Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:7 - ಪರಿಶುದ್ದ ಬೈಬಲ್‌

7 ನೀತಿವಂತನ ಪ್ರಾಣವನ್ನು ರಕ್ಷಿಸುವುದಕ್ಕಾಗಿ ಒಬ್ಬನು ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಾಗಿರುವ ಒಬ್ಬನಿಗಾಗಿ ಪ್ರಾಣಕೊಡಲು ಒಬ್ಬನು ಧೈರ್ಯಮಾಡಿದರೂ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀತಿವಂತನಿಗಾಗಿ ಒಬ್ಬನು ತನ್ನ ಪ್ರಾಣಕೊಡುವುದು ವಿರಳ. ಸತ್ಪುರುಷನಿಗಾಗಿ ಒಬ್ಬನು ತನ್ನ ಪ್ರಾಣವನ್ನು ಕೊಟ್ಟರೂ ಕೊಟ್ಟಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವದು ಅಪರೂಪ. ಉಪಕಾರಿಗೋಸ್ಕರ ಪ್ರಾಣಕೊಡುವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀತಿವಂತನಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ಒಬ್ಬ ಸತ್ಪುರುಷನಿಗಾಗಿ ಯಾರಾದರೂ ಪ್ರಾಣಕೊಡುವುದಕ್ಕೆ ಧೈರ್ಯ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರ್ಯ್ಯಾ ವಾಟೆನ್ ಚಲ್ತಲ್ಯಾಚ್ಯಾ ಸಾಟಿಚ್ ಕೊನ್‍ಬಿ ಮರ್‍ತಲೆ ಮಟ್ಲ್ಯಾರ್ ಲೈ ಕಸ್ಟಾಚೆ, ಎಕ್ ಬರ್‍ಯಾ ಮಾನ್ಸಾಚ್ಯಾಸಾಟಿ ಮರುಕ್ ಮನುನ್ ಕೊನ್‍ಬಿ ಎಕ್ಲೊ ತಯಾರ್ ಹೊಲ್ಯಾರ್ ಹೊವ್ಕ್ ಫಿರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:7
11 ತಿಳಿವುಗಳ ಹೋಲಿಕೆ  

ಯೇಸು ತನ್ನ ಪ್ರಾಣವನ್ನೇ ಕೊಟ್ಟದ್ದರಿಂದ ನಿಜವಾದ ಪ್ರೀತಿಯೆಂದರೇನೆಂಬುದನ್ನು ನಾವು ತಿಳಿದುಕೊಂಡೆವು. ಆದ್ದರಿಂದ ಕ್ರಿಸ್ತನಲ್ಲಿ ಸಹೋದರ ಸಹೋದರಿಯರಾದವರಿಗೋಸ್ಕರ ನಾವೂ ನಮ್ಮ ಪ್ರಾಣಗಳನ್ನು ಕೊಡಬೇಕು.


ಅವರು ನನ್ನ ಪ್ರಾಣವನ್ನು ಉಳಿಸುವುದಕ್ಕಾಗಿ ತಮ್ಮ ಪ್ರಾಣಗಳನ್ನೇ ಅಪಾಯಕ್ಕೆ ಈಡುಮಾಡಿದರು. ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಯೆಹೂದ್ಯರಲ್ಲದ ಸಭೆಗಳವರೆಲ್ಲರೂ ಅವರಿಗೆ ಕೃತಜ್ಞರಾಗಿದ್ದಾರೆ.


ಗೆಳೆಯರಿಗಾಗಿ ಸ್ವಂತ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ.


ದಯಾವಂತನಿಗೂ ಉದಾರಿಗೂ ಒಳ್ಳೆಯದಾಗುವುದು. ನ್ಯಾಯವಾದ ವ್ಯಾಪಾರಸ್ಥನಿಗೆ ಒಳ್ಳೆಯದಾಗುವುದು.


ಕಾವಲುಗಾರನು, “ಮೊದಲನೆಯ ಮನುಷ್ಯನು ಓಡುತ್ತಿರುವುದು ಚಾದೋಕನ ಮಗನಾದ ಅಹೀಮಾಚನಂತಿದೆಯೆಂದು ನನ್ನ ಭಾವನೆ” ಎಂದು ಹೇಳಿದನು. ರಾಜನು, “ಅಹೀಮಾಚನು ಒಳ್ಳೆಯ ಮನುಷ್ಯ. ಅವನು ಶುಭಸಮಾಚಾರವನ್ನು ತರುತ್ತಿರಬೇಕು” ಎಂದನು.


ಆದರೆ ಅವರು, “ಬೇಡ, ನೀನು ನಮ್ಮ ಜೊತೆ ಬರುವುದು ಬೇಡ. ಏಕೆಂದರೆ ನಾವು ಯುದ್ಧರಂಗದಿಂದ ಓಡಿಹೋಗಿಬಿಟ್ಟರೆ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ನಮ್ಮಲ್ಲಿ ಅರ್ಧದಷ್ಟು ಜನರು ಸತ್ತರೂ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ಆದರೆ ನೀನು ನಮ್ಮ ಹತ್ತು ಸಾವಿರ ಜನರಷ್ಟು ಬೆಲೆಯುಳ್ಳವನಾಗಿರುವೆ! ನೀನು ನಗರದಲ್ಲಿರುವುದೇ ಉತ್ತಮ. ಅಲ್ಲಿಂದಲೇ ನೀನು ನಮಗೆ ಸಹಾಯ ಮಾಡಬಹುದು” ಎಂದು ಹೇಳಿದರು.


ಹೌದು, ಇವರ ಮನಸ್ಸುಗಳು ಕಠಿಣವಾಗಿವೆ. ಕಿವಿ ಮಂದವಾಗಿವೆ, ಕಣ್ಣು ಮಬ್ಬಾಗಿವೆ. ಅವರು ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆಯೂ ನನ್ನ ಕಡೆಗೆ ತಿರುಗಿಕೊಳ್ಳದಂತೆಯೂ ನನ್ನಿಂದ ಗುಣಹೊಂದದಂತೆಯೂ ಹೀಗಾಯಿತು.’


ನಾವು ಬಲಹೀನರೂ ದೇವರಿಗೆ ವಿರೋಧವಾಗಿ ಜೀವಿಸುವವರೂ ಆಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲದಲ್ಲಿ ನಮಗೋಸ್ಕರ ಪ್ರಾಣಕೊಟ್ಟನು.


ಆದರೆ ನಾವು ಇನ್ನೂ ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟನು. ದೇವರಿಗೆ ನಮ್ಮ ಮೇಲಿರುವ ಮಹಾ ಪ್ರೀತಿಯನ್ನು ಇದು ವ್ಯಕ್ತಪಡಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು