Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:19 - ಪರಿಶುದ್ದ ಬೈಬಲ್‌

19 ನಿಮ್ಮ ವಿಧೇಯತ್ವವು ಎಲ್ಲಾ ವಿಶ್ವಾಸಿಗಳಿಗೆ ತಿಳಿದಿದೆ. ಆದ್ದರಿಂದ ನಿಮ್ಮ ವಿಷಯದಲ್ಲಿ ನಾನು ಬಹು ಸಂತೋಷಪಡುತ್ತೇನೆ. ಆದರೆ ಒಳ್ಳೆಯ ಸಂಗತಿಗಳ ಬಗ್ಗೆ ನೀವು ವಿವೇಕಿಗಳಾಗಿರಬೇಕೆಂದು ಮತ್ತು ಕೆಟ್ಟಸಂಗತಿಗಳ ಬಗ್ಗೆ ಏನೂ ತಿಳಿದಿಲ್ಲದವರಾಗಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದ್ದರಿಂದ ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೆಯದನ್ನು ಮಾಡುವುದರಲ್ಲಿ ಜಾಣರೂ ಮತ್ತು ಕೆಟ್ಟತನದ ವಿಷಯದಲ್ಲಿ ಮೂರ್ಖರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀವು ಶುಭಸಂದೇಶಕ್ಕೆ ವಿಧೇಯರಾಗಿ ನಡೆಯುವವರೆಂಬ ಸಮಾಚಾರ ಎಲ್ಲೆಲ್ಲೂ ಹರಡಿದೆ. ಇದರಿಂದಾಗಿ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ನೀವು ಒಳ್ಳೆಯ ವಿಷಯದಲ್ಲಿ ಜಾಣರೂ ಕೆಟ್ಟ ವಿಷಯದಲ್ಲಿ ಕಳಂಕರಹಿತರೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದರಿಂದ ಇದನ್ನು ಬರೆದಿದ್ದೇನೆ; ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿಮ್ಮ ವಿಧೇಯತೆಯು ಎಲ್ಲಾ ಮನುಷ್ಯರಿಗೂ ಪ್ರಸಿದ್ಧವಾಯಿತು. ಆದ್ದರಿಂದ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ಆದರೆ ನೀವು ಒಳ್ಳೆಯದನ್ನು ಕುರಿತು ಜ್ಞಾನಿಗಳಾಗಿಯೂ ಕೆಟ್ಟವುಗಳನ್ನು ಕುರಿತು ನಿಷ್ಕಳಂಕರಾಗಿಯೂ ಇರಬೇಕೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಖರೆ ತುಮ್ಚ್ಯಾ ವಿಶ್ವಾಸ್ಪಾನಾಚಿ ಖಬರ್ ಸಗ್ಳ್ಯಾಕ್ಡೆ ಪಗಳಲ್ಲೆ ಆಯ್ಕುನ್ ಮಾಕಾ ಲೈ ಖುಶಿ ಹೊತಾ. ಬರೆ ಕರ್‍ತಲ್ಯಾತ್ ತುಮಿ ಬುದ್ವಂತ್ ಹೊತ್ಯಾಶಿ ಅನಿ ಬುರ್ಶ್ಯಾಪಾನಾಕ್ ತುಮಿ ಅವ್ಕಾಸುಚ್ ಕರುನ್ ದಿನ್ಯಾಶಿ ಮನುನ್ ಮಿಯಾ ವಿಶ್ವಾಸ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:19
19 ತಿಳಿವುಗಳ ಹೋಲಿಕೆ  

“ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ.


ಸಹೋದರ ಸಹೋದರಿಯರೇ, ಮಕ್ಕಳಂತೆ ಆಲೋಚಿಸಬೇಡಿ. ಕೆಟ್ಟ ವಿಷಯಗಳಲ್ಲಿ ಎಳೆಗೂಸುಗಳಂತಿರಿ. ಆದರೆ ನಿಮ್ಮ ಆಲೋಚನೆಗಳಲ್ಲಿ ಪ್ರಾಯಸ್ಥರಂತಿರಿ.


ಆಗ ಮುಗ್ಧರೂ ಪರಿಶುದ್ಧರೂ ಆಗಿದ್ದು ಕಳಂಕರಹಿತವಾದ ದೇವಮಕ್ಕಳಾಗಿರುತ್ತೀರಿ. ದುಷ್ಟಜನರ ಮಧ್ಯದಲ್ಲಿ ವಾಸವಾಗಿರುವ ನೀವು ಕಾರ್ಗತ್ತಲೆಯಲ್ಲಿ ಪ್ರಕಾಶಿಸುವ ನಕ್ಷತ್ರಮಂಡಲದಂತಿದ್ದೀರಿ.


ಮೊದಲನೆಯದಾಗಿ, ನಾನು ನಿಮ್ಮೆಲ್ಲರ ವಿಷಯದಲ್ಲಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ಏಕೆಂದರೆ ನಿಮ್ಮ ನಂಬಿಕೆಯು ಲೋಕದಲೆಲ್ಲಾ ಪ್ರಖ್ಯಾತವಾಗಿದೆ.


ನಿಮಗಾಗಿ ನಾನು ಪ್ರಾರ್ಥಿಸುವುದೇನೆಂದರೆ: ನೀವು ಪ್ರೀತಿಯಲ್ಲಿ ವೃದ್ಧಿಯಾಗುತ್ತಾ ಜ್ಞಾನವಂತರೂ ತಿಳುವಳಿಕೆಯುಳ್ಳವರೂ ಆಗಬೇಕು.


ದೇವರು, “ನನ್ನ ಜನರು ಮೂರ್ಖರಾಗಿದ್ದಾರೆ. ಅವರು ನನ್ನನ್ನು ಅರಿಯದವರಾಗಿದ್ದಾರೆ. ಅವರು ಮೂಢ ಮಕ್ಕಳಾಗಿದ್ದಾರೆ. ಅವರು ಅವಿವೇಕಿಗಳಾಗಿದ್ದಾರೆ. ಅವರು ದುಷ್ಕೃತ್ಯದಲ್ಲಿ ನಿಪುಣರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡಲರಿಯದವರಾಗಿದ್ದಾರೆ” ಎಂದನು.


ಕ್ರಿಸ್ತನ ಉಪದೇಶವು ನಿಮ್ಮ ಅಂತರಂಗದಲ್ಲಿ ಸಮೃದ್ಧವಾಗಿ ನೆಲಸಿರಲಿ. ನೀವು ದೇವರಿಂದ ಕಲಿತುಕೊಂಡದ್ದನ್ನು ಉಪದೇಶಿಸುವುದಕ್ಕೂ ಒಬ್ಬರನ್ನೊಬ್ಬರು ಬಲಪಡಿಸುವುದಕ್ಕೂ ಉಪಯೋಗಿಸಿರಿ. ನಿಮ್ಮ ಹೃದಯದಲ್ಲಿ ದೇವರಿಗೆ ಕೃತಜ್ಞರಾಗಿದ್ದು ಹಾಡುಗಳನ್ನು, ಕೀರ್ತನೆಗಳನ್ನು, ಸಂಗೀತಗಳನ್ನು ಹಾಡಿರಿ.


ನಿಮ್ಮ ಜೀವಿತಗಳ ಬಗ್ಗೆ ಮೂರ್ಖರಾಗಿರದೆ ದೇವರ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.


ನಾನು ಎಚ್ಚರಿಕೆಯಿಂದ ಪರಿಶುದ್ಧನಾಗಿ ಜೀವಿಸುವೆನು; ನನ್ನ ಮನೆಯಲ್ಲೂ ಪರಿಶುದ್ಧನಾಗಿರುವೆನು. ನೀನು ನನ್ನ ಬಳಿಗೆ ಬರುವುದು ಯಾವಾಗ?


“ಈಗ ನೀವು ಹೋಗಬಹುದು. ಆದರೆ ನನ್ನ ಈ ಮಾತನ್ನು ಕೇಳಿರಿ! ತೋಳಗಳ ಮಧ್ಯೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನು ಕಳುಹಿಸುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು