Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:11 - ಪರಿಶುದ್ದ ಬೈಬಲ್‌

11 ದೇವರು ಪಕ್ಷಪಾತ ಮಾಡದೆ ಎಲ್ಲರಿಗೂ ಒಂದೇ ರೀತಿಯಲ್ಲಿ ತೀರ್ಪು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವರಲ್ಲಿ ಪಕ್ಷಪಾತವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದೇವರು ಪಕ್ಷಪಾತಿ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11-12 ದೇವರಿಗೆ ಪಕ್ಷಪಾತವಿಲ್ಲ. ಧರ್ಮಶಾಸ್ತ್ರವಿಲ್ಲದವರಾಗಿ ಪಾಪ ಮಾಡಿದವರು ಧರ್ಮಶಾಸ್ತ್ರವಿಲ್ಲದವರಾಗಿ ನಾಶಹೊಂದುವರು; ಆದರೆ ಧರ್ಮಶಾಸ್ತ್ರವುಳ್ಳವರಾಗಿದ್ದು ಪಾಪಮಾಡಿದವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರಲ್ಲಿ ಪಕ್ಷಪಾತವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ದೆವ್ ಸಗ್ಳ್ಯಾಕ್ನಿ ಭೆದ್‍ಭಾವ್ ಕರಿನಸ್ತಾನಾ ಎಕುಚ್ ಮಾಪಾನ್ ನಿತ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:11
14 ತಿಳಿವುಗಳ ಹೋಲಿಕೆ  

ಪೇತ್ರನು ಮಾತಾಡಲಾರಂಭಿಸಿ ಹೀಗೆಂದನು: “ದೇವರಿಗೆ ಎಲ್ಲರೂ ಒಂದೇ ಎಂಬುದು ನನಗೆ ಈಗ ಅರ್ಥವಾಯಿತು.


ಯಾಕೆಂದರೆ ಯೆಹೋವನೇ ನಿಮ್ಮ ದೇವರು. ಆತನು ದೇವರುಗಳ ದೇವರೂ ಪ್ರಭುಗಳ ಪ್ರಭುವೂ ಆಗಿದ್ದಾನೆ. ಆತನು ಮಹಾದೇವರೂ ಆಶ್ಚರ್ಯಕಾರನೂ ಪರಾಕ್ರಮಶಾಲಿಯೂ ಭಯಂಕರನೂ ಆಗಿದ್ದಾನೆ. ಆತನಿಗೆ ಎಲ್ಲಾ ಜನರೂ ಒಂದೇ. ಆತನು ತನ್ನ ತೀರ್ಮಾನವನ್ನು ಬದಲಾಯಿಸಲು ಲಂಚ ಸ್ವೀಕರಿಸುವವನಲ್ಲ.


ನಾನು ಬೋಧಿಸುವ ಸುವಾರ್ತೆಗೆ ಅವರೇನೂ ಸೇರಿಸಲಿಲ್ಲ. (ಅವರು ಪ್ರಮುಖರಾಗಿದ್ದರೊ ಪ್ರಮುಖರಾಗಿರಲಿಲ್ಲವೊ ಅದು ನನಗೆ ಮುಖ್ಯವಲ್ಲ. ದೇವರಿಗೆ ಎಲ್ಲಾ ಜನರು ಒಂದೇ ಆಗಿದ್ದಾರೆ.)


ನಿಮ್ಮಲ್ಲಿ ಪ್ರತಿಯೊಬ್ಬರೂ ಯೆಹೋವನಿಗೆ ಭಯಪಡುವವರಾಗಿರಬೇಕು. ಆತನು ನ್ಯಾಯವಂತನಾಗಿದ್ದಾನೆ. ಆತನಿಗೆ ಎಲ್ಲಾ ಜನರು ಸಮಾನರೇ. ಆತನು ಲಂಚ ಸ್ವೀಕರಿಸಿ ನ್ಯಾಯವನ್ನು ಬದಲಾಯಿಸುವದಿಲ್ಲ” ಎಂದು ಹೇಳಿದನು.


ದೇವರಲ್ಲಿ ಸಾಮಾನ್ಯರು ಮತ್ತು ಪ್ರಮುಖರು ಎಂದಾಗಲಿ ಬಡವರು ಮತ್ತು ಶ್ರೀಮಂತರು ಎಂದಾಗಲಿ ಭೇದಭಾವವಿಲ್ಲ. ಯಾಕೆಂದರೆ ಎಲ್ಲರನ್ನೂ ಸೃಷ್ಟಿಮಾಡಿದವನು ದೇವರೇ.


ಅನ್ಯಾಯ ಮಾಡುವವನು ಅದಕ್ಕೆ ತಕ್ಕ ಶಿಕ್ಷೆಯನ್ನು ಪಡೆಯುವನು. ಪ್ರಭುವಿನಲ್ಲಿ ಪಕ್ಷಪಾತವಿಲ್ಲ.


ನೀವು ಯಾವಾಗಲೂ ಪಕ್ಷಪಾತವಿಲ್ಲದವರಾಗಿರಬೇಕು. ಜನರಿಂದ ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಮಾನ ಕೊಡಬಾರದು. ಹಣವು ಜ್ಞಾನಿಗಳನ್ನು ಕುರುಡುಮಾಡಿ ಅವರ ಬುದ್ಧಿಯನ್ನು ಮಂದ ಮಾಡುವುದು.


ಯಜಮಾನರೇ, ಅದೇರೀತಿಯಲ್ಲಿ ನಿಮ್ಮ ಸೇವಕರಿಗೆ ಒಳ್ಳೆಯವರಾಗಿರಿ. ಅವರಿಗೆ ಹೆದರಿಕೆಯಾಗುವಂಥ ಮಾತುಗಳನ್ನಾಡಬೇಡಿ. ನಿಮಗೂ ಅವರಿಗೂ ಒಡೆಯನಾಗಿರುವಾತನು ಪರಲೋಕದಲ್ಲಿದ್ದಾನೆ ಎಂಬುದು ನಿಮಗೆ ತಿಳಿದಿದೆ. ಆತನು ಪ್ರತಿಯೊಬ್ಬನಿಗೂ ಪಕ್ಷಪಾತವಿಲ್ಲದೆ ನ್ಯಾಯತೀರಿಸುವನು.


ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.


ಆದ್ದರಿಂದ ಅವರು ಯೇಸುವಿಗೆ, “ಉಪದೇಶಕನೇ, ನೀನು ಸತ್ಯವನ್ನೇ ಹೇಳುವೆ ಮತ್ತು ಉಪದೇಶಿಸುವೆ ಎಂದು ನಮಗೆ ಗೊತ್ತಿದೆ. ನೀನು ಮುಖದಾಕ್ಷಿಣ್ಯ ಮಾಡುವವನಲ್ಲ. ದೇವರ ಮಾರ್ಗದ ಕುರಿತಾಗಿ ನೀನು ಯಾವಾಗಲೂ ಸತ್ಯವನ್ನೇ ಬೋಧಿಸುವೆ!


ನೀವು ದೇವರಲ್ಲಿ ಪ್ರಾರ್ಥಿಸುವಾಗ ಆತನನ್ನು ತಂದೆಯೆಂದು ಕರೆಯುತ್ತೀರಿ. ದೇವರು ಪ್ರತಿಯೊಬ್ಬರಿಗೆ ಅವರವರ ಕೆಲಸಕ್ಕೆ ತಕ್ಕಂತೆ ತೀರ್ಪುಕೊಡುವನು. ನೀವು ಈ ಲೋಕದಲ್ಲಿ ಪ್ರವಾಸಿಗಳಾಗಿರುವುದರಿಂದ ದೇವರಿಗೆ ಭಯಪಟ್ಟು ಜೀವಿಸಿ.


ಹಾಗಾದರೆ, ಇದರ ಬಗ್ಗೆ ಏನು ಹೇಳೋಣ? ದೇವರು ಅನ್ಯಾಯಗಾರನೇ? ಎಂದಿಗೂ, ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು