Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:31 - ಪರಿಶುದ್ದ ಬೈಬಲ್‌

31 ಜುದೇಯದಲ್ಲಿರುವ ಅವಿಶ್ವಾಸಿಗಳ ಕೈಯಿಂದ ನಾನು ಪಾರಾಗುವಂತೆ ಪ್ರಾರ್ಥಿಸಿರಿ. ನಾನು ಜೆರುಸಲೇಮಿಗೆ ತೆಗೆದುಕೊಂಡು ಹೋಗುತ್ತಿರುವ ಈ ಸಹಾಯಧನವು ಅಲ್ಲಿರುವ ದೇವಮಕ್ಕಳಿಗೆ ಮೆಚ್ಚಿಕೆಯಾಗುವಂತೆ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಯಿಂದ ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಜುದೇಯದಲ್ಲಿರುವ ಅವಿಶ್ವಾಸಿಗಳ ಕೈಯಿಂದ ನಾನು ಪಾರಾಗುವಂತೆ ಪ್ರಾರ್ಥಿಸಿರಿ; ಜೆರುಸಲೇಮಿನ ದೇವಜನರು ನನ್ನ ಸೇವೆಯನ್ನು ಸಂತೋಷದಿಂದ ಸ್ವೀಕರಿಸುವಂತೆ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಗೆ ತಪ್ಪಿಸಬೇಕೆಂತಲೂ ಯೆರೂಸಲೇವಿುಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನಾನು ಯೂದಾಯ ಪ್ರಾಂತದಲ್ಲಿ ಅವಿಶ್ವಾಸಿಗಳ ಕೈಯಿಂದ ಕಾಪಾಡಬೇಕೆಂತಲೂ ನನ್ನ ಸೇವೆಯು ಯೆರೂಸಲೇಮಿನಲ್ಲಿರುವ ದೇವಜನರಿಗೆ ಮೆಚ್ಚುಗೆಯಾಗಿರಬೇಕೆಂತಲೂ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಜುದೆಯಾತ್ ಹೊತ್ತ್ಯಾ ವಿಶ್ವಾಸಾತ್ ನಸಲ್ಲ್ಯಾ ಲೊಕಾಂಚ್ಯಾ ಹಾತಾನಿತ್ಲೊ ಮಿಯಾ ಹುರುಚೊ, ಅನಿ ಮಿಯಾ ಘೆವ್ನ್ ಜಾತಲೆ ಹೆ ದಾನ್, ಜೆರುಜಲೆಮಾತ್ಲ್ಯಾ ದೆವಾಚ್ಯಾ ಲೊಕಾನಿಬಿ ಸ್ವಿಕಾರ್ ಕರಿ ಸರ್ಕೆ ಹೊಂವ್ದಿತ್ ಮನುನ್ ಮಾಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:31
18 ತಿಳಿವುಗಳ ಹೋಲಿಕೆ  

ಕೆಟ್ಟವರಾದ ಮತ್ತು ದುಷ್ಟರಾದ ಜನರ ಕೈಯಿಂದ ನಮ್ಮನ್ನು ರಕ್ಷಿಸುವಂತೆ ದೇವರಲ್ಲಿ ಪ್ರಾರ್ಥಿಸಿ. (ಪ್ರಭುವಿನಲ್ಲಿ ಜನರೆಲ್ಲರೂ ನಂಬಿಕೆಯಿಟ್ಟಿಲ್ಲ.)


ದೇವಜನರಿಗೋಸ್ಕರವಾದ ಈ ಸೇವೆಯಲ್ಲಿ ತಾವೂ ಪಾಲುಗಾರರಾಗುವ ಭಾಗ್ಯ ದೊರೆಯಬೇಕೆಂದು ಅವರು ನಮ್ಮನ್ನು ಪದೇಪದೇ ಕೇಳಿಕೊಂಡರು ಮತ್ತು ಬೇಡಿಕೊಂಡರು.


ದೇವಜನರಿಗೋಸ್ಕರವಾದ ಈ ಸಹಾಯದ ಬಗ್ಗೆ ನಾನು ನಿಮಗೆ ಬರೆಯುವುದು ನಿಜವಾಗಿಯೂ ಅಗತ್ಯವಿಲ್ಲ.


ಈಗ ನಾನು ದೇವಜನರಿಗೆ ಸಹಾಯ ಮಾಡುವುಕ್ಕಾಗಿ ಜೆರುಸಲೇಮಿಗೆ ಹೋಗುತ್ತಿದ್ದೇನೆ.


ಆದರೆ ಪ್ರಭುವು ನನ್ನ ಬಳಿಯೇ ಇದ್ದನು. ನಾನು ಸುವಾರ್ತೆಯನ್ನು ಯೆಹೂದ್ಯರಲ್ಲದವರಿಗೆ ಸಂಪೂರ್ಣವಾಗಿ ಬೋಧಿಸಲು ಪ್ರಭುವು ನನಗೆ ಶಕ್ತಿಯನ್ನು ದಯಪಾಲಿಸಿದನು. ಆ ಸುವಾರ್ತೆಯನ್ನು ಯೆಹೂದ್ಯರಲ್ಲದ ಜನರೆಲ್ಲರೂ ಕೇಳುವುದು ಪ್ರಭುವಿನ ಇಷ್ಟವಾಗಿತ್ತು. ಆತನು ನನ್ನನ್ನು ಸಿಂಹದ (ಶತ್ರು) ಬಾಯಿಂದ ರಕ್ಷಿಸಿದನು.


ನನಗೆ ಸಂಭವಿಸಿದ ಹಿಂಸೆ ಮತ್ತು ಸಂಕಟಗಳ ಬಗ್ಗೆಯೂ ನಿನಗೆ ತಿಳಿದಿದೆ. ಅಂತಿಯೋಕ್ಯ, ಇಕೋನ್ಯ, ಲುಸ್ತ್ರಗಳಲ್ಲಿ ನನಗೆ ಸಂಭವಿಸಿದ ಸಂಗತಿಗಳೆಲ್ಲವೂ ನಿನಗೆ ತಿಳಿದಿವೆ. ನಾನು ಆ ಸ್ಥಳಗಳಲ್ಲಿ ಅನುಭವಿಸಿದ ಹಿಂಸೆಯು ನಿನಗೆ ತಿಳಿದಿದೆ. ಆದರೆ ಆ ಎಲ್ಲ ತೊಂದರೆಗಳಿಂದ ಪ್ರಭುವು ನನ್ನನ್ನು ಕಾಪಾಡಿದನು.


ಆ ಯೆಹೂದ್ಯರು ಪ್ರಭುವಾದ ಯೇಸುವನ್ನೂ ಪ್ರವಾದಿಗಳನ್ನೂ ಕೊಂದುಹಾಕಿದರು. ತಮ್ಮ ದೇಶದಿಂದ (ಜುದೇಯ) ನಮ್ಮನ್ನು ಬಲವಂತವಾಗಿ ಹೊರಗಟ್ಟಿದರು. ಅವರು ದೇವರಿಗೆ ಮೆಚ್ಚಿಕೆಯಾದವರಾಗಿಲ್ಲ ಮತ್ತು ಜನರೆಲ್ಲರ ವಿರುದ್ಧವಾಗಿದ್ದಾರೆ.


ಫೆಸ್ತನು ಹೀಗೆಂದನು: “ರಾಜ ಅಗ್ರಿಪ್ಪನೇ, ನಮ್ಮೊಂದಿಗೆ ಇಲ್ಲಿ ನೆರೆದಿರುವ ಎಲ್ಲಾ ಜನರೇ, ನೀವು ನೋಡುತ್ತಿರುವ ಈ ಮನುಷ್ಯನ (ಪೌಲನ) ಮೇಲೆ ಇಲ್ಲಿರುವ ಮತ್ತು ಜೆರುಸಲೇಮಿನಲ್ಲಿರುವ ಎಲ್ಲಾ ಯೆಹೂದ್ಯರು ನನಗೆ ದೂರುಗಳನ್ನು ಹೇಳಿ, ಇವನಿಗೆ ಮರಣದಂಡನೆ ಆಗಬೇಕೆಂದು ಆರ್ಭಟಿಸಿದರು.


ಮಹಾಯಾಜಕರು ಮತ್ತು ಪ್ರಮುಖ ಯೆಹೂದ್ಯ ನಾಯಕರು ಫೆಸ್ತನ ಎದುರಿನಲ್ಲಿ ಪೌಲನಿಗೆ ವಿರೋಧವಾಗಿ ದೋಷಾರೋಪಣೆಗಳನ್ನು ಹೇಳಿದರು.


ಆಗ ಸೇನಾಧಿಪತಿಯು ಪೌಲನನ್ನು ದಂಡಿನ ಪಾಳೆಯದೊಳಗೆ ಕರೆದುಕೊಂಡು ಹೋಗಿ ಹೊಡೆಯಲು ಸೈನಿಕರಿಗೆ ಹೇಳಿದನು. ಜನರು ಪೌಲನ ವಿರೋಧವಾಗಿ ಈ ರೀತಿ ಕೂಗಲು ಕಾರಣವೇನೆಂದು ಪೌಲನಿಂದಲೇ ಹೇಳಿಸಬೇಕೆಂಬುದು ಸೇನಾಧಿಪತಿಯ ಅಪೇಕ್ಷೆಯಾಗಿತ್ತು.


ಆದರೆ ಅನನೀಯನು, “ಪ್ರಭುವೇ, ಜೆರುಸಲೇಮಿನಲ್ಲಿರುವ ನಿನ್ನ ಪವಿತ್ರ ಜನರಿಗೆ ಈ ಮನುಷ್ಯನು ಮಾಡಿದ ಅನೇಕ ಕೆಟ್ಟಕೃತ್ಯಗಳ ಬಗ್ಗೆ ಜನರು ನನಗೆ ಹೇಳಿದ್ದಾರೆ.


ಆದರೆ ಪ್ರಭುವು ಅನನೀಯನಿಗೆ, “ಹೋಗು! ಮುಖ್ಯವಾದ ಕೆಲಸಕ್ಕಾಗಿ ನಾನು ಸೌಲನನ್ನು ಆರಿಸಿಕೊಂಡಿದ್ದೇನೆ. ಅವನು ನನ್ನ ಬಗ್ಗೆ ರಾಜರುಗಳಿಗೂ ಯೆಹೂದ್ಯರಿಗೂ ಮತ್ತು ಇತರ ಜನಾಂಗಗಳಿಗೂ ತಿಳಿಸಬೇಕಾಗಿದೆ.


ಅಖಾಯದಲ್ಲಿ ಪ್ರಥಮ ವಿಶ್ವಾಸಿಗಳಾದ ಸ್ತೆಫನನನ್ನು ಮತ್ತು ಅವನ ಕುಟುಂಬದವರನ್ನು ನೀವು ಬಲ್ಲಿರಿ. ಅವರು ದೇವರ ಸೇವೆಗಾಗಿ ತಮ್ಮನ್ನು ಒಪ್ಪಿಸಿಕೊಂಡಿದ್ದಾರೆ. ಸಹೋದರ ಸಹೋದರಿಯರೇ, ನಾನು ನಿಮ್ಮನ್ನು ಕೇಳಿಕೊಳ್ಳುವುದೇನೆಂದರೆ,


ಮರಣದ ಈ ಮಹಾ ಅಪಾಯಗಳಿಂದ ದೇವರು ನಮ್ಮನ್ನು ರಕ್ಷಿಸಿದನು. ಮತ್ತು ಇನ್ನು ಮುಂದೆಯೂ ರಕ್ಷಿಸುವನು. ನಾವು ಆತನಲ್ಲಿ ಭರವಸೆ ಇಟ್ಟಿದ್ದೇವೆ. ಆತನು ನಮ್ಮನ್ನು ಇನ್ನು ಮುಂದೆಯೂ ರಕ್ಷಿಸುವನು.


ನೀವು ಮಾಡುವ ಈ ಸೇವಾಕಾರ್ಯವು ನಿಮ್ಮ ನಂಬಿಕೆಗೆ ಸಾಕ್ಷಿಯಾಗಿದೆ. ಇದರ ನಿಮಿತ್ತವಾಗಿ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಕ್ರಿಸ್ತನ ಸುವಾರ್ತೆಯನ್ನು ಅನುಸರಿಸುವುದರಿಂದ ಅವರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಹೇಳುವ ಸುವಾರ್ತೆಯನ್ನು ನೀವು ನಂಬಿದ್ದೀರಿ. ತಮ್ಮೊಂದಿಗೆ ಮತ್ತು ಎಲ್ಲರೊಂದಿಗೆ ನೀವು ಉದಾರವಾಗಿ ಹಂಚಿಕೊಂಡಿದ್ದರಿಂದ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು