Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:10 - ಪರಿಶುದ್ದ ಬೈಬಲ್‌

10 ಆದರೆ ಇದು ಯಾವಾಗ ಆಯಿತು? ದೇವರು ಅಬ್ರಹಾಮನನ್ನು ಸ್ವೀಕರಿಸಿಕೊಂಡದ್ದು ಸುನ್ನತಿಯಾಗುವುದಕ್ಕಿಂತ ಮೊದಲೋ ಅಥವಾ ಸುನ್ನತಿಯಾದಮೇಲೋ? ದೇವರು ಅವನನ್ನು ಸ್ವೀಕರಿಸಿಕೊಂಡದ್ದು ಸುನ್ನತಿಯಾಗುವುದಕ್ಕಿಂತ ಮೊದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವುದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವುದಕ್ಕೆ ಮೊದಲೇ ಎಣಿಸಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೀಗೆ ಪರಿಗಣಿಸಿದ್ದು ಯಾವಾಗ? ಅಬ್ರಹಾಮನಿಗೆ ಸುನ್ನತಿ ಆಗುವುದಕ್ಕೆ ಮೊದಲೋ ಅಥವಾ ಅನಂತರವೊ? ಆತನು ಸುನ್ನತಿ ಮಾಡಿಸಿಕೊಳ್ಳುವ ಮೊದಲೇ ಹೀಗೆ ಪರಿಗಣಿಸಲಾಯಿತು; ಸುನ್ನತಿಮಾಡಿಸಿಕೊಂಡ ನಂತರವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದು ಯಾವಾಗ ಎಣಿಸಲಾಯಿತು? ಅವನಿಗೆ ಸುನ್ನತಿ ಆದ ಬಳಿಕವೋ? ಅಥವಾ ಸುನ್ನತಿಯಾಗುವುದಕ್ಕೆ ಮೊದಲೋ? ಅದು ನಂತರವಲ್ಲ, ಮೊದಲೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಹೆ ಸಗ್ಳೆ ಘಡಲ್ಲೆ ಕನ್ನಾ? ಅಬ್ರಾಹಾಮಾಚಿ ಸುನ್ನತ್ ಹೊವ್ಚ್ಯಾ ಅದ್ದಿ ಕಾಯ್ ಮಾನಾ? ಹೆ ಸಗ್ಳೆ ಘಡಲ್ಲೆ ಸುನ್ನತ್ ಹೊವ್ಚ್ಯಾ ಅದ್ದಿ, ಸುನ್ನತ್ ಹೊಲ್ಲ್ಯಾ ಮಾನಾ ನೈಯ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:10
11 ತಿಳಿವುಗಳ ಹೋಲಿಕೆ  

ಒಬ್ಬನಿಗೆ ಸುನ್ನತಿಯಾಗಿದೆಯೋ ಸುನ್ನತಿಯಾಗಿಲ್ಲವೋ ಎಂಬುದು ಮುಖ್ಯವಲ್ಲ. ಆದರೆ ದೇವರಿಂದ ಹೊಸ ಸೃಷ್ಟಿಯಾಗಿರುವುದೇ ಮುಖ್ಯವಾದದ್ದು.


ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನೆಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ.


ನೀನೂ ಮತ್ತು ನಿನ್ನ ಎಲ್ಲಾ ಸಂತತಿಯವರು ಕೈಕೊಳ್ಳಬೇಕಾದ ನಿಬಂಧನೆಯೇನೆಂದರೆ, ನಿಮ್ಮಲ್ಲಿ ಹುಟ್ಟಿದ ಪ್ರತಿಯೊಂದು ಗಂಡುಮಗುವಿಗೂ ಸುನ್ನತಿ ಮಾಡಿಸಬೇಕು.


ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು.


ನಾಲ್ಕು ತಲೆಮಾರುಗಳ ನಂತರ ನಿನ್ನ ಜನರು ಈ ನಾಡಿಗೆ ಹಿಂತಿರುಗುವರು. ಆ ಕಾಲದಲ್ಲಿ ನಿನ್ನ ಜನರು ಅಮೋರಿಯರನ್ನು ಸೋಲಿಸುವರು. ಇಲ್ಲಿ ವಾಸಿಸುತ್ತಿರುವ ಅಮೋರಿಯರನ್ನು ನಿನ್ನ ಜನರ ಮೂಲಕ ನಾನೇ ಶಿಕ್ಷಿಸುವೆನು. ಇದು ಮುಂದೆ ನಡೆಯುವ ಸಂಗತಿ. ಯಾಕೆಂದರೆ ಆ ಸಮಯದಲ್ಲಿ ಅಮೋರಿಯರು ಅಂಥ ಶಿಕ್ಷೆ ಅನುಭವಿಸುವಷ್ಟು ಕೆಟ್ಟವರಾಗಿರಲಿಲ್ಲ” ಎಂದು ಹೇಳಿದನು.


ಈ ಭಾಗ್ಯವಿರುವುದು ಸುನ್ನತಿ ಮಾಡಿಸಿಕೊಂಡವರಿಗೆ (ಯೆಹೂದ್ಯರಿಗೆ) ಮಾತ್ರವೋ? ಅಥವಾ ಸುನ್ನತಿ ಮಾಡಿಸಿಕೊಂಡಿಲ್ಲದವರಿಗೂ (ಯೆಹೂದ್ಯರಲ್ಲದವರಿಗೂ) ಸಹ ಈ ಭಾಗ್ಯವಿದೆಯೋ? ದೇವರು ಅಬ್ರಹಾಮನ ನಂಬಿಕೆಯನ್ನು ಸ್ವೀಕರಿಸಿಕೊಂಡನೆಂದು ನಾವು ಆಗಲೇ ಹೇಳಿದ್ದೇವೆ. ಆ ನಂಬಿಕೆಯೇ ಅವನನ್ನು ನೀತಿವಂತನನ್ನಾಗಿ ಮಾಡಿತು.


ದೇವರು ತನ್ನನ್ನು ಸ್ವೀಕರಿಸಿಕೊಂಡಿದ್ದಾನೆಂಬುದನ್ನು ತೋರಿಸುವುದಕ್ಕಾಗಿ ಅಬ್ರಹಾಮನು ಅನಂತರ ಸುನ್ನತಿ ಮಾಡಿಸಿಕೊಂಡನು. ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವುದಕ್ಕಿಂತ ಮೊದಲೇ ನಂಬಿಕೆಯ ಮೂಲಕ ನೀತಿವಂತನಾಗಿದ್ದನು ಎಂಬುದಕ್ಕೆ ಅವನ ಸುನ್ನತಿಯೇ ಆಧಾರವಾಗಿದೆ. ಆದಕಾರಣ ನಂಬುವ ಎಲ್ಲಾ ಜನರಿಗೆ, ಅವರು ಸುನ್ನತಿ ಮಾಡಿಸಿಕೊಂಡಿಲ್ಲದಿದ್ದರೂ ಅಬ್ರಹಾಮನು ತಂದೆಯಾಗಿದ್ದಾನೆ. ಏಕೆಂದರೆ ಅವರು ತಮ್ಮ ನಂಬಿಕೆಯ ಮೂಲಕ ನೀತಿವಂತರೆಂದು ಎಣಿಸಲ್ಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು