Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:18 - ಪರಿಶುದ್ದ ಬೈಬಲ್‌

18 ಅಬ್ರಹಾಮನಿಗೆ ಮಕ್ಕಳಾಗುವ ಆಸ್ಪದವೇ ಇರಲಿಲ್ಲ. ಆದರೂ ಅವನು ದೇವರನ್ನು ನಂಬಿ ತನ್ನ ನಿರೀಕ್ಷೆಯಲ್ಲಿಯೇ ಮುಂದುವರೆದನು. ಆದಕಾರಣವೇ ಅವನು ಅನೇಕ ಜನಾಂಗಗಳಿಗೆ ತಂದೆಯಾದನು. ದೇವರು ಅವನಿಗೆ, “ನೀನು ಅನೇಕ ಜನಾಂಗಗಳನ್ನು ಪಡೆಯುವೆ” ಎಂದು ಹೇಳಿದ್ದಂತೆಯೇ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂಬುದಾಗಿ ತನಗೆ ಹೇಳಲ್ಪಟ್ಟ ಆ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ಅಬ್ರಹಾಮನು ತಾನು ಬಹು ಜನಾಂಗಗಳಿಗೆ ಪಿತನಾಗುವೆನೆಂದು ನಿರೀಕ್ಷೆಗೆ ವಿರುದ್ಧವಾಗಿ ನಿರೀಕ್ಷಿಸಿ ನಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆತನ ವಿಶ್ವಾಸ ಮತ್ತು ಭರವಸೆ ಎಷ್ಟರಮಟ್ಟಿಗೆ ಇತ್ತೆಂದರೆ, ಈ ದೈವವಾಗ್ದಾನವು ನೆರವೇರುವ ನಿರೀಕ್ಷೆ ಇಲ್ಲದಿದ್ದರೂ ಆತನು ದೇವರನ್ನು ನಂಬಿದನು. ಆದುದರಿಂದಲೇ, “ನಿನ್ನ ಸಂತಾನವು ನಕ್ಷತ್ರಗಳಷ್ಟು ಅಸಂಖ್ಯಾತ ಆಗುವುದು,” ಎಂಬ ಹೇಳಿಕೆಯಂತೆ ಆತನು ಅನೇಕ ಜನಾಂಗಗಳಿಗೆ ಮೂಲಪಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವದು ಎಂಬದಾಗಿ ತನಗೆ ಹೇಳಲ್ಪಟ್ಟ ಮಾತು ನೆರವೇರುವದಕ್ಕೆ ಮಾರ್ಗ ತೋರದೆ ಇರುವದರಿಂದ ಅಬ್ರಹಾಮನು ತಾನು ಅನೇಕ ಜನಾಂಗಗಳಿಗೆ ಮೂಲಪಿತೃವಾಗುವೆನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ನಿರೀಕ್ಷಿಸಿ ನಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನು ತನಗೆ ದೇವರಿಂದ ಹೇಳಲಾದ ನಿರೀಕ್ಷೆಗೆ ಯಾವ ಆಸ್ಪದವು ಇಲ್ಲದಿರುವಾಗಲೂ ನಿರೀಕ್ಷೆಯಿಂದ ನಂಬಿ, “ನಿನ್ನ ಸಂತಾನವು ನಕ್ಷತ್ರಗಳಷ್ಟು ಇರುವುದು,” ಎಂಬ ಹೇಳಿಕೆಯಂತೆ ಅವನು ಅನೇಕ ಜನಾಂಗಗಳಿಗೆ ತಂದೆಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅಬ್ರಾಹಾಮಾನ್ ವಿಶ್ವಾಸ್ ಕರ್‍ಲ್ಯಾನ್ ಅನಿ ಬರೊಸೊ ಥವ್ಲ್ಯಾನ್, ಬರೊಸೊ ಕರುಕ್ ಕಾಯ್ಬಿ ಕಾರನ್ ನತ್ತೊ ಜಾಲ್ಯಾರ್‍ಬಿ ತೆನಿ ಬರೊಸೊ ಥವ್ಲ್ಯಾನ್, ತೆಚೆಸಾಟ್ನಿ ತೊ “ಸುಮಾರ್ ದೆಶಾಂಚೊ ಬಾಬಾ ಹೊಲೊ” ಪವಿತ್ರ್ ಪುಸ್ತಕ್ ಮನ್ತಾ , “ತುಜ್ಯಾ ಪಿಳ್ಗಿಚಿ ಲೊಕಾ ಚಿಕ್ಕಿಯಾಂಚ್ಯಾ ಯೆವ್ಡಿ ರ್‍ಹಾತ್ಯಾತ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:18
12 ತಿಳಿವುಗಳ ಹೋಲಿಕೆ  

ನಾವು ರಕ್ಷಣೆ ಹೊಂದಿದ್ದೇವೆ ಮತ್ತು ನಮಗಿನ್ನೂ ಆ ನಿರೀಕ್ಷೆಯಿದೆ. ನಾವು ಯಾವುದಕ್ಕೋಸ್ಕರ ಕಾಯುತ್ತಿದ್ದೇವೊ ಅದನ್ನು ಕಾಣಬಲ್ಲವರಾಗಿದ್ದರೆ, ಅದು ನಿಜವಾದ ನಿರೀಕ್ಷೆಯಲ್ಲ. ಜನರು ತಾವು ಈಗಾಗಲೇ ಹೊಂದಿರುವ ಯಾವುದನ್ನೂ ನಿರೀಕ್ಷಿಸುವುದಿಲ್ಲ.


ನಮ್ಮ ಈ ನಿರೀಕ್ಷೆಯು ನಮ್ಮನ್ನು ಎಂದಿಗೂ ನಿರಾಶರನ್ನಾಗಿ ಮಾಡುವುದಿಲ್ಲ. ಅದು ಎಂದಿಗೂ ವ್ಯರ್ಥವಾಗುವುದಿಲ್ಲ. ಏಕೆಂದರೆ ದೇವರು ನಮಗೆ ಉಡುಗೊರೆಯಾಗಿ ಕೊಟ್ಟಿರುವ ಪವಿತ್ರಾತ್ಮನ ಮೂಲಕ ತನ್ನ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾನೆ.


ಆದ್ದರಿಂದ ಜನರೇ, ಸಂತೋಷದಿಂದಿರಿ! ನಾನು ದೇವರಲ್ಲಿ ಭರವಸೆಯಿಟ್ಟಿದ್ದೇನೆ. ಆತನ ದೂತನು ಹೇಳಿದಂತೆ ಪ್ರತಿಯೊಂದೂ ನೆರವೇರುವುದು.


ನಿರೀಕ್ಷೆಯು ನೆರವೇರದಿದ್ದರೆ ಹೃದಯವು ವ್ಯಸನವಾಗಿರುವುದು. ಬಯಸಿದ್ದು ನೆರವೇರಿದರೆ ಆನಂದವು ತುಂಬಿಕೊಳ್ಳುವುದು.


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆಯನ್ನಾಗಿ ಮಾಡಿದ್ದೇನೆ” ಎಂದು ಪವಿತ್ರ ಗ್ರಂಥದಲ್ಲೇ ಬರೆದಿದೆ. ಇದು ದೇವರ ಸನ್ನಿಧಿಯಲ್ಲಿ ಸತ್ಯವಾಗಿದೆ. ಸತ್ತವರಿಗೆ ಜೀವವನ್ನು ಕೊಡುವವನೂ ಇನ್ನೂ ಸಂಭವಿಸಿಲ್ಲದ ಕಾರ್ಯಗಳನ್ನು ಮಾಡುವವನೂ ಆಗಿರುವ ದೇವರನ್ನು ಅಬ್ರಹಾಮನು ನಂಬಿದನು.


ಆಗ ಒಡೆಯನಾದ ಯೆಹೋವನು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಈ ಎಲುಬುಗಳು ಇಸ್ರೇಲ್ ಜನಾಂಗ. ‘ನಮ್ಮ ಎಲುಬುಗಳು ಒಣಗಿಹೋಗಿವೆ. ನಮ್ಮ ನಿರೀಕ್ಷೆಯು ಮುಗಿದುಹೋಯಿತು. ನಾವು ಸಂಪೂರ್ಣವಾಗಿ ನಾಶವಾಗಿ ಹೋಗಿದ್ದೇವೆ’ ಎಂದು ಇಸ್ರೇಲರು ಹೇಳುತ್ತಾರೆ.


ಜಕರೀಯನು ದೇವದೂತನಿಗೆ, “ನೀನು ಹೇಳುತ್ತಿರುವುದು ಸತ್ಯವೆಂಬುದಕ್ಕೆ ಆಧಾರವೇನು? ನಾನು ಮುದುಕನಾಗಿದ್ದೇನೆ ಮತ್ತು ನನ್ನ ಹೆಂಡತಿ ಸಹ ಮುಪ್ಪಿನವಳಾಗಿದ್ದಾಳೆ” ಎಂದು ಹೇಳಿದನು.


ಅಬ್ರಹಾಮನು ಸುಮಾರು ನೂರು ವರ್ಷದವನಾಗಿದ್ದರಿಂದ ಅವನ ದೇಹವು ದುರ್ಬಲವಾಗಿತ್ತು. ಆದಕಾರಣ ಅವನು ಮಕ್ಕಳನ್ನು ಪಡೆಯುವ ಸಾಧ್ಯತೆ ಇರಲಿಲ್ಲ. ಅಲ್ಲದೆ ಸಾರಳಿಗೂ ಮಕ್ಕಳಾಗುವ ಸಾಧ್ಯತೆ ಇರಲಿಲ್ಲ. ಅಬ್ರಹಾಮನು ಇದರ ಬಗ್ಗೆ ಆಲೋಚಿಸಿದನು. ಆದರೂ ದೇವರ ಮೇಲೆ ಅವನಿಗಿದ್ದ ನಂಬಿಕೆಯು ಬಲಹೀನವಾಗಲಿಲ್ಲ.


ಈ ನಿರೀಕ್ಷೆಯು ನಮ್ಮ ಆತ್ಮಗಳನ್ನು ಅಪಾಯದಲ್ಲಿ ಕೊಚ್ಚಿಕೊಂಡು ಹೋಗದಂತೆ ಕಾಪಾಡುವ ಬಲವಾದ ಸ್ಥಿರವಾದ ಲಂಗರಿನಂತಿದೆ. ಅದು ಸ್ವರ್ಗದಾಲಯದ ತೆರೆಯ ಮರೆಯಲ್ಲಿರುವ ಮಹಾ ಪವಿತ್ರಸ್ಥಳದ ಒಳಕ್ಕೆ ಪ್ರವೇಶಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು