Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:27 - ಪರಿಶುದ್ದ ಬೈಬಲ್‌

27 ಹೀಗಿರಲು, ನಮ್ಮ ಬಗ್ಗೆ ಹೊಗಳಿಕೊಳ್ಳಲು ನಮಗೆ ಏನಾದರೂ ಕಾರಣಗಳಿವೆಯೋ? ಇಲ್ಲ! ಏಕೆ? ಎಲ್ಲಾ ಹೊಗಳಿಕೆಯನ್ನು ನಿಲ್ಲಿಸುವಂಥದ್ದು ನಂಬಿಕೆಯ ಮಾರ್ಗವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸುವ ಮಾರ್ಗವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಹೀಗಿರುವಲ್ಲಿ ಮಾನವನು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವಿದೆಯೆ? ಇಲ್ಲವೇ ಇಲ್ಲ. ಹಾಗಾದರೆ ಸತ್ಸಂಬಂಧಕ್ಕೆ ಆಧಾರವೇನು? ಸತ್ಕಾರ್ಯಗಳ ಸಾಧನೆಯೆ? ಇಲ್ಲ. ವಿಶ್ವಾಸವೇ? ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹಾಗಾದರೆ ಹೊಗಳಿಕೊಳ್ಳುವದಕ್ಕೆ ಆಸ್ಪದವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಪ್ರಮಾಣದಿಂದ? ಕರ್ಮಮಾರ್ಗವನ್ನು ಅನುಸರಿಸುವದರಿಂದಲೋ? ಅಲ್ಲ; ವಿಶ್ವಾಸ ಮಾರ್ಗವನ್ನು ಅನುಸರಿಸುವದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹಾಗಾದರೆ, ನಾವು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವೆಲ್ಲಿ? ಆಸ್ಪದವೇ ಇಲ್ಲ. ನೀತಿವಂತರೆಂಬ ನಿರ್ಣಯ ನಿಯಮದಿಂದಲೋ? ಕ್ರಿಯೆಗಳಿಂದಲೋ? ಇಲ್ಲ, ಅದು ಇಲ್ಲದೆ ಹೋಯಿತು. ಅದು ನಂಬಿಕೆಯ ನಿಯಮದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅಶೆ ರ್‍ಹಾತಾನಾ, ಅಮಿ ಅಮ್ಚ್ಯಾಚ್ ವಿಶಯಾತ್ ಮೊಟೆಪಾನ್ ಬೊಲುನ್ ಘೆವ್ಕ್ ಅವ್ಕಾಸ್ ಖೈ ಹಾಯ್? ಕಾಯ್ಬಿ ನಾ! ಅಶೆ ಕರುಕ್ ಕಾರನ್ ತರ್ ಖೈ ಹಾಯ್? ಅಮಿ ಖಾಯ್ದ್ಯಾಂಚ್ಯಾ ಸರ್ಕೆ ಚಲ್ತಲೆ ಕಾಯ್? ನ್ಹಯ್, ಜೆ ಅಮಿ ವಿಶ್ವಾಸ್ ಕರ್ತಾಂವ್ ತೆ ಮೊಟೆಪಾನ್ ಬೊಲುಕ್ ಅವಕಾಸ್ ಕರುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:27
26 ತಿಳಿವುಗಳ ಹೋಲಿಕೆ  

ನೀನು ದೇವರ ಧರ್ಮಶಾಸ್ತ್ರದ ಬಗ್ಗೆ ಹೆಮ್ಮೆಪಡುವೆ. ಆದರೆ ಆ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ದೇವರಿಗೆ ಅವಮಾನ ಮಾಡುವೆ.


ಅವನು ತನ್ನ ಕ್ರಿಯೆಗಳಿಂದ ನೀತಿವಂತನಾಗಿದ್ದರೆ ಹೊಗಳಿಕೊಳ್ಳಲು ಅವನಿಗೆ ಕಾರಣವಿರುತ್ತಿತ್ತು. ಆದರೆ ಅಬ್ರಹಾಮನು ದೇವರ ಮುಂದೆ ಹೊಗಳಿಕೊಳ್ಳಲು ಆಗಲಿಲ್ಲ.


ಆದರೆ ಇದು ಸತ್ಯವಲ್ಲ. ಏಕೆಂದರೆ ಸಮಸ್ತವೂ ಪಾಪಕ್ಕೆ ಒಳಗಾಗಿದೆ ಎಂದು ಪವಿತ್ರ ಗ್ರಂಥ ಪ್ರಕಟಿಸುತ್ತದೆ. ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವವರಿಗೆ ಅವರ ನಂಬಿಕೆಯ ಆಧಾರದ ಮೇಲೆ ವಾಗ್ದಾನದ ಫಲವು ದೊರೆಯಬೇಕೆಂದೇ ಪವಿತ್ರ ಗ್ರಂಥವು ಹೀಗೆ ಪ್ರಕಟಿಸಿದೆ.


“ನಾನು ಯೆಹೂದ್ಯನು” ಎಂದು ಹೇಳಿಕೊಳ್ಳುತ್ತಿರುವ ನಿನ್ನ ವಿಷಯವಾದರೂ ಏನು? ಧರ್ಮಶಾಸ್ತ್ರದಲ್ಲಿ ನಂಬಿಕೆಯಿಟ್ಟು ದೇವರಿಗೆ ಸಮೀಪವಾಗಿರುವುದಾಗಿ ನೀನು ಹೆಮ್ಮೆಪಡುವೆ.


ಹೀಗಿರಲಾಗಿ, ನಾನು ಈ ನಿಯಮವನ್ನು ಕಲಿತುಕೊಂಡಿದ್ದೇನೆ: ನಾನು ಒಳ್ಳೆಯದನ್ನು ಮಾಡಲಿಚ್ಛಿಸುವಾಗ, ಕೆಟ್ಟದ್ದು ನನ್ನೊಳಗೇ ಇರುತ್ತದೆ.


ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.


ನಿಮ್ಮನ್ನು ಇತರ ಜನರಿಗಿಂತಲೂ ಉತ್ತಮರೆಂದು ಯಾರು ಹೇಳುತ್ತಾರೆ? ನಿಮ್ಮಲ್ಲಿರುವ ಪ್ರತಿಯೊಂದನ್ನೂ ದೇವರೇ ನಿಮಗೆ ಕೊಟ್ಟಿದ್ದಾನೆ. ಹೀಗಿರುವಾಗ, ನಿಮ್ಮ ಸ್ವಂತ ಶಕ್ತಿಯಿಂದ ಅವುಗಳನ್ನು ಪಡೆದುಕೊಂಡವರಂತೆ ಏಕೆ ಜಂಬಕೊಚ್ಚಿಕೊಳ್ಳುವಿರಿ?


ದೇವರ ಕೃಪೆಯ ಮೂಲಕ ಆರಿಸಲ್ಪಟ್ಟಿರುವ ಅವರು ದೇವರ ಮಕ್ಕಳಾದದ್ದು ತಮ್ಮ ಕ್ರಿಯೆಗಳಿಂದಲ್ಲ. ಇಲ್ಲದಿದ್ದರೆ, ದೇವರ ಕೃಪಾವರವು ಕೃಪಾವರವೆನಿಸಿಕೊಳ್ಳುತ್ತಿರಲಿಲ್ಲ.


ಧರ್ಮಶಾಸ್ತ್ರದಿಂದಾಗುವ ನೀತಿಯ ಬಗ್ಗೆ, “ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಜೀವವನ್ನು ಪಡೆದುಕೊಳ್ಳಲು ಬಯಸುವವನು, ಧರ್ಮಶಾಸ್ತವು ಹೇಳುವ ಕಾರ್ಯಗಳನ್ನು ಮಾಡಲೇಬೇಕು” ಎಂದು ಮೋಶೆ ಹೇಳಿದ್ದಾನೆ.


ಏಕೆಂದರೆ ಕ್ರಿಯೆಗಳ ಮೂಲಕ ನೀತಿವಂತರಾಗಲು ಅವರು ಪ್ರಯತ್ನಿಸಿದರೇ ಹೊರತು ನಂಬಿಕೆಯನ್ನು ಆಧಾರ ಮಾಡಿಕೊಳ್ಳಲಿಲ್ಲ. ಜನರನ್ನು ಬೀಳಿಸುವ ಕಲ್ಲಿನ ಮೇಲೆ ಅವರು ಬಿದ್ದರು.


ಆದರೆ ಆ ಇಬ್ಬರು ಗಂಡುಮಕ್ಕಳು ಹುಟ್ಟುವ ಮೊದಲೇ, ದೇವರು ರೆಬೆಕ್ಕಳಿಗೆ, “ಹಿರಿಯವನು ಕಿರಿಯವನ ಸೇವೆ ಮಾಡುವನು” ಎಂದು ಹೇಳಿದನು. ಆ ಬಾಲಕರು ಯಾವ ಒಳ್ಳೆಯದಾಗಲಿ ಕೆಟ್ಟದ್ದಾಗಲಿ ಮಾಡುವ ಮೊದಲೇ ಇದಾಯಿತು. ದೇವರು ಆ ಬಾಲಕನನ್ನು ತನ್ನ ಸ್ವಂತ ಯೋಜನೆಗನುಸಾರವಾಗಿ ಆರಿಸಿಕೊಂಡಿದ್ದರಿಂದ ಆ ಬಾಲಕರು ಹುಟ್ಟುವದಕ್ಕಿಂತ ಮೊದಲೇ ಹೀಗೆ ಹೇಳಿದನು. ದೇವರು ಅವನನ್ನು ಆರಿಸಿಕೊಂಡಿದ್ದರಿಂದ ಅವನನ್ನೇ ಕರೆಯಬೇಕೆಂದಿದ್ದನು. ಆದರೆ ಅದು ಆ ಬಾಲಕರ ಯಾವುದೇ ಕಾರ್ಯಗಳ ಮೇಲೆ ಆಧಾರಗೊಂಡಿರಲಿಲ್ಲ.


ನನಗೆ ಅಪರಾಧಿಯೆಂದು ತೀರ್ಪಾಗದಿರುವುದೇಕೆ? ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಜೀವವನ್ನು ತರುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪ ಮತ್ತು ಮರಣಗಳನ್ನು ತರುವ ನಿಯಮದಿಂದ ಬಿಡುಗಡೆ ಮಾಡಿತು.


ದೇವರು ನನ್ನನ್ನು ರಕ್ಷಿಸುವನು! ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಮೂಲಕ ಆತನು ದಯಪಾಲಿಸುವ ರಕ್ಷಣೆಗಾಗಿ ಆತನಿಗೆ ಸ್ತೋತ್ರವಾಗಲಿ! ಆದ್ದರಿಂದ ನನ್ನ ಅಂತರಂಗದಲ್ಲಿ ನಾನು ದೇವರ ನಿಯಮಕ್ಕೆ ಗುಲಾಮನಾಗಿದ್ದೇನೆ. ಆದರೆ ನನ್ನ ಪಾಪಾಧೀನಸ್ವಭಾವದಲ್ಲಿ ನಾನು ಪಾಪದ ನಿಯಮಕ್ಕೆ ಗುಲಾಮನಾಗಿದ್ದೇನೆ.


ಆದರೆ ನನ್ನ ದೇಹದಲ್ಲಿ ಮತ್ತೊಂದು ನಿಯಮ ಕೆಲಸ ಮಾಡುತ್ತಿರುವುದನ್ನು ನಾನು ಕಾಣುತ್ತೇನೆ. ನನ್ನ ಅಂತರಂಗ ಒಪ್ಪಿಕೊಳ್ಳುವ ನಿಯಮಕ್ಕೆ ವಿರುದ್ಧವಾಗಿ ಆ ನಿಯಮ ಹೋರಾಡುತ್ತದೆ. ನನ್ನ ದೇಹದಲ್ಲಿ ಕೆಲಸ ಮಾಡುತ್ತಿರುವ ಆ ಮತ್ತೊಂದು ನಿಯಮವೇ ಪಾಪದ ನಿಯಮವಾಗಿದೆ. ಆ ನಿಯಮವು ನನ್ನನ್ನು ತನ್ನ ಸೆರೆಯಾಳನ್ನಾಗಿ ಮಾಡುತ್ತದೆ.


ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.


ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಆ ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು.


ನಂಬಿಕೆಯಿಟ್ಟು, ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದವನು ಅಪರಾಧಿ ಎಂಬ ನಿರ್ಣಯ ಹೊಂದುವನು.


“ಆಗ ಜೆರುಸಲೇಮೇ, ನಿನ್ನ ಜನರು ನನಗೆ ವಿರುದ್ಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವುದಿಲ್ಲ. ಯಾಕೆಂದರೆ ನಾನು ಆ ದುಷ್ಟ ಜನರನ್ನೆಲ್ಲಾ ನಿರ್ಮೂಲ ಮಾಡುವೆನು. ಅಹಂಕಾರ ತುಂಬಿದ ಜನರನ್ನು ನಾನು ತೆಗೆದುಬಿಡುವೆನು. ನನ್ನ ಪವಿತ್ರ ಪರ್ವತದಲ್ಲಿ ಗರ್ವವುಳ್ಳವರು ಯಾರೂ ಇರುವದಿಲ್ಲ.


ಹೀಗೆ ದೇವರು ತಾನೇ ನೀತಿವಂತನೆಂಬುದನ್ನು ಮತ್ತು ಯೇಸುವಿನಲ್ಲಿ ನಂಬಿಕೆಯಿಡುವ ಯಾವನನ್ನೇ ಆಗಲಿ ನೀತಿವಂತನನ್ನಾಗಿ ಮಾಡುತ್ತೇನೆಂಬದನ್ನು ನಿರೂಪಿಸಿದ್ದಾನೆ.


ಇಸ್ರೇಲಿನ ಜನರಾದರೋ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಪ್ರಯತ್ನಿಸಿ ವಿಫಲರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು