Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:20 - ಪರಿಶುದ್ದ ಬೈಬಲ್‌

20 ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಸಂಶಯಪಡಲಿಲ್ಲ ಮತ್ತು ತನ್ನ ನಂಬಿಕೆಯನ್ನು ಕೊನೆಗೊಳಿಸಲಿಲ್ಲ. ಅವನು ತನ್ನ ನಂಬಿಕೆಯಲ್ಲಿ ಬಲವಾಗಿ ಬೆಳೆದನು ಮತ್ತು ದೇವರಿಗೆ ಸ್ತೋತ್ರ ಸಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದೇವರ ವಾಗ್ದಾನದಲ್ಲಿ ಆತನು ಸಂಶಯಪಡಲಿಲ್ಲ. ಅಪನಂಬಿಕೆಯಿಂದ ಚಂಚಲಚಿತ್ತನಾಗಲೂ ಇಲ್ಲ. ಬದಲಾಗಿ ಆತನ ವಿಶ್ವಾಸ ವೃದ್ಧಿಯಾಯಿತು. ಆತನು ದೇವರನ್ನು ಹೊಗಳಿ ಕೊಂಡಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನು ದೇವರು ಮಾಡಿದ ವಾಗ್ದಾನಕ್ಕೆ ವಿರುದ್ಧ ಅಪನಂಬಿಕೆಯಿಂದ ಚಂಚಲಚಿತ್ತನಾಗದೆ, ನಂಬಿಕೆಯಿಂದ ಶಕ್ತಿವಂತನಾಗಿ ದೇವರಿಗೆ ಮಹಿಮೆಯನ್ನು ಸಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೆಚ್ಯಾ ವಿಶ್ವಾಸಾನ್ ತೆಕಾ ಸೊಡುಕ್ ನಾ, ಅನಿ ತೆನಿ ದೆವಾನ್ ದಿಲ್ಯಾನಾಯ್ ಗೊಸ್ಟಿ ವರ್‍ತಿ ಸಂಶೆವ್ ಕರುಕ್ ನಾ, ತೆಚ್ಯಾ ವಿಶ್ವಾಸಾನ್ ತೆಕಾ ಬಳಾನಿ ಭರ್ಲ್ಯಾನ್, ಅನಿ ತೆನಿ ದೆವಾಚಿ ಸುತ್ತಿ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:20
21 ತಿಳಿವುಗಳ ಹೋಲಿಕೆ  

ಪ್ರಭುವು ನಿನಗೆ ಹೇಳಿದ್ದು ಸಂಭವಿಸೇ ತೀರುವುದೆಂದು ನೀನು ನಂಬಿ ಧನ್ಯಳಾದೆ” ಎಂದಳು.


ಆದ್ದರಿಂದ ನನ್ನಲ್ಲಿ ಬಲಹೀನತೆಗಳಿರುವಾಗ, ಜನರು ನನ್ನ ಬಗ್ಗೆ ಕೆಟ್ಟಸಂಗತಿಗಳನ್ನು ಹೇಳುವಾಗ, ಜನರು ನನ್ನನ್ನು ಹಿಂಸಿಸುವಾಗ, ನನಗೆ ಸಮಸ್ಯೆಗಳಿರುವಾಗ ಸಂತೋಷಿಸುತ್ತೇನೆ. ಇವುಗಳೆಲ್ಲಾ ಕ್ರಿಸ್ತನಿಗೋಸ್ಕರವಾಗಿಯೆ. ಇವುಗಳ ಬಗ್ಗೆ ಸಂತೋಷಪಡುತ್ತೇನೆ, ಏಕೆಂದರೆ ಬಲಹೀನನಾಗಿರುವಾಗಲೇ ನಿಜವಾಗಿಯೂ ಶಕ್ತಿಶಾಲಿಯಾಗಿರುತ್ತೇನೆ.


ಜಾಗರೂಕರಾಗಿರಿ, ನಂಬಿಕೆಯಲ್ಲಿ ದೃಢವಾಗಿರಿ. ಧೈರ್ಯದಿಂದಿರಿ ಮತ್ತು ಬಲಿಷ್ಠರಾಗಿರಿ.


ಆಗ ಆತನು “ದಾನಿಯೇಲನೇ, ಭಯಪಡಬೇಡ. ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ಸಮಾಧಾನ ತಂದುಕೊ. ಈಗ ನೀನು ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಆತನು ನನ್ನೊಂದಿಗೆ ಮಾತನಾಡಿದ ಮೇಲೆ ನನಗೆ ಬಲಬಂದಿತು. ಆಗ ನಾನು, “ಸ್ವಾಮೀ, ನೀವು ನನಗೆ ಬಲವನ್ನು ನೀಡಿದಿರಿ. ಈಗ ನೀವು ಮಾತನಾಡಬಹುದು” ಎಂದು ಹೇಳಿದೆ.


ಕ್ರಿಸ್ತ ಯೇಸುವಿನ ನಿಷ್ಠಾವಂತ ಸೈನಿಕನಾಗಿರುವ ತಿಮೊಥೆಯನೇ, ನೀನು ನನಗೆ ಮಗನಂತಿರುವೆ. ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲ ಹೊಂದಿದವನಾಗು.


ಜನರು ಭಯದಿಂದ ಗಲಿಬಿಲಿಗೊಂಡಿದ್ದಾರೆ. ಅವರಿಗೆ ಹೀಗೆ ಹೇಳು, “ಧೈರ್ಯಗೊಳ್ಳಿರಿ, ಭಯಪಡಬೇಡಿ.” ಇಗೋ, ನಿಮ್ಮ ದೇವರು ಬಂದು ನಿಮ್ಮ ವೈರಿಗಳನ್ನು ಶಿಕ್ಷಿಸುವನು. ಆತನು ಬಂದು ನಿಮಗೆ ಪ್ರತಿಫಲವನ್ನು ಕೊಡುವನು. ಯೆಹೋವನು ನಿಮ್ಮನ್ನು ಕಾಪಾಡುತ್ತಾನೆ.


ಸಮಾರ್ಯವು ಎಫ್ರಾಯೀಮಿನ ರಾಜಧಾನಿಯಾಗಿರುವಷ್ಟು ಕಾಲ ಮತ್ತು ರೆಮಲ್ಯನ ಮಗನು ಸಮಾರ್ಯದಲ್ಲಿ ಅರಸನಾಗಿರುವಷ್ಟು ಕಾಲ ಅವರ ಯೋಜನೆಗಳು ಕೈಗೂಡುವುದಿಲ್ಲ. ನೀನು ಈ ವಾರ್ತೆಯನ್ನು ನಂಬದಿದ್ದರೆ ಜನರು ನಿನ್ನ ಮಾತನ್ನು ನಂಬದಿರಲಿ.”


ಜನರು ಇಸ್ರೇಲ್ ಮತ್ತು ಯೆಹೂದದ ಹೆಸರುಗಳನ್ನು ಶಾಪ ಇಡುವದಕ್ಕಾಗಿ ಉಪಯೋಗಿಸುವರು. ಆದರೆ ನಾನು ಇಸ್ರೇಲ್ ಮತ್ತು ಯೆಹೂದವನ್ನು ಸಂರಕ್ಷಿಸುವೆನು. ಆ ಹೆಸರುಗಳು ಆಶೀರ್ವದಿಸುವದಕ್ಕಾಗಿ ಉಪಯೋಗಿಸಲ್ಪಡುವದು. ಆದ್ದರಿಂದ ಭಯಪಡಬೇಡಿ, ಬಲಶಾಲಿಗಳಾಗಿರಿ.”


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಬಲಗೊಳ್ಳಿರಿ! ಸರ್ವಶಕ್ತನಾದ ಯೆಹೋವನು ತನ್ನ ಆಲಯವನ್ನು ತಿರುಗಿ ಕಟ್ಟಲು ಅಸ್ತಿವಾರವನ್ನು ಹಾಕುವಾಗ ಪ್ರವಾದಿಗಳು ಕೊಟ್ಟ ಸಂದೇಶವನ್ನೇ ನೀವು ತಿರುಗಿ ಕೇಳುತ್ತಿದ್ದೀರಿ!


ಆದರೆ ಜೆರುಬ್ಬಾಬೆಲನೇ, ಯೆಹೋವನು ಹೀಗೆನ್ನುತ್ತಾನೆ, “ನಿರುತ್ಸಾಹಗೊಳ್ಳಬೇಡ! ಮಹಾಯಾಜಕನಾದ ಯೆಹೋಶುವನೇ, ನಿರುತ್ಸಾಹಗೊಳ್ಳಬೇಡ! ಈ ದೇಶದ ಎಲ್ಲಾ ಜನರೇ, ನಿರುತ್ಸಾಹಗೊಳ್ಳಬೇಡಿ, ಕೆಲಸವನ್ನು ಮುಂದುವರಿಸಿರಿ, ಯಾಕೆಂದರೆ ನಾನೇ ನಿಮ್ಮೊಂದಿಗಿದ್ದೇನೆ” ಎಂದು ಯೆಹೋವನು ಹೇಳುತ್ತಾನೆ.’” ಇದು ಸರ್ವಶಕ್ತನಾದ ಯೆಹೋವನ ನುಡಿ.


ಜಕರೀಯನು ದೇವದೂತನಿಗೆ, “ನೀನು ಹೇಳುತ್ತಿರುವುದು ಸತ್ಯವೆಂಬುದಕ್ಕೆ ಆಧಾರವೇನು? ನಾನು ಮುದುಕನಾಗಿದ್ದೇನೆ ಮತ್ತು ನನ್ನ ಹೆಂಡತಿ ಸಹ ಮುಪ್ಪಿನವಳಾಗಿದ್ದಾಳೆ” ಎಂದು ಹೇಳಿದನು.


ಜನರು ಇದನ್ನು ನೋಡಿ ಆಶ್ಚರ್ಯಚಕಿತರಾದರು. ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟಿದ್ದಕ್ಕಾಗಿ ಜನರು ದೇವರನ್ನು ಕೊಂಡಾಡಿದರು.


“ಉತ್ತರದ ರಾಜನು ಪರಿಶುದ್ಧ ನಿಬಂಧನೆಯನ್ನು ತೊರೆದ ಯೊಹೂದ್ಯರನ್ನು ಸುಳ್ಳುಮಾತುಗಳಿಂದ ಮತ್ತು ನಯವಾದ ನುಡಿಗಳಿಂದ ವಂಚಿಸುವನು. ಆ ಯೆಹೂದ್ಯರು ಅದಕ್ಕಿಂತಲೂ ಹೆಚ್ಚಿನ ಪಾಪಕೃತ್ಯಗಳನ್ನು ಮಾಡುವರು. ಆದರೆ ದೇವರನ್ನು ಅರಿತು ಆತನ ಆಜ್ಞೆ ಪಾಲಿಸುತ್ತಿರುವ ಯೆಹೂದ್ಯರು ದೃಢಚಿತ್ತರಾಗಿರುವರು; ಅವರು ಅವನನ್ನು ವಿರೋಧಿಸುವರು.


ಆದರೆ ಆ ಅಧಿಕಾರಿಯು ದೇವಮನುಷ್ಯನಿಗೆ, “ಯೆಹೋವನು ಪರಲೋಕಕ್ಕೆ ಕಿಟಿಕಿಗಳನ್ನು ಮಾಡಿಸಿದರೂ ಇದು ಸಂಭವಿಸುವುದಿಲ್ಲ!” ಎಂದು ಉತ್ತರಿಸಿದನು. ಎಲೀಷನು ಆ ಅಧಿಕಾರಿಗೆ, “ನೀನು ನಿನ್ನ ಸ್ವಂತ ಕಣ್ಣುಗಳಿಂದಲೇ ಇದನ್ನು ನೋಡುವೆ. ಆದರೆ ಆ ಆಹಾರದಲ್ಲಿ ಯಾವುದನ್ನೂ ನೀನು ತಿನ್ನುವುದಿಲ್ಲ” ಎಂದು ಹೇಳಿದ್ದನು.


ಆಗ ರಾಜನಿಗೆ ಆಪ್ತನಾಗಿದ್ದ ಅಧಿಕಾರಿಯು ದೇವಮನುಷ್ಯನಿಗೆ, “ಯೆಹೋವನು ಪರಲೋಕಕ್ಕೆ ಕಿಟಕಿಗಳನ್ನು ಮಾಡಿಸಿದರೂ ಇದು ಸಂಭವಿಸುವುದಿಲ್ಲ!” ಎಂದು ಉತ್ತರಿಸಿದನು. ಎಲೀಷನು, “ನೀನು ನಿನ್ನ ಸ್ವಂತ ಕಣ್ಣುಗಳಿಂದಲೇ ಇದನ್ನು ನೋಡುವೆ. ಆದರೆ ಆ ಆಹಾರದಲ್ಲಿ ಯಾವುದನ್ನೂ ನೀನು ತಿನ್ನುವುದಿಲ್ಲ” ಎಂದನು.


ಕಡೇ ಮಾತೇನೆಂದರೆ, ಪ್ರಭುವಿನಲ್ಲಿಯೂ ಆತನ ಮಹಾಶಕ್ತಿಯಲ್ಲಿಯೂ ಬಲವಾಗಿರಿ.


ಅಬ್ರಾಮನು ಯೆಹೋವನನ್ನು ನಂಬಿದನು. ಆ ನಂಬಿಕೆಯ ನಿಮಿತ್ತವೇ ಯೆಹೋವನು ಅಬ್ರಾಮನನ್ನು ನೀತಿವಂತನೆಂದು ಪರಿಗಣಿಸಿದನು.


ಸೈನ್ಯದಲ್ಲಿದ್ದ ಎಲ್ಲರೂ ದುಃಖತಪ್ತರಾಗಿದ್ದರು ಮತ್ತು ಕೋಪಗೊಂಡಿದ್ದರು; ಯಾಕೆಂದರೆ ಅವರ ಗಂಡು ಮತ್ತು ಹೆಣ್ಣುಮಕ್ಕಳೆಲ್ಲ ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದರು. ದಾವೀದನನ್ನು ಕಲ್ಲುಗಳಿಂದ ಕೊಲ್ಲಬೇಕೆಂದು ಅವರು ಮಾತಾಡಿಕೊಳ್ಳುತ್ತಿದ್ದರು. ದಾವೀದನು ಇದರಿಂದ ತಳಮಳಗೊಂಡರೂ ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು