Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:7 - ಪರಿಶುದ್ದ ಬೈಬಲ್‌

7 ಕೆಲವು ಜನರು ಮಹಿಮೆಗಾಗಿ, ಘನತೆಗಾಗಿ ಮತ್ತು ಅಮರತ್ವಕ್ಕಾಗಿ ಯಾವಾಗಲೂ ಸತ್ಕಾರ್ಯಗಳನ್ನು ಮಾಡುತ್ತಾ ಜೀವಿಸುವರು. ದೇವರು ಆ ಜನರಿಗೆ ನಿತ್ಯಜೀವವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಉಲ್ಲಿ ಲೊಕಾ ಬರೆ ಕರುನ್ಗೆತ್ ಅನಿ ಮಾನ್, ಮಹಿಮಾ, ಅನಿ ವಾಯ್ಟ್ ನಸಲ್ಲೆ ಜಿವನ್ ಕರುನ್ಗೆತ್ ಹಾತ್; ತೆಂಕಾ ದೆವ್ ಕನ್ನಾಚ್ ಮರಾನ್ ನಸಲ್ಲೆ ಜಿವನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:7
38 ತಿಳಿವುಗಳ ಹೋಲಿಕೆ  

ಒಳ್ಳೆಯ ನೆಲದಲ್ಲಿ ಬಿದ್ದ ಬೀಜವೆಂದರೇನು? ಒಳ್ಳೆಯದಾದ ಮತ್ತು ಯಥಾರ್ಥವಾದ ಹೃದಯದಿಂದ ದೇವರ ವಾಕ್ಯವನ್ನು ಕೇಳುವ ಜನರೇ ಬೀಜಬಿದ್ದ ಒಳ್ಳೆಯ ನೆಲವಾಗಿದ್ದಾರೆ. ಅವರು ದೇವರ ವಾಕ್ಯಕ್ಕೆ ವಿಧೇಯರಾಗಿ ತಾಳ್ಮೆಯಿಂದ ಒಳ್ಳೆಯ ಫಲವನ್ನು ನೀಡುವರು.


ಆ ಕೃಪೆಯನ್ನು ಈವರೆಗೆ ನಮಗೆ ತೋರ್ಪಡಿಸಿರಲಿಲ್ಲ. ನಮ್ಮ ರಕ್ಷಕನಾದ ಕ್ರಿಸ್ತ ಯೇಸು ಪ್ರತ್ಯಕ್ಷನಾದಾಗ ಅದನ್ನು ನಮಗೆ ತೋರಿಸಲಾಯಿತು. ಯೇಸು ಮರಣವನ್ನು ನಾಶಪಡಿಸಿ, ನಮಗೆ ಜೀವಮಾರ್ಗವನ್ನು ಸುವಾರ್ತೆಯ ಮೂಲಕ ತೋರಿದನು.


ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ.


ಜನರು ಮಾಡುವ ಪಾಪಕ್ಕೆ ಮರಣವೇ ಸಂಬಳ. ಆದರೆ ದೇವರ ಉಚಿತವಾದ ಕೊಡುಗೆಯು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ಮಹಿಮಾತಿಶಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲು ದೇವರು ತೀರ್ಮಾನಿಸಿದನು. ಈ ಮಹಾಸತ್ಯವು ಎಲ್ಲಾ ಜನರಿಗಾಗಿ ಪ್ರಕಟವಾಯಿತು. ನಿಮ್ಮಲ್ಲಿರುವ ಕ್ರಿಸ್ತನೇ ಆ ಸತ್ಯವಾಗಿದ್ದಾನೆ. ದೇವರ ಮಹಿಮೆಯಲ್ಲಿ ಪಾಲುಹೊಂದಲು ಆತನೇ ನಮಗಿರುವ ಏಕೈಕ ನಿರೀಕ್ಷೆ.


ನಾವು ಒಳ್ಳೆಯ ಕಾರ್ಯ ಮಾಡುವುದರಲ್ಲಿ ಬೇಸರಗೊಳ್ಳಬಾರದು. ತಕ್ಕ ಸಮಯದಲ್ಲಿ ನಾವು ನಿತ್ಯಜೀವವೆಂಬ ಸುಗ್ಗಿಯನ್ನು ಪಡೆಯುವೆವು. ಆದ್ದರಿಂದ ಒಳ್ಳೆಯ ಕಾರ್ಯ ಮಾಡುವುದನ್ನು ನಾವು ಬಿಟ್ಟುಬಿಡಬಾರದು.


ಈಗ ನಾವು ಕಷ್ಟಸಂಕಟಗಳನ್ನು ಸಹಿಸಿಕೊಳ್ಳುತ್ತೇವೆ. ಆದರೆ ನಮಗೆ ಮುಂದೆ ಕೊಡಲ್ಪಡುವ ಮಹಿಮೆಗೆ ಈ ಕಷ್ಟಸಂಕಟಗಳನ್ನು ಹೋಲಿಸಿದರೆ ಇವು ಗಣನೆಗೆ ಬರುವುದಿಲ್ಲ.


ಆದರೆ ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬರಿಗೂ ಅಂದರೆ ಮೊದಲನೆಯದಾಗಿ ಯೆಹೂದ್ಯರಿಗೆ, ಅನಂತರ ಗ್ರೀಕರಿಗೆ ಸಹ ದೇವರು ಮಹಿಮೆಯನ್ನು, ಘನತೆಯನ್ನು ಮತ್ತು ಶಾಂತಿಯನ್ನು ಕೊಡುವನು.


ನೀನು ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದರೆ, ದೀರ್ಘಕಾಲ ಬದುಕುವೆ; ಭೂಮಿಯ ಅನೇಕ ಫಲಗಳನ್ನು ಅನುಭವಿಸುವೆ.


ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ! ಬಲವಾಗಿಯೂ ಧೈರ್ಯವಾಗಿಯೂ ಇರಿ! ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ!


ಕ್ರಿಸ್ತನು ನಮಗೆ ಕೊಡುವುದಾಗಿ ಮಾಡಿದ್ದ ವಾಗ್ದಾನವೇ ಈ ನಿತ್ಯಜೀವ.


ದೇವರು ತನ್ನ ಅತಿಶಯವಾದ ಮಹಿಮೆಯನ್ನು ತೋರ್ಪಡಿಸಬೇಕೆಂದು ತಾಳ್ಮೆಯಿಂದ ಕಾದುಕೊಂಡಿದ್ದನು. ತನ್ನ ಕರುಣೆಯನ್ನು ಹೊಂದಿಕೊಳ್ಳುವ ಜನರಿಗೆ ದೇವರು ಆ ಮಹಿಮೆಯನ್ನು ಕೊಡಬೇಕೆಂದಿದ್ದನು. ತನ್ನ ಮಹಿಮೆಯನ್ನು ಹೊಂದಿಕೊಳ್ಳಲೆಂದು ದೇವರು ಆ ಜನರನ್ನು ಸಿದ್ಧಪಡಿಸಿದನು.


ನೀವು ಪರಸ್ಪರ ಸನ್ಮಾನವನ್ನು ಬಯಸುತ್ತೀರಿ. ಆದರೆ ಒಬ್ಬನೇ ದೇವರಿಂದ ಬರುವ ಸನ್ಮಾನವನ್ನು ಪಡೆದುಕೊಳ್ಳಲು ನೀವೆಂದೂ ಪ್ರಯತ್ನಿಸುವುದಿಲ್ಲ. ಹೀಗಿರಲು ನೀವು ಹೇಗೆ ನಂಬಬಲ್ಲಿರಿ?


ಯೆಹೋವನನ್ನೇ ನಿರೀಕ್ಷಿಸಿಕೊಂಡು ಆತನ ಮಾರ್ಗವನ್ನು ಅನುಸರಿಸಿರಿ. ಆಗ ಆತನು ನಿಮ್ಮನ್ನು ಜಯಶಾಲಿಗಳನ್ನಾಗಿ ಮಾಡುವನು; ದೇವರು ವಾಗ್ದಾನ ಮಾಡಿದ ಭೂಮಿಯನ್ನು ನೀವು ಪಡೆದುಕೊಳ್ಳುವಿರಿ.


ನೀತಿವಂತರು ಸನ್ಮಾರ್ಗದಲ್ಲಿ ಜೀವಿಸುವರು. ನಿರಪರಾಧಿಗಳು ಸದ್ಗುಣದಲ್ಲಿ ಬಲವಾಗುತ್ತಲೇ ಇರುವರು.


ಅಬ್ರಹಾಮನು ಇದರ ನೆರವೇರುವಿಕೆಗಾಗಿ ತಾಳ್ಮೆಯಿಂದ ಕಾದಿದ್ದನು. ತರುವಾಯ ಅವನಿಗೆ ದೇವರ ವಾಗ್ದಾನದ ಫಲ ದೊರೆಯಿತು.


ನೀವು ಸೋಮಾರಿಗಳಾಗಿರಬೇಕೆಂಬುದು ನಮ್ಮ ಅಪೇಕ್ಷೆಯಲ್ಲ. ದೇವರ ವಾಗ್ದಾನದ ಫಲಗಳನ್ನು ಪಡೆಯುವ ಜನರಂತೆ ನೀವಿರಬೇಕೆಂಬುದು ನಮ್ಮ ಅಪೇಕ್ಷೆ. ಆ ಜನರಿಗೆ ನಂಬಿಕೆ ಮತ್ತು ತಾಳ್ಮೆಯಿದ್ದುದರಿಂದ ಅವರು ದೇವರ ವಾಗ್ದಾನದಂತೆ ಫಲವನ್ನು ಪಡೆದರು.


ಅವನು ಬಡವರಿಗೆ ನೋವು ಮಾಡುವುದಿಲ್ಲ. ಅವನು ಹಣವನ್ನು ಸಾಲಕೊಡುವಾಗ ಬಡ್ಡಿಹಾಕುವುದಿಲ್ಲ. ಅವನು ನನ್ನ ಕಟ್ಟಳೆಗಳಿಗೆ ವಿಧೇಯನಾಗುವನು. ಮತ್ತು ನನ್ನ ನಿಯಮಗಳನ್ನು ಅನುಸರಿಸುವನು. ಈ ಒಳ್ಳೆಯ ಮಗನು ತಂದೆಯ ದುಷ್ಟತನದ ಕಾರಣಕ್ಕಾಗಿ ಮರಣಶಿಕ್ಷೆಯನ್ನು ಅನುಭವಿಸುವದಿಲ್ಲ. ಆ ಒಳ್ಳೆಯ ಮಗನು ಬಾಳುವನು.


“ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”


ನೀವು ನಿಮ್ಮ ನಂಬಿಕೆಯಲ್ಲಿ ದೃಢವಾಗಿದ್ದರೆ ನಿಮ್ಮನ್ನು ರಕ್ಷಿಸಿಕೊಳ್ಳುವಿರಿ.


ಈಗಲೂ ಸಹ, ಬೆಳೆಯನ್ನು ಕೊಯ್ಯುವವನಿಗೆ ಕೂಲಿ ದೊರೆಯುತ್ತದೆ. ಅವನು ಬೆಳೆಗಳನ್ನು ನಿತ್ಯಜೀವಕ್ಕಾಗಿ ಕೂಡಿಸುತ್ತಿದ್ದಾನೆ. ಆದ್ದರಿಂದ ಈಗ ಬಿತ್ತುವವರೂ ಮತ್ತು ಕೊಯ್ಯುವವರೂ ಒಟ್ಟಿಗೆ ಸಂತೋಷವಾಗಿರುವರು.


ಸತ್ತವರಿಗಾಗುವ ಪುನರುತ್ಥಾನವು ಅದೇ ರೀತಿಯಾಗಿರುವುದು. ಬಿತ್ತಲ್ಪಟ್ಟ ದೇಹವು ಹಾಳಾಗುವುದು ಮತ್ತು ಕೊಳೆತು ಹೋಗುವುದು. ಆದರೆ ಜೀವಂತವಾಗಿ ಎದ್ದುಬರುವ ಆ ದೇಹವನ್ನು ನಾಶಮಾಡಲು ಸಾಧ್ಯವೇ ಇಲ್ಲ.


ಸಹೋದರ ಸಹೋದರಿಯರೇ, ನಾನು ಹೇಳುವುದೇನೆಂದರೆ, ಮಾಂಸ ಮತ್ತು ರಕ್ತ (ಭೌತಿಕ ದೇಹ) ಪರಲೋಕ ರಾಜ್ಯದಲ್ಲಿ ಪಾಲುಹೊಂದಲು ಸಾಧ್ಯವಿಲ್ಲ. ನಾಶವಾಗುವಂಥದ್ದು ಎಂದಿಗೂ ನಾಶವಾಗದ ಒಂದರಲ್ಲಿ ಪಾಲುಹೊಂದಲು ಸಾಧ್ಯವಿಲ್ಲ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನನ್ನು ನಿರಂತರವಾದ ಪ್ರೀತಿಯಿಂದ ಪ್ರೀತಿಸುವ ನಿಮ್ಮೆಲ್ಲರ ಮೇಲೆ ದೇವರ ಕೃಪೆಯಿರಲಿ.


ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್.


ಕೇವಲ ಸ್ವಲ್ಪಕಾಲದವರೆಗೆ ನೀನು ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆ ಮಾಡಿದೆ. ನೀನು ಅವನಿಗೆ ವೈಭವವನ್ನೂ ಗೌರವವನ್ನೂ ಕಿರೀಟವಾಗಿ ಇಟ್ಟಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು