Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:19 - ಪರಿಶುದ್ದ ಬೈಬಲ್‌

19 ಅಬ್ರಹಾಮನು ಸುಮಾರು ನೂರು ವರ್ಷದವನಾಗಿದ್ದರಿಂದ ಅವನ ದೇಹವು ದುರ್ಬಲವಾಗಿತ್ತು. ಆದಕಾರಣ ಅವನು ಮಕ್ಕಳನ್ನು ಪಡೆಯುವ ಸಾಧ್ಯತೆ ಇರಲಿಲ್ಲ. ಅಲ್ಲದೆ ಸಾರಳಿಗೂ ಮಕ್ಕಳಾಗುವ ಸಾಧ್ಯತೆ ಇರಲಿಲ್ಲ. ಅಬ್ರಹಾಮನು ಇದರ ಬಗ್ಗೆ ಆಲೋಚಿಸಿದನು. ಆದರೂ ದೇವರ ಮೇಲೆ ಅವನಿಗಿದ್ದ ನಂಬಿಕೆಯು ಬಲಹೀನವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ಹೆಚ್ಚು ಕಡಿಮೆ ನೂರು ವರ್ಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದು ಹೋಯಿತೆಂದು ಪರಿಗಣಿಸಿದ್ದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ಆತನಿಗೆ ಹೆಚ್ಚುಕಡಿಮೆ ನೂರು ವರ್ಷ ಪ್ರಾಯವಾಗಿತ್ತು. ಆತನ ದೇಹವು ದುರ್ಬಲವಾಗಿತ್ತು. ಸಾರಳಿಗೆ ಗರ್ಭಕಾಲವು ಕಳೆದುಹೋಗಿತ್ತು. ಆದರೂ ಆತನ ವಿಶ್ವಾಸ ಕುಂದಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನು ಹೆಚ್ಚುಕಡಿಮೆ ನೂರು ವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನು ಆಗಲೇ ಸುಮಾರು ನೂರು ವರ್ಷದವನಾಗಿದ್ದು, ತನ್ನ ದೇಹವು ದುರ್ಬಲವಾಗಿದ್ದರೂ ಹೆಂಡತಿಯಾದ ಸಾರಳಿಗೆ ಗರ್ಭಧರಿಸುವ ಕಾಲ ಮುಗಿದು ಹೋಗಿದ್ದರೂ ನಂಬಿಕೆಯಲ್ಲಿ ಬಲಹೀನನಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ತೊ ಜಗ್ಗೊಳ್ ಸೆಂಬರ್ ವರ್ಸಾಂಚೊ ಹೊತ್ತೊ, ಜಾಲ್ಯಾರ್‍ಬಿ ತೆನಿ ಅಪ್ನಾಚ್ಯಾ ಆಂಗಾತ್ಲೆ ಸಗ್ಳೆ ಬಳ್ ಸರುನ್ ಗೆಲಾ, ಅನಿ ಸಾರಾಕ್ ಪೊರಾ ಹೊಯ್‍ನ್ಯಾತ್ ಮನ್ತಲೆ ಯೌವಜ್ತಾನಾಬಿ ತೆನಿ ಅಪ್ನಾಚೊ ವಿಶ್ವಾಸ್ ಕಮಿ ಕರುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:19
11 ತಿಳಿವುಗಳ ಹೋಲಿಕೆ  

ಅಬ್ರಹಾಮನು ದೇವರಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಆದರೆ ಅವನು ಮನಸ್ಸಿನಲ್ಲಿ ನಗುತ್ತಾ, “ನನಗೆ ನೂರು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ನನಗೂ ಸಾಧ್ಯವಿಲ್ಲ. ಸಾರಳಿಗೆ ತೊಂಭತ್ತು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ಆಕೆಗೂ ಸಾಧ್ಯವಿಲ್ಲ” ಅಂದುಕೊಂಡನು.


ಯೇಸು ತನ್ನ ಕೈ ಚಾಚಿ ಪೇತ್ರನನ್ನು ಹಿಡಿದುಕೊಂಡನು. ಯೇಸು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದನು.


ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು.


ಬಯಲಿನಲ್ಲಿರುವ ಹುಲ್ಲಿಗೂ ದೇವರು ಹಾಗೆ ಹೊದಿಸುತ್ತಾನೆ. ಹುಲ್ಲಾದರೋ ಈ ಹೊತ್ತು ಇದ್ದು ನಾಳೆ ಬೆಂಕಿಯ ಪಾಲಾಗುತ್ತದೆ. ಆದ್ದರಿಂದ ದೇವರು ನಿಮಗೆ ಎಷ್ಟೋ ಹೆಚ್ಚಾಗಿ ತೊಡಿಸುತ್ತಾನೆಂದು ನಿಮಗೆ ಗೊತ್ತಿದೆ. ಅಲ್ಪವಿಶ್ವಾಸಿಗಳಾಗಿರಬೇಡಿ!


ನೀನು ಮಾಂಸ ತಿನ್ನುವುದು ಅಥವಾ ದ್ರಾಕ್ಷಾರಸ ಕುಡಿಯುವುದು, ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವುದಾಗಿದ್ದರೆ ಮಾಂಸವನ್ನು ತಿನ್ನದೆ, ದ್ರಾಕ್ಷಾರಸವನ್ನು ಕುಡಿಯದೇ ಇರುವುದು ಉತ್ತಮ. ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವಂಥದ್ದನ್ನು ಮಾಡದಿರುವುದೇ ಉತ್ತಮ.


ಯೇಸು, “ಪೇತ್ರನೇ, ಬಾ” ಅಂದನು. ಕೂಡಲೆ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ನೀರಿನ ಮೇಲೆ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು