Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:8 - ಪರಿಶುದ್ದ ಬೈಬಲ್‌

8 ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳು ಸತ್ಯವಾದುವುಗಳೆಂದು ತೋರಿಸುವುದಕ್ಕಾಗಿಯೂ ದೇವರು ಆ ವಾಗ್ದಾನಗಳನ್ನು ನೆರವೇರಿಸುತ್ತಾನೆ ಎಂಬುದನ್ನು ನಿರೂಪಿಸುವುದಕ್ಕಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳನ್ನು ನೆರವೇರಿಸಿ ತಮ್ಮ ಪ್ರಾಮಾಣಿಕತೆಯನ್ನು ವ್ಯಕ್ತಪಡಿಸುವಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಾಕಂದರೆ ನಾನು ಹೇಳುವದೇನಂದರೆ - ಕ್ರಿಸ್ತನು ಪಿತೃಗಳಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಒಳಗಾದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ನಿಮಗೆ ಹೇಳುವುದೇನೆಂದರೆ, ದೇವರು ನಂಬಿಗಸ್ತರು ಎಂದು ತೋರಿಸುವುದಕ್ಕಾಗಿ ಕ್ರಿಸ್ತ ಯೇಸು ಯೆಹೂದ್ಯರಿಗೆ ಸೇವಕರಾಗಿ ಬಂದರು. ಹೀಗೆ ದೇವರು ಪಿತೃಗಳಿಗೆ ಕೊಟ್ಟ ವಾಗ್ದಾನಗಳನ್ನು ದೃಢಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕಶ್ಯಾಕ್ ಮಟ್ಲ್ಯಾರ್, ಮಿಯಾ ತುಮ್ಕಾ ಸಾಂಗ್ತಾ ಅಪ್ನಿ ವಿಶ್ವಾಸಿ ಮನುನ್ ದಾಕ್ವುಸಾಟ್ನಿ ದೆವಾನ್ ಅಮ್ಚ್ಯಾ ಅದ್ಲ್ಯಾ ಲೊಕಾಕ್ನಿ ದಿಲ್ಲ್ಯಾ ಗೊಸ್ಟಿಯಾ ಪುರಾ ಕರುಸಾಟ್ನಿ ಕ್ರಿಸ್ತಾಕ್ ಜುದೆವಾಂಚೊ ಸೆವಕ್ ಕರುನ್ ನೆಮ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:8
29 ತಿಳಿವುಗಳ ಹೋಲಿಕೆ  

ಯೇಸು, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಮಾತ್ರ ದೇವರು ನನ್ನನ್ನು ಕಳುಹಿಸಿದನು” ಎಂದನು.


ಆತನು ತನ್ನ ಸ್ವಾಸ್ತ್ಯಕ್ಕೆ ಬಂದನು. ಆದರೆ ಆತನ ಸ್ವಂತ ಜನರು ಆತನನ್ನು ಸ್ವೀಕರಿಸಿಕೊಳ್ಳಲಿಲ್ಲ.


ದೇವರು ಮಾಡಿದ ವಾಗ್ದಾನಗಳಿಗೆಲ್ಲ “ಹೌದು” ಎಂಬ ಉತ್ತರ ಕ್ರಿಸ್ತನೇ ಆಗಿದ್ದಾನೆ. ಆದ್ದರಿಂದಲೇ ನಾವು ದೇವರ ಮಹಿಮೆಗಾಗಿ ಕ್ರಿಸ್ತನ ಮೂಲಕ “ಆಮೆನ್” ಎಂದು ಹೇಳುತ್ತೇವೆ.


ನನಗೆ ಬೇರೆ ಕುರಿಗಳು ಸಹ ಇವೆ. ಅವುಗಳು ಇಲ್ಲಿರುವ ಈ ಮಂದೆಯಲ್ಲಿಲ್ಲ. ನಾನು ಅವುಗಳನ್ನು ಸಹ ಒಳಗೆ ನಡೆಸಬೇಕು. ಅವುಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಮುಂದಿನ ಕಾಲದಲ್ಲಿ ಒಂದೇ ಮಂದೆಯಿರುವುದು ಮತ್ತು ಒಬ್ಬನೇ ಕುರುಬನಿರುವನು.


ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.


ಕೆಲವು ಯೆಹೂದ್ಯರು ದೇವರಿಗೆ ನಂಬಿಗಸ್ತರಾಗಿರಲಿಲ್ಲ ಎಂಬುದೇನೊ ಸತ್ಯ. ಆದರೆ ದೇವರು ತಾನು ಮಾಡಿದ ವಾಗ್ದಾನವನ್ನು ನೆರವೇರಿಸದಂತೆ ಅದು ಮಾಡುತ್ತದೆಯೇ?


ಪೂರ್ವಕಾಲದಲ್ಲಿ ನೀವು ಕ್ರಿಸ್ತನಿಲ್ಲದವರಾಗಿದ್ದಿರಿ ಎಂಬುದನ್ನು ಜ್ಞಾಪಿಸಿಕೊಳ್ಳಿರಿ. ನೀವು ಇಸ್ರೇಲಿನ ಪ್ರಜೆಗಳಾಗಿರಲಿಲ್ಲ. ದೇವರು ತನ್ನ ಜನರೊಂದಿಗೆ ಮಾಡಿಕೊಂಡಿದ್ದ ವಾಗ್ದಾನಗಳಿಗೆ ಸಂಬಂಧಪಟ್ಟ ಒಡಂಬಡಿಕೆಗಳನ್ನು ನೀವು ಹೊಂದಿರಲಿಲ್ಲ. ನಿಮಗೆ ನಿರೀಕ್ಷೆಯಿರಲಿಲ್ಲ ಮತ್ತು ನೀವು ದೇವರನ್ನು ತಿಳಿದಿರಲಿಲ್ಲ.


ಒಂದು ಕಾಲದಲ್ಲಿ ನೀವು ಆತನಿಗೆ ವಿಧೇಯರಾಗಿರಲಿಲ್ಲ. ಈಗಲಾದರೋ ನೀವು ಕರುಣೆಯನ್ನು ಹೊಂದಿಕೊಂಡಿರಿ. ಏಕೆಂದರೆ ಅವರು (ಯೆಹೂದ್ಯರು) ಆತನಿಗೆ ಅವಿಧೇಯರಾದರು.


ಆದ್ದರಿಂದ ದೇವರು ದಯೆ ಉಳ್ಳವನಾಗಿದ್ದರೂ ಬಹುಕಠಿಣನೂ ಆಗಿದ್ದಾನೆ ಎಂಬುದನ್ನು ಗಮನಿಸು. ದೇವರು ತನ್ನನ್ನು ಹಿಂಬಾಲಿಸದಿರುವ ಜನರನ್ನು ದಂಡಿಸುತ್ತಾನೆ. ಆದರೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡಿದ್ದರೆ, ದೇವರು ನಿನಗೆ ದಯಾಳುವಾಗಿರುತ್ತಾನೆ. ಇಲ್ಲವಾದರೆ, ನಿನ್ನನ್ನು ಮರದಿಂದ ಕಡಿದುಹಾಕಲಾಗುವುದು.


ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.


ಹೀಗೆ ದೇವರು ತಾನೇ ನೀತಿವಂತನೆಂಬುದನ್ನು ಮತ್ತು ಯೇಸುವಿನಲ್ಲಿ ನಂಬಿಕೆಯಿಡುವ ಯಾವನನ್ನೇ ಆಗಲಿ ನೀತಿವಂತನನ್ನಾಗಿ ಮಾಡುತ್ತೇನೆಂಬದನ್ನು ನಿರೂಪಿಸಿದ್ದಾನೆ.


ಆದರೆ ಪೌಲ ಬಾರ್ನಬರು ಬಹು ಧೈರ್ಯದಿಂದ ಮಾತಾಡಿ, “ನಾವು ದೇವರ ಸಂದೇಶವನ್ನು ಯೆಹೂದ್ಯರಾದ ನಿಮಗೆ ಮೊದಲು ಹೇಳಬೇಕು. ಆದರೆ ನೀವು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ಎಣಿಸಿಕೊಂಡು ತಿರಸ್ಕರಿಸುತ್ತಿದ್ದೀರಿ. ಆದ್ದರಿಂದ ನಾವು ಅನ್ಯಧರ್ಮದವರ ಬಳಿಗೆ ಹೋಗುತ್ತೇವೆ!


ನೀನು ಯಾಕೋಬನಿಗೆ ನಂಬಿಗಸ್ತನಾಗುವೆ. ನೀನು ಅಬ್ರಹಾಮನ ಮೇಲೆ ದಯೆತೋರಿಸಿ ನಂಬಿಗಸ್ತನಾಗುವೆ. ಇದನ್ನು ನೀನು ಬಹಳ ಕಾಲದ ಹಿಂದೆಯೇ ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿರುವೆ.


ಸಹೋದರ ಸಹೋದರಿಯರೇ, ನಾನು ಹೇಳುವುದೇನೆಂದರೆ, ಮಾಂಸ ಮತ್ತು ರಕ್ತ (ಭೌತಿಕ ದೇಹ) ಪರಲೋಕ ರಾಜ್ಯದಲ್ಲಿ ಪಾಲುಹೊಂದಲು ಸಾಧ್ಯವಿಲ್ಲ. ನಾಶವಾಗುವಂಥದ್ದು ಎಂದಿಗೂ ನಾಶವಾಗದ ಒಂದರಲ್ಲಿ ಪಾಲುಹೊಂದಲು ಸಾಧ್ಯವಿಲ್ಲ.


ಆದರೆ ನೀವೇ ಆ ರೀತಿ ಭಾವಿಸಿಕೊಂಡಿದ್ದೀರಿ ಎಂದು ನಾನು ಹೇಳುತ್ತಿಲ್ಲ. ಆದರೆ ಮತ್ತೊಬ್ಬ ವ್ಯಕ್ತಿಯು ಅದನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವುದರಿಂದ ಅವನ ಮನಸ್ಸಾಕ್ಷಿಯ ದೆಸೆಯಿಂದ ನಮ್ಮ ಸ್ವಾತಂತ್ರ್ಯವು ವಿಚಾರಣೆಗೆ ಗುರಿಯಾಗಬಾರದು.


ಇದೇ ನಿಯಮ ಮನುಷ್ಯಕುಮಾರನಿಗೂ ಅನ್ವಯಿಸುತ್ತದೆ. ಮನುಷ್ಯಕುಮಾರನು ಬೇರೆಯವರಿಂದ ಸೇವೆ ಮಾಡಿಸಿಕೊಳ್ಳಲು ಬರದೆ ಬೇರೆಯವರಿಗೆ ಸೇವೆ ಮಾಡುವುದಕ್ಕಾಗಿ ಮತ್ತು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.


ವಿಗ್ರಹಕ್ಕೆ ಅರ್ಪಿತವಾದ ಆಹಾರಪದಾರ್ಥವು ಮುಖ್ಯವಾದದ್ದೆಂದು ನಾನು ಹೇಳುತ್ತಿಲ್ಲ. ಅಲ್ಲದೆ ವಿಗ್ರಹವು ಮುಖ್ಯವಾದದ್ದು ಎಂಬ ಅಭಿಪ್ರಾಯವೂ ನನಗಿಲ್ಲ.


ಅಂದರೆ, ನಿಮ್ಮಲ್ಲಿ ಒಬ್ಬನು, “ನಾನು ಪೌಲನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ; ಮತ್ತೊಬ್ಬನು, “ನಾನು ಅಪೊಲ್ಲೋಸನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಇನ್ನೊಬ್ಬನು, “ನಾನು ಕೇಫನನ್ನು (ಪೇತ್ರನನ್ನು) ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಮತ್ತೊಬ್ಬನು, “ನಾನು ಕ್ರಿಸ್ತನನ್ನು ಹಿಂಬಾಲಿಸುತ್ತೇನೆ.” ಎಂದು ಹೇಳುತ್ತಾನೆ.


ನನ್ನ ಮಾತುಗಳು ಸತ್ಯ. ನನ್ನ ತುಟಿಗಳಿಗೆ ದುಷ್ಟತನ ಅಸಹ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು