Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:28 - ಪರಿಶುದ್ದ ಬೈಬಲ್‌

28 ಕೇವಲ ಬಾಹ್ಯ ದೇಹದಲ್ಲಿ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ. ಕೇವಲ ದೇಹದ ಹೊರಭಾಗದ ಸುನ್ನತಿಯು ನಿಜವಾದ ಸುನ್ನತಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಬಾಹ್ಯಾಚರಣೆಯಲ್ಲಿ ಮಾತ್ರ ಯೆಹೂದ್ಯನಾಗಿರುವವನು ನಿಜವಾದ ಯೆಹೂದ್ಯನಲ್ಲ. ಅಂತೆಯೇ, ನಿಜವಾದ ಸುನ್ನತಿಯು ಕೇವಲ ಬಾಹ್ಯಲಕ್ಷಣವುಳ್ಳ ಶಾರೀರಿಕ ಪದ್ಧತಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ. ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಅಶೆ ರಾತಾನಾ, ಖರೆಚ್ ಸುನ್ನತ್ ಕರಲ್ಲೊ, ಖರೊ ಜುದೆವ್ ಕೊನ್? ಭಾಯ್ನಾ ಖಾಲಿ ಜುದೆವ್ ಮನುನ್ ದಾಕ್ವುತಲೊ ಜುದೆವ್ ನ್ಹಯ್, ಖಾಲಿ ಆಂಗಾಕ್ ಪದ್ದತಿ ಪರ್‍ಕಾರ್ ಕರುನ್ ಘೆಟಲ್ಲಿ ಸುನ್ನತ್ , ಸುನ್ನತ್ ನ್ಹಯ್ ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:28
17 ತಿಳಿವುಗಳ ಹೋಲಿಕೆ  

ಒಬ್ಬನಿಗೆ ಸುನ್ನತಿಯಾಗಿದೆಯೋ ಸುನ್ನತಿಯಾಗಿಲ್ಲವೋ ಎಂಬುದು ಮುಖ್ಯವಲ್ಲ. ಆದರೆ ದೇವರಿಂದ ಹೊಸ ಸೃಷ್ಟಿಯಾಗಿರುವುದೇ ಮುಖ್ಯವಾದದ್ದು.


‘ಅಬ್ರಹಾಮನು ನಮ್ಮ ತಂದೆ’ ಎಂದು ನೀವು ಜಂಬಪಡುವುದೇಕೆ? ದೇವರು ಅಬ್ರಹಾಮನಿಗಾಗಿ ಇಲ್ಲಿರುವ ಬಂಡೆಗಳಿಂದಲೂ ಮಕ್ಕಳನ್ನು ಸೃಷ್ಟಿಸಬಲ್ಲನು ಎಂದು ನಾನು ನಿಮಗೆ ಹೇಳುತ್ತೇನೆ.


“ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ.


ಆ ನೀರು ಈಗ ನಿಮ್ಮನ್ನು ರಕ್ಷಿಸುತ್ತಿರುವ ದೀಕ್ಷಾಸ್ನಾನದಂತಿದೆ. ದೀಕ್ಷಾಸ್ನಾನವು ಮೈಕೊಳೆಯನ್ನು ತೊಳೆಯುವಂಥದ್ದಲ್ಲ. ಅದು ಪರಿಶುದ್ಧ ಹೃದಯ ಬೇಕೆಂದು ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಯೇಸು ಕ್ರಿಸ್ತನು ಸಾವಿನಿಂದ ಎದ್ದುಬಂದದ್ದರಿಂದ ಅದು ನಿಮ್ಮನ್ನು ರಕ್ಷಿಸುತ್ತದೆ.


“ನಾನು ಯೆಹೂದ್ಯನು” ಎಂದು ಹೇಳಿಕೊಳ್ಳುತ್ತಿರುವ ನಿನ್ನ ವಿಷಯವಾದರೂ ಏನು? ಧರ್ಮಶಾಸ್ತ್ರದಲ್ಲಿ ನಂಬಿಕೆಯಿಟ್ಟು ದೇವರಿಗೆ ಸಮೀಪವಾಗಿರುವುದಾಗಿ ನೀನು ಹೆಮ್ಮೆಪಡುವೆ.


ಯೇಸು ತನ್ನ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡು ಅವನ ಬಗ್ಗೆ, “ಇವನು ನಿಜವಾದ ಇಸ್ರೇಲ. ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.


ನಾನು ಈಜಿಪ್ಟ್, ಯೆಹೂದ, ಎದೋಮ್, ಅಮ್ಮೋನ್, ಮೋವಾಬ್ ಜನಾಂಗಗಳ ಜನರ ಬಗ್ಗೆ ಮತ್ತು ಮರಳು ಪ್ರದೇಶದಲ್ಲಿ ವಾಸಮಾಡುತ್ತಿರುವ ಎಲ್ಲಾ ಜನಗಳ ಬಗ್ಗೆ ಮಾತನಾಡುತ್ತಿದ್ದೇನೆ. ಈ ಎಲ್ಲಾ ದೇಶಗಳ ಜನರಿಗೆ ದೈಹಿಕವಾಗಿ ಸುನ್ನತಿ ಆಗಿದ್ದಿಲ್ಲ. ಆದರೆ ಇಸ್ರೇಲ್ ವಂಶದವರು ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ಅನ್ನುತ್ತಾನೆ.


ದೇವರು ಇಸ್ರೇಲಿಗೆ ಒಳ್ಳೆಯವನೇ ನಿಜ! ಶುದ್ಧ ಹೃದಯವುಳ್ಳವರಿಗೆ ದೇವರು ಒಳ್ಳೆಯವನೇ ಸರಿ!


ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”


“ಕೇವಲ ದೈಹಿಕವಾಗಿ ಸುನ್ನತಿಯನ್ನು ಮಾಡಿಕೊಂಡ ಜನರನ್ನು ನಾನು ಶಿಕ್ಷಿಸುವ ಕಾಲ ಬರಲಿದೆ.


ನೀವು ಹುಟ್ಟಿದಂದಿನಿಂದ ಅನ್ಯಜನರಾಗಿದ್ದೀರಿ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಯೆಹೂದ್ಯರು ಕರೆಯುತ್ತಾರೆ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಕರೆಯುವ ಯೆಹೂದ್ಯರು ತಮ್ಮ ಬಗ್ಗೆ “ಸುನ್ನತಿಯವರು” ಎಂದು ಹೇಳಿಕೊಳ್ಳುತ್ತಾರೆ. (ಅವರ ಸುನ್ನತಿಯು ಶರೀರದಲ್ಲಿ ಕೈಯಿಂದ ಮಾಡಲ್ಪಡುತ್ತದೆ.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು