Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:6 - ಪರಿಶುದ್ದ ಬೈಬಲ್‌

6 ದೇವರು ಪ್ರತಿಯೊಬ್ಬರಿಗೂ ಅವರವರು ಮಾಡಿದ ಕಾರ್ಯಗಳಿಗಾಗಿ ಬಹುಮಾನವನ್ನಾಗಲಿ ದಂಡನೆಯನ್ನಾಗಲಿ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರು ಪ್ರತಿಯೊಬ್ಬರಿಗೆ ಅವರವರ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪ್ರತಿಯೊಬ್ಬನಿಗೂ ದೇವರು ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರು, “ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲ ಕೊಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ದೆವ್ ಹರಿಎಕ್ಲ್ಯಾಕ್ನಿ ತೆನಿ ಕರಲ್ಲ್ಯಾ ಕಾಮಾಂಚ್ಯಾ ಸರ್ಕೆಚ್ ಭೊಮಾನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:6
25 ತಿಳಿವುಗಳ ಹೋಲಿಕೆ  

ನನ್ನ ಒಡೆಯನೇ, ನೀನು ಪ್ರೀತಿಸ್ವರೂಪನಾಗಿರುವೆ. ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವವನು ನೀನೇ.


ನೀನು ಮಹತ್ತರವಾದ ಯೋಜನೆಗಳನ್ನು ಹಾಕಿ ಮಹತ್ಕಾರ್ಯಗಳನ್ನು ಮಾಡುವೆ. ಜನರು ಮಾಡುವ ಎಲ್ಲವನ್ನೂ ನೀನು ನೋಡುವೆ. ಒಳ್ಳೆಯದನ್ನು ಮಾಡುವವರಿಗೆ ನೀನು ಪ್ರತಿಫಲಗಳನ್ನು ಕೊಡುವೆ. ಕೆಟ್ಟದ್ದನ್ನು ಮಾಡುವವರನ್ನು ನೀನು ದಂಡಿಸುವೆ. ಅವರು ಯಾವುದಕ್ಕೆ ಅರ್ಹರೊ ಅದನ್ನು ಕೊಡುವೆ.


ನಾವೆಲ್ಲರೂ ನ್ಯಾಯ ವಿಚಾರಣೆಗಾಗಿ ಕ್ರಿಸ್ತನ ಮುಂದೆ ನಿಂತುಕೊಳ್ಳಲೇಬೇಕು. ಪ್ರತಿಯೊಬ್ಬನು ಇಹಲೋಕದ ದೇಹದಲ್ಲಿ ವಾಸವಾಗಿದ್ದಾಗ ಮಾಡಿದ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಪ್ರತಿಫಲವನ್ನು ಹೊಂದುವನು.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.


ನಾನೇ ಯೆಹೋವನು, ನಾನು ಮನುಷ್ಯನ ಹೃದಯದ ಆಳವನ್ನು ನೋಡಬಲ್ಲೆ, ಮನುಷ್ಯನ ಬುದ್ಧಿಯನ್ನು ಪರೀಕ್ಷಿಸಬಲ್ಲೆ. ಆದ್ದರಿಂದ ಪ್ರತಿಯೊಬ್ಬ ಮನುಷ್ಯನಿಗೆ ತಕ್ಕ ಪ್ರತಿಫಲವನ್ನು ನಾನು ನಿರ್ಧರಿಸಬಲ್ಲೆ. ಪ್ರತಿಯೊಬ್ಬ ಮನುಷ್ಯನಿಗೆ ಅವನ ಕೆಲಸಕ್ಕೆ ತಕ್ಕಂತೆ ಸರಿಯಾಗಿ ಫಲವನ್ನು ಕೊಡುವೆನು.


“ಕೇಳು! ನಾನು ಬೇಗನೆ ಬರುತ್ತೇನೆ! ನನ್ನೊಂದಿಗೆ ಪ್ರತಿಫಲವನ್ನು ತರುತ್ತೇನೆ. ಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡಿದುದಕ್ಕೆ ತಕ್ಕ ಪ್ರತಿಫಲವನ್ನು ಕೊಡುತ್ತೇನೆ.


ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.


ಬೀಜ ಬಿತ್ತುವವನ ಮತ್ತು ನೀರನ್ನು ಹಾಕುವವನ ಉದ್ದೇಶವು ಒಂದೇ ಆಗಿದೆ. ಮತ್ತು ಪ್ರತಿಯೊಬ್ಬನಿಗೂ ಅವನವನ ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯುವುದು.


ಆತನು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು. ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ದೇವರಿಂದ ಹೊಂದಿಕೊಳ್ಳುವನು.


ಇಸ್ರೇಲರೇ, ನಾನು ಪ್ರತಿಯೊಬ್ಬನನ್ನು ಅವನವನ ಕಾರ್ಯಗಳ ಪ್ರಕಾರ ನ್ಯಾಯತೀರಿಸುವೆನು” ಎಂದು ಹೇಳಿದನು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆದ್ದರಿಂದ ನನ್ನ ಬಳಿಗೆ ಬನ್ನಿರಿ, ದುಷ್ಟತನ ಮಾಡುವದನ್ನು ನಿಲ್ಲಿಸಿರಿ, ಪಾಪವು ನಿಮ್ಮ ನಾಶನಕ್ಕೆ ಕಾರಣವಾಗದಂತೆ ಎಚ್ಚರಿಕೆಯಾಗಿರಿ.


ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


“ಇದರ ಬಗ್ಗೆ ನನಗೆ ಗೊತ್ತಿರಲಿಲ್ಲ” ಎಂದು ನೀನು ಹೇಳಲಾಗದು. ಯೆಹೋವನಿಗೆ ಪ್ರತಿಯೊಂದು ತಿಳಿದಿದೆ. ನಿನ್ನ ಕಾರ್ಯಗಳ ಉದ್ದೇಶವೂ ಆತನಿಗೆ ತಿಳಿದಿದೆ. ಯೆಹೋವನು ನಿನ್ನನ್ನು ಗಮನಿಸಿ ನಿನ್ನ ಕಾರ್ಯಗಳಿಗೆ ಪ್ರತಿಫಲ ಕೊಡುವನು.


ಈ ಸಂಗತಿಗಳ ಬಗ್ಗೆ ನಿನಗಿರುವ ವಿಶ್ವಾಸವು ನಿನಗೂ ದೇವರಿಗೂ ಮಾತ್ರ ತಿಳಿದಿರಲಿ. ತನಗೆ ಸರಿಯೆನಿಸಿದ ಕಾರ್ಯಗಳನ್ನು ತಾನು ದೋಷಿಯಾಗುತ್ತೇನೆಂಬ ಸಂಶಯವಿಲ್ಲದೆ ಮಾಡುವವನೇ ಭಾಗ್ಯವಂತನು.


ಅವರು ಕೇಡು ಮಾಡಲು ತಮ್ಮ ಹೃದಯಗಳಲ್ಲಿ ಆಲೋಚಿಸಿಕೊಳ್ಳುವರು; ಅವರು ಕೇಡನ್ನೇ ಕುರಿತು ಮಾತಾಡುವರು.


ಆದ್ದರಿಂದ ಈಗ ಕೆಳಗಿಳಿದು ನಾನು ನಿನಗೆ ಹೇಳುವಲ್ಲಿಗೆ ಜನರನ್ನು ನಡಿಸು. ನನ್ನ ದೂತನು ನಿನ್ನ ಮುಂದೆ ಹೋಗಿ ನಿನ್ನನ್ನು ನಡಿಸುವನು. ಪಾಪಮಾಡಿದ ಜನರನ್ನು ಶಿಕ್ಷಿಸುವ ಸಮಯ ಬಂದಾಗ ಅವರು ಶಿಕ್ಷಿಸಲ್ಪಡುವರು” ಎಂದು ಹೇಳಿದನು.


ಆಗ ನಾನು ಮನಸ್ಸಿನಲ್ಲಿ, “ದೇವರು ಪ್ರತಿಯೊಂದಕ್ಕೂ ಸಮಯವನ್ನು ಗೊತ್ತುಪಡಿಸಿದ್ದಾನೆ. ಜನರು ಮಾಡುವ ಪ್ರತಿಯೊಂದಕ್ಕೂ ನ್ಯಾಯತೀರಿಸಲು ಆತನು ಸಮಯವನ್ನು ಗೊತ್ತುಪಡಿಸಿದ್ದಾನೆ. ದೇವರು ನೀತಿವಂತರಿಗೂ ದುಷ್ಟರಿಗೂ ನ್ಯಾಯತೀರಿಸುವನು” ಎಂದುಕೊಂಡೆನು.


ಯಾರು ಪಾಪ ಮಾಡುತ್ತಾರೋ ಅವರೇ ಮರಣಶಿಕ್ಷೆ ಹೊಂದುವರು. ತಂದೆಯ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳುವುದಿಲ್ಲ. ಮತ್ತು ಮಗನ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ತಂದೆಯು ಹೊತ್ತುಕೊಳ್ಳುವದಿಲ್ಲ. ಒಬ್ಬ ಒಳ್ಳೆ ಮನುಷ್ಯನ ನೀತಿಯು ಅವನಿಗೇ ಸೇರಿದ್ದು. ಕೆಟ್ಟ ಮನುಷ್ಯನ ದುಷ್ಟತ್ವವೂ ಆ ಕೆಟ್ಟ ಮನುಷ್ಯನಿಗೆ ಸೇರಿದ್ದಾಗಿದೆ.


ದೇಶಾಂತರಕ್ಕೆ ಅವರನ್ನು ಚದರಿಸಿ, ಎಲ್ಲಾ ದೇಶಗಳಲ್ಲಿ ಅವರನ್ನು ಹರಡಿಸಿಬಿಟ್ಟೆನು. ಅವರು ಮಾಡಿದ ದುಷ್ಟತನಕ್ಕೆ ನಾನು ಶಿಕ್ಷಿಸಿದೆನು.


ಹೀಗಿರಲು ಸೈತಾನನ ಸೇವಕರು ತಾವು ಸರಿಯಾದ ಕೆಲಸವನ್ನು ಮಾಡುತ್ತಿರುವವರಂತೆ ನಟಿಸುವುದರಲ್ಲಿ ಆಶ್ಚರ್ಯವೇನೂ ಇಲ್ಲ. ಆದರೆ ಅವರು ಮಾಡುತ್ತಿರುವ ಕೆಲಸಗಳ ಪ್ರತಿಫಲವಾಗಿ ಅವರಿಗೆ ಕೊನೆಯಲ್ಲಿ ದಂಡನೆಯಾಗುವುದು.


ಕಂಚುಗಾರನಾದ ಅಲೆಗ್ಸಾಂಡರನು ನನಗೆ ಅನೇಕ ಕೆಡಕುಗಳನ್ನು ಮಾಡಿದನು. ಅವನು ಮಾಡಿದ ಕೃತ್ಯಗಳಿಗಾಗಿ ಪ್ರಭುವು ಅವನನ್ನು ದಂಡಿಸುವನು.


ಮೂಢನನ್ನಾಗಲಿ ಕುಡುಕನನ್ನಾಗಲಿ ಕೂಲಿಗೆ ನೇಮಿಸಿಕೊಳ್ಳುವವನು ಹಾದುಹೋಗುವವರಿಗೆಲ್ಲ ಗಾಯ ಮಾಡುವ ಬಿಲ್ಲುಗಾರನಂತಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು