Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:14 - ಪರಿಶುದ್ದ ಬೈಬಲ್‌

14 ದೇವರು ವಾಗ್ದಾನ ಮಾಡಿದವುಗಳನ್ನು ಜನರು ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಹೊಂದಿಕೊಳ್ಳಬಲ್ಲವರಾಗಿದ್ದರೆ, ನಂಬಿಕೆಯು ನಿಷ್ಪ್ರಯೋಜಕವಾಗಿದೆ. ಅಲ್ಲದೆ ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನವೂ ನಿಷ್ಪ್ರಯೋಜಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಧರ್ಮಶಾಸ್ತ್ರವನ್ನು ಅನುಸರಿಸುವವರು ಲೋಕಕ್ಕೆ ಬಾಧ್ಯರಾಗಿದ್ದರೆ ನಂಬಿಕೆಯು ವ್ಯರ್ಥವಾಯಿತು, ವಾಗ್ದಾನವು ನಿರರ್ಥಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಧರ್ಮಶಾಸ್ತ್ರವನ್ನು ಪಾಲಿಸುವುದರಿಂದ ಮಾತ್ರ ದೇವರ ವಾಗ್ದಾನಕ್ಕೆ ಬಾಧ್ಯತೆ ದೊರಕುವುದಾದರೆ, ಮಾನವನ ವಿಶ್ವಾಸವೂ ವ್ಯರ್ಥ; ದೇವರ ವಾಗ್ದಾನವೂ ನಿರರ್ಥಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಧರ್ಮಶಾಸ್ತ್ರದವರು ಬಾಧ್ಯರಾಗಿದ್ದರೆ ನಂಬಿಕೆಯು ವ್ಯರ್ಥವಾಯಿತು, ವಾಗ್ದಾನವೂ ಬರೀದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಯಮಕ್ಕೆ ಒಳಗಾಗುವವರೇ ಬಾಧ್ಯರಾದರೆ, ನಂಬಿಕೆಗೆ ಬೆಲೆಯಿಲ್ಲದಂತಾಯಿತು. ವಾಗ್ದಾನವೂ ನಿರರ್ಥಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜರ್ ದೆವ್ ಗೊಸ್ಟ್ ದಿತಲೆ ಖಾಲಿ ಖಾಯ್ದ್ಯಾಂಚ್ಯಾ ಸರ್ಕೆ ಚಲ್ತಲ್ಯಾಕ್ನಿ ದಿವ್ನ್ ಹೊತಾ ಮನುನ್ ರ್‍ಹಾಲ್ಯಾರ್, ವಿಶ್ವಾಸಾಕ್ ಕಾಯ್ಬಿ ಅರ್ಥ್‍ನಾ ಅನಿ ದೆವಾನ್ ದಿಲ್ಲ್ಯಾ ಗೊಸ್ಟಿಕ್ ಕಾಯ್ಬಿ ಕಿಮ್ಮತ್ ನಾ ಮನುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:14
14 ತಿಳಿವುಗಳ ಹೋಲಿಕೆ  

ನಾನು ಕ್ರಿಸ್ತನನ್ನು ಹೊಂದಿಕೊಳ್ಳಲು ಮತ್ತು ಕ್ರಿಸ್ತನಲ್ಲಿರಲು ಇದು ನನಗೆ ಅವಕಾಶ ಮಾಡಿಕೊಡುತ್ತದೆ. ನಾನು ಕ್ರಿಸ್ತನ ಮೂಲಕ ನೀತಿವಂತನಾಗಿದ್ದೇನೆ. ಈ ನೀತಿಯು, ಧರ್ಮಶಾಸ್ತ್ರವನ್ನು ಅನುಸರಿಸಿದ ಮಾತ್ರಕ್ಕೆ ದೊರೆಯುವುದಿಲ್ಲ. ಇದು ನಂಬಿಕೆಯ ಮೂಲಕ ದೇವರಿಂದ ಬರುತ್ತದೆ. ಕ್ರಿಸ್ತನಲ್ಲಿ ನನಗಿರುವ ನಂಬಿಕೆಯ ಮೂಲಕ ದೇವರು ನನ್ನನ್ನು ನೀತಿವಂತನನ್ನಾಗಿ ಮಾಡಿದನು.


ಧರ್ಮಶಾಸ್ತ್ರವು ಮನುಷ್ಯರೊಳಗಿಂದ ಪ್ರಧಾನ ಯಾಜಕರನ್ನು ಆರಿಸುತ್ತದೆ. ಆರಿಸಲ್ಪಟ್ಟ ಈ ಜನರು ಮಾನವ ದೌರ್ಬಲ್ಯಗಳನ್ನು ಹೊಂದಿದವರಾಗಿದ್ದಾರೆ. ಆದರೆ ದೇವರು ಧರ್ಮಶಾಸ್ತ್ರದ ನಂತರ ಮಾಡಿದ ವಾಗ್ದಾನ ದೇವರ ಮಗನನ್ನು ಪ್ರಧಾನ ಯಾಜಕನನ್ನಾಗಿ ಮಾಡಿತು. ಆ ಮಗನು ಎಂದೆಂದಿಗೂ ಸರ್ವಸಂಪೂರ್ಣನಾಗಿ ಮಾಡಲ್ಪಟ್ಟಿದ್ದಾನೆ.


ಮೋಶೆಯ ಧರ್ಮಶಾಸ್ತ್ರವು ಯಾವುದನ್ನೂ ಸಿದ್ಧಿಗೆ ತರಲಿಲ್ಲ. ಈಗ ನಮಗೆ ಉತ್ತಮವಾದ ಒಂದು ನಿರೀಕ್ಷೆಯನ್ನು ಕೊಡಲಾಗಿದೆ. ಈ ನಿರೀಕ್ಷೆಯು ನಮ್ಮನ್ನು ದೇವರ ಬಳಿಗೆ ಕೊಂಡೊಯ್ಯಬಲ್ಲದು.


ಇದು ದೇವರ ವರವಾಗಿದೆ ಮತ್ತು ನನಗೆ ಅತಿಮುಖ್ಯವಾದದ್ದಾಗಿದೆ. ಏಕೆಂದರೆ ಧರ್ಮಶಾಸ್ತ್ರವು ನಮ್ಮನ್ನು ನೀತಿವಂತರನ್ನಾಗಿ ಮಾಡಬಹುದಾಗಿದ್ದರೆ, ಕ್ರಿಸ್ತನು ಸಾಯುವ ಅಗತ್ಯವೇ ಇರಲಿಲ್ಲ.


ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.


ಹೀಗಿರಲು, ನಂಬಿಕೆಯ ಮಾರ್ಗವನ್ನು ಅನುಸರಿಸುವುದರ ಮೂಲಕ ನಾವು ಧರ್ಮಶಾಸ್ತ್ರವನ್ನು ಅಲ್ಲಗಳೆಯುತ್ತೇವೋ? ಇಲ್ಲ! ನಾವು ಧರ್ಮಶಾಸ್ತ್ರವನ್ನು ಸಮರ್ಥಿಸುತ್ತೇವೆ.


ಅದೇ ಪ್ರಕಾರ ನನ್ನ ಬಾಯಿಂದ ಹೊರಟ ಮಾತುಗಳು ಯೋಚಿಸಿದ ಕಾರ್ಯಗಳನ್ನು ಮಾಡದೆ ಹಿಂತಿರುಗುವುದಿಲ್ಲ. ನನ್ನ ಮಾತುಗಳು ನನ್ನ ಆಲೋಚನೆಗೆ ಸರಿಯಾಗಿ ಕಾರ್ಯ ಮಾಡುವವು. ನನ್ನ ಮಾತುಗಳು ತಮಗೆ ನೇಮಕವಾದ ಆ ಕಾರ್ಯಗಳನ್ನು ಮಾಡಿಮುಗಿಸುವವು.


ನೀವು ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಲು ಪ್ರಯತ್ನಿಸುವವರಾಗಿದ್ದರೆ, ದೇವರ ಕೃಪಾಶ್ರಯದಿಂದ ಬಿದ್ದುಹೋದ ಕಾರಣ ಕ್ರಿಸ್ತನೊಂದಿಗಿರುವ ನಿಮ್ಮ ಜೀವಿತವು ಅಂತ್ಯಗೊಳ್ಳುವುದು.


ಈ ಸ್ಥಳದಲ್ಲಿ ನಾನು ಯೆಹೂದದ ಮತ್ತು ಜೆರುಸಲೇಮಿನ ಜನರ ಯೋಜನೆಗಳನ್ನು ಹಾಳು ಮಾಡುತ್ತೇನೆ. ಶತ್ರುವು ಈ ಜನರನ್ನು ಬೆನ್ನಟ್ಟಿ ಬರುವನು. ನಾನು ಈ ಸ್ಥಳದಲ್ಲಿ ಖಡ್ಗದಿಂದ ಯೆಹೂದದ ಜನರ ಕೊಲೆಯಾಗುವಂತೆ ಮಾಡುವೆನು. ಅವರ ಹೆಣಗಳು ಪಕ್ಷಿಗಳಿಗೆ ಮತ್ತು ಕಾಡುಪ್ರಾಣಿಗಳಿಗೆ ಆಹಾರವಾಗುವಂತೆ ಮಾಡುವೆನು.


ಯೆಹೋವನೇ, ನಿನ್ನ ಕಾರ್ಯಾಚರಣೆಗೆ ಇದು ತಕ್ಕ ಸಮಯವಾಗಿದೆ. ಜನರು ನಿನ್ನ ಧರ್ಮಶಾಸ್ತ್ರವನ್ನು ಮೀರಿದ್ದಾರೆ.


ಆದರೆ ಅವನು ಅವುಗಳ ಬಗ್ಗೆ ಕೇಳಿ ಸ್ವಲ್ಪ ದಿನಗಳಾದ ಮೇಲೆ ಆಕೆಯ ಹರಕೆಗಳನ್ನಾಗಲಿ ಆಣೆಗಳನ್ನಾಗಲಿ ರದ್ದುಪಡಿಸಿದರೆ, ಆಕೆಯ ಹರಕೆಯನ್ನು ಮುರಿದದ್ದಕ್ಕಾಗಿ ಅವನು ಶಿಕ್ಷೆಯನ್ನು ಅನುಭವಿಸುವನು.”


ಆದರೆ ಗಂಡನು ಅವುಗಳನ್ನು ತಿಳಿದಾಗಲೇ ರದ್ದುಗೊಳಿಸಿದರೆ, ಅವಳ ಎಲ್ಲ ಹರಕೆಗಳಿಗೆ ಮತ್ತು ಆಣೆಗಳಿಗೆ ಬೆಲೆಯಿರುವುದಿಲ್ಲ. ಯಾಕೆಂದರೆ ಗಂಡನು ಅವುಗಳನ್ನು ರದ್ದುಪಡಿಸಿದನು. ಆದ್ದರಿಂದ ಯೆಹೋವನು ಆಕೆಯನ್ನು ಕ್ಷಮಿಸುತ್ತಾನೆ.


ಕ್ರಿಸ್ತನು ವಿಭಾಗವಾಗಿದ್ದಾನೋ? ಪೌಲನು ನಿಮಗೋಸ್ಕರ ಶಿಲುಬೆಯ ಮೇಲೆ ಸತ್ತನೇ? ಇಲ್ಲ! ನೀವು ಪೌಲನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರೋ? ಇಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು