ರೋಮಾಪುರದವರಿಗೆ 3:21 - ಪರಿಶುದ್ದ ಬೈಬಲ್21 ಆದರೆ ಈಗ ದೇವರು ಧರ್ಮಶಾಸ್ತ್ರದ ನೆರವಿಲ್ಲದೆಯೇ ಜನರನ್ನು ನೀತಿವಂತರನ್ನಾಗಿ ಮಾಡುವ ಮಾರ್ಗವನ್ನು ತೋರಿಸಿದ್ದಾನೆ. ಧರ್ಮಶಾಸ್ತ್ರ ಮತ್ತು ಪ್ರವಾದಿಗಳು ಈ ಹೊಸ ಮಾರ್ಗದ ಬಗ್ಗೆ ನಮಗೆ ಹೇಳಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಈಗಲಾದರೋ ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಈಗಲಾದರೋ ಧರ್ಮಶಾಸ್ತ್ರದ ನೆರವಿಲ್ಲದೆಯೇ ದೇವರಿಂದ ದೊರಕುವ ಸತ್ಸಂಬಂಧವು ಪ್ರಕಟವಾಗಿದೆ. ಇದಕ್ಕೆ ಧರ್ಮಶಾಸ್ತ್ರವೂ ಪ್ರವಾದನಾಗ್ರಂಥವೂ ಸಾಕ್ಷಿಯಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಈಗಲಾದರೋ ದೇವರಿಂದ ದೊರಕುವ ನೀತಿಯು ಧರ್ಮಶಾಸ್ತ್ರನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಈಗ ನಿಯಮವಿಲ್ಲದೆ ದೇವರ ನೀತಿಯು ಪ್ರಕಟವಾಗಿದೆ. ಅದಕ್ಕೆ ನಿಯಮವೂ ಪ್ರವಾದಿಗಳೂ ಸಾಕ್ಷಿಕೊಡುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಖರೆ ಅತ್ತಾ ಲೊಕಾಕ್ನಿ ಖಾಯ್ದೆ ನಸ್ತಾನಾ ಭಕ್ತಿವಂತ್ ಮನುನ್ ದಾಕ್ವುನ್ ದಿತಲಿ ವಾಟ್ ದೆವಾನ್ ಅಪ್ನಿಚ್ ದಾಕ್ವುನ್ ದಿಲ್ಯಾನಾಯ್. ಹೆಕಾ ಮೊಯ್ಜೆಚೆ ಖಾಯ್ದೆ ಅನಿ ಪ್ರವಾದಿ ಸೈತ್ ಅಪ್ನಾಚಿ ಸಾಕ್ಷಿ ದಿತ್ಯಾತ್. ಅಧ್ಯಾಯವನ್ನು ನೋಡಿ |
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.
ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.