Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:31 - ಪರಿಶುದ್ದ ಬೈಬಲ್‌

31 ಹೀಗಿರಲು, ನಂಬಿಕೆಯ ಮಾರ್ಗವನ್ನು ಅನುಸರಿಸುವುದರ ಮೂಲಕ ನಾವು ಧರ್ಮಶಾಸ್ತ್ರವನ್ನು ಅಲ್ಲಗಳೆಯುತ್ತೇವೋ? ಇಲ್ಲ! ನಾವು ಧರ್ಮಶಾಸ್ತ್ರವನ್ನು ಸಮರ್ಥಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ‘ವಿಶ್ವಾಸದ ಮೂಲಕ’ ಎಂದು ಒತ್ತಿ ಹೇಳುವಾಗ ಧರ್ಮಶಾಸ್ತ್ರವನ್ನು ನಾವು ಅಲ್ಲಗಳೆಯುತ್ತೇವೆಂದು ಅರ್ಥವೆ? ಎಂದಿಗೂ ಇಲ್ಲ. ಬದಲಿಗೆ ಧರ್ಮಶಾಸ್ತ್ರದ ನಿಲುವನ್ನು ಸಮರ್ಥಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹಾಗಾದರೆ ನಂಬಿಕೆಯಿಂದ ಧರ್ಮಪ್ರಮಾಣವನ್ನು ನಿರರ್ಥಕಮಾಡುತ್ತೇವೋ? ಎಂದಿಗೂ ಇಲ್ಲ. ಧರ್ಮಪ್ರಮಾಣವನ್ನು ಸ್ಥಿರಪಡಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಹಾಗಾದರೆ, ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ. ಹಾಗಾದರೆ, ನಾವು ನಂಬಿಕೆಯ ಮೂಲಕ ನಿಯಮವನ್ನು ನಿರರ್ಥಕಗೊಳಿಸುತ್ತೇವೋ? ಎಂದಿಗೂ ಇಲ್ಲ. ನಾವು ನಿಯಮವನ್ನು ಸ್ಥಿರಪಡಿಸುತ್ತೇವಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಅಶೆ ಮಟ್ಲ್ಯಾರ್, ವಿಶ್ವಾಸಾ ವೈನಾ ಅಮಿ ಖಾಯ್ದೆ ಧುರ್ ಕರುನ್ ಸೊಡ್ತಾಂವ್ ಮನುನ್ ಹೊಲೆ ಕಾಯ್? ನಾ, ಕನ್ನಾಚ್‍ ನಾ; ಹೆಚ್ಯಾ ಬದ್ಲಾಕ್ ಅಮಿ ಖಾಯ್ದೆ ಘಟ್ಟ್ ಕರುನ್ಗೆತ್ ಜಾವ್ಕ್ ಲಾಗ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:31
27 ತಿಳಿವುಗಳ ಹೋಲಿಕೆ  

ಇದು ದೇವರ ವರವಾಗಿದೆ ಮತ್ತು ನನಗೆ ಅತಿಮುಖ್ಯವಾದದ್ದಾಗಿದೆ. ಏಕೆಂದರೆ ಧರ್ಮಶಾಸ್ತ್ರವು ನಮ್ಮನ್ನು ನೀತಿವಂತರನ್ನಾಗಿ ಮಾಡಬಹುದಾಗಿದ್ದರೆ, ಕ್ರಿಸ್ತನು ಸಾಯುವ ಅಗತ್ಯವೇ ಇರಲಿಲ್ಲ.


“ನಾನು ಮೋಶೆಯ ಧರ್ಮಶಾಸ್ತ್ರವನ್ನಾಗಲಿ ಪ್ರವಾದಿಗಳ ಉಪದೇಶಗಳನ್ನಾಗಲಿ ತೆಗೆದುಹಾಕುವುದಕ್ಕೆ ಬಂದೆನೆಂದು ನೆನೆಸಬೇಡಿರಿ. ನಾನು ಅವುಗಳನ್ನು ನಾಶಮಾಡುವುದಕ್ಕಾಗಿ ಬರದೆ ಅವುಗಳನ್ನು ನೆರವೇರಿಸುವುದಕ್ಕಾಗಿ ಬಂದೆನು.


ಧರ್ಮಶಾಸ್ತ್ರವಿಲ್ಲದ ಜನರನ್ನು ರಕ್ಷಣಾಮಾರ್ಗಕ್ಕೆ ನಡೆಸಬೇಕೆಂದು ಅವರಿಗೆ ಧರ್ಮಶಾಸ್ತ್ರವಿಲ್ಲದ ವ್ಯಕ್ತಿಯಂತಾದೆನು. (ಆದರೆ ನಿಜವಾಗಿಯೂ, ನಾನು ಧರ್ಮಶಾಸ್ತ್ರವಿಲ್ಲದವನಲ್ಲ. ನಾನು ಕ್ರಿಸ್ತನ ಧರ್ಮಶಾಸ್ತ್ರಕ್ಕೆ ಅಧೀನನಾಗಿದ್ದೇನೆ.)


ತನ್ನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ನೀತಿನಿರ್ಣಯ ಹೊಂದಬೇಕೆಂದು ಕ್ರಿಸ್ತನು ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.


ಈಗ ನಮ್ಮ ಸ್ವಭಾವಕ್ಕನುಸಾರವಾಗಿ ಜೀವಿಸದೆ ಪವಿತ್ರಾತ್ಮನಿಗನುಸಾರವಾಗಿ ಜೀವಿಸುತ್ತಿರುವ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮಗಳು ನೆರವೇರಲೆಂದು ದೇವರು ಹೀಗೆ ಮಾಡಿದನು.


ನಾನು ಧರ್ಮಶಾಸ್ತ್ರಕ್ಕಾಗಿ ಜೀವಿಸುವುದನ್ನು ತೊರೆದುಬಿಟ್ಟೆನು. ನನ್ನನ್ನು ಧರ್ಮಶಾಸ್ತ್ರವೇ ಕೊಂದಿತು. ಈಗ ನಾನು ದೇವರಿಗಾಗಿ ಜೀವಿಸಬೇಕೆಂದು ಧರ್ಮಶಾಸ್ತ್ರದ ಪಾಲಿಗೆ ಸತ್ತುಹೋದೆನು. ನಾನು ಕ್ರಿಸ್ತನೊಂದಿಗೆ ಶಿಲುಬೆಗೇರಿಸಲ್ಪಟ್ಟೆನು.


ದೇವರು ನನ್ನನ್ನು ರಕ್ಷಿಸುವನು! ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಮೂಲಕ ಆತನು ದಯಪಾಲಿಸುವ ರಕ್ಷಣೆಗಾಗಿ ಆತನಿಗೆ ಸ್ತೋತ್ರವಾಗಲಿ! ಆದ್ದರಿಂದ ನನ್ನ ಅಂತರಂಗದಲ್ಲಿ ನಾನು ದೇವರ ನಿಯಮಕ್ಕೆ ಗುಲಾಮನಾಗಿದ್ದೇನೆ. ಆದರೆ ನನ್ನ ಪಾಪಾಧೀನಸ್ವಭಾವದಲ್ಲಿ ನಾನು ಪಾಪದ ನಿಯಮಕ್ಕೆ ಗುಲಾಮನಾಗಿದ್ದೇನೆ.


ನನ್ನ ಅಂತರಂಗದಲ್ಲಿ ದೇವರ ನಿಯಮದ ವಿಷಯದಲ್ಲಿ ನಾನು ಸಂತೋಷಪಡುತ್ತೇನೆ.


ದೇವರು ವಾಗ್ದಾನ ಮಾಡಿದವುಗಳನ್ನು ಜನರು ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಹೊಂದಿಕೊಳ್ಳಬಲ್ಲವರಾಗಿದ್ದರೆ, ನಂಬಿಕೆಯು ನಿಷ್ಪ್ರಯೋಜಕವಾಗಿದೆ. ಅಲ್ಲದೆ ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನವೂ ನಿಷ್ಪ್ರಯೋಜಕವಾಗಿದೆ.


ಇಲ್ಲ! ಪ್ರತಿಯೊಬ್ಬ ವ್ಯಕ್ತಿ ಸುಳ್ಳುಗಾರನಾದರೂ ದೇವರು ಸತ್ಯವಂತನಾಗಿಯೇ ಇರುತ್ತಾನೆ. ಪವಿತ್ರ ಗ್ರಂಥವು ಹೀಗೆಂದು ಹೇಳುತ್ತದೆ: “ನಿನ್ನ ಮಾತುಗಳಲ್ಲಿ ನೀನು ನ್ಯಾಯಸ್ಥನೆಂದು ನಿರೂಪಿತನಾಗಬೇಕು. ನಿನಗೆ ತೀರ್ಪಾಗುವಾಗ ನೀನು ಜಯಗಳಿಸಬೇಕು.”


ಅವನು ತನ್ನ ತಂದೆಯನ್ನು ಗೌರವಿಸಬೇಕಿಲ್ಲ ಎಂದು ನೀವು ಬೋಧಿಸುತ್ತೀರಿ. ಹೀಗಿರಲು ನಿಮ್ಮ ಸಂಪ್ರದಾಯವೇ ದೇವರ ಆಜ್ಞೆಯನ್ನು ತಳ್ಳಿಹಾಕಿದೆ.


ಧರ್ಮೋಪದೇಶಕರಿಗಿಂತಲೂ ಫರಿಸಾಯರಿಗಿಂತಲೂ ನೀವು ಉತ್ತಮವಾದದ್ದನ್ನು ಮಾಡಬೇಕು. ಇಲ್ಲವಾದರೆ ನೀವು ಪರಲೋಕರಾಜ್ಯವನ್ನು ಪ್ರವೇಶಿಸಲಾರಿರಿ.


ಯೇಸು, “ಸದ್ಯಕ್ಕೆ ಒಪ್ಪಿಕೊ. ನಾವು ಯೋಗ್ಯವಾದ ಕಾರ್ಯಗಳನ್ನೆಲ್ಲ ಮಾಡಬೇಕು” ಎಂದು ಉತ್ತರಕೊಟ್ಟನು. ಆಗ ಯೋಹಾನನು ಯೇಸುವಿಗೆ ದೀಕ್ಷಾಸ್ನಾನ ಮಾಡಿಸಲು ಒಪ್ಪಿಕೊಂಡನು.


ತನ್ನ ಸೇವಕನು ನೀತಿವಂತನಾಗಿರಬೇಕೆಂದೂ ತನ್ನ ಉತ್ಕೃಷ್ಟವಾದ ಉಪದೇಶವನ್ನು ಗೌರವಿಸಬೇಕೆಂದೂ ಯೆಹೋವನು ಬಯಸುತ್ತಾನೆ.


ಯೆಹೋವನೇ, ನಿನ್ನ ಕಾರ್ಯಾಚರಣೆಗೆ ಇದು ತಕ್ಕ ಸಮಯವಾಗಿದೆ. ಜನರು ನಿನ್ನ ಧರ್ಮಶಾಸ್ತ್ರವನ್ನು ಮೀರಿದ್ದಾರೆ.


ನನ್ನ ದೇವರೇ, ನಿನ್ನ ಚಿತ್ತಾನುಸಾರವಾಗಿ ಮಾಡುತ್ತೇನೆ. ನಿನ್ನ ಉಪದೇಶಗಳನ್ನು ಹೃದಯದಲ್ಲಿಟ್ಟುಕೊಂಡಿದ್ದೇನೆ” ಅಂದೆನು.


ಅವನು ಬಂದು ಆ ರೈತರನ್ನು ಕೊಲ್ಲುವನು! ಬಳಿಕ ಅವನು ಆ ತೋಟವನ್ನು ಬೇರೆ ಕೆಲವು ರೈತರಿಗೆ ಕೊಡುವನು.” ಜನರು ಈ ಸಾಮ್ಯವನ್ನು ಕೇಳಿ, “ಇಲ್ಲ! ಹಾಗೆಂದಿಗೂ ಆಗಬಾರದು!” ಅಂದರು.


ಮೂಢರಿಗೆ ಶಿಕ್ಷಕನೆಂತಲೂ ಕಲಿಯಬೇಕಾದವರಿಗೆ ಉಪಾಧ್ಯಾಯನೆಂತಲೂ ನೀನು ನಿನ್ನ ಬಗ್ಗೆ ಆಲೋಚಿಸಿಕೊಂಡಿರುವೆ. ನಿನ್ನಲ್ಲಿ ಧರ್ಮಶಾಸ್ತ್ರವಿದೆ, ಆದ್ದರಿಂದ ಪ್ರತಿಯೊಂದನ್ನೂ ತಿಳಿದುಕೊಂಡಿರುವುದಾಗಿಯೂ ಎಲ್ಲಾ ಸತ್ಯವನ್ನು ಹೊಂದಿಕೊಂಡಿರುವುದಾಗಿಯೂ ನೀನು ಭಾವಿಸಿಕೊಂಡಿರುವೆ.


ಇಲ್ಲ! ದೇವರು ನಮ್ಮನ್ನು ದಂಡಿಸಲಾಗದಿದ್ದರೆ, ದೇವರು ಲೋಕಕ್ಕೆ ತೀರ್ಪುಮಾಡಲಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು