Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:12 - ಪರಿಶುದ್ದ ಬೈಬಲ್‌

12 ಧರ್ಮಶಾಸ್ತ್ರವನ್ನು ಹೊಂದಿರುವ ಜನರು ಮತ್ತು ಧರ್ಮಶಾಸ್ತ್ರದ ಬಗ್ಗೆ ಕೇಳಿಯೂ ಇಲ್ಲದ ಜನರು ಪಾಪ ಮಾಡುವಾಗ ಅವರಿಬ್ಬರಿಗೂ ಯಾವ ವ್ಯತ್ಯಾಸವಿರುವುದಿಲ್ಲ. ಧರ್ಮಶಾಸ್ತ್ರವಿಲ್ಲದವರಾಗಿ ಪಾಪ ಮಾಡುವವರು ನಾಶವಾಗುವರು. ಅದೇ ರೀತಿಯಲ್ಲಿ, ಧರ್ಮಶಾಸ್ತ್ರವನ್ನು ಹೊಂದಿದವರಾಗಿ ಪಾಪ ಮಾಡುವವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಧರ್ಮಶಾಸ್ತ್ರವಿಲ್ಲದೆ ಪಾಪಮಾಡಿದವರು ಧರ್ಮಶಾಸ್ತ್ರವಿಲ್ಲದವರಾಗಿ ನಾಶಹೊಂದುವರು; ಮತ್ತು ಧರ್ಮಶಾಸ್ತ್ರಕ್ಕನುಸಾರವಾಗಿದ್ದು ಪಾಪಮಾಡಿದವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮೋಶೆಯ ಧರ್ಮಶಾಸ್ತ್ರದ ಅರಿವಿಲ್ಲದೆ ಪಾಪಮಾಡುವವರು ಆ ಶಾಸ್ತ್ರದ ತೀರ್ಪಿಗೆ ಒಳಗಾಗದೆಯೋ ನಾಶವಾಗುತ್ತಾರೆ. ಆ ಧರ್ಮಶಾಸ್ತ್ರದ ಅರಿವಿದ್ದೂ ಪಾಪಮಾಡುವವರು ಆ ಶಾಸ್ತ್ರದ ತೀರ್ಪಿಗೆ ಗುರಿಯಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಯಮವಿಲ್ಲದವರಾಗಿ ಪಾಪಮಾಡಿದವರು ನಿಯಮವಿಲ್ಲದೆಯೇ ನಾಶಹೊಂದುವರು. ನಿಯಮಕ್ಕೆ ಅಧೀನರಾಗಿದ್ದು ಪಾಪಮಾಡಿದವರು ನಿಯಮದ ಮೂಲಕವಾಗಿ ತೀರ್ಪನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜುದೆವ್ ನ್ಹಯ್ ಹೊತ್ತ್ಯಾಕ್ನಿ ಮೊಯ್ಜೆಚೆ ಖಾಯ್ದೆ ನಾತ್; ತೆನಿ ಪಾಪ್ ಕರ್‍ಲ್ಯಾನಿ ಅನಿ ಖಾಯ್ದ್ಯಾನಿತ್ನಾ ಚುಕ್ವುನ್ ಘೆಟ್ಲ್ಯಾನಿ. ಜುದೆವಾಕ್ನಿ ಖಾಯ್ದೆ ಹಾತ್; ತೆನಿ ಪಾಪ್ ಕರ್‍ಲ್ಯಾನಿ ಅನಿ ಖಾಯ್ದ್ಯಾ ಸರ್ಕೆ ತೆಂಚಿ ಝಡ್ತಿ ಕರುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:12
23 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರವಿಲ್ಲದ ಜನರನ್ನು ರಕ್ಷಣಾಮಾರ್ಗಕ್ಕೆ ನಡೆಸಬೇಕೆಂದು ಅವರಿಗೆ ಧರ್ಮಶಾಸ್ತ್ರವಿಲ್ಲದ ವ್ಯಕ್ತಿಯಂತಾದೆನು. (ಆದರೆ ನಿಜವಾಗಿಯೂ, ನಾನು ಧರ್ಮಶಾಸ್ತ್ರವಿಲ್ಲದವನಲ್ಲ. ನಾನು ಕ್ರಿಸ್ತನ ಧರ್ಮಶಾಸ್ತ್ರಕ್ಕೆ ಅಧೀನನಾಗಿದ್ದೇನೆ.)


ಆದರೆ ನೀತಿವಂತರಾಗಲು ಧರ್ಮಶಾಸ್ತ್ರವನ್ನು ಅವಲಂಬಿಸಿಕೊಂಡಿರುವವರು ಶಾಪಗ್ರಸ್ತರಾಗಿದ್ದಾರೆ. ಏಕೆಂದರೆ ಪವಿತ್ರ ಗ್ರಂಥವು ಹೇಳುವಂತೆ, “ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳನ್ನೆಲ್ಲಾ ಕೈಕೊಂಡು ನಡೆಯಬೇಕು. ಅವುಗಳಿಗೆ ಎಂದಾದರೂ ಅವಿಧೇಯನಾದವನು ಶಾಪಗ್ರಸ್ತನಾಗಿದ್ದಾನೆ.”


ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.


ಇಂಥವರಿಗೆ ಮರಣದಂಡನೆ ಆಗಬೇಕೆಂದು ದೇವರ ಧರ್ಮಶಾಸ್ತ್ರ ಹೇಳುತ್ತದೆ ಎಂಬುದು ಅವರಿಗೆ ಗೊತ್ತಿದೆ. ಆದರೂ ಅವರು ಇಂಥ ಕಾರ್ಯಗಳನ್ನು ಮಾಡುತ್ತಾರೆ ಮತ್ತು ಇಂಥ ಕಾರ್ಯಗಳನ್ನು ಮಾಡುವ ಜನರಿಗೆ ಪ್ರೋತ್ಸಾಹ ನೀಡುತ್ತಾರೆ.


ಆದರೆ ನ್ಯಾಯತೀರ್ಪಿನ ದಿನದಲ್ಲಿ ನಿನ್ನ ಪರಿಸ್ಥಿತಿ ಸೊದೋಮಿಗಿಂತಲೂ ದುಸ್ಥಿತಿಗೆ ಒಳಗಾಗುವುದು ಎಂದು ನಾನು ನಿನಗೆ ಹೇಳುತ್ತೇನೆ.”


ಒಬ್ಬನು ದೇವರ ಎಲ್ಲಾ ಆಜ್ಞೆಗಳನ್ನು ಅನುಸರಿಸುತ್ತಿರಬಹುದು. ಆದರೆ ಅವನು ಒಂದು ಆಜ್ಞೆಗೆ ಅವಿಧೇಯನಾದರೆ ಅವನು ಧರ್ಮಶಾಸ್ತ್ರದ ಎಲ್ಲಾ ಆಜ್ಞೆಗಳನ್ನು ಮೀರಿದನೆಂಬ ಅಪರಾಧಕ್ಕೆ ಗುರಿಯಾಗುವನು.


ಏಕೆಂದರೆ ಧರ್ಮಶಾಸ್ತ್ರಕ್ಕೆ ವಿಧೇಯರಾಗದೆ ಹೋದಾಗ, ಧರ್ಮಶಾಸ್ತ್ರವು ದೇವರ ಕೋಪವನ್ನು ಮಾತ್ರ ತರುತ್ತದೆ. ಆದರೆ ಧರ್ಮಶಾಸ್ತ್ರವು ಇಲ್ಲದಿದ್ದರೆ ಅವಿಧೇಯರಾಗುವುದಕ್ಕೆ ಏನೂ ಇರುವುದಿಲ್ಲ.


ಆದರೆ ನ್ಯಾಯತೀರ್ಪಿನ ದಿನದಲ್ಲಿ ಟೈರ್, ಸೀದೋನ್‌ಗಳಿಗಿಂತಲೂ ನಿಮ್ಮ ಸ್ಥಿತಿಯು ಬಹಳ ದುಸ್ಥಿತಿಗೆ ಒಳಗಾಗುವುದೆಂದು ನಾನು ನಿಮಗೆ ಹೇಳುತ್ತೇನೆ.


“ಲೇವಿಯರು, ‘ಧರ್ಮಶಾಸ್ತ್ರವನ್ನು ಪ್ರೋತ್ಸಾಹಿಸುವದಕ್ಕೂ ಅವುಗಳನ್ನು ಅನುಸರಿಸುವದಕ್ಕೂ ನಿರಾಕರಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.”


ಆದರೆ ಇದು ಸತ್ಯವಲ್ಲ. ಏಕೆಂದರೆ ಸಮಸ್ತವೂ ಪಾಪಕ್ಕೆ ಒಳಗಾಗಿದೆ ಎಂದು ಪವಿತ್ರ ಗ್ರಂಥ ಪ್ರಕಟಿಸುತ್ತದೆ. ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವವರಿಗೆ ಅವರ ನಂಬಿಕೆಯ ಆಧಾರದ ಮೇಲೆ ವಾಗ್ದಾನದ ಫಲವು ದೊರೆಯಬೇಕೆಂದೇ ಪವಿತ್ರ ಗ್ರಂಥವು ಹೀಗೆ ಪ್ರಕಟಿಸಿದೆ.


ಯೇಸು “ನನ್ನ ಮೇಲೆ ನಿನಗಿರುವ ಅಧಿಕಾರವೆಂದರೆ ದೇವರು ನಿನಗೆ ಕೊಟ್ಟಿರುವ ಅಧಿಕಾರವೊಂದೇ. ಆದ್ದರಿಂದ ನನ್ನನ್ನು ನಿನ್ನ ಕೈಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪದೋಷವಿರುವುದು” ಎಂದು ಉತ್ತರಕೊಟ್ಟನು.


ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು