Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:18 - ಪರಿಶುದ್ದ ಬೈಬಲ್‌

18 ದೇವರ ಚಿತ್ತಕ್ಕನುಸಾರವಾದ ಕಾರ್ಯಗಳನ್ನು ಧರ್ಮಶಾಸ್ತ್ರದಿಂದ ಕಲಿತುಕೊಂಡಿರುವುದಾಗಿ ನೀನು ಹೇಳಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಧರ್ಮಶಾಸ್ತ್ರದಿಂದ ಉಪದೇಶವನ್ನು ಹೊಂದಿ, ಆತನ ಚಿತ್ತವನ್ನು ಬಲ್ಲವನೂ, ಇದು ತಕ್ಕದ್ದು ಅದು ತಕ್ಕದ್ದಲ್ಲವೆಂದು ವಿವೇಚಿಸುವವನೂ ಆಗಿದ್ದೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದೇವರ ಚಿತ್ತವನ್ನು ಅರಿತಿರುವುದಾಗಿ ನೆನೆಸುತ್ತೀಯೆ: ಉತ್ತಮವಾದುದನ್ನು ಆರಿಸಿಕೊಳ್ಳಲು ಧರ್ಮಶಾಸ್ತ್ರದಿಂದ ಕಲಿತುಕೊಂಡಿರುವುದಾಗಿ ಹೇಳಿಕೊಳ್ಳುತ್ತೀಯೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನ ಚಿತ್ತವನ್ನು ಬಲ್ಲವನೂ ಧರ್ಮಶಾಸ್ತ್ರದಿಂದ ಉಪದೇಶವನ್ನು ಹೊಂದಿ ಇದು ತಕ್ಕದ್ದು ಅದು ತಕ್ಕದ್ದಲ್ಲವೆಂದು ವಿವೇಚಿಸುವವನೂ ಆಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೇವರ ಚಿತ್ತವನ್ನು ಬಲ್ಲವನೂ ನಿಯಮದಿಂದ ಉಪದೇಶವನ್ನು ಹೊಂದಿ ಯಾವುದು ಉತ್ತಮವಾದದ್ದೆಂದು ಅನುಮೋದಿಸುವವನೂ ಆಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ದೆವಾಕ್ ತುಮಿ ಕಾಯ್ ಕರಲ್ಲೆ ಪಾಜೆ ಮನ್ತಲೆ ತುಕಾ ಗೊತ್ತ್ ಹಾಯ್, ಅನಿ ಖಾಯ್ದ್ಯಾಂಚ್ಯಾ ವೈನಾ ಖಲೆ ಸಮಾ ಹಾಯ್ ತೆ ಎಚುನ್ ಘೆತಲೆ ತಿಯಾ ಶಿಕಲ್ಲೆ ಹಾಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:18
19 ತಿಳಿವುಗಳ ಹೋಲಿಕೆ  

ಎಲ್ಲವನ್ನೂ ಪರಿಶೋಧಿಸಿ, ಒಳ್ಳೆಯದನ್ನು ಭದ್ರವಾಗಿ ಹಿಡಿದುಕೊಳ್ಳಿರಿ.


ಒಳ್ಳೆಯದನ್ನು ಹೇಗೆ ಮಾಡಬೇಕೆಂದು ತಿಳಿದಿದ್ದರೂ ಒಳ್ಳೆಯದನ್ನು ಮಾಡದಿರುವವನು ಪಾಪವನ್ನು ಮಾಡುವವನಾಗಿದ್ದಾನೆ.


ಒಳಿತುಕೆಡಕುಗಳಿಗಿರುವ ವ್ಯತ್ಯಾಸವನ್ನು ಅರಿತುಕೊಂಡು ಒಳ್ಳೆಯದನ್ನೇ ಆರಿಸಿಕೊಳ್ಳುವಂಥವರಾಗಬೇಕು; ಕ್ರಿಸ್ತನ ಬರುವಿಕೆಯಲ್ಲಿ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕು.


ನಾನು ನಿಮಗೆ ಈ ಹೊತ್ತು ಕೊಡುವ ಉಪದೇಶಗಳಿಗೆ ನ್ಯಾಯದಲ್ಲೂ ಒಳ್ಳೆಯದರಲ್ಲೂ ಸರಿಸಮಾನವಾದ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಬೇರೆ ಯಾವ ದೊಡ್ಡ ದೇಶವೂ ಹೊಂದಿಲ್ಲ!


ಆದರೆ ಗಟ್ಟಿಯಾದ ಆಹಾರವು ಜ್ಞಾನದಲ್ಲಿ ಬೆಳವಣಿಗೆ ಹೊಂದಿರುವವರಿಗೇ ಹೊರತು ಮಕ್ಕಳಿಗಲ್ಲ. ಇವರು ಅನುಭವದಿಂದ ತಮ್ಮ ಮನಸ್ಸುಗಳನ್ನು ಹಿಡಿತದಲ್ಲಿ ಇಟ್ಟುಕೊಂಡಿರುವುದರಿಂದ ಒಳಿತು ಕೆಡುಕುಗಳಿಗಿರುವ ಭೇದವನ್ನು ತಿಳಿದುಕೊಳ್ಳಬಲ್ಲವರಾಗಿದ್ದಾರೆ.


ಹಿಂದಿನ ಕಾಲದಲ್ಲಿ ಬರೆಯಲ್ಪಟ್ಟಿರುವ ಪ್ರತಿಯೊಂದೂ ನಮ್ಮ ಉಪದೇಶಕ್ಕಾಗಿಯೇ ಬರೆಯಲ್ಪಟ್ಟಿದೆ. ನಾವು ನಿರೀಕ್ಷೆ ಉಳ್ಳವರಾಗಿರಬೇಕೆಂದು ಆ ಸಂಗತಿಗಳು ಬರೆಯಲ್ಪಟ್ಟಿವೆ. ಪವಿತ್ರ ಗ್ರಂಥವು ನಮಗೆ ಕೊಡುವ ತಾಳ್ಮೆಯಿಂದಲೂ ಶಕ್ತಿಯಿಂದಲೂ ಈ ನಿರೀಕ್ಷೆ ಬರುತ್ತದೆ.


ನೀವು ಈ ಸಂಗತಿಗಳನ್ನು ತಿಳಿದುಕೊಂಡು ಇವುಗಳನ್ನು ಕೈಕೊಂಡು ನಡೆದರೆ ಸಂತೋಷದಿಂದಿರುವಿರಿ.


“ತನ್ನ ಯಜಮಾನನು ತನ್ನಿಂದ ಏನು ಅಪೇಕ್ಷಿಸುತ್ತಾನೆ ಎಂಬುದು ಆ ಸೇವಕನಿಗೆ ಗೊತ್ತಿತ್ತು. ಆದರೆ ಅವನು ತನ್ನನ್ನು ಸಿದ್ಧಪಡಿಸಿಕೊಳ್ಳಲಿಲ್ಲ ಮತ್ತು ತನ್ನ ಕೆಲಸವನ್ನು ಪೂರೈಸಲು ಪ್ರಯತ್ನಿಸಲಿಲ್ಲ. ಆದ್ದರಿಂದ ಅವನು ಕಠಿಣ ದಂಡನೆಗೆ ಗುರಿಯಾಗುವನು!


ನಿನ್ನ ತಂದೆತಾಯಿಗಳ ಆಜ್ಞೆಗಳು ಮತ್ತು ಉಪದೇಶಗಳು ನಿನಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿವೆ. ಅವು ನಿನ್ನನ್ನು ಸರಿಪಡಿಸಿ ಜೀವಮಾರ್ಗದಲ್ಲಿ ನಡೆಯಲು ಸಹಾಯಮಾಡುತ್ತವೆ.


ಜನರು ನಿನ್ನ ವಾಕ್ಯವನ್ನು ಅರ್ಥಮಾಡಿಕೊಂಡಾಗ ಅದು ಅವರಿಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿರುವುದು. ನಿನ್ನ ವಾಕ್ಯವು ಸಾಮಾನ್ಯರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.


ಯೆಹೋವನ ನಿಯಮಗಳು ನೀತಿಯ ಕಟ್ಟಳೆಗಳಾಗಿವೆ. ಅವು ಮನುಸ್ಸನ್ನು ಸಂತೋಷಗೂಳಿಸುತ್ತವೆ. ಯೆಹೋವನ ಆಜ್ಞೆಗಳು ಒಳ್ಳೆಯ ಆಜ್ಞೆಗಳಾಗಿವೆ. ಅವು ಕಣ್ಣುಗಳಿಗೆ ಬೆಳಕನ್ನು ನೀಡುತ್ತವೆ.


ನಿನಗೆ ಉಪದೇಶಿಸಿರುವ ವಿಷಯಗಳು ಸತ್ಯವಾದವುಗಳೆಂದು ಇದರಿಂದ ನಿನಗೆ ಸ್ಪಷ್ಟವಾಗಿರುವುದು.


ಸರಿಯಾದ ಮಾರ್ಗವನ್ನು ತಿಳಿದಿಲ್ಲದ ಜನರಿಗೆ ಮಾರ್ಗದರ್ಶಕನಾಗಿಯೂ ಕತ್ತಲೆಯಲ್ಲಿರುವ ಜನರಿಗೆ ಬೆಳಕಾಗಿಯೂ ಇರುವುದಾಗಿ ನಿನ್ನ ಕುರಿತು ಭಾವಿಸಿಕೊಂಡಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು