Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:30 - ಪರಿಶುದ್ದ ಬೈಬಲ್‌

30 ದೇವರು ಒಬ್ಬನೇ. ಆತನು ಯೆಹೂದ್ಯರನ್ನೂ ಯೆಹೂದ್ಯರಲ್ಲದವರನ್ನೂ ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯೆಹೂದ್ಯರನ್ನು ಅವರ ವಿಶ್ವಾಸದ ಆಧಾರದ ಮೇಲೂ ಇತರರನ್ನು ಅವರ ವಿಶ್ವಾಸದ ಮೂಲಕವೂ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವ ದೇವರು ಒಬ್ಬರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವದಕ್ಕೆ ಅವರ ನಂಬಿಕೆಯೇ ಆಧಾರ; ಸುನ್ನತಿಯಿಲ್ಲದವರನ್ನೂ ಹಾಗೆಯೇ ನಿರ್ಣಯಿಸುವದಕ್ಕೆ ನಂಬಿಕೆಯೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಸುನ್ನತಿಯವರಿಗೂ ಸುನ್ನತಿಯಿಲ್ಲದವರಿಗೂ ಒಂದೇ ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ದೆವ್ ಎಕ್ಲೊಚ್, ಅನಿ ತೊ ಸ್ವತಾ ಜುದೆವ್ ಲೊಕಾಕ್ನಿ ತೆಂಚ್ಯಾ ವಿಶ್ವಾಸಾಚ್ಯಾ ಆದಾರಾ ವೈನಾ ತೆನಿ ನಿತಿವಂತ್ ಮನುನ್ ಠರ್ವುತಾ, ಅನಿ ಜುದೆವ್ ನ್ಹಯ್ ಹೊತ್ತ್ಯಾಕ್ನಿ ತೆಂಚ್ಯಾ ವಿಶ್ವಾಸಾಚ್ಯಾ ಆದಾರಾ ವೈನಾ ಖರ್ಯ್ಯಾ ವಾಟೆನ್ ಚಲಲ್ಲಿ ಲೊಕಾ ಮನುನ್ ಠರ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:30
18 ತಿಳಿವುಗಳ ಹೋಲಿಕೆ  

ದೇವರು ಯೆಹೂದ್ಯರಲ್ಲದವರನ್ನು ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ. “ಅಬ್ರಹಾಮನೇ, ನಿನ್ನ ಮೂಲಕ ದೇವರು ಭೂಮಿಯ ಮೇಲಿರುವ ಜನರನ್ನೆಲ್ಲ ಆಶೀರ್ವದಿಸುತ್ತಾನೆ” ಎಂಬ ಸುವಾರ್ತೆಯನ್ನು ಅವನಿಗೆ ಮೊದಲೇ ತಿಳಿಸಲಾಯಿತೆಂದು ಪವಿತ್ರ ಗ್ರಂಥವು ಹೇಳುತ್ತದೆ.


ಒಂದೇ ಪಕ್ಷವಿದ್ದರೆ ಮಧ್ಯಸ್ತನು ಬೇಕಿಲ್ಲ. ದೇವರು ಒಬ್ಬನೇ.


ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.


ಒಬ್ಬನಿಗೆ ಸುನ್ನತಿಯಾಗಿದೆಯೋ ಸುನ್ನತಿಯಾಗಿಲ್ಲವೋ ಎಂಬುದು ಮುಖ್ಯವಲ್ಲ. ಆದರೆ ದೇವರಿಂದ ಹೊಸ ಸೃಷ್ಟಿಯಾಗಿರುವುದೇ ಮುಖ್ಯವಾದದ್ದು.


ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನೆಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ.


ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ.


ಏಕೆಂದರೆ ಒಬ್ಬನು ನೀತಿವಂತನಾಗುವುದು ನಂಬಿಕೆಯ ಮೂಲಕವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಲು ಅವನು ಮಾಡಿದ ಕಾರ್ಯಗಳಿಂದಲ್ಲ. ನಾವು ನಂಬುವುದೂ ಇದನ್ನೇ.


“ಇಸ್ರೇಲಿನ ಜನರೇ, ಕಿವಿಗೊಡಿರಿ. ಯೆಹೋವನೇ ನಮ್ಮ ದೇವರು. ದೇವರು ಒಬ್ಬನೇ!


ಯೆಹೂದ್ಯರಲ್ಲದ ಜನರಿಗೆ ಸುನ್ನತಿಯಾಗಿಲ್ಲ, ಆದರೆ ಧರ್ಮಶಾಸ್ತ್ರವು ಹೇಳುವುದನ್ನು ಅವರು ಮಾಡುವುದಾದರೆ, ಅವರು ಸುನ್ನತಿಯನ್ನು ಹೊಂದಿದಂಥವರಾದರು.


ಯೆಹೂದ್ಯರಾದ ನಿಮಗೆ ಲಿಖಿತ ಧರ್ಮಶಾಸ್ತ್ರವಿದೆ ಮತ್ತು ಸುನ್ನತಿಯಾಗಿದೆ. ಆದರೆ ನೀವು ಧರ್ಮಶಾಸ್ತ್ರವನ್ನು ಮೀರಿ ನಡೆಯುತ್ತೀರಿ. ಹೀಗಿರಲು, ದೇಹದಲ್ಲಿ ಸುನ್ನತಿಯನ್ನು ಹೊಂದಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುವ ಜನರು ನಿಮ್ಮನ್ನು ಅಪರಾಧಿಗಳೆಂದು ತೋರ್ಪಡಿಸುತ್ತಾರೆ.


ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.


ಈ ಭಾಗ್ಯವಿರುವುದು ಸುನ್ನತಿ ಮಾಡಿಸಿಕೊಂಡವರಿಗೆ (ಯೆಹೂದ್ಯರಿಗೆ) ಮಾತ್ರವೋ? ಅಥವಾ ಸುನ್ನತಿ ಮಾಡಿಸಿಕೊಂಡಿಲ್ಲದವರಿಗೂ (ಯೆಹೂದ್ಯರಲ್ಲದವರಿಗೂ) ಸಹ ಈ ಭಾಗ್ಯವಿದೆಯೋ? ದೇವರು ಅಬ್ರಹಾಮನ ನಂಬಿಕೆಯನ್ನು ಸ್ವೀಕರಿಸಿಕೊಂಡನೆಂದು ನಾವು ಆಗಲೇ ಹೇಳಿದ್ದೇವೆ. ಆ ನಂಬಿಕೆಯೇ ಅವನನ್ನು ನೀತಿವಂತನನ್ನಾಗಿ ಮಾಡಿತು.


ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.


ದೇವರು ಒಬ್ಬನೇ. ದೇವರಿಗೂ ಮನುಷ್ಯರಿಗೂ ಮಧ್ಯಸ್ತನು ಒಬ್ಬನೇ. ಮನುಷ್ಯನಾಗಿರುವ ಯೇಸುಕ್ರಿಸ್ತನೇ ಆತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು