ರೋಮಾಪುರದವರಿಗೆ 4:3 - ಪರಿಶುದ್ದ ಬೈಬಲ್3 “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಸ್ವೀಕರಿಸಿದನು. ಇದು ಅಬ್ರಹಾಮನನ್ನು ನೀತಿವಂತನನ್ನಾಗಿ ಮಾಡಿತು” ಎಂದು ಪವಿತ್ರ ಗ್ರಂಥವು ಹೇಳುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇದರ ವಿಷಯದಲ್ಲಿ ಧರ್ಮಶಾಸ್ತ್ರವು ಹೇಳುವುದನ್ನು ಆಲೋಚಿಸಿರಿ, “ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು” ಎಂದು ಹೇಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಏಕೆಂದರೆ, ಪವಿತ್ರಗ್ರಂಥದಲ್ಲಿ ಹೀಗೆ ಹೇಳಿದೆ: “ಅಬ್ರಹಾಮನು ದೇವರಲ್ಲಿ ವಿಶ್ವಾಸವಿಟ್ಟನು; ಆತನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ದೇವರು ಪರಿಗಣಿಸಿದರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇದರ ವಿಷಯದಲ್ಲಿ ಶಾಸ್ತ್ರವು ಹೇಳುವದನ್ನು ಆಲೋಚಿಸಿರಿ. ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು ಎಂದು ಹೇಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಏಕೆಂದರೆ ಪವಿತ್ರ ವೇದವು: “ಅಬ್ರಹಾಮನು ದೇವರನ್ನು ನಂಬಿದನು, ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂದು ಹೇಳುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಪವಿತ್ರ್ ಪುಸ್ತಕ್ ಮನ್ತಾ, “ಅಬ್ರಾಹಾಮಾನ್ ದೆವಾ ವರ್ತಿ ತೆಕಾ ವಿಶ್ವಾಸ್ ಕರ್ಲ್ಯಾನ್, ಅನಿ ದೆವಾಚೆರ್ ತೆಂಕಾ ಹೊತ್ತೆ ವಿಶ್ವಾಸಾಕ್ ಲಾಗುನ್ ಖರ್ಯಾವಾಟೆನ್ ಚಲ್ತಲೊ ಮಾನುಸ್ ಮನುನ್ ಮಾನುನ್ ಘೆಟ್ಲ್ಯಾನ್”. ಅಧ್ಯಾಯವನ್ನು ನೋಡಿ |
ದೇವರು ತನ್ನನ್ನು ಸ್ವೀಕರಿಸಿಕೊಂಡಿದ್ದಾನೆಂಬುದನ್ನು ತೋರಿಸುವುದಕ್ಕಾಗಿ ಅಬ್ರಹಾಮನು ಅನಂತರ ಸುನ್ನತಿ ಮಾಡಿಸಿಕೊಂಡನು. ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವುದಕ್ಕಿಂತ ಮೊದಲೇ ನಂಬಿಕೆಯ ಮೂಲಕ ನೀತಿವಂತನಾಗಿದ್ದನು ಎಂಬುದಕ್ಕೆ ಅವನ ಸುನ್ನತಿಯೇ ಆಧಾರವಾಗಿದೆ. ಆದಕಾರಣ ನಂಬುವ ಎಲ್ಲಾ ಜನರಿಗೆ, ಅವರು ಸುನ್ನತಿ ಮಾಡಿಸಿಕೊಂಡಿಲ್ಲದಿದ್ದರೂ ಅಬ್ರಹಾಮನು ತಂದೆಯಾಗಿದ್ದಾನೆ. ಏಕೆಂದರೆ ಅವರು ತಮ್ಮ ನಂಬಿಕೆಯ ಮೂಲಕ ನೀತಿವಂತರೆಂದು ಎಣಿಸಲ್ಪಡುವರು.