Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:21 - ಪರಿಶುದ್ದ ಬೈಬಲ್‌

21 ನೀವು ದುಷ್ಕೃತ್ಯಗಳನ್ನು ಮಾಡಿದಿರಿ. ಈಗ ನೀವು ಆ ಕಾರ್ಯಗಳ ವಿಷಯದಲ್ಲಿ ನಾಚಿಕೆಪಡುತ್ತೀರಿ. ಆ ಕಾರ್ಯಗಳು ನಿಮಗೆ ಸಹಾಯ ಮಾಡಿದವೇ? ಇಲ್ಲ. ಆ ಕಾರ್ಯಗಳು ಆತ್ಮಿಕ ಮರಣವನ್ನು ಮಾತ್ರ ಉಂಟುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೆ ನೀವು ಆಗ ಮಾಡಿದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ. ಕಡೆಗೆ ಅವುಗಳಿಂದ ಬರುವದು ಮರಣವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅತ್ತಾ ತುಮ್ಕಾ ಲಜ್ಜಾ ದಿಸಿ ಸರ್ಕೆ ಕರ್‍ತಲ್ಯಾ ತ್ಯಾ ತುಮಿ ಕರಲ್ಲ್ಯಾ ಕಾಮಾಂಚ್ಯಾ ವೈನಾ ತುಮ್ಕಾ ಕಾಯ್ ಗಾವ್ಲೆ? ತ್ಯಾ ಕಾಮಾಂಚೊ ಪ್ರತಿಪಳ್ ಮರಾನ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:21
46 ತಿಳಿವುಗಳ ಹೋಲಿಕೆ  

ಇಂಥವರಿಗೆ ಮರಣದಂಡನೆ ಆಗಬೇಕೆಂದು ದೇವರ ಧರ್ಮಶಾಸ್ತ್ರ ಹೇಳುತ್ತದೆ ಎಂಬುದು ಅವರಿಗೆ ಗೊತ್ತಿದೆ. ಆದರೂ ಅವರು ಇಂಥ ಕಾರ್ಯಗಳನ್ನು ಮಾಡುತ್ತಾರೆ ಮತ್ತು ಇಂಥ ಕಾರ್ಯಗಳನ್ನು ಮಾಡುವ ಜನರಿಗೆ ಪ್ರೋತ್ಸಾಹ ನೀಡುತ್ತಾರೆ.


ಹಿಂದಿನ ಕಾಲದಲ್ಲಿ, ನಮ್ಮ ಪಾಪಾಧೀನಸ್ವಭಾವವು ನಮ್ಮನ್ನು ಆಳುತ್ತಿತ್ತು. ಪಾಪಕೃತ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಧರ್ಮಶಾಸ್ತ್ರವು ನಮ್ಮಲ್ಲಿ ಉಂಟುಮಾಡಿತು. ಮತ್ತು ನಾವು ಮಾಡಲಿಚ್ಛಿಸಿದ್ದ ಆ ಪಾಪಕೃತ್ಯಗಳು ನಮ್ಮ ದೇಹಗಳನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡವು. ಇದರಿಂದಾಗಿ, ನಾವು ಮಾಡಿದ ಕಾರ್ಯಗಳೆಲ್ಲ ನಮಗೆ ಆತ್ಮಿಕ ಮರಣವನ್ನು ಮಾತ್ರ ಉಂಟು ಮಾಡುತ್ತಿದ್ದವು.


ಜನರು ಮಾಡುವ ಪಾಪಕ್ಕೆ ಮರಣವೇ ಸಂಬಳ. ಆದರೆ ದೇವರ ಉಚಿತವಾದ ಕೊಡುಗೆಯು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ಒಳ್ಳೆಯದೆಂದು ಜನರು ಭಾವಿಸಿಕೊಂಡಿರುವ ಮಾರ್ಗವೊಂದುಂಟು. ಆದರೆ ಅದರ ಅಂತ್ಯ ಮರಣವೇ.


ಹೌದು, ನನ್ನ ಪ್ರಿಯ ಮಕ್ಕಳೇ, ಆತನಲ್ಲಿಯೇ ನೆಲೆಗೊಂಡಿರೋಣ. ನಾವು ಹೀಗೆ ಮಾಡಿದರೆ, ಕ್ರಿಸ್ತನು ಮರಳಿ ಬರುವ ದಿನದಂದು ನಾವು ಭಯಪಡಬೇಕಾಗಿಲ್ಲ; ಅಡಗಿಕೊಳ್ಳುವ ಅಗತ್ಯವಿರುವುದಿಲ್ಲ; ನಾಚಿಕೆಪಡುವ ಅಗತ್ಯವೂ ಇರುವುದಿಲ್ಲ.


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಯನ್ನೂ ಬೆಳೆಸಿದರೆ ನಿಷ್ಪ್ರಯೋಜಕವಾಗಿ ದೇವರ ಶಾಪಕ್ಕೆ ಗುರಿಯಾಗುತ್ತದೆ. ಆ ಭೂಮಿಯನ್ನು ಬೆಂಕಿಯಿಂದ ಸುಟ್ಟು ನಾಶಮಾಡಲಾಗುವುದು.


ನಿಮ್ಮ ಪಾಪಸ್ವಭಾವವು ಬಯಸುವ ಕೆಟ್ಟಕಾರ್ಯಗಳನ್ನು ಮಾಡುವುದಕ್ಕಾಗಿ ನೀವು ನಿಮ್ಮ ಜೀವಿತವನ್ನು ಉಪಯೋಗಿಸಿದರೆ, ನೀವು ಆತ್ಮಿಕವಾಗಿ ಸಾಯುವಿರಿ. ಆದರೆ ನೀವು ನಿಮ್ಮ ದೇಹದ ಮೂಲಕವಾಗಿ ಮಾಡುವ ಕೆಟ್ಟಕಾರ್ಯಗಳನ್ನು ಪವಿತ್ರಾತ್ಮನ ಸಹಾಯದಿಂದ ನಿಲ್ಲಿಸಿದರೆ ಹೊಸ ಜೀವಿತವನ್ನು ಹೊಂದಿಕೊಳ್ಳುವಿರಿ.


ಒಬ್ಬನ ಆಲೋಚನೆಯು ಅವನ ಪಾಪ ಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ ಅವನಿಗೆ ಆತ್ಮಿಕ ಮರಣವಾಗುತ್ತದೆ. ಆದರೆ ಒಬ್ಬನ ಆಲೋಚನೆಯು ಪವಿತ್ರಾತ್ಮನ ಹತೋಟಿಗೆ ಒಳಪಟ್ಟಿದ್ದರೆ, ಅವನಲ್ಲಿ ಜೀವವೂ ಸಮಾಧಾನವೂ ಇರುತ್ತದೆ.


ಮರಣಹೊಂದಿದ, ಸಮಾಧಿಗಳಲ್ಲಿ ದೀರ್ಘನಿದ್ರೆ ಮಾಡುತ್ತಿದ್ದವರಲ್ಲಿ ಅನೇಕರು ಎಚ್ಚೆತ್ತುಕೊಳ್ಳುವರು. ಕೆಲವರು ಎಚ್ಚೆತ್ತು ನಿತ್ಯಜೀವವನ್ನು ಅನುಭವಿಸುವರು. ಕೆಲವರು ಎಚ್ಚೆತ್ತು ನಿತ್ಯನಿಂದನೆಗಳನ್ನೂ ತಿರಸ್ಕಾರಗಳನ್ನೂ ಅನುಭವಿಸುವರು.


ನಾನೇ ಯೆಹೋವನು, ನಾನು ಮನುಷ್ಯನ ಹೃದಯದ ಆಳವನ್ನು ನೋಡಬಲ್ಲೆ, ಮನುಷ್ಯನ ಬುದ್ಧಿಯನ್ನು ಪರೀಕ್ಷಿಸಬಲ್ಲೆ. ಆದ್ದರಿಂದ ಪ್ರತಿಯೊಬ್ಬ ಮನುಷ್ಯನಿಗೆ ತಕ್ಕ ಪ್ರತಿಫಲವನ್ನು ನಾನು ನಿರ್ಧರಿಸಬಲ್ಲೆ. ಪ್ರತಿಯೊಬ್ಬ ಮನುಷ್ಯನಿಗೆ ಅವನ ಕೆಲಸಕ್ಕೆ ತಕ್ಕಂತೆ ಸರಿಯಾಗಿ ಫಲವನ್ನು ಕೊಡುವೆನು.


ಆಮೇಲೆ ಮೃತ್ಯುವನ್ನೂ ಪಾತಾಳವನ್ನೂ ಬೆಂಕಿಯ ಕೆರೆಗೆ ಎಸೆಯಲಾಯಿತು. ಈ ಬೆಂಕಿಯ ಕೆರೆಯು ಎರಡನೆಯ ಮರಣ.


ಆ ಜನರು ನಿನ್ನ ಪರಿಶುದ್ಧ ಜನರ ಮತ್ತು ನಿನ್ನ ಪ್ರವಾದಿಗಳ ರಕ್ತವನ್ನು ಸುರಿಸಿದರು. ಈಗ ನೀನು ಅವರಿಗೆ ಕುಡಿಯಲು ರಕ್ತವನ್ನೇ ನೀಡಿರುವೆ. ಅವರು ಇದಕ್ಕೆ ಪಾತ್ರರಾಗಿದ್ದಾರೆ.”


ನಿಮ್ಮ ನ್ಯಾಯನಿರ್ಣಯದ ಕಾಲ ಬಂದಿದೆ. ಅದು ದೇವರ ಕುಟುಂಬದಿಂದಲೇ ಆರಂಭವಾಗುವುದು. ನಮ್ಮಲ್ಲಿಯೇ ಅದು ಆರಂಭವಾದರೆ, ದೇವರ ಸುವಾರ್ತೆಗೆ ವಿಧೇಯರಾಗದ ಜನರಿಗೆ ಏನಾಗಬಹುದು?


ಇದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ: ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ಸರಿಯಾದ ಮಾರ್ಗಕ್ಕೆ ನಡೆಸುವವನು ಆ ಪಾಪಿಯ ಆತ್ಮವನ್ನು ಮರಣದಿಂದ ಪಾರುಮಾಡಿದವನೂ ಅನೇಕ ಪಾಪಗಳಿಗೆ ಕ್ಷಮಾಪಣೆಯಾಗುವಂತೆ ಮಾಡಿದವನೂ ಆಗುತ್ತಾನೆ.


ಈ ಆಸೆಗಳು ಅವನಿಂದ ಪಾಪವನ್ನು ಮಾಡಿಸುತ್ತದೆ. ನಂತರ ಪಾಪವು ಬೆಳೆದು ಸಾವನ್ನು ತರುತ್ತದೆ.


ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.


ನೀವು ಯಾವ ದುಃಖವನ್ನು ಹೊಂದಿರಬೇಕೆಂದು ದೇವರು ಬಯಸಿದ್ದನೋ ಅದೇ ದುಃಖವನ್ನು ನೀವು ಹೊಂದಿದ್ದೀರಿ. ಆ ದುಃಖವು ನಿಮ್ಮನ್ನು ಬಹು ಆಸಕ್ತಿಯುಳ್ಳವರನ್ನಾಗಿ ಮಾಡಿತು; ನೀವು ತಪ್ಪಿತಸ್ಥರಾಗಿರಲಿಲ್ಲವೆಂದು ನಿರೂಪಿಸಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನಿಮ್ಮನ್ನು ಕೋಪಗೊಳಿಸಿತು ಮತ್ತು ಭಯಗೊಳಿಸಿತು; ನನ್ನನ್ನು ನೋಡಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನನ್ನ ಬಗ್ಗೆ ಚಿಂತಿಸುವಂತೆ ಮಾಡಿತು; ತಪ್ಪಿತಸ್ಥರನ್ನು ದಂಡಿಸಬೇಕೆಂಬ ಬಯಕೆಯನ್ನು ಉಂಟು ಮಾಡಿತು. ಆ ಸಮಸ್ಯೆಯ ಯಾವ ವಿಷಯದಲ್ಲಿಯೂ ನೀವು ಅಪರಾಧಿಗಳಾಗಿರಲಿಲ್ಲವೆಂದು ನಿರೂಪಿಸಿದಿರಿ.


ಅವರು ತಮ್ಮ ಎಲ್ಲಾ ಪಾಪಗಳ ನಿಮಿತ್ತ ನಾಚಿಕೆಪಡುವರು. ಆಲಯದ ವಿನ್ಯಾಸವನ್ನು ಅವರು ತಿಳಿದುಕೊಳ್ಳಲಿ. ಅದು ಹೇಗೆ ಕಟ್ಟಲ್ಪಡಬೇಕೆಂಬುದನ್ನು, ಪ್ರವೇಶ ದ್ವಾರಗಳು ಮತ್ತು ಹೊರಗೆ ಹೋಗುವ ಬಾಗಿಲುಗಳು ಎಲ್ಲಿರಬೇಕೆಂಬುದನ್ನು ಮತ್ತು ಅವುಗಳ ಮೇಲೆ ಇರಬೇಕಾದ ಎಲ್ಲಾ ಚಿತ್ರಗಳನ್ನು ಅವರು ತಿಳಿದುಕೊಳ್ಳಲಿ. ಅದರ ನಿಯಮಗಳನ್ನು, ಕಟ್ಟಳೆಗಳನ್ನು ಅವರಿಗೆ ಬೋಧಿಸಿರಿ. ಅವರು ಎಲ್ಲಾ ಧರ್ಮಬೋಧನೆಗಳನ್ನು ಅನುಸರಿಸುವಂತೆ ಎಲ್ಲಾ ಕಟ್ಟಳೆಗಳನ್ನು ಬರೆದಿಡಿರಿ.


ಯೆಹೋವನೇ, ನಾನು ನಿನಗೆ ದೂರವಾಗಿ ಅಲೆದಾಡಿದೆನು. ಆದರೆ ನಾನು ಮಾಡಿದ ದುಷ್ಕೃತ್ಯಗಳ ಬಗ್ಗೆ ತಿಳಿದುಕೊಂಡೆನು. ಆದ್ದರಿಂದ ನಾನು ನನ್ನ ಮನಸ್ಸನ್ನೂ ಜೀವನವನ್ನೂ ಪರಿವರ್ತಿಸಿಕೊಂಡೆ. ತಾರುಣ್ಯಾವಸ್ಥೆಯಲ್ಲಿ ನಾನು ಮಾಡಿದ ಮೂರ್ಖತನಕ್ಕಾಗಿ ಲಜ್ಜೆಗೊಂಡೆನು; ನಾಚಿಕೆಪಟ್ಟೆನು.’”


ಜನರು ಗೋಧಿಯನ್ನು ಬಿತ್ತುವರು; ಆದರೆ ಅವರು ಕೇವಲ ಮುಳ್ಳಿನ ರಾಶಿಯನ್ನು ಕೊಯ್ಯುವರು. ಅವರು ತುಂಬ ದಣಿಯುವವರೆಗೆ ಕಷ್ಟಪಟ್ಟು ಕೆಲಸ ಮಾಡುವರು. ಆದರೆ ಆ ಎಲ್ಲಾ ಕೆಲಸದ ಪ್ರತಿಫಲವಾಗಿ ಅವರಿಗೆ ಏನೂ ಸಿಗುವದಿಲ್ಲ. ಅವರು ತಮ್ಮ ಬೆಳೆಗಳಿಂದ ನಾಚಿಕೆಪಟ್ಟುಕೊಳ್ಳುವರು. ಯೆಹೋವನ ರೋಷವು ಹಾಗೆಲ್ಲ ಮಾಡುವುದು.”


ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ಸ್ವಲ್ಪವೂ ನಾಚಿಕೆಪಡುವುದಿಲ್ಲ. ಅವರಿಗೆ ನಾಚಿಕೆ ಎಂಬುದೇ ತಿಳಿದಿಲ್ಲ. ಆದ್ದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಧಿಸಲಾಗುವುದು. ನಾನು ಅವರನ್ನು ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.’” ಯೆಹೋವನ ನುಡಿಗಳಿವು.


ನೀನು ಪಾಪ ಮಾಡಿದ್ದರಿಂದ ಮಳೆ ಬರಲಿಲ್ಲ; ಹಿಂಗಾರು ಮಳೆಯೂ ಆಗಲಿಲ್ಲ. ನಿನ್ನ ಮುಖದ ಮೇಲೆ ಇನ್ನೂ ವೇಶ್ಯೆಯ ಕಳೆಯೇ ಇದೆ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ನಾಚಿಕೆಯೂ ಆಗುವುದಿಲ್ಲ.


ಒಳ್ಳೆಯವರಿಗೆ ಒಳ್ಳೆಯವುಗಳೇ ಸಂಭವಿಸುತ್ತವೆ ಎಂಬುದಾಗಿ ತಿಳಿಸು. ಅವರು ಮಾಡುವ ಒಳ್ಳೆಯ ಕಾರ್ಯಗಳಿಗಾಗಿ ಅವರಿಗೆ ಬಹುಮಾನ ದೊರೆಯುವುದು.


ಮನುಷ್ಯದೃಷ್ಟಿಗೆ ಸರಳವಾಗಿ ತೋರುವ ಒಂದು ಮಾರ್ಗವಿದೆ; ಆದರೆ ಅದರ ಅಂತ್ಯವು ಮರಣ.


ಆದ್ದರಿಂದ ನೀವು ನಿಮ್ಮ ದುರ್ನಡತೆಯ ಫಲಗಳನ್ನು ಅನುಭವಿಸುವಿರಿ. ನೀವು ಬೇರೆಯವರಿಗೆ ಮಾಡಿದ ಕುಯುಕ್ತಿಗಳನ್ನೇ ಹೊಂದುವಿರಿ.


ಆದರೆ ನಿನ್ನ ಆಲಯಕ್ಕೆ ಹೋದಮೇಲೆ ನನಗೆ ಅರ್ಥವಾಯಿತು.


ಯೆಹೋವನೇ, ನನ್ನ ವಿಷಯದಲ್ಲಿ ನನಗೇ ನಾಚಿಕೆಯಾಗಿದೆ. ನನಗೆ ಎಷ್ಟೋ ದುಃಖವಾಗಿದೆ. ನಾನು ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತುಕೊಳ್ಳುತ್ತೇನೆ. ನನ್ನ ಹೃದಯವನ್ನೂ ಜೀವಿತವನ್ನೂ ಮಾರ್ಪಡಿಸಿಕೊಳ್ಳುವುದಾಗಿ ನಾನು ನಿನಗೆ ವಾಗ್ದಾನ ಮಾಡುತ್ತೇನೆ.”


“ನಾನು ಅಲ್ಪನೇ ಸರಿ! ನಾನು ನಿನಗೆ ಉತ್ತರ ಕೊಡಲಾರೆನು! ನನ್ನ ಕೈಯನ್ನು ಬಾಯಿಯ ಮೇಲೆ ಇಟ್ಟುಕೊಳ್ಳುತ್ತೇನೆ.


ಚಾಚಿ ಹೀಗೆ ಪ್ರಾರ್ಥಿಸಿದೆನು: “ನನ್ನ ದೇವರೇ, ನಿನ್ನ ಕಡೆಗೆ ಮುಖವೆತ್ತಲು ನನಗೆ ನಾಚಿಕೆಯಾಗುತ್ತದೆ; ಯಾಕೆಂದರೆ ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿದೆ. ನಮ್ಮ ಅಪರಾಧಗಳ ರಾಶಿಯು ಪರಲೋಕದವರೆಗೂ ಏರಿಹೋಗಿದೆ.


ಆಗ ರಾಜನಾದ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನಾನು ನಿನ್ನನ್ನು ಕೊಲ್ಲಲೇಬೇಕು. ಆದರೆ ಅಣತೋತಿನಲ್ಲಿರುವ ನಿನ್ನ ಮನೆಗೆ ಹಿಂತಿರುಗಿ ಹೋಗಲು ನಿನಗೆ ಅವಕಾಶ ಕೊಡುತ್ತೇನೆ. ನಾನು ನಿನ್ನನ್ನು ಕೊಲ್ಲುವುದಿಲ್ಲ ಏಕೆಂದರೆ ನನ್ನ ತಂದೆಯಾದ ದಾವೀದನೊಂದಿಗೆ ನಡೆಯುವಾಗ ಯೆಹೋವನ ಪವಿತ್ರಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ನೀನು ಸಹಾಯ ಮಾಡಿದೆ. ನನ್ನ ತಂದೆಯ ಕಷ್ಟದ ದಿನಗಳಲ್ಲೆಲ್ಲಾ ನೀನೂ ಅವನ ಕಷ್ಟಗಳಲ್ಲಿ ಪಾಲುಗಾರನಾಗಿದ್ದದ್ದು ನನಗೆ ತಿಳಿದಿದೆ” ಎಂದು ಹೇಳಿದನು.


“ಒಬ್ಬ ಮನುಷ್ಯನು ಮರಣಶಿಕ್ಷೆಗೆ ಯೋಗ್ಯವಾದ ಅಪರಾಧವನ್ನು ಮಾಡಿದ್ದಿರಬಹುದು. ಅವನಿಗೆ ಮರಣಶಿಕ್ಷೆ ಕೊಟ್ಟ ನಂತರ ಅವನ ದೇಹವನ್ನು ಒಂದು ಮರಕ್ಕೆ ತೂಗುಹಾಕಿದರೆ


ಅವರು ವಿಗ್ರಹಾರಾಧನೆ ಮಾಡಿದ್ದಕ್ಕೆ ಒಂದೇ ಸಾಕ್ಷಿ ಇರುವುದಾದರೆ ಅವರಿಗೆ ಮರಣಶಿಕ್ಷೆಯಾಗಬಾರದು. ಆದರೆ ಇಬ್ಬರು ಅಥವಾ ಮೂವರು ಸಾಕ್ಷಿಗಳು ಅವರು ವಿಗ್ರಹಾರಾಧನೆ ಮಾಡಿದ್ದು ಸತ್ಯವೆಂದು ಹೇಳಿದರೆ ಮಾತ್ರ ಅವರನ್ನು ಸಾಯಿಸಬೇಕು.


ಅವರ ನಡತೆಯು ಅವರನ್ನು ನಾಶದೆಡೆಗೆ ನಡೆಸುತ್ತಿದೆ. ಅವರು ದೇವರ ಸೇವೆ ಮಾಡುತ್ತಿಲ್ಲ. ಆ ಜನರು ಕೇವಲ ತಮ್ಮ ಸಂತೋಷಕ್ಕಾಗಿ ಜೀವಿಸುತ್ತಿದ್ದಾರೆ. ಅವರು ನಾಚಿಕೆಕರವಾದ ಕೆಲಸಗಳನ್ನು ಮಾಡಿ, ಅವುಗಳ ಬಗ್ಗೆ ಹೆಮ್ಮೆಪಡುತ್ತಾರೆ. ಅವರು ಕೇವಲ ಈ ಲೋಕದ ವಿಷಯಗಳ ಬಗ್ಗೆ ಆಲೋಚಿಸುತ್ತಾರೆ.


ಬಳಿಕ ಅವನು ಜನರ ಮುಂದೆ ನಿಂತುಕೊಂಡು, ‘ನಾನು ಪಾಪಮಾಡಿದೆನು; ಒಳ್ಳೆಯದನ್ನು ಕೆಟ್ಟದ್ದನ್ನಾಗಿ ಮಾಡಿದೆನು. ಆದರೆ ದೇವರು ಅದಕ್ಕೆ ತಕ್ಕಂತೆ ನನ್ನನ್ನು ದಂಡಿಸಲಿಲ್ಲ!


ಒಬ್ಬ ಮನುಷ್ಯನು (ಆದಾಮ) ಮಾಡಿದ ಕೃತ್ಯದಿಂದ ಪಾಪವು ಲೋಕಕ್ಕೆ ಬಂದಿತು. ಆ ಪಾಪದೊಂದಿಗೆ ಮರಣವೂ ಬಂದಿತು. ಆದಕಾರಣವೇ ಎಲ್ಲಾ ಜನರು ಸಾಯಲೇಬೇಕು; ಏಕೆಂದರೆ ಎಲ್ಲಾ ಜನರು ಪಾಪ ಮಾಡಿದ್ದಾರೆ.


ನೀವು ಯಾವನಿಗೆ ಗುಲಾಮರಂತೆ ವಿಧೇಯರಾಗುತ್ತೇವೆ ಎಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ವ್ಯಕ್ತಿಗೆ ನೀವು ನಿಜವಾಗಿಯೂ ಗುಲಾಮರಾಗಿದ್ದೀರಿ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನೀವು ಯಾವನಿಗೆ ವಿಧೇಯರಾಗುತ್ತೀರೋ ಅವನೇ ನಿಮ್ಮ ಒಡೆಯನಾಗಿದ್ದಾನೆ. ನೀವು ಪಾಪವನ್ನಾದರೂ ಅನುಸರಿಸಬಹುದು ಅಥವಾ ದೇವರಿಗಾದರೂ ವಿಧೇಯರಾಗಬಹುದು. ಪಾಪವು ಆತ್ಮಿಕ ಮರಣವನ್ನು ಉಂಟುಮಾಡುತ್ತದೆ. ಆದರೆ ನೀವು ದೇವರಿಗೆ ವಿಧೇಯರಾದರೆ, ಆ ವಿಧೇಯತೆಯು ನಿಮ್ಮನ್ನು ನೀತಿವಂತರನ್ನಾಗಿ ಮಾಡುತ್ತದೆ.


ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು