ರೋಮಾಪುರದವರಿಗೆ 14:2 - ಪರಿಶುದ್ದ ಬೈಬಲ್2 ಒಬ್ಬನು ಯಾವ ಬಗೆಯ ಆಹಾರವನ್ನಾದರೂ ತಿನ್ನಬಹುದೆಂದು ಭಾವಿಸುತ್ತಾನೆ. ಆದರೆ ನಂಬಿಕೆಯಲ್ಲಿ ಬಲಹೀನನಾಗಿರುವ ವ್ಯಕ್ತಿಯು ತಾನು ತರಕಾರಿಗಳನ್ನು ಮಾತ್ರ ತಿನ್ನಬಹುದೆಂದು ಭಾವಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಒಬ್ಬನು ಯಾವುದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಒಬ್ಬನು ಎಂಥ ಆಹಾರವನ್ನಾದರೂ ಭುಜಿಸಬಹುದೆಂದು ಭಾವಿಸುತ್ತಾನೆ. ವಿಶ್ವಾಸದಲ್ಲಿ ಸ್ಥಿರವಿಲ್ಲದವನು ಸಸ್ಯಾಹಾರಿ ಆಗಿಯೇ ಇರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಒಬ್ಬನು ಯಾವದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಒಬ್ಬನ ವಿಶ್ವಾಸವು ಎಲ್ಲವನ್ನೂ ತಿನ್ನುವಂತೆ ಮಾಡುತ್ತದೆ. ಆದರೆ ವಿಶ್ವಾಸದಲ್ಲಿ ಬಲಹೀನನಾಗಿರುವವನು ಸಸ್ಯಾಹಾರಿಯಾಗಿಯೇ ಇರುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಉಲ್ಲ್ಯಾ ಲೊಕಾಕ್ನಿ ತೆಂಚೊ ವಿಶ್ವಾಸ್ ತೆನಿ ಕಾಯ್ಬಿ ಖಾಲ್ಯಾರ್ ಹೊತಾ ಮನ್ತಾ, ಖರೆ ಜೊ ಮಾನುಸ್ ವಿಶ್ವಾಸಾತ್ ಘಟ್ ನಾ ತೊ ಖಾಲಿ ತರ್ಕಾರಿ ಎವ್ಡೆಚ್ ಖಾತಾ. ಅಧ್ಯಾಯವನ್ನು ನೋಡಿ |
ನಡೆದ ಸಂಗತಿ ಏನೆಂದರೆ: ಪೇತ್ರನು ಮೊದಲು ಅಂತಿಯೋಕ್ಯಕ್ಕೆ ಬಂದಾಗ ಅವನು ಯೆಹೂದ್ಯರಲ್ಲದವರೊಂದಿಗೆ ಊಟಮಾಡಿದನು ಮತ್ತು ಅನ್ಯೋನ್ಯತೆಯಿಂದಿದ್ದನು. ಆ ಬಳಿಕ ಯಾಕೋಬನಿಂದ ಕಳುಹಿಸಲ್ಪಟ್ಟಿದ್ದ ಕೆಲವು ಯೆಹೂದ್ಯರು ಬಂದರು. ಆಗ, ಪೇತ್ರನು ಯೆಹೂದ್ಯರಲ್ಲದವರೊಂದಿಗೆ ಊಟಮಾಡುವುದನ್ನು ನಿಲ್ಲಿಸಿದನು. ಪೇತ್ರನು ತನ್ನನ್ನು ಯೆಹೂದ್ಯರಲ್ಲದವರಿಂದ ಬೇರ್ಪಡಿಸಿಕೊಂಡನು. ಯೆಹೂದ್ಯರಲ್ಲದವರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಂಬಿಕೊಂಡಿದ್ದ ಯೆಹೂದ್ಯರಿಗೆ ಅವನು ಹೆದರಿಕೊಂಡನು.