Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:21 - ಪರಿಶುದ್ದ ಬೈಬಲ್‌

21 ಒಂದು ಕಾಲದಲ್ಲಿ ಪಾಪವು ಮರಣದ ಮೂಲಕ ನಮ್ಮ ಮೇಲೆ ಆಳ್ವಿಕೆ ನಡೆಸಿತು. ಆದರೆ ದೇವರು ಜನರನ್ನು ನೀತಿವಂತರನ್ನಾಗಿ ಮಾಡಬೇಕೆಂದು ತನ್ನ ಕೃಪೆಯನ್ನು ಹೆಚ್ಚಾಗಿ ಅನುಗ್ರಹಿಸಿದನು. ಈ ಕೃಪೆಯು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ನಿತ್ಯಜೀವವನ್ನು ತರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೀಗೆ ಪಾಪವು ಮರಣದ ಮೂಲಕ ಆಳ್ವಿಕೆ ನಡೆಸಿದಂತೆ, ದೈವಾನುಗ್ರಹವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿರಿಸಿ, ಅಮರಜೀವದತ್ತ ಒಯ್ದು, ಆಳ್ವಿಕೆ ನಡೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗೆ ಪಾಪವು ಮರಣವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯನ್ನು ಕೊಟ್ಟು ನಿತ್ಯಜೀವವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹೀಗೆ ಪಾಪವು ಮರಣದ ಮೂಲಕ ಆಳಿದಂತೆಯೇ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಿತ್ಯಜೀವವನ್ನುಂಟು ಮಾಡಲು ಕೃಪೆಯು ನೀತಿಯ ಮೂಲಕ ಆಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತಸೆಮನುನ್, ಕಶೆ ಪಾಪಾಕ್ ಲಾಗುನ್ ಮರ್ನಾನ್ ಅಪ್ಲೊ ಅದಿಕಾರ್ ಚಾಲ್ವುಲ್ಯಾನ್, ತಸೆಚ್ ದೆವಾಚಿ ಕುರ್ಪಾ ಖರ್ಯಾ ವಾಟೆನ್ ಚಲ್ತಲ್ಯಾ ವೈನಾ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ಕನ್ನಾಚ್ ಮರಾನ್ ನಸಲ್ಲ್ಯಾ ಜಿವನಾಕ್ಡೆ ಚಾಲ್ವುನ್ ನ್ಹೆತಾ, ಅನಿ ಅಪ್ನಾಚೊ ಅದಿಕಾರ್ ಚಾಲ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:21
19 ತಿಳಿವುಗಳ ಹೋಲಿಕೆ  

ಎಲ್ಲರಿಗೂ ರಕ್ಷಣೆಯನ್ನು ಕೊಡುವ ದೇವರ ಕೃಪೆಯು ಪ್ರತ್ಯಕ್ಷವಾಗಿದೆ.


ಆದರೆ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೆ ಎಲ್ಲಾ ಜನರು ಸಾಯಲೇಬೇಕಾಯಿತು. ಆದಾಮನು ಪಾಪ ಮಾಡಿದ್ದರಿಂದ ಸತ್ತನು. ದೇವರ ಆಜ್ಞೆಗೆ ಅವಿಧೇಯನಾದದ್ದೇ ಆ ಪಾಪ. ಆದರೆ ಆದಾಮನು ಮಾಡಿದ ಪಾಪಕ್ಕೆ ಸರಿಸಮಾನವಾದ ಪಾಪವನ್ನು ಮಾಡಿಲ್ಲದವರು ಸಹ ಸಾಯಬೇಕಾಯಿತು. ಆದಾಮನು ಮುಂದಿನ ಕಾಲದಲ್ಲಿ ಬರಲಿದ್ದ ಒಬ್ಬಾತನಿಗೆ (ಕ್ರಿಸ್ತನಿಗೆ) ಮುನ್ಸೂಚನೆಯಾಗಿದ್ದನು.


ನಿಮ್ಮ ದೇಹವು ಪಾಪದ ದೆಸೆಯಿಂದಾಗಿ ಯಾವಾಗಲೂ ಸತ್ತದ್ದಾಗಿದೆ. ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ಆತ್ಮನು ನಿಮಗೆ ಜೀವವನ್ನು ಕೊಡುತ್ತಾನೆ. ಏಕೆಂದರೆ ಕ್ರಿಸ್ತನು ನಿಮ್ಮನ್ನು ನೀತಿವಂತರನ್ನಾಗಿ ಮಾಡಿದ್ದಾನೆ.


ಜನರು ಮಾಡುವ ಪಾಪಕ್ಕೆ ಮರಣವೇ ಸಂಬಳ. ಆದರೆ ದೇವರ ಉಚಿತವಾದ ಕೊಡುಗೆಯು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ಪಾಪವು ನಿಮ್ಮ ಒಡೆಯನಾಗಿರುವುದಿಲ್ಲ. ಏಕೆಂದರೆ, ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ಈಗ ನೀವು ದೇವರ ಕೃಪೆಯಲ್ಲಿ ಜೀವಿಸುವವರಾಗಿದ್ದೀರಿ.


ಒಬ್ಬ ಮನುಷ್ಯನು (ಆದಾಮ) ಮಾಡಿದ ಕೃತ್ಯದಿಂದ ಪಾಪವು ಲೋಕಕ್ಕೆ ಬಂದಿತು. ಆ ಪಾಪದೊಂದಿಗೆ ಮರಣವೂ ಬಂದಿತು. ಆದಕಾರಣವೇ ಎಲ್ಲಾ ಜನರು ಸಾಯಲೇಬೇಕು; ಏಕೆಂದರೆ ಎಲ್ಲಾ ಜನರು ಪಾಪ ಮಾಡಿದ್ದಾರೆ.


ಒಬ್ಬನು ಪಾಪ ಮಾಡಿದನು, ಆ ಒಬ್ಬನ ದೆಸೆಯಿಂದ ಮರಣವು ಎಲ್ಲಾ ಜನರ ಮೇಲೆ ಆಳ್ವಿಕೆ ನಡೆಸಿತು. ಆದರೆ ಈಗ ಕೆಲವು ಜನರು ದೇವರ ಪೂರ್ಣ ಕೃಪೆಯನ್ನು ಮತ್ತು ನೀತಿವಂತರನ್ನಾಗಿ ಮಾಡುವ ಆತನ ಉಚಿತವಾದ ಮಹಾ ಕೊಡುಗೆಯನ್ನು ಸ್ವೀಕರಿಸಿಕೊಳ್ಳುವರು. ನಿಶ್ಚಯವಾಗಿಯು ಅವರು ಯೇಸು ಕ್ರಿಸ್ತನೆಂಬ ಆ ಒಬ್ಬ ಪುರುಷನ ಮೂಲಕ, ನಿಜವಾದ ಜೀವವನ್ನು ಹೊಂದಿಕೊಳ್ಳುವರು ಮತ್ತು ಆಳುವರು.


ಹೌದು, ನೀವು ಸ್ವಲ್ಪಕಾಲ ಮಾತ್ರ ಸಂಕಟವನ್ನು ಅನುಭವಿಸುವಿರಿ. ಆದರೆ ಅನಂತರ ದೇವರು ಎಲ್ಲವನ್ನು ಸರಿಪಡಿಸುತ್ತಾನೆ. ಆತನು ನಿಮ್ಮನ್ನು ಬಲಪಡಿಸುತ್ತಾನೆ. ನೀವು ಕೆಳಕ್ಕೆ ಬೀಳದಂತೆ ಆತನು ನಿಮಗೆ ಆಧಾರವಾಗುವನು. ಎಲ್ಲರಿಗೂ ಕೃಪೆಯನ್ನು ತೋರುವ ದೇವರು ಆತನೇ. ತನ್ನ ಪ್ರಭಾವದಲ್ಲಿ ಪಾಲುಗಾರರಾಗಲು ಕ್ರಿಸ್ತನೇ ನಿಮ್ಮನ್ನು ಕರೆದನು. ಆ ಪ್ರಭಾವವು ಶಾಶ್ವತವಾದದ್ದು.


ನೀವು ಯಾವನಿಗೆ ಗುಲಾಮರಂತೆ ವಿಧೇಯರಾಗುತ್ತೇವೆ ಎಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ವ್ಯಕ್ತಿಗೆ ನೀವು ನಿಜವಾಗಿಯೂ ಗುಲಾಮರಾಗಿದ್ದೀರಿ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನೀವು ಯಾವನಿಗೆ ವಿಧೇಯರಾಗುತ್ತೀರೋ ಅವನೇ ನಿಮ್ಮ ಒಡೆಯನಾಗಿದ್ದಾನೆ. ನೀವು ಪಾಪವನ್ನಾದರೂ ಅನುಸರಿಸಬಹುದು ಅಥವಾ ದೇವರಿಗಾದರೂ ವಿಧೇಯರಾಗಬಹುದು. ಪಾಪವು ಆತ್ಮಿಕ ಮರಣವನ್ನು ಉಂಟುಮಾಡುತ್ತದೆ. ಆದರೆ ನೀವು ದೇವರಿಗೆ ವಿಧೇಯರಾದರೆ, ಆ ವಿಧೇಯತೆಯು ನಿಮ್ಮನ್ನು ನೀತಿವಂತರನ್ನಾಗಿ ಮಾಡುತ್ತದೆ.


ಕ್ರಿಸ್ತನು ನಮಗೆ ಕೊಡುವುದಾಗಿ ಮಾಡಿದ್ದ ವಾಗ್ದಾನವೇ ಈ ನಿತ್ಯಜೀವ.


ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ.


ಆದ್ದರಿಂದ ದೇವರ ಕೃಪಾಸಿಂಹಾಸನದ ಬಳಿಗೆ ಸಂಕೋಚಪಡದೆ ಬರೋಣ. ಕೊರತೆಯಲ್ಲಿರುವಾಗ ನಮಗೆ ಬೇಕಾದ ಸಹಾಯಕ್ಕಾಗಿ ಕೃಪೆಯನ್ನೂ ಕರುಣೆಯನ್ನೂ ಅಲ್ಲಿ ಹೊಂದಿಕೊಳ್ಳುವೆವು.


ಅಬ್ರಹಾಮನಿಗೂ ಅವನ ಸಂತತಿಯವರಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದನು. ಆದರೆ ಅಬ್ರಹಾಮನು ಆ ವಾಗ್ದಾನವನ್ನು ಹೊಂದಿಕೊಂಡದ್ದು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಅಬ್ರಹಾಮನು ನಂಬಿಕೆಯ ಮೂಲಕ ನೀತಿವಂತನಾದ ಕಾರಣ ಆ ವಾಗ್ದಾನವನ್ನು ಹೊಂದಿಕೊಂಡನು.


ನನ್ನ ಕುರಿಗಳಿಗೆ ನಾನು ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ಸಾಯುವುದಿಲ್ಲ, ಮತ್ತು ಅವುಗಳನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು.


ಆದರೆ ನೀವು ಭೂಲೋಕದ ಜೀವನದಲ್ಲಿ ಪಾಪಕ್ಕೆ ಅಧೀನರಾಗಿರಬೇಡಿ; ನಿಮ್ಮ ಪಾಪಾಧೀನಸ್ವಭಾವದ ದುರಾಶೆಗಳ ಆಡಳಿತಕ್ಕೆ ಒಳಗಾಗಬೇಡಿ.


“ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”


ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು