಬ್ಬನು ಉಪದೇಶ ಮಾಡುತ್ತಾನೆ; ಒಬ್ಬನು ದೇವರಿಂದ ಹೊಸ ಸತ್ಯವನ್ನು ತಿಳಿಸುತ್ತಾನೆ; ಒಬ್ಬನು ಪರಭಾಷೆಯಲ್ಲಿ ಮಾತಾಡುತ್ತಾನೆ; ಒಬ್ಬನು ಆ ಪರಭಾಷೆಯನ್ನು ಅನುವಾದಿಸುತ್ತಾನೆ. ಸಭೆಯು ದೃಢವಾಗಿ ಬೆಳೆಯಬೇಕೆಂಬುದೇ ಇವುಗಳ ಉದ್ದೇಶವಾಗಿರಬೇಕು.


ನಾನು ಸಹ ಹಾಗೆಯೇ ಮಾಡುತ್ತೇನೆ. ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸಲು ನಾನು ಪ್ರಯತ್ನಿಸುತ್ತೇನೆ. ನನಗೆ ಹಿತಕರವಾದದ್ದನ್ನು ಮಾಡಲು ಇಷ್ಟಪಡದೆ ಬಹು ಜನರಿಗೆ ಹಿತಕರವಾದದ್ದನ್ನೇ ಮಾಡಲು ಪ್ರಯತ್ನಿಸುತ್ತೇನೆ. ಅವರು ರಕ್ಷಣೆ ಹೊಂದಬೇಕೆಂಬುದೇ ನನ್ನ ಅಪೇಕ್ಷೆ.


ಆಹಾ, ಸಹೋದರರು ಅನ್ಯೋನ್ಯತೆಯಿಂದಿರುವುದು ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು.


ಯುವಕರು ಇಷ್ಟಪಡುವ ಕೆಟ್ಟಕಾರ್ಯಗಳಿಂದ ನೀನು ದೂರವಾಗಿರು. ಪ್ರೀತಿ, ನಂಬಿಕೆ ಮತ್ತು ಶಾಂತಿಯನ್ನು ಹೊಂದಿದವನಾಗಿದ್ದು ಯೋಗ್ಯವಾದ ರೀತಿಯಲ್ಲಿ ಜೀವಿಸಲು ಬಹಳವಾಗಿ ಪ್ರಯತ್ನಪಡು. ಪ್ರಭುವಿನಲ್ಲಿ ಭರವಸವಿಟ್ಟಿರುವ ಮತ್ತು ಪರಿಶುದ್ಧ ಹೃದಯ ಹೊಂದಿರುವ ಜನರೊಂದಿಗೆ ಒಟ್ಟುಗೂಡಿ ಈ ಕಾರ್ಯಗಳನ್ನು ಮಾಡು.


ಕಲ್ಪನಾಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಗಮನಕೊಡಬಾರದೆಂದು ಅವರಿಗೆ ಆಜ್ಞಾಪಿಸು. ಆ ಸಂಗತಿಗಳು ವಾದವಿವಾದಗಳನ್ನು ಮಾತ್ರ ತರುತ್ತವೆ. ಅವುಗಳಿಂದ ದೇವರ ಕಾರ್ಯಕ್ಕೆ ಪ್ರಯೋಜನವೇನೂ ಇಲ್ಲ. ದೇವರ ಕಾರ್ಯವನ್ನು ನಂಬಿಕೆಯಿಂದ ಮಾಡಬೇಕು.


ಈವರೆಗೂ ನಾವು ನಿಮ್ಮೊಂದಿಗೆ ನಮ್ಮ ಬಗ್ಗೆ ಸಮರ್ಥಿಸಿಕೊಳ್ಳುತ್ತಿದ್ದೇವೆಂದು ಭಾವಿಸುತ್ತೀರೋ? ಇಲ್ಲ! ನಾವು ಕ್ರಿಸ್ತನಲ್ಲಿ ಈ ಸಂಗತಿಗಳನ್ನು ದೇವರ ಮುಂದೆ ಹೇಳುತ್ತಿದ್ದೇವೆ. ನೀವು ನಮ್ಮ ಪ್ರಿಯ ಸ್ನೇಹಿತರು. ನಾವು ಮಾಡುವ ಪ್ರತಿಯೊಂದೂ ನಿಮ್ಮನ್ನು ಮತ್ತಷ್ಟು ಬಲಿಷ್ಠರನ್ನಾಗಿ ಮಾಡುವುದಕ್ಕಾಗಿಯೇ.


ಆದರೆ ಕ್ರಿಸ್ತ ವಿಶ್ವಾಸಿಯಲ್ಲದ ವ್ಯಕ್ತಿಯು ಬಿಟ್ಟು ಹೋಗಲು ನಿರ್ಧರಿಸಿದರೆ, ಆ ವ್ಯಕ್ತಿಯು ಬಿಟ್ಟು ಹೋಗಲಿ. ಈ ರೀತಿ ಸಂಭವಿಸಿದರೆ, ಕ್ರೈಸ್ತ ಸಹೋದರನಾಗಲಿ ಕ್ರೈಸ್ತ ಸಹೋದರಿಯಾಗಲಿ ವಿವಾಹ ಬಂಧನದಿಂದ ಬಿಡುಗಡೆಯಾಗಿದ್ದಾರೆ. ದೇವರು ನಮ್ಮನ್ನು ಸಮಾಧಾನದ ಜೀವಿತಕ್ಕೆ ಕರೆದನು.


ವಿಗ್ರಹಗಳಿಗೆ ಯಜ್ಞ ಮಾಡಿದ ಪಶುವಿನ ಮಾಂಸದ ಬಗ್ಗೆ ಈಗ ನಾನು ಬರೆಯುತ್ತೇನೆ. “ನಮಗೆಲ್ಲರಿಗೂ ಜ್ಞಾನವಿದೆ” ಎಂಬುದು ನಮಗೆ ಗೊತ್ತಿದೆ. “ಜ್ಞಾನವು” ನಮ್ಮನ್ನು ಅಹಂಕಾರದಿಂದ ತುಂಬಿಸುತ್ತದೆ. ಆದರೆ ಪ್ರೀತಿಯು ಬೇರೆಯವರಲ್ಲಿ ಭಕ್ತಿವೃದ್ಧಿಯನ್ನು ಮಾಡುತ್ತದೆ.


“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ನಾವು ಮಾಡುವ ಕಾರ್ಯಗಳೆಲ್ಲಾ ಒಳ್ಳೆಯವೆಂದು ಹೇಳುವುದು ಸರಿಯಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ಕೆಲವು ಕಾರ್ಯಗಳು ಬೇರೆಯವರ ಅಭಿವೃದ್ಧಿಗೆ ಸಹಾಯಕವಾಗಿರುವುದಿಲ್ಲ.


ಆದರೆ ಪ್ರವಾದಿಸುವವನು ಜನರೊಂದಿಗೆ ಮಾತಾಡುತ್ತಾನೆ. ಅವನು ಜನರಿಗೆ ಶಕ್ತಿಯನ್ನು, ಪ್ರೋತ್ಸಾಹವನ್ನು ಮತ್ತು ಆದರಣೆಯನ್ನು ಕೊಡುತ್ತಾನೆ.


ಪರಭಾಷೆಯಲ್ಲಿ ಮಾತಾಡುವ ವ್ಯಕ್ತಿಯು ತನಗೆ ಮಾತ್ರ ಸಹಾಯ ಮಾಡಿಕೊಳ್ಳುವನು. ಆದರೆ ಪ್ರವಾದಿಸುವವನು ಇಡೀ ಸಭೆಗೆ ಸಹಾಯ ಮಾಡುತ್ತಾನೆ.


ವಿವಿಧ ಭಾಷೆಗಳಲ್ಲಿ ಮಾತಾಡುವ ವರವನ್ನು ನೀವೆಲ್ಲರೂ ಹೊಂದಿರಬೇಕೆಂದು ನನ್ನ ಅಪೇಕ್ಷೆಯಾಗಿದೆ. ಆದರೆ ನೀವು ಪ್ರವಾದಿಸಬೇಕೆಂದು ನಾನು ಇನ್ನೂ ಹೆಚ್ಚಾಗಿ ಅಪೇಕ್ಷಿಸುತ್ತೇನೆ. ಕೇವಲ ವಿವಿಧ ಭಾಷೆಗಳನ್ನು ಮಾತನಾಡುವವನಿಗಿಂತಲೂ ಪ್ರವಾದಿಸುವವನು ಹೆಚ್ಚು ಶ್ರೇಷ್ಠನಾಗಿದ್ದಾನೆ. ಆದರೆ ವಿವಿಧ ಭಾಷೆಗಳಲ್ಲಿ ಮಾತಾಡುವವನು ಆ ಭಾಷೆಗಳನ್ನು ಅನುವಾದಿಸಬಲ್ಲವನಾಗಿದ್ದರೆ, ಅವನು ಪ್ರವಾದಿಸುವವನಷ್ಟೇ ಶ್ರೇಷ್ಠನಾಗುತ್ತಾನೆ. ಆಗ ಅವನು ಹೇಳುವ ಸಂಗತಿಗಳ ಮೂಲಕ ಸಭೆಗೆ ಸಹಾಯವಾಗುವುದು.


ಸಭೆಯ ಸೇವೆಗೋಸ್ಕರ ದೇವರ ಪರಿಶುದ್ಧ ಜನರನ್ನು ಸಿದ್ಧಪಡಿಸುವುದಕ್ಕಾಗಿ ಆತನು ಅವರನ್ನು ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು