Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:3 - ಪರಿಶುದ್ದ ಬೈಬಲ್‌

3 ಆ ಅಪರಾಧಗಳನ್ನು ಮಾಡುವ ಜನರಿಗೆ ನೀವು ಸಹ ತೀರ್ಪು ಮಾಡುತ್ತೀರಿ. ಆದರೆ ನೀವೇ ಆ ಅಪರಾಧಗಳನ್ನು ಮಾಡುತ್ತೀರಿ. ಹೀಗಿರಲು ದೇವರ ದಂಡನೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದನ್ನು ಪರಿಗಣಿಸು ಎಲೈ ಮನುಷ್ಯನೇ, ಅಂಥವುಗಳನ್ನು ಅನುಸರಿಸುವವರಲ್ಲಿ ದೋಷಹುಡುಕಿ, ನೀನು ಅವುಗಳನ್ನೇ ಮಾಡುತ್ತಿರುವಲ್ಲಿ ದೇವರ ದಂಡನೆಯ ತೀರ್ಪನ್ನು ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೀಗಿರುವಾಗ, ಇತರರಿಗೆ ಯಾವ ಅಪರಾಧಕ್ಕಾಗಿ ತೀರ್ಪುನೀಡಿದೆಯೋ ಅಂಥ ಅಪರಾಧವನ್ನೇ ನೀನೂ ಮಾಡುತ್ತಿರುವೆಯಲ್ಲಾ! ದೇವರು ಕೊಡುವ ನ್ಯಾಯತೀರ್ಪಿನಿಂದ ನೀನು ಮಾತ್ರ ತಪ್ಪಿಸಿಕೊಳ್ಳುವಿಯೆಂದು ನೆನೆಸುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಎಲೈ ಮನುಷ್ಯನೇ, ಅಂಥವುಗಳನ್ನು ನಡಿಸುವವರಲ್ಲಿ ದೋಷವೆಣಿಸಿ ಅವುಗಳನ್ನೇ ಮಾಡುತ್ತಿರುವ ನೀನು ದೇವರ ದಂಡನೆಯ ತೀರ್ಪಿಗೆ ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮನುಷ್ಯನೇ, ಅಂಥವುಗಳನ್ನು ನಡೆಸುವವರ ಮೇಲೆ ತೀರ್ಪುಮಾಡುತ್ತಿರುವ ನೀನು ದೇವರ ತೀರ್ಪಿನಿಂದ ತಪ್ಪಿಸಿಕೊಂಡೇನೆಂದು ನೆನಸುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ ತಿಯಾ ಮಾಜ್ಯಾ ದೊಸ್ತಾ, ಹಿ ಸಗ್ಳಿ ಬುರ್ಶಿ ಕಾಮಾ ಕರ್ತೆಯ್ ಅನಿ ದುಸ್ರ್ಯಾಂಚ್ಯಾ ವಿಶಯಾತ್ನಿ ನಿರ್ನಯಾ ಕರ್ತೆಯ್! ತುಕಾ ದೆವಾಚ್ಯಾ ನಿರ್ನಯಾತ್ನಾ ಚುಕ್ವುನ್ ಘೆವ್ಕ್ ಹೊತಾ ಮನುನ್ ಚಿಂತ್ಲೆ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:3
22 ತಿಳಿವುಗಳ ಹೋಲಿಕೆ  

ಗರ್ವಿಷ್ಠರು ಯೆಹೋವನಿಗೆ ಅಸಹ್ಯ. ಆ ಗರ್ವಿಷ್ಠರಿಗೆ ಯೆಹೋವನ ದಂಡನೆ ಖಂಡಿತ.


ಇಂಥವರಿಗೆ ಮರಣದಂಡನೆ ಆಗಬೇಕೆಂದು ದೇವರ ಧರ್ಮಶಾಸ್ತ್ರ ಹೇಳುತ್ತದೆ ಎಂಬುದು ಅವರಿಗೆ ಗೊತ್ತಿದೆ. ಆದರೂ ಅವರು ಇಂಥ ಕಾರ್ಯಗಳನ್ನು ಮಾಡುತ್ತಾರೆ ಮತ್ತು ಇಂಥ ಕಾರ್ಯಗಳನ್ನು ಮಾಡುವ ಜನರಿಗೆ ಪ್ರೋತ್ಸಾಹ ನೀಡುತ್ತಾರೆ.


“ನಮಗೆ ಶಾಂತಿಯಿದೆ. ನಾವು ಸುರಕ್ಷಿತರಾಗಿದ್ದೇವೆ” ಎಂದು ಜನರು ಹೇಳುವಾಗಲೇ ಅವರಿಗೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ ಬರುತ್ತದೆ. ಆ ಜನರು ತಪ್ಪಿಸಿಕೊಳ್ಳಲಾಗುವುದಿಲ್ಲ.


ಆದರೆ ಯೇಸು ಅವನಿಗೆ, “ನಾನು ನಿಮ್ಮ ನ್ಯಾಯಾಧಿಪತಿ ಎಂದಾಗಲಿ ನಿಮ್ಮ ತಂದೆಯ ಆಸ್ತಿಯನ್ನು ನಿಮ್ಮಿಬ್ಬರಿಗೆ ಹಂಚಿಕೊಡುವವನು ಎಂದಾಗಲಿ ನಿನಗೆ ಯಾರು ಹೇಳಿದರು?” ಎಂದು ಕೇಳಿದನು.


ಸ್ವಲ್ಪ ಸಮಯದ ನಂತರ ಇನ್ನೊಬ್ಬ ವ್ಯಕ್ತಿ ಪೇತ್ರನನ್ನು ನೋಡಿ, “ನೀನು ಯೇಸುವನ್ನು ಹಿಂಬಾಲಿಸುತ್ತಿದ್ದ ಜನರಲ್ಲಿ ಒಬ್ಬನಾಗಿದ್ದೆ!” ಎಂದು ಹೇಳಿದನು. ಆದರೆ ಪೇತ್ರನು, “ನಾನು ಆತನ ಹಿಂಬಾಲಕರಲ್ಲಿ ಒಬ್ಬನಲ್ಲ” ಅಂದನು.


ನಾನು ನನ್ನ ತಂದೆಯನ್ನು ಕೇಳಿದ್ದರೆ, ಆತನು ನನಗೆ ದೇವದೂತರ ಹನ್ನೆರಡು ಸೇನಾದಳಗಳನ್ನು ನೀಡುತ್ತಿದ್ದನೆಂಬುದು ನಿನಗೆ ಗೊತ್ತೇ ಇದೆ.


“ನೀವು ಸರ್ಪಗಳು! ನೀವು ವಿಷಕರವಾದ ಹಾವುಗಳ ಕುಟುಂಬದವರು! ನೀವು ದೇವರಿಂದ ತಪ್ಪಿಸಿಕೊಳ್ಳಲಾರಿರಿ. ನೀವೆಲ್ಲರು ಅಪರಾಧಿಗಳೆಂಬ ತೀರ್ಪುಹೊಂದಿ ನರಕಕ್ಕೆ ಹೋಗುವಿರಿ!


ಆಗ ಆತನು “ದಾನಿಯೇಲನೇ, ಭಯಪಡಬೇಡ. ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ಸಮಾಧಾನ ತಂದುಕೊ. ಈಗ ನೀನು ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಆತನು ನನ್ನೊಂದಿಗೆ ಮಾತನಾಡಿದ ಮೇಲೆ ನನಗೆ ಬಲಬಂದಿತು. ಆಗ ನಾನು, “ಸ್ವಾಮೀ, ನೀವು ನನಗೆ ಬಲವನ್ನು ನೀಡಿದಿರಿ. ಈಗ ನೀವು ಮಾತನಾಡಬಹುದು” ಎಂದು ಹೇಳಿದೆ.


ಆದರೆ ಯೆಹೂದದ ರಾಜನಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಯಾಕೆಂದರೆ ಅವನು ತನ್ನ ಪ್ರಮಾಣವನ್ನು ತಿರಸ್ಕರಿಸಿದನು ಮತ್ತು ತಾನು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಹಾಕಿದನು.”


ಆದರೆ ಈ ಹೊಸ ರಾಜನು ನೆಬೂಕದ್ನೆಚ್ಚರನಿಗೆ ತಿರುಗಿ ಬೀಳಲು ಪ್ರಯತ್ನಿಸಿದನು. ಅವನು ಈಜಿಪ್ಟಿಗೆ ದೂತರನ್ನು ಕಳುಹಿಸಿ ಸಹಾಯವನ್ನು ಕೇಳಿದನು. ಬಹಳ ಕುದುರೆಗಳನ್ನೂ ಸೈನಿಕರನ್ನೂ ಕೇಳಿದನು. ಯೆಹೂದದ ಹೊಸ ರಾಜನು ತನ್ನ ಪ್ರಯತ್ನದಲ್ಲಿ ಜಯಶಾಲಿಯಾಗುವನು ಎಂದು ಭಾವಿಸುವಿರೋ? ಈ ಹೊಸ ರಾಜನು ಒಪ್ಪಂದವನ್ನು ಮುರಿದು ಶಿಕ್ಷೆಯಿಂದ ಪಾರಾಗುವನೆಂದು ನೀವು ಭಾವಿಸುವಿರೋ?”


ದುಷ್ಟರಿಗೆ ದಂಡನೆ ಖಂಡಿತ. ಶಿಷ್ಟರಿಗೆ ಬಿಡುಗಡೆ ನಿಶ್ಚಯ.


ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ನಿಮ್ಮಂಥವನೆಂದು ನೀವು ಆಲೋಚಿಸಿಕೊಂಡಿರಿ. ಈಗಲಾದರೋ ನಾನು ಮೌನವಾಗಿರುವುದಿಲ್ಲ! ಎಲ್ಲವನ್ನು ನಿಮಗೆ ವಿವರಿಸಿ ನಿಮ್ಮ ಮುಂದೆಯೇ ನಿಮ್ಮನ್ನು ಟೀಕಿಸುವೆನು!


“ಯೋಬನೇ, ‘ನಾನು ದೇವರಿಗಿಂತ ನೀತಿವಂತನೆಂದು’ ನೀನು ಹೇಳುವುದು ನ್ಯಾಯವಲ್ಲ.


ಆದರೆ ಅಮ್ಮೋನಿಯರ ನಾಯಕರು ತಮ್ಮ ಪ್ರಭುವಾದ ಹಾನೂನನಿಗೆ, “ನಿನ್ನನ್ನು ಸಂತೈಸಲು ಕೆಲವು ಜನರನ್ನು ಕಳುಹಿಸುವುದರ ಮೂಲಕ ದಾವೀದನು ನಿನ್ನ ತಂದೆಯನ್ನು ಗೌರವಿಸಲು ಪ್ರಯತ್ನಿಸುತ್ತಿರುವನೆಂದು ನೀನು ಭಾವಿಸಿರುತ್ತಿಯಲ್ಲವೇ? ಇಲ್ಲ! ನಿನ್ನ ನಗರದ ಸಂಗತಿಗಳನ್ನು ರಹಸ್ಯವಾಗಿ ಕಂಡುಕೊಳ್ಳಲು ಮತ್ತು ತಿಳಿದುಕೊಳ್ಳಲು ದಾವೀದನು ಈ ಜನರನ್ನು ಕಳುಹಿಸಿದ್ದಾನೆ. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡಲು ಯೋಜನೆ ಮಾಡುತ್ತಿದ್ದಾರೆ” ಎಂದು ಹೇಳಿದರು.


ದೇವರು ಮಾತನಾಡುವಾಗ ಆಲಿಸದೆ ಇರಬೇಡಿ. ಆತನು ಇಸ್ರೇಲರಿಗೆ ಈ ಲೋಕದಲ್ಲಿ ಎಚ್ಚರಿಕೆ ನೀಡಿದಾಗ, ಅವರು ಆತನ ಮಾತನ್ನು ಕೇಳಲಿಲ್ಲ. ಆದರೆ ಅವರು ತಪ್ಪಿಸಿಕೊಳ್ಳಲಾಗಲಿಲ್ಲ. ಈಗ ದೇವರು ಪರಲೋಕದಿಂದ ಮಾತಾಡುತ್ತಿದ್ದಾನೆ. ಆತನ ಮಾತನ್ನು ಆಲಿಸದ ಜನರು ಹೇಗೆ ತಪ್ಪಿಸಿಕೊಳ್ಳಲಾದೀತು?


ನಮಗೆ ದಯಪಾಲಿಸಲ್ಪಟ್ಟ ಈ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ಈ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು.


ಆಗ ಪೇತ್ರನು, “ನೀನು ಏನು ಹೇಳುತ್ತಿದ್ದೀಯೋ ನನಗೆ ಗೊತ್ತಿಲ್ಲ” ಅಂದನು. ಪೇತ್ರನು ಇನ್ನೂ ಮಾತಾಡುತ್ತಿದ್ದಾಗ ಕೋಳಿ ಕೂಗಿತು.


ದೇವರೇ, ಅವರ ದುಷ್ಟತನದ ನಿಮಿತ್ತ ಅವರನ್ನು ಸೆರೆಯಾಳುಗಳಾಗಿ ಕಳುಹಿಸು. ಅವರು ಅನ್ಯ ಜನಾಂಗಗಳ ಕೋಪವನ್ನು ಅನುಭವಿಸುವಂತೆ ಹೊರಗಟ್ಟು.


“ಇತರ ಜನರಿಗೆ ತೀರ್ಪು ಮಾಡಬಲ್ಲೆವು” ಎಂದು ನಿಮ್ಮ ವಿಷಯದಲ್ಲಿ ಯೋಚಿಸಿಕೊಳ್ಳಬೇಡಿ. ಏಕೆಂದರೆ ನೀವು ಸಹ ಪಾಪಮಾಡಿ ಅಪರಾಧಿಗಳಾಗಿದ್ದೀರಿ. ನೀವೂ ಆ ಜನರಿಗೆ ತೀರ್ಪು ಮಾಡುತ್ತೀರಿ. ಆದರೆ ಅದೇ ಕಾರ್ಯಗಳನ್ನು ನೀವೂ ಮಾಡುತ್ತೀರಿ. ಆದ್ದರಿಂದ ನೀವು ಅವರಿಗೆ ತೀರ್ಪು ಮಾಡುವಾಗ, ನಿಜವಾಗಿಯೂ ನಿಮಗೇ ತೀರ್ಪು ಮಾಡಿಕೊಳ್ಳುವವರಾಗಿದ್ದೀರಿ.


ಅಪರಾಧಗಳನ್ನು ಮಾಡುವ ಜನರಿಗೆ ದೇವರು ತೀರ್ಪು ಮಾಡುತ್ತಾನೆ. ಆತನ ತೀರ್ಪು ನ್ಯಾಯವಾದುದೆಂದು ನಮಗೆ ಗೊತ್ತಿದೆ.


ಹಾಗೆ ಕೇಳಬೇಡಿ. ನೀವು ಕೇವಲ ಮನುಷ್ಯರು. ದೇವರನ್ನು ಪ್ರಶ್ನಿಸಲು ಮನುಷ್ಯರಿಗೆ ಯಾವ ಹಕ್ಕೂ ಇಲ್ಲ. ಮಡಕೆಯು ತನ್ನನ್ನು ತಯಾರಿಸಿದವನಿಗೆ, “ನೀನು ನನ್ನನ್ನು ಈ ರೀತಿ ತಯಾರಿಸಿದ್ದೇಕೆ” ಎಂದು ಕೇಳುವುದುಂಟೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು