Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:9 - ಪರಿಶುದ್ದ ಬೈಬಲ್‌

9 ನಾವು ಕ್ರಿಸ್ತನ ರಕ್ತದ ಮೂಲಕವಾಗಿ ನೀತಿವಂತರಾಗಿದ್ದೇವೆ. ಆದ್ದರಿಂದ ಆತನ ಮೂಲಕ ದೇವರ ಕೋಪದಿಂದ ಖಂಡಿತವಾಗಿ ತಪ್ಪಿಸಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕ್ರಿಸ್ತಯೇಸುವಿನ ರಕ್ತಧಾರೆಯಿಂದ ನಾವೀಗ ದೇವರೊಡನೆ ಸತ್ಸಂಬಂಧದಲ್ಲಿದ್ದೇವೆ. ಹೀಗಿರಲಾಗಿ, ಬರಲಿರುವ ದೈವಕೋಪಾಗ್ನಿಯಿಂದ ಯೇಸುಕ್ರಿಸ್ತರ ಮುಖಾಂತರವೇ ಪಾರಾಗುತ್ತೇವೆ ಎಂಬುದು ಮತ್ತಷ್ಟು ನಿಶ್ಚಯವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕ ಬರುವ ಕೋಪಕ್ಕೆ ತಪ್ಪಿಸಿಕೊಳ್ಳುವದು ಮತ್ತೂ ನಿಶ್ಚಯವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈಗ ನಾವು ಕ್ರಿಸ್ತ ಯೇಸುವಿನ ರಕ್ತದಿಂದ ನೀತಿವಂತರೆಂದು ನಿರ್ಣಯ ಹೊಂದಿರುವುದರಿಂದ, ಕ್ರಿಸ್ತ ಯೇಸುವಿನ ಮೂಲಕವಾಗಿಯೇ ದೇವರ ಕೋಪದಿಂದ ರಕ್ಷಿಸಲಾಗುವುದು ಇನ್ನೂ ಖಂಡಿತವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆಚ್ಯಾ ರಗ್ತಾ ವೈನಾ ಅಮ್ಕಾ ದೆವಾಚ್ಯಾ ಇದ್ರಾಕ್ ನಿತಿವಂತ್ ಮನುನ್ ಠರ್‍ವುನ್ ಹೊಲ್ಲೆ ಹಾಯ್; ಅಶೆ ರ್‍ಹಾತಾನ್ ಖರೆಚ್ ತೆನಿ ಅಮ್ಕಾ ದೆವಾಚ್ಯಾ ರಾಗಾತ್ನಾ ಹುರ್ವುನ್ ಘೆಟ್ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:9
13 ತಿಳಿವುಗಳ ಹೋಲಿಕೆ  

ದೇವಕುಮಾರನು ಪರಲೋಕದಿಂದ ಬರುವುದನ್ನು ಎದುರುನೋಡುವುದಕ್ಕಾಗಿ ನೀವು ಹಾಗೆ ಮಾಡಿದಿರಿ. ದೇವರೇ ಆ ಕುಮಾರನನ್ನು ಸತ್ತವರೊಳಗಿಂದ ಜೀವಂತವಾಗಿ ಮೇಲಕ್ಕೆಬ್ಬಿಸಿದನು. ಆತನೇ ಯೇಸು. ಮುಂದೆ ಬರುವ ದೇವರ ಕೋಪದ ತೀರ್ಪಿನಿಂದ ನಮ್ಮನ್ನು ರಕ್ಷಿಸುವವನು ಆತನೇ.


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಅಪರಾಧಿಗಳೆಂದು ತೀರ್ಪಾಗುವುದಿಲ್ಲ.


ಹೌದು, ಒಂದು ಕಾಲದಲ್ಲಿ ನೀವು ದೇವರಿಗೆ ಬಹು ದೂರವಾಗಿದ್ದಿರಿ. ಆದರೆ ಈಗ ನೀವು ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೇವರಿಗೆ ಸಮೀಪಸ್ಥರಾದಿರಿ.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ಮಾತನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನಿಗೆ ಅಪರಾಧಿಯೆಂಬ ತೀರ್ಪಾಗುವುದಿಲ್ಲ. ಅವನು ಈಗಾಗಲೇ ಮರಣವನ್ನು ದಾಟಿ ಜೀವಕ್ಕೆ ಪ್ರವೇಶಿಸಿದ್ದಾನೆ.


ಹೀಗಿರಲಾಗಿ, ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ. ಆದಕಾರಣ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿದೆ.


ದೇವರ ಕೋಪವು ಪರಲೋಕದಿಂದ ತೋರಿಬಂದಿದೆ. ಜನರು ದೇವರಿಗೆ ವಿರೋಧವಾಗಿ ಮಾಡುವ ಎಲ್ಲಾ ಕೆಟ್ಟ ಮತ್ತು ದುಷ್ಕೃತ್ಯಗಳ ಬಗ್ಗೆ ದೇವರು ಕೋಪ ಉಳ್ಳವನಾಗಿದ್ದಾನೆ. ಅವರಿಗೆ ಸತ್ಯವು ತಿಳಿದಿದೆ, ಆದರೆ ಅವರು ತಮ್ಮ ದುಷ್ಟಜೀವಿತಗಳಿಂದ ಸತ್ಯವನ್ನು ಅಡಗಿಸುತ್ತಾರೆ.


ಬಹುಮಟ್ಟಿಗೆ ಪ್ರತಿಯೊಂದೂ ರಕ್ತದಿಂದ ಪರಿಶುದ್ಧವಾಗಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ರಕ್ತವಿಲ್ಲದೆ ಪಾಪಗಳನ್ನು ಕ್ಷಮಿಸಲು ಸಾಧ್ಯವಿಲ್ಲ.


ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.


ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂಬ ತನ್ನ ಯೋಜನೆಗನುಸಾರವಾಗಿ ದೇವರು ಅವರನ್ನು ಕರೆದು, ನೀತಿವಂತರನ್ನಾಗಿ ಮಾಡಿ, ಅವರಿಗೆ ತನ್ನ ಮಹಿಮೆಯನ್ನು ಕೊಟ್ಟನು.


ದೇವರು ಬೆಳಕಿನಲ್ಲಿದ್ದಾನೆ. ಆದ್ದರಿಂದ ನಾವೂ ಬೆಳಕಿನಲ್ಲಿ ಜೀವಿಸಬೇಕಾಗಿದೆ. ನಾವು ಬೆಳಕಿನಲ್ಲಿ ಜೀವಿಸುವವರಾಗಿದ್ದರೆ ಪರಸ್ಪರ ಅನ್ಯೋನ್ಯತೆಯಲ್ಲಿದ್ದೇವೆ ಮತ್ತು ದೇವರ ಮಗನಾದ ಯೇಸುವಿನ ರಕ್ತವು ನಮ್ಮ ಪಾಪಗಳನ್ನೆಲ್ಲಾ ನಿವಾರಣೆ ಮಾಡುತ್ತದೆ.


ಅಂದರೆ, ನಾವು ದೇವರ ಶತ್ರುಗಳಾಗಿದ್ದಾಗಲೇ, ದೇವರು ತನ್ನ ಮಗನ ಮರಣದ ಮೂಲಕವಾಗಿ ನಮ್ಮನ್ನು ತನ್ನ ಸ್ನೇಹಿತರನ್ನಾಗಿ ಮಾಡಿಕೊಂಡಿದ್ದಾನೆ. ಈಗ ನಾವು ದೇವರ ಸ್ನೇಹಿತರಾಗಿರುವುದರಿಂದ ದೇವರು ತನ್ನ ಮಗನ ಪ್ರಾಣದ ಮೂಲಕ ನಮ್ಮನ್ನು ರಕ್ಷಿಸುವುದು ಮತ್ತಷ್ಟು ನಿಶ್ಚಯವಾಗಿದೆ.


ಮೊದಲು ನಾವೆಲ್ಲರೂ ಆ ಜನರಂತೆಯೇ ಜೀವಿಸುತ್ತಿದ್ದೆವು. ಶರೀರಭಾವದ ನಮ್ಮ ಇಚ್ಛೆಗಳನ್ನು ಪೂರೈಸಲು ನಾವು ಪ್ರಯತ್ನಿಸುತ್ತಿದ್ದೆವು. ನಮ್ಮ ದೇಹ, ಮನಸ್ಸುಗಳು ಬಯಸಿದ್ದನ್ನೆಲ್ಲಾ ನಾವು ಮಾಡಿದೆವು. ನಾವು ದುಷ್ಟಜನರಾಗಿದ್ದೆವು. ನಮ್ಮ ಆ ಜೀವಿತದ ದೆಸೆಯಿಂದ ನಾವು ಆಗಲೇ ದೇವರ ಕೋಪಕ್ಕೆ ಗುರಿಯಾಗಬೇಕಿತ್ತು. ನಮಗೂ ಇತರ ಜನರಿಗೂ ಯಾವ ವ್ಯತ್ಯಾಸವೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು