Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:2 - ಪರಿಶುದ್ದ ಬೈಬಲ್‌

2 ನೀವು ಆಕೆಯನ್ನು ಪ್ರಭುವಿನ ಹೆಸರಿನಲ್ಲಿ ಸ್ವೀಕರಿಸಿಕೊಳ್ಳಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ದೇವಜನರಿಗೆ ತಕ್ಕಂತೆ ಈಕೆಯನ್ನು ಸ್ವೀಕರಿಸಿಕೊಳ್ಳಿರಿ. ಆಕೆಗೆ ಬೇಕಾದ ಸಹಾಯಗಳನ್ನೆಲ್ಲಾ ಮಾಡಿರಿ. ಆಕೆಯು ನನಗೆ ಬಹಳವಾಗಿ ಸಹಾಯ ಮಾಡಿದ್ದಾಳೆ. ಅಲ್ಲದೆ ಇತರ ಅನೇಕ ಜನರಿಗೂ ಆಕೆ ಸಹಾಯ ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀವು ಆಕೆಯನ್ನು ದೇವಜನರಿಗೆ ತಕ್ಕ ಹಾಗೆ ಕರ್ತನ ಶಿಷ್ಯಳೆಂದು ಸೇರಿಸಿಕೊಂಡು, ಆಕೆಗೆ ಯಾವ ವಿಷಯದಲ್ಲಿ ಅಗತ್ಯವಿದೆಯೋ ಅದರಲ್ಲಿ ಸಹಾಯವನ್ನು ಮಾಡಿರಿ. ಆಕೆಯು ನನಗೂ ಮತ್ತು ಅನೇಕರಿಗೂ ಸಹಾಯಮಾಡಿದವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೇವಜನರ ಯೋಗ್ಯತೆಗೆ ತಕ್ಕಂತೆ ಈಕೆಯನ್ನು ಪ್ರಭುವಿನ ಹೆಸರಿನಲ್ಲಿ ಬರಮಾಡಿಕೊಳ್ಳಿ. ನನಗೂ ಅನೇಕರಿಗೂ ನೆರವು ನೀಡಿರುವ ಈಕೆಗೆ ನಿಮ್ಮಿಂದಾದ ಎಲ್ಲಾ ಸಹಾಯವನ್ನು ಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಆಕೆಯನ್ನು ಕರ್ತನ ಶಿಷ್ಯಳೆಂದು ದೇವಜನರಿಗೆ ತಕ್ಕ ಹಾಗೆ ಸೇರಿಸಿಕೊಂಡು ಸಹಾಯವು ಯಾವ ವಿಷಯದಲ್ಲಿ ಬೇಕಾಗಿದ್ದರೂ ಸಹಾಯವನ್ನು ಮಾಡಿರಿ. ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕರ್ತನಲ್ಲಿ ದೇವಜನರಿಗೆ ಯೋಗ್ಯವಾಗಿರುವ ರೀತಿಯಲ್ಲಿ ಆಕೆಯನ್ನು ಸ್ವೀಕರಿಸಿ, ಆಕೆಯು ಅನೇಕರಿಗೂ ನನಗೂ ವಿಶೇಷವಾದ ರೀತಿಯಲ್ಲಿ ಸಹಾಯ ಮಾಡಿದವಳಾಗಿರುವುದರಿಂದ ನಿಮಗೆ ಯಾವ ಕೊರತೆಗಳಿದ್ದರೂ ಆಕೆಗೆ ಬೇಕಾದದ್ದನ್ನು ಒದಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ದೆವಾಚ್ಯಾ ಲೊಕಾನಿ ಕರುಕ್ ಪಾಜೆ ತಶೆ ತುಮಿ ತಿಕಾ ಧನಿಯಾಚ್ಯಾ ನಾವಾನ್ ಘೆವಾ ಅನಿ ತಿಕಾ ಗರಜ್ ಹೊತ್ತಿ ತವ್ಡಿ ಮಜತ್ ಕರಾ, ಸುಮಾರ್ ಲೊಕಾಕ್ನಿ ಅನಿ ಮಾಕಾಬಿ ತೆನಿ ಮಜತ್ ಕರ್‍ಲಿನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:2
25 ತಿಳಿವುಗಳ ಹೋಲಿಕೆ  

ಮಹಾ ಆನಂದದಿಂದ ಪ್ರಭುವಿನಲ್ಲಿ ಅವನನ್ನು ಸ್ವಾಗತಿಸಿರಿ. ಎಪಫ್ರೊದೀತನಂಥ ಜನರನ್ನು ಗೌರವಿಸಿರಿ.


ಅದೇನೇ ಇರಲಿ, ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ಬಾಳಿರಿ. ಆಗ ನಾನು ನಿಮ್ಮ ಬಳಿಗೆ ಬಂದರೂ ಸರಿ, ನಿಮ್ಮಿಂದ ದೂರದಲ್ಲಿದ್ದರೂ ಸರಿ, ನಿಮ್ಮ ವಿಷಯದಲ್ಲಿ ಒಳ್ಳೆಯ ಸಂಗತಿಗಳನ್ನು ಕೇಳುತ್ತೇನೆ. ನೀವು ಒಂದೇ ಉದ್ದೇಶದಿಂದ ದೃಢವಾಗಿದ್ದೀರೆಂದೂ ಸುವಾರ್ತೆಯಿಂದ ಉಂಟಾದ ನಂಬಿಕೆಗೋಸ್ಕರ ಏಕಮನಸ್ಸಿನಿಂದ ಕೆಲಸ ಮಾಡುತ್ತಿದ್ದೀರೆಂದೂ ಕೇಳುತ್ತಲೇ ಇರುತ್ತೇನೆ.


ನಿಮ್ಮ ಬಳಿಗೆ ಬರುವವನು ಈ ಉಪದೇಶವನ್ನು ಹೊಂದಿಲ್ಲದಿದ್ದರೆ ಅವನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಳ್ಳಬೇಡಿ. ಅವನನ್ನು ಸ್ವಾಗತಿಸಬೇಡಿ.


ನನ್ನನ್ನು ನಿನ್ನ ಸಹಭಾಗಿಯೆಂದು ನೀನು ಒಪ್ಪಿಕೊಳ್ಳುವುದಾದರೆ, ಒನೇಸಿಮನನ್ನು ಮತ್ತೆ ಸೇರಿಸಿಕೊ. ನೀನು ನನ್ನನ್ನು ಬರಮಾಡಿಕೊಂಡಂತೆ ಅವನನ್ನೂ ಬರಮಾಡಿಕೊ.


ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ಕಳುಹಿಸುತ್ತಿದ್ದೇನೆ. ಅವನೊಂದಿಗೆ ನನ್ನ ಹೃದಯವನ್ನೇ ಕಳುಹಿಸುತ್ತಿದ್ದೇನೆ.


ಅಂತೆಯೇ ವೃದ್ಧ ಸ್ತ್ರೀಯರು ಸಭ್ಯರಾಗಿ ವರ್ತಿಸಬೇಕು. ಅವರು ಚಾಡಿ ಹೇಳಬಾರದು; ಮದ್ಯಾಸಕ್ತರಾಗಿರಬಾರದು. ಅವರು ಒಳ್ಳೆಯದನ್ನೇ ಉಪದೇಶಿಸಬೇಕು.


ಆ ದಿನದಂದು ಒನೇಸಿಫೋರನು ಪ್ರಭುವಿನಿಂದ ಕರುಣೆಯನ್ನು ಪಡೆಯಲಿ ಎಂದು ನಾನು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇನೆ. ಎಫೆಸದಲ್ಲಿ ಅವನು ನನಗೆ ಎಷ್ಟು ವಿಧದಲ್ಲಿ ಸಹಾಯ ಮಾಡಿದನೆಂಬುದು ನಿನಗೆ ತಿಳಿದಿದೆ.


ಆದರೆ ಅವರು ಯೋಗ್ಯಕಾರ್ಯಗಳನ್ನು ಮಾಡುವುದರ ಮೂಲಕ ತಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬೇಕು. ದೇವರನ್ನು ಆರಾಧಿಸುತ್ತೇವೆ ಎಂದು ಹೇಳುವ ಸ್ತ್ರೀಯರು ತಮ್ಮನ್ನು ಈ ರೀತಿಯಲ್ಲಿಯೇ ಅಲಂಕರಿಸಿಕೊಳ್ಳಬೇಕು.


ಅರಿಸ್ತಾರ್ಕನು ವಂದನೆ ತಿಳಿಸಿದ್ದಾನೆ. ಅವನೂ ನನ್ನೊಡನೆ ಸೆರೆಯಲ್ಲಿದ್ದಾನೆ. ಬಾರ್ನಬನಿಗೆ ಸೋದರ ಬಾಂಧ್ಯವ್ಯವುಳ್ಳ ಮಾರ್ಕನೂ ವಂದನೆಯನ್ನು ಹೇಳುತ್ತಾನೆ. (ಮಾರ್ಕನ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ಈಗಾಗಲೇ ಹೇಳಿದ್ದೇನೆ. ಅವನು ಬಂದರೆ ಅವನನ್ನು ಸ್ವಾಗತಿಸಿರಿ.)


ಆದರೆ ನಿಮ್ಮ ಮಧ್ಯದಲ್ಲಿ ಲೈಂಗಿಕ ಪಾಪವಿರಕೂಡದು. ಯಾವ ಬಗೆಯ ದುಷ್ಟತ್ವವಾಗಲಿ ಸ್ವಾರ್ಥತೆಯಾಗಲಿ ಇರಕೂಡದು. ಏಕೆಂದರೆ ಅವುಗಳು ದೇವರ ಪರಿಶುದ್ಧ ಜನರಿಗೆ ಯೋಗ್ಯವಾದವುಗಳಲ್ಲ.


ಗಾಯನು ನನಗೆ ಅತಿಥಿಸತ್ಕಾರ ಮಾಡುತ್ತಿದ್ದಾನೆ. ಅಲ್ಲದೆ ಸಭಾಕೂಟಕ್ಕಾಗಿ ಅವನ ಮನೆಯನ್ನೇ ಉಪಯೋಗಿಸಲಾಗುತ್ತಿದೆ. ಅವನು ಸಹ ನಿಮಗೆ ವಂದನೆ ತಿಳಿಸುತ್ತಾನೆ. ಈ ಪಟ್ಟಣದ ಖಜಾಂಚಿಯಾದ ಎರಸ್ತನು ಮತ್ತು ಸಹೋದರನಾದ ಕ್ವರ್ತನು ನಿಮಗೆ ವಂದನೆಯನ್ನು ತಿಳಿಸುತ್ತಾರೆ.


ಉರ್ಬಾನನಿಗೆ ನನ್ನ ವಂದನೆ ತಿಳಿಸಿರಿ. ಅವನು ಕ್ರಿಸ್ತನಿಗೋಸ್ಕರ ನನ್ನ ಸಹೋದ್ಯೋಗಿಯಾಗಿದ್ದಾನೆ. ನನ್ನ ಪ್ರಿಯ ಗೆಳೆಯನಾದ ಸ್ತಾಖುನಿಗೆ ನನ್ನ ವಂದನೆ ತಿಳಿಸಿರಿ.


ಮರಿಯಳಿಗೆ ನನ್ನ ವಂದನೆ ತಿಳಿಸಿರಿ. ಆಕೆ ನಿಮಗೋಸ್ಕರ ಬಹು ಕಷ್ಟಪಟ್ಟು ಕೆಲಸ ಮಾಡಿದಳು.


ಕ್ರಿಸ್ತನು ನಿಮ್ಮನ್ನು ಸ್ವೀಕರಿಸಿಕೊಂಡನು. ಆದ್ದರಿಂದ ನೀವು ಒಬ್ಬರನ್ನೊಬ್ಬರು ಸ್ವೀಕರಿಸಿಕೊಳ್ಳಬೇಕು. ಇದು ದೇವರಿಗೆ ಮಹಿಮೆಯನ್ನು ಉಂಟು ಮಾಡುತ್ತದೆ.


ಅವನು ಕೈನೀಡಿ, ಎದ್ದುನಿಲ್ಲಲು ಆಕೆಗೆ ಸಹಾಯ ಮಾಡಿದನು. ಬಳಿಕ ಅವನು ವಿಶ್ವಾಸಿಗಳನ್ನು ಮತ್ತು ವಿಧವೆಯರನ್ನು ಕೋಣೆಯೊಳಗೆ ಕರೆದು ಅವರಿಗೆ ತಬಿಥಳನ್ನು ತೋರಿಸಿದನು. ಆಕೆ ಜೀವಂತವಾಗಿದ್ದಳು.


ಪೇತ್ರನು ಸಿದ್ಧನಾಗಿ ಅವರೊಂದಿಗೆ ಹೋದನು. ಅವನು ಅಲ್ಲಿಗೆ ತಲುಪಿದಾಗ, ಅವರು ಅವನನ್ನು ಮೇಲ್ಮಾಳಿಗೆಯ ಕೋಣೆಗೆ ಕರೆದುಕೊಂಡು ಹೋದರು. ವಿಧವೆಯರೆಲ್ಲ ಅಳುತ್ತಾ ಪೇತ್ರನನ್ನು ಸುತ್ತುವರಿದರು. ದೊರ್ಕಳು ಜೀವಂತವಾಗಿದ್ದಾಗ ತಮಗಾಗಿ ತಯಾರಿಸಿ ಕೊಟ್ಟ ಮೇಲಂಗಿಗಳನ್ನು ಮತ್ತು ಬಟ್ಟೆಗಳನ್ನು ಅವರು ಪೇತ್ರನಿಗೆ ತೋರಿಸಿದರು.


ಜೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಯೇಸುವಿನ ಶಿಷ್ಯಳಿದ್ದಳು. ಗ್ರೀಕ್ ಭಾಷೆಯಲ್ಲಿ ಆಕೆಯ ಹೆಸರು ದೊರ್ಕಾ ಅಂದರೆ “ಜಿಂಕೆ.” ಆಕೆಯು ಜನರಿಗೆ ಯಾವಾಗಲೂ ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದಳು. ಆಕೆಯು ಕೊರತೆಯಲ್ಲಿದ್ದ ಜನರಿಗೆ ಯಾವಾಗಲೂ ಹಣಕೊಡುತ್ತಿದ್ದಳು.


“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೋ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.


ಆದರೆ ಅನನೀಯನು, “ಪ್ರಭುವೇ, ಜೆರುಸಲೇಮಿನಲ್ಲಿರುವ ನಿನ್ನ ಪವಿತ್ರ ಜನರಿಗೆ ಈ ಮನುಷ್ಯನು ಮಾಡಿದ ಅನೇಕ ಕೆಟ್ಟಕೃತ್ಯಗಳ ಬಗ್ಗೆ ಜನರು ನನಗೆ ಹೇಳಿದ್ದಾರೆ.


ಆದರೆ ಪ್ರಭುವು ಅನನೀಯನಿಗೆ, “ಹೋಗು! ಮುಖ್ಯವಾದ ಕೆಲಸಕ್ಕಾಗಿ ನಾನು ಸೌಲನನ್ನು ಆರಿಸಿಕೊಂಡಿದ್ದೇನೆ. ಅವನು ನನ್ನ ಬಗ್ಗೆ ರಾಜರುಗಳಿಗೂ ಯೆಹೂದ್ಯರಿಗೂ ಮತ್ತು ಇತರ ಜನಾಂಗಗಳಿಗೂ ತಿಳಿಸಬೇಕಾಗಿದೆ.


ಫಿಲೊಲೋಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ಸಹೋದರಿಗೂ ಮತ್ತು ಒಲುಂಪನಿಗೂ ಮತ್ತು ಅವರೊಂದಿಗಿರುವ ಎಲ್ಲಾ ಭಕ್ತರಿಗೆ ನನ್ನ ವಂದನೆ ತಿಳಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು