Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:13 - ಪರಿಶುದ್ದ ಬೈಬಲ್‌

13 ಮೋಶೆಯ ಧರ್ಮಶಾಸ್ತ್ರಕ್ಕಿಂತ ಮೊದಲೇ ಪಾಪವು ಲೋಕದಲ್ಲಿತ್ತು. ಧರ್ಮಶಾಸ್ತ್ರವು ಇಲ್ಲದಿದ್ದರೆ, ದೇವರು ಜನರ ಪಾಪವನ್ನು ಪರಿಗಣಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಧರ್ಮಶಾಸ್ತ್ರವು ಕೊಡುವುದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಗಣನೆಗೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಧರ್ಮಶಾಸ್ತ್ರವನ್ನು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರ ಇಲ್ಲದೆ ಇದ್ದುದರಿಂದ ಪಾಪವನ್ನು ಗಣನೆಗೆ ತಂದುಕೊಳ್ಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಧರ್ಮಶಾಸ್ತ್ರ ಉಂಟಾಗುವದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು; ಆದರೆ ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಯಮವು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿ ಇತ್ತು. ಆದರೆ ನಿಯಮವು ಇಲ್ಲದಿದ್ದಾಗ ಪಾಪವು ಲೆಕ್ಕಕ್ಕೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖಾಯ್ದೊ ದಿವ್ಚ್ಯಾ ಅದ್ದಿಕ್ನಾಚ್ ಹ್ಯಾ ಜಗಾತ್ ಪಾಪಾ ಹೊತ್ತೊ; ಖರೆ ಪಾಪಾಂಚೊ ಲೆಕ್ಕ್ ಧರುನ್ ಹೊಯ್‍ನಶಿ, ಕಶ್ಯಾಕ್ ಮಟ್ಲ್ಯಾರ್, ಖಾಯ್ದೊ ನತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:13
16 ತಿಳಿವುಗಳ ಹೋಲಿಕೆ  

ಏಕೆಂದರೆ ಧರ್ಮಶಾಸ್ತ್ರಕ್ಕೆ ವಿಧೇಯರಾಗದೆ ಹೋದಾಗ, ಧರ್ಮಶಾಸ್ತ್ರವು ದೇವರ ಕೋಪವನ್ನು ಮಾತ್ರ ತರುತ್ತದೆ. ಆದರೆ ಧರ್ಮಶಾಸ್ತ್ರವು ಇಲ್ಲದಿದ್ದರೆ ಅವಿಧೇಯರಾಗುವುದಕ್ಕೆ ಏನೂ ಇರುವುದಿಲ್ಲ.


ಕೇಡುಮಾಡಲು ಮರಣಕ್ಕಿರುವ ಶಕ್ತಿಯು ಪಾಪವೇ. ಪಾಪದ ಶಕ್ತಿಯು ಧರ್ಮಶಾಸ್ತ್ರವೇ.


ಪಾಪ ಮಾಡುವವನು ದೇವರ ಕಟ್ಟಳೆಗಳನ್ನು ಉಲ್ಲಂಘಿಸುವವನಾಗಿದ್ದಾನೆ. ಹೌದು, ಪಾಪಮಾಡುವುದಕ್ಕೂ ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ಜೀವಿಸುವುದಕ್ಕೂ ಯಾವ ವ್ಯತ್ಯಾಸವಿಲ್ಲ.


ಇದು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದರಿಂದ ಆತನು ಓನಾನನನ್ನು ಸಹ ಸಾಯಿಸಿದನು.


ಆದರೆ ಏರನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಯೆಹೋವನು ಅವನನ್ನು ಸಾಯಿಸಿದನು.


ಆದರೆ ನಾವು ಮಕ್ಕಳನ್ನು ನಮ್ಮ ತಂದೆಯಿಂದಲೇ ಪಡೆದುಕೊಳ್ಳೋಣ. ಆಗ ನಮ್ಮ ಕುಟುಂಬ ಕೊನೆಗೊಳ್ಳುವುದಿಲ್ಲ. ನಮ್ಮ ತಂದೆಯನ್ನು ಮತ್ತನನ್ನಾಗಿ ಮಾಡಿ ಅವನೊಂದಿಗೆ ಮಲಗಿಕೊಳ್ಳೋಣ” ಎಂದು ಹೇಳಿದಳು.


ಆ ರಾತ್ರಿ ಮಲಗುವುದಕ್ಕಿಂತ ಮುಂಚೆ ಸೊದೋಮಿನ ಗಂಡಸರೆಲ್ಲರೂ ಬಂದು ಲೋಟನ ಮನೆಯ ಸುತ್ತಲೂ ನಿಂತುಕೊಂಡು ಲೋಟನಿಗೆ,


ಇದಲ್ಲದೆ ಯೆಹೋವನು, “ಸೊದೋಮ್ ಮತ್ತು ಗೊಮೋರಗಳ ಜನರು ಬಹಳ ಕೆಟ್ಟವರೆಂದು ಅನೇಕ ಸಲ ಕೇಳಿದ್ದೇನೆ.


ಸೊದೋಮಿನ ಜನರು ತುಂಬ ಕೆಟ್ಟವರಾಗಿದ್ದರು. ಅವರು ಯಾವಾಗಲೂ ಯೆಹೋವನಿಗೆ ವಿರೋಧವಾಗಿ ಪಾಪಮಾಡುತ್ತಿದ್ದರು.


ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ.


ದೇವರು ಭೂಮಿಯ ಕಡೆಗೆ ನೋಡಿದಾಗ ಜನರಿಂದ ಅದು ಕೆಟ್ಟುಹೋಗಿರುವುದನ್ನು ಕಂಡನು. ಎಲ್ಲೆಲ್ಲೂ ಹಿಂಸೆ ತುಂಬಿಕೊಂಡಿತ್ತು; ಜನರು ದುಷ್ಟರಾಗಿಯೂ ಕ್ರೂರಿಗಳಾಗಿಯೂ ತಮ್ಮ ಜೀವಿತವನ್ನು ಕೆಡಿಸಿಕೊಂಡಿದ್ದರು.


ನಾವು ಮರಣವನ್ನು (ಪಾಪಗಳನ್ನು) ತೊರೆದು ಜೀವಕ್ಕೆ ಬಂದಿದ್ದೇವೆ ಎಂಬುದು ನಮಗೆ ಗೊತ್ತಿದೆ. ಕ್ರಿಸ್ತನಲ್ಲಿ ನಮ್ಮ ಸಹೋದರ ಸಹೋದರಿಯರನ್ನು ನಾವು ಪ್ರೀತಿಸುತ್ತಿರುವುದರಿಂದಲೇ ಇದನ್ನು ತಿಳಿದುಕೊಂಡಿದ್ದೇನೆ. ಪ್ರೀತಿಸದಿರುವ ವ್ಯಕ್ತಿಯು ಇನ್ನೂ ಮರಣದಲ್ಲಿದ್ದಾನೆ.


ಹೀಗೆ ಲೋಟನ ಇಬ್ಬರು ಹೆಣ್ಣುಮಕ್ಕಳು ತಂದೆಯಿಂದಲೇ ಗರ್ಭಧರಿಸಿದರು.


ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಯಾರಿಗೂ ಸಾಧ್ಯವಿಲ್ಲ. ಧರ್ಮಶಾಸ್ತ್ರವು ನಮ್ಮ ಪಾಪವನ್ನು ಮಾತ್ರ ತೋರ್ಪಡಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು