Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:17 - ಪರಿಶುದ್ದ ಬೈಬಲ್‌

17 ಹಿಂದಿನ ಕಾಲದಲ್ಲಿ ನೀವು ಪಾಪಕ್ಕೆ ಗುಲಾಮರಾಗಿದ್ದಿರಿ. ಪಾಪವು ನಿಮ್ಮನ್ನು ತನ್ನ ಹಿಡಿತದಲ್ಲಿಟ್ಟುಕೊಂಡಿತ್ತು. ನಿಮಗೆ ಬೋಧಿಸಿದ ವಿಷಯಗಳಿಗೆ ನೀವು ಸಂಪೂರ್ಣವಾಗಿ ವಿಧೇಯರಾದ್ದರಿಂದ ದೇವರಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ನೀವು ಮುಂಚೆ ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಲ್ಪಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದದರಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಒಪ್ಪಿಸಿದ ಬೋಧನೆಗೆ ಹೃದಯದಿಂದ ವಿಧೇಯರಾದುದ್ದಕ್ಕಾಗಿ, ದೇವರಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಖರೆ ದೆವಾಕ್ ಧನ್ಯವಾದ್ ಹೊಂವ್ದಿತ್! ಕಶ್ಯಾಕ್ ಮಟ್ಲ್ಯಾರ್ ಎಕ್ ಎಳಾರ್ ತುಮಿ ಪಾಪಾಚಿ ಗುಲಾಮಾ ಹೊವ್ನ್ ಹೊತ್ತ್ಯಾಶಿ, ಜಾಲ್ಯಾರ್‍ಬಿ ತುಮಿ ಸ್ವಿಕಾರ್ ಕರಲ್ಲ್ಯಾ ಶಿಕಾಪಾತ್ನಿ ತುಮ್ಕಾ ಗಾವಲ್ಲ್ಯಾ ಖರ್ಯ್ಯಾ ವಿಶಯಾಕ್ನಿ ತುಮಿ ತುಮ್ಚ್ಯಾ ಫುರಾ ಮನಾನಿ ಖಾಲ್ತಿ ಹೊವ್ನ್ ಚಲ್ಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:17
37 ತಿಳಿವುಗಳ ಹೋಲಿಕೆ  

ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ನನ್ನಿಂದ ಕೇಳಿರುವ ಸತ್ಯಬೋಧನೆಗಳನ್ನು ಅನುಸರಿಸು. ನೀನು ಏನನ್ನು ಉಪದೇಶ ಮಾಡಬೇಕೆಂಬುದಕ್ಕೆ ಆ ಬೋಧನೆಗಳೇ ನಿನಗೆ ದೃಷ್ಟಾಂತಗಳಾಗಿವೆ.


ದೇವರಿಗೆ ಸ್ತೋತ್ರವಾಗಲಿ. ದೇವರು ನಮ್ಮನ್ನು ಕ್ರಿಸ್ತನ ಮೂಲಕ ಯಾವಾಗಲೂ ವಿಜಯೋತ್ಸವದತ್ತ ನಡೆಸುತ್ತಿದ್ದಾನೆ. ದೇವರು ತನ್ನ ಜ್ಞಾನವೆಂಬ ಪರಿಮಳವನ್ನು ಎಲ್ಲಾ ಕಡೆಗಳಲ್ಲಿಯೂ ಹರಡಲು ನಮ್ಮನ್ನು ಉಪಯೋಗಿಸುತ್ತಿದ್ದಾನೆ.


ಆದರೆ ರಹಸ್ಯವಾದ ಆ ಸತ್ಯವನ್ನು ಈಗ ನಮಗೆ ತೋರಿಸಲಾಗಿದೆ. ಮತ್ತು ಆ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲಾಗಿದೆ. ದೇವರು ಆಜ್ಞಾಪಿಸಿರುವುದು ಇದನ್ನೇ. ಎಲ್ಲಾ ಜನರು ನಂಬಿಕೊಂಡು ದೇವರಿಗೆ ವಿಧೇಯರಾಗಲೆಂದು ರಹಸ್ಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲಾಗಿದೆ. ದೇವರು ಸದಾಕಾಲ ಜೀವಿಸುತ್ತಾನೆ.


ಮೊದಲನೆಯದಾಗಿ, ನಾನು ನಿಮ್ಮೆಲ್ಲರ ವಿಷಯದಲ್ಲಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ಏಕೆಂದರೆ ನಿಮ್ಮ ನಂಬಿಕೆಯು ಲೋಕದಲೆಲ್ಲಾ ಪ್ರಖ್ಯಾತವಾಗಿದೆ.


ಕ್ರಿಸ್ತನಲ್ಲಿ ಸಹೋದರರಾದ ಕೆಲವರು ಬಂದು, ನಿನ್ನ ಜೀವನದಲ್ಲಿರುವ ಸತ್ಯವನ್ನು ನನಗೆ ತಿಳಿಸಿದರು. ನೀನು ಸತ್ಯಮಾರ್ಗದಲ್ಲಿ ನಡೆಯುತ್ತಿರುವೆ ಎಂಬುದನ್ನು ಅವರು ನನಗೆ ಹೇಳಿದರು. ಇದು ನನಗೆ ಬಹಳ ಸಂತೋಷವನ್ನು ಉಂಟುಮಾಡಿತು.


ನಾನು ನನ್ನ ಸ್ವಕಾರ್ಯಗಳ ಬಗ್ಗೆಯೂ ಮಾತಾಡುವುದಿಲ್ಲ. ಯೆಹೂದ್ಯರಲ್ಲದ ಜನರನ್ನು ತನಗೆ ವಿಧೇಯರನ್ನಾಗಿ ಮಾಡಿಕೊಳ್ಳಲು ಕ್ರಿಸ್ತನು ನನ್ನ ಮೂಲಕ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಮಾಡಿದ ಕಾರ್ಯಗಳನ್ನು ಹೇಳಿಕೊಳ್ಳುತ್ತೇನೆ.


ಯೆಹೂದ್ಯವಿಶ್ವಾಸಿಗಳು ಈ ಸಂಗತಿಗಳನ್ನು ಕೇಳಿದಾಗ ವಾದವನ್ನು ನಿಲ್ಲಿಸಿ, ದೇವರನ್ನು ಸ್ತುತಿಸುತ್ತಾ, “ಹಾಗಾದರೆ ನಮ್ಮಂತೆಯೇ ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ಜೀವವನ್ನು ಹೊಂದಿಕೊಳ್ಳಲು ದೇವರು ಯೆಹೂದ್ಯರಲ್ಲದವರಿಗೂ ಅವಕಾಶ ಕೊಟ್ಟಿದ್ದಾನೆ!” ಎಂದು ಹೇಳಿದರು.


ನಿಮ್ಮ ಮಕ್ಕಳಲ್ಲಿ ಕೆಲವರ ಬಗ್ಗೆ ನಾನು ಕೇಳಿದಾಗ ತುಂಬಾ ಸಂತೋಷವಾಯಿತು. ತಂದೆಯಾದ ದೇವರು ನಮಗೆ ಆಜ್ಞಾಪಿಸಿದ ಸತ್ಯಮಾರ್ಗವನ್ನು ಅವರು ಅನುಸರಿಸುತ್ತಿರುವುದರಿಂದ ನನಗೆ ಸಂತೋಷವಾಯಿತು.


ಹೀಗಿರಲಾಗಿ ಆತನು ಪರಿಶುದ್ಧನಾಗಿದ್ದನು. ದೇವರಿಗೆ ವಿಧೇಯರಾಗುವ ಜನರೆಲ್ಲರೂ ಶಾಶ್ವತವಾದ ರಕ್ಷಣೆಯನ್ನು ಹೊಂದಿಕೊಳ್ಳಲು ಆತನೇ ಕಾರಣ.


ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ನೆನಪು ಮಾಡಿಕೊಳ್ಳುತ್ತಿರುತ್ತೇನೆ. ಯಾವಾಗಲೂ ನಿನಗಾಗಿ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.


ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಸ್ತೋತ್ರ ಸಲ್ಲಿಸುತ್ತೇವೆ. ನಿಮ್ಮ ನಂಬಿಕೆಯು ಮತ್ತು ಇತರರ ಮೇಲೆ ನಿಮಗಿರುವ ಪ್ರೀತಿಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ನಿಮ್ಮ ವಿಷಯದಲ್ಲಿ ಸ್ತೋತ್ರ ಸಲ್ಲಿಸುವುದು ಯೋಗ್ಯವಾದ ಕಾರ್ಯವಾಗಿದೆ.


ನಿಮ್ಮ ನ್ಯಾಯನಿರ್ಣಯದ ಕಾಲ ಬಂದಿದೆ. ಅದು ದೇವರ ಕುಟುಂಬದಿಂದಲೇ ಆರಂಭವಾಗುವುದು. ನಮ್ಮಲ್ಲಿಯೇ ಅದು ಆರಂಭವಾದರೆ, ದೇವರ ಸುವಾರ್ತೆಗೆ ವಿಧೇಯರಾಗದ ಜನರಿಗೆ ಏನಾಗಬಹುದು?


ಸ್ತ್ರೀಯರೇ, ಇದೇ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ


ನೀವು ಸತ್ಯಕ್ಕೆ ವಿಧೇಯರಾಗಿರುವುದರ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡಿಕೊಂಡಿದ್ದೀರಿ. ಈಗ ನಿಮ್ಮ ಸಹೋದರ ಸಹೋದರಿಯರನ್ನು ನಿಜವಾಗಿಯೂ ಪ್ರೀತಿಸಬಲ್ಲವರಾಗಿದ್ದೀರಿ. ಆದ್ದರಿಂದ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿ ಪ್ರೀತಿಸಿರಿ.


ದೇವರು ತಾನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದ ಸ್ಥಳಕ್ಕೆ ಪ್ರಯಾಣ ಮಾಡಬೇಕೆಂದು ಅಬ್ರಹಾಮನನ್ನು ಕರೆದನು. ಆ ಸ್ಥಳವು ಎಲ್ಲಿದೆಯೆಂಬುದು ಅವನಿಗೆ ತಿಳಿದಿರಲಿಲ್ಲ. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ, ದೇವರಿಗೆ ವಿಧೇಯನಾಗಿ ಪ್ರಯಾಣ ಮಾಡಲಾರಂಭಿಸಿದನು.


ನಿಮ್ಮ ನಿಮಿತ್ತದಿಂದ ದೇವರ ಸನ್ನಿಧಿಯಲ್ಲಿ ಬಹಳ ಹರ್ಷಿತರಾಗಿದ್ದೇವೆ! ಆದ್ದರಿಂದ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನಮಗಿರುವ ಆನಂದಕ್ಕೆ ಸರಿಸಮವಾಗಿ ಕೃತಜ್ಞತಾಸ್ತುತಿ ಸಲ್ಲಿಸಲು ನಮಗೆ ಹೇಗೆ ಸಾಧ್ಯವಾದೀತು?


ದೇವರು ಕ್ರಿಸ್ತ ಯೇಸುವಿನ ಮೂಲಕ ನಿಮಗೆ ಕೊಟ್ಟಿರುವ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ದೇವರು ಕ್ರಿಸ್ತನ ಮೂಲಕವಾಗಿ ನನಗೆ ಅಪೊಸ್ತಲನೆಂಬ ವಿಶೇಷ ಕೆಲಸವನ್ನು ಕೊಟ್ಟನು. ದೇವರಲ್ಲಿ ನಂಬಿಕೆಯಿಡುವಂತೆಯೂ ದೇವರಿಗೆ ವಿಧೇಯರಾಗುವಂತೆಯೂ ಎಲ್ಲಾ ಜನಾಂಗಗಳ ಜನರನ್ನು ನಡೆಸಬೇಕೆಂದು ದೇವರು ನನಗೆ ಈ ಕೆಲಸವನ್ನು ಕೊಟ್ಟನು. ನಾನು ಈ ಕೆಲಸವನ್ನು ಕ್ರಿಸ್ತನಿಗಾಗಿ ಮಾಡುತ್ತೇನೆ.


ಅವರು ನನ್ನ ಕುರಿತಾಗಿ ಕೇಳಿದ ಕೂಡಲೇ ವಿಧೇಯರಾಗುವರು. ಆ ವಿದೇಶಿಯರು ನನ್ನ ವಿಷಯದಲ್ಲಿ ಭಯದಿಂದಿರುವರು.


ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಗೌರವಿಸುವ ಮನಸ್ಸನ್ನು ರಾಜನ ಹೃದಯದಲ್ಲಿರಿಸಿದ್ದಕ್ಕೆ ಆತನಿಗೆ ಸ್ತೋತ್ರ!


ಆದರೆ ಉಳಿದ ಜನರು ಸ್ವಾರ್ಥಿಗಳಾಗಿದ್ದು, ಸತ್ಯವನ್ನು ಅನುಸರಿಸದೆ ದುಷ್ಟತ್ವವನ್ನು ಅನುಸರಿಸುವವರಾಗಿದ್ದಾರೆ. ಅವರ ಮೇಲೆ ದೇವರ ದಂಡನೆಯೂ ಕೋಪವೂ ಬರುತ್ತದೆ.


ನಾವು ಇಲ್ಲಿರುವುದು ರೋಮಿನಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. ಅವರು ನಮ್ಮನ್ನು ಭೇಟಿಯಾಗುವುದಕ್ಕಾಗಿ “ಅಪ್ಪಿಯ” ಮಾರುಕಟ್ಟೆಗೂ ಮತ್ತು “ತ್ರಿಛತ್ರ” ಎಂಬ ಸ್ಥಳಕ್ಕೂ ಬಂದರು. ಈ ವಿಶ್ವಾಸಿಗಳನ್ನು ಕಂಡಾಗ ಪೌಲನು ಧೈರ್ಯಗೊಂಡು ದೇವರಿಗೆ ಸ್ತೋತ್ರ ಸಲ್ಲಿಸಿದನು.


ಸಹೋದರ ಸಹೋದರಿಯರೇ, ನಾನು ವಿವಿಧ ಭಾಷೆಗಳನ್ನು ಮಾತಾಡುವವನಾಗಿ ನಿಮ್ಮ ಬಳಿಗೆ ಬಂದರೆ ಅದರಿಂದ ನಿಮಗೆ ಸಹಾಯವಾಗುವುದೇ? ಇಲ್ಲ! ನಾನು ನಿಮಗೆ ಹೊಸ ಸತ್ಯವನ್ನು, ಜ್ಞಾನವನ್ನು, ಪ್ರವಾದನೆಯನ್ನು ಮತ್ತು ಉಪದೇಶವನ್ನು ತಂದರೆ ಮಾತ್ರ ನಿಮಗೆ ಸಹಾಯವಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು