Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:14 - ಪರಿಶುದ್ದ ಬೈಬಲ್‌

14 ಆದರೆ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೆ ಎಲ್ಲಾ ಜನರು ಸಾಯಲೇಬೇಕಾಯಿತು. ಆದಾಮನು ಪಾಪ ಮಾಡಿದ್ದರಿಂದ ಸತ್ತನು. ದೇವರ ಆಜ್ಞೆಗೆ ಅವಿಧೇಯನಾದದ್ದೇ ಆ ಪಾಪ. ಆದರೆ ಆದಾಮನು ಮಾಡಿದ ಪಾಪಕ್ಕೆ ಸರಿಸಮಾನವಾದ ಪಾಪವನ್ನು ಮಾಡಿಲ್ಲದವರು ಸಹ ಸಾಯಬೇಕಾಯಿತು. ಆದಾಮನು ಮುಂದಿನ ಕಾಲದಲ್ಲಿ ಬರಲಿದ್ದ ಒಬ್ಬಾತನಿಗೆ (ಕ್ರಿಸ್ತನಿಗೆ) ಮುನ್ಸೂಚನೆಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೂ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣದ ಆಳ್ವಿಕೆಯು ನಡೆಯುತ್ತಿತ್ತು. ಆದಾಮನು ದೇವರ ಆಜ್ಞೆಯನ್ನು ಮೀರಿ ಮಾಡಿದ ಪಾಪಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಾದ ಕ್ರಿಸ್ತನಿಗೆ ಪ್ರತಿರೂಪನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದರೂ, ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣವು ದಬ್ಬಾಳಿಕೆ ನಡೆಸುತ್ತಿತ್ತು. ದೇವರ ಆಜ್ಞಾವಿಧಿಗಳನ್ನು ಮೀರಿ ಆದಾಮನು ಮಾಡಿದ ಪಾಪಕ್ಕೆ ಸಮನಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ, ಮರಣದ ಆಳ್ವಿಕೆ ನಡೆಯುತ್ತಿತ್ತು. ಆದಾಮನು ಮುಂಬರಲಿದ್ದ ಮಹಾತ್ಮನ ಮುನ್ಸೂಚನೆಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೂ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನು ದೇವಾಜ್ಞೆಮೀರಿ ಮಾಡಿದ ಪಾಪಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚಕಪುರುಷನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೂ ಮರಣವು ಆದಾಮನಿಂದ ಮೋಶೆಯವರೆಗೂ ದೊರೆತನ ಮಾಡುತ್ತಿತ್ತು. ಆದಾಮನು ಮಾಡಿದ ಅಪರಾಧಕ್ಕೆ ಸಮಾನವಾಗಿ ಪಾಪಮಾಡಿದವರ ಮೇಲೆಯೂ ಅದು ದೊರೆತನ ಮಾಡುತ್ತಿತ್ತು. ಆದಾಮನು ಮುಂದೆ ಬರಲಿಕ್ಕಿದ್ದ ಒಬ್ಬಾತನಿಗೆ ಸಂಕೇತವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಆದಾಮಾಚ್ಯಾ ಎಳಾಕ್ನಾ ಮೊಯ್ಜೆಚ್ಯಾ ಎಳಾ ಪತರ್ ಮರ್ನಾನ್ ಸಗ್ಳ್ಯಾ ಮಾನ್ಸಾಂಚ್ಯಾ ವರ್‍ತಿ ಅಪ್ನಾಚೊ ಅದಿಕಾರ್ ಚಾಲ್ವುಲ್ಯಾನ್, ಆದಾಂವಾನ್ ದೆವಾಚ್ಯಾ ಗೊಸ್ಟಿಕ್ ಖಾಲ್ತಿ ಹೊವ್ನ್ ಚಲಿನಸ್ತಾನಾ ಪಾಪ್ ಕರಲ್ಲ್ಯಾ ಸಾರ್ಕೆ ಪಾಪ್ ಕರುನಸಲ್ಲ್ಯಾ ವರ್‍ತಿ ಸೈತ್ ಮರ್ನಾನ್ ಅದಿಕಾರ್ ಚಾಲ್ವುಲ್ಯಾನ್. ಆದಾಮಾನ್ ಜೊ ಕೊನ್ ಯೆತಲೊ ಹಾಯ್ ತ್ಯಾ ಕ್ರಿಸ್ತಾಕ್ ದಾಕ್ವುನ್ ದಿತಲೊ ಹೊವ್ನ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:14
17 ತಿಳಿವುಗಳ ಹೋಲಿಕೆ  

“ಮೊದಲನೆ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ. ಆದರೆ ಕೊನೆಯ ಆದಾಮನು (ಕ್ರಿಸ್ತನು) ಜೀವಕೊಡುವ ಜೀವಾತ್ಮನಾದನು.


ಪ್ರತಿಯೊಬ್ಬರೂ ಒಂದೇಸಾರಿ ಸಾಯುವರು. ಅನಂತರ ಅವರಿಗೆ ನ್ಯಾಯತೀರ್ಪಾಗುವುದು.


ಒಬ್ಬನು ಪಾಪ ಮಾಡಿದನು, ಆ ಒಬ್ಬನ ದೆಸೆಯಿಂದ ಮರಣವು ಎಲ್ಲಾ ಜನರ ಮೇಲೆ ಆಳ್ವಿಕೆ ನಡೆಸಿತು. ಆದರೆ ಈಗ ಕೆಲವು ಜನರು ದೇವರ ಪೂರ್ಣ ಕೃಪೆಯನ್ನು ಮತ್ತು ನೀತಿವಂತರನ್ನಾಗಿ ಮಾಡುವ ಆತನ ಉಚಿತವಾದ ಮಹಾ ಕೊಡುಗೆಯನ್ನು ಸ್ವೀಕರಿಸಿಕೊಳ್ಳುವರು. ನಿಶ್ಚಯವಾಗಿಯು ಅವರು ಯೇಸು ಕ್ರಿಸ್ತನೆಂಬ ಆ ಒಬ್ಬ ಪುರುಷನ ಮೂಲಕ, ನಿಜವಾದ ಜೀವವನ್ನು ಹೊಂದಿಕೊಳ್ಳುವರು ಮತ್ತು ಆಳುವರು.


ದೇವರು ಸೃಷ್ಟಿಮಾಡಿದ ಪ್ರತಿಯೊಂದೂ, ಪ್ರಸವವೇದನೆ ಪಡುತ್ತಿರುವ ಸ್ತ್ರೀಯಂತೆ ನೋವಿನಿಂದ ನರಳುತ್ತಾ ಇಂದಿನವರೆಗೂ ಕಾಯುತ್ತಿದೆ ಎಂಬುದು ನಮಗೆ ಗೊತ್ತಿದೆ.


ಒಂದು ಕಾಲದಲ್ಲಿ ಪಾಪವು ಮರಣದ ಮೂಲಕ ನಮ್ಮ ಮೇಲೆ ಆಳ್ವಿಕೆ ನಡೆಸಿತು. ಆದರೆ ದೇವರು ಜನರನ್ನು ನೀತಿವಂತರನ್ನಾಗಿ ಮಾಡಬೇಕೆಂದು ತನ್ನ ಕೃಪೆಯನ್ನು ಹೆಚ್ಚಾಗಿ ಅನುಗ್ರಹಿಸಿದನು. ಈ ಕೃಪೆಯು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ನಿತ್ಯಜೀವವನ್ನು ತರುತ್ತದೆ.


ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಹೀಗಾದದ್ದು ಅದರ ಸ್ವಂತ ಇಚ್ಛೆಯಿಂದಲ್ಲ, ದೇವರ ಇಚ್ಛೆಯಿಂದಲೇ. ಆದರೂ ಅದಕ್ಕೆ ನಿರೀಕ್ಷೆಯಿತ್ತು. ಅದೇನೆಂದರೆ:


ಒಂದು ಗಿಡಕ್ಕಾಗಿ ನೀನು ಇಷ್ಟೊಂದು ದುಃಖಗೊಂಡರೆ, ನಿನೆವೆಯಂತಹ ಇಷ್ಟು ದೊಡ್ಡ ನಗರಕ್ಕಾಗಿ ನನಗೂ ಖಂಡಿತವಾಗಿ ದುಃಖವಾಗುತ್ತದೆ. ಈ ನಗರದಲ್ಲಿ ಅನೇಕಾನೇಕ ಜನರಿದ್ದಾರೆ! ಅನೇಕ ಪ್ರಾಣಿಗಳಿವೆ. ಈ ನಗರದಲ್ಲಿರುವ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಜನರಿಗೆ ತಾವು ತಪ್ಪು ಮಾಡುತ್ತಿರುವುದಾಗಿ ತಿಳಿದಿರಲಿಲ್ಲ” ಅಂದನು.


ಆದರೆ ಜನರು ಆದಾಮನಂತೆ ಒಡಂಬಡಿಕೆಯನ್ನು ಮುರಿದುಹಾಕಿದರು. ಅವರ ದೇಶದಲ್ಲಿ ಅವರು ನನಗೆ ದ್ರೋಹಿಗಳಾದರು.


ಹೀಗೆ ಯೆಹೋವನು ಆ ಎರಡು ನಗರಗಳನ್ನು ನಾಶಮಾಡಿದನು; ಇಡೀ ಕಣಿವೆಯನ್ನೂ ಅದರಲ್ಲಿ ಬೆಳೆಯುತ್ತಿದ್ದ ಸಸ್ಯಗಳನ್ನೂ ನಗರಗಳಲ್ಲಿದ್ದ ಎಲ್ಲಾ ಜನರನ್ನೂ ನಾಶಮಾಡಿದನು.


ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಕಾಯಿನನು ಮತ್ತು ಹೇಬೆಲನು ಹೊಲಕ್ಕೆ ಹೋದರು. ಅಲ್ಲಿ ಕಾಯಿನನು ತನ್ನ ತಮ್ಮನ ಮೇಲೆರಗಿ ಅವನನ್ನು ಕೊಂದುಹಾಕಿದನು.


ಆದ್ದರಿಂದ ಫರೋಹನು ತನ್ನ ಜನರಿಗೆಲ್ಲಾ, “ಇಬ್ರಿಯರಿಗೆ ಹುಟ್ಟುವ ಗಂಡುಕೂಸುಗಳನ್ನೆಲ್ಲಾ ನೈಲ್ ನದಿಗೆ ಎಸೆದುಬಿಡಬೇಕು. ಆದರೆ ಎಲ್ಲಾ ಹೆಣ್ಣುಮಕ್ಕಳು ಬದುಕಲಿ” ಎಂದು ಆಜ್ಞಾಪಿಸಿದನು.


ಬಳಿಕ ಯೋಸೇಫನೂ ಅವನ ಸಹೋದರರೂ ಮತ್ತು ಆ ತಲೆಮಾರಿನ ಜನರೆಲ್ಲರೂ ಸತ್ತುಹೋದರು.


ಒಬ್ಬ ಮನುಷ್ಯನು (ಆದಾಮ) ಮಾಡಿದ ಕೃತ್ಯದಿಂದ ಪಾಪವು ಲೋಕಕ್ಕೆ ಬಂದಿತು. ಆ ಪಾಪದೊಂದಿಗೆ ಮರಣವೂ ಬಂದಿತು. ಆದಕಾರಣವೇ ಎಲ್ಲಾ ಜನರು ಸಾಯಲೇಬೇಕು; ಏಕೆಂದರೆ ಎಲ್ಲಾ ಜನರು ಪಾಪ ಮಾಡಿದ್ದಾರೆ.


ಆದಾಮನ ಸಂಬಂಧದಿಂದ ಎಲ್ಲರೂ ಸಾಯುತ್ತಾರೆ. ಇದೇರೀತಿ ಕ್ರಿಸ್ತನ ಸಂಬಂಧದಿಂದ ನಾವೆಲ್ಲರೂ ಮತ್ತೆ ಜೀವಂತರಾಗುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು