Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:18 - ಪರಿಶುದ್ದ ಬೈಬಲ್‌

18 ಹೀಗಿರಲಾಗಿ, ಆದಾಮನ ಒಂದು ಪಾಪವು ಎಲ್ಲಾ ಜನರಿಗೆ ಮರಣದಂಡನೆಯನ್ನು ತಂದಿತು. ಆದರೆ ಅದೇ ರೀತಿಯಲ್ಲಿ, ಕ್ರಿಸ್ತನು ಮಾಡಿದ ಒಂದೇ ಒಳ್ಳೆಯ ಕಾರ್ಯವು, ಎಲ್ಲಾ ಜನರನ್ನು ನೀತಿವಂತರನ್ನಾಗಿ ಮಾಡುತ್ತದೆ. ಮತ್ತು ಆ ಜನರಿಗೆ ಅದು ನಿಜವಾದ ಜೀವವನ್ನು ತರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೀಗಿರಲಾಗಿ ಆದಾಮನ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಮರಣವೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಕ್ರಿಸ್ತನ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವು ಫಲಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಒಬ್ಬನ ಅಪರಾಧದಿಂದ ಎಲ್ಲಾ ಮಾನವರು ದಂಡನೆಯ ತೀರ್ಪಿಗೆ ಗುರಿಯಾಗುತ್ತಾರೆ. ಹಾಗೆಯೇ ಒಬ್ಬನ ಸತ್ಕಾರ್ಯದಿಂದ ಎಲ್ಲಾ ಮಾನವರು ವಿಮೋಚನೆಯನ್ನೂ ಸಜ್ಜೀವವನ್ನೂ ಪಡೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೀಗಿರಲಾಗಿ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಸಾಯಬೇಕೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವನ್ನು ಫಲಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೀಗೆ, ಒಂದು ಅಪರಾಧದ ನಿಮಿತ್ತ ಎಲ್ಲಾ ಜನರ ಮೇಲೆ ದಂಡನಾತೀರ್ಪು ಬಂದಂತೆಯೇ ಒಂದು ನೀತಿಯ ಕೃತ್ಯದಿಂದ ಎಲ್ಲಾ ಜನರಿಗೂ ಜೀವವನ್ನುಂಟು ಮಾಡುವ ನೀತಿಕರಣವು ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅಶೆ ರಾತಾನಾ, ಕಶೆ ಎಕ್ ಮಾನ್ಸಾಚ್ಯಾ ಪಾಪಾ ವೈನಾ ಚುಕಿದಾರ್ ಮನ್ತಲೊ ನಿರ್‍ನಯ್ ಯೆಲೊ, ತೆಸೆಚ್ ಎಕ್ಲೊ ಖರ್ಯ್ಯಾ ವಾಟೆನ್ ಚಲ್ತಲೊ ಸಗ್ಳ್ಯಾ ಲೊಕಾಕ್ನಿ ಸ್ವತಂತ್ರ್ ಕರ್‍ತಾ ಅನಿ ಜಿವ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:18
17 ತಿಳಿವುಗಳ ಹೋಲಿಕೆ  

ಆದಾಮನ ಸಂಬಂಧದಿಂದ ಎಲ್ಲರೂ ಸಾಯುತ್ತಾರೆ. ಇದೇರೀತಿ ಕ್ರಿಸ್ತನ ಸಂಬಂಧದಿಂದ ನಾವೆಲ್ಲರೂ ಮತ್ತೆ ಜೀವಂತರಾಗುತ್ತೇವೆ.


ಒಬ್ಬ ಮನುಷ್ಯನು (ಆದಾಮ) ಮಾಡಿದ ಕೃತ್ಯದಿಂದ ಪಾಪವು ಲೋಕಕ್ಕೆ ಬಂದಿತು. ಆ ಪಾಪದೊಂದಿಗೆ ಮರಣವೂ ಬಂದಿತು. ಆದಕಾರಣವೇ ಎಲ್ಲಾ ಜನರು ಸಾಯಲೇಬೇಕು; ಏಕೆಂದರೆ ಎಲ್ಲಾ ಜನರು ಪಾಪ ಮಾಡಿದ್ದಾರೆ.


ಆದರೆ ದೇವರ ಉಚಿತ ಕೊಡುಗೆಯು ಆದಾಮನ ಪಾಪದಂತಿಲ್ಲ. ಆ ಒಬ್ಬನು ಮಾಡಿದ ಪಾಪದ ದೆಸೆಯಿಂದಾಗಿ ಅನೇಕ ಜನರು ಸತ್ತರು. ಆದರೆ ಜನರು ದೇವರಿಂದ ಪಡೆದುಕೊಂಡ ಕೃಪೆಯು ಅದಕ್ಕಿಂತ ಬಹು ದೊಡ್ಡದಾಗಿದೆ. ಯೇಸು ಕ್ರಿಸ್ತನೆಂಬ ಒಬ್ಬ ಪುರುಷನ ಕೃಪೆಯ ಮೂಲಕ ದೇವರು ಉಚಿತವಾಗಿ ಕೊಡುವ “ಜೀವ”ವನ್ನು ಅನೇಕ ಜನರು ಹೊಂದಿಕೊಂಡರು.


ಒಬ್ಬನು ದೇವರಿಗೆ ಅವಿಧೇಯನಾದ್ದರಿಂದ ಎಲ್ಲಾ ಜನರು ಪಾಪಿಗಳಾದರು. ಆದರೆ ಅದೇ ರೀತಿಯಲ್ಲಿ, ಒಬ್ಬನು ದೇವರಿಗೆ ವಿಧೇಯನಾದ್ದರಿಂದ ಎಲ್ಲರೂ ನೀತಿವಂತರಾಗುವರು.


ಕೇವಲ ಸ್ವಲ್ಪಕಾಲದವರೆಗೆ ಯೇಸುವು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಲ್ಪಟ್ಟನು. ಆದರೆ ನಾವೀಗ ವೈಭವ, ಗೌರವಗಳೆಂಬ ಕಿರೀಟ ಧರಿಸಿರುವ ಆತನನ್ನು ನೋಡುತ್ತೇವೆ. ಏಕೆಂದರೆ ದೇವರ ಕೃಪೆಯ ನಿಮಿತ್ತ ಆತನು ಎಲ್ಲರಿಗೋಸ್ಕರ ಸಂಕಟ ಅನುಭವಿಸಿ ಮರಣಹೊಂದಿದನು.


ನಮ್ಮ ಪಾಪಗಳ ದೆಸೆಯಿಂದ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು. ನಮ್ಮನ್ನು ನೀತಿವಂತರನ್ನಾಗಿ ಮಾಡುವುದಕ್ಕಾಗಿ ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಲಾಯಿತು.


ಯೋಹಾನನು ಬೆಳಕಿನ (ಕ್ರಿಸ್ತನ) ಬಗ್ಗೆ ಜನರಿಗೆ ತಿಳಿಸುವುದಕ್ಕಾಗಿ ಬಂದನು. ತನ್ನ ಮೂಲಕ ಎಲ್ಲಾ ಜನರು ಬೆಳಕಿನ ಬಗ್ಗೆ ಕೇಳಿ ನಂಬಿಕೊಳ್ಳಲೆಂದು ಅವನು ಬಂದನು.


ನಾನು ಭೂಮಿಯಿಂದ ಮೇಲೆತ್ತಲ್ಪಡುವೆನು. ಆಗ ನಾನು ಎಲ್ಲಾ ಜನರನ್ನು ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.


ಪರಿಶುದ್ಧವಾಗಿರುವಾತನು (ದೇವರು ಅಥವಾ ಕ್ರಿಸ್ತನು) ಕೊಟ್ಟಿರುವ ವರವನ್ನು ನೀವು ಹೊಂದಿದ್ದೀರಿ. ಆದ್ದರಿಂದ ನೀವೆಲ್ಲರೂ ಸತ್ಯವನ್ನು ತಿಳಿದಿದ್ದೀರಿ.


ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ.


ಆದ್ದರಿಂದ ಶಿಷ್ಯರು ಯೋಹಾನನ ಬಳಿಗೆ ಬಂದು, “ಗುರುವೇ, ಜೋರ್ಡನ್ ನದಿಯ ಆಚೆದಡದಲ್ಲಿ ನಿನ್ನೊಂದಿಗಿದ್ದ ವ್ಯಕ್ತಿಯನ್ನು ಜ್ಞಾಪಿಸಿಕೊ. ಆತನ ಕುರಿತಾಗಿ ನೀನೇ ಸಾಕ್ಷಿ ಹೇಳಲಿಲ್ಲವೇ? ಆತನು ಜನರಿಗೆ ದೀಕ್ಷಾಸ್ನಾನ ಕೊಡುತ್ತಿದ್ದಾನೆ. ಅನೇಕ ಜನರು ಆತನ ಬಳಿಗೆ ಹೋಗುತ್ತಿದ್ದಾರೆ” ಎಂದು ಹೇಳಿದರು.


ಆತನು ತನ್ನ ಆತ್ಮದಲ್ಲಿ ಬಹಳವಾಗಿ ಸಂಕಟಪಡುವನು. ಆದರೆ ಒಳ್ಳೆಯ ಕಾರ್ಯಗಳಾಗುವುದನ್ನು ಆತನು ನೋಡುವನು. ತಾನು ಕಲಿತ ವಿಷಯಗಳಲ್ಲಿ ಸಂತುಷ್ಟನಾಗುವನು. ಅನೇಕರು ತಮ್ಮ ಪಾಪಗಳಿಂದ ಬಿಡುಗಡೆ ಹೊಂದುವಂತೆ ನನ್ನ ಒಳ್ಳೇ ಸೇವಕನು ಮಾಡುವನು. ಅವರ ಪಾಪಗಳನ್ನು ಹೊತ್ತುಕೊಂಡು ಹೋಗುವನು.


ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು.


ಪಾಪವು ನಿಮ್ಮ ಒಡೆಯನಾಗಿರುವುದಿಲ್ಲ. ಏಕೆಂದರೆ, ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ಈಗ ನೀವು ದೇವರ ಕೃಪೆಯಲ್ಲಿ ಜೀವಿಸುವವರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು