Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:4 - ಪರಿಶುದ್ದ ಬೈಬಲ್‌

4 ಹೀಗಿರಲಾಗಿ, ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ, ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು ಮತ್ತು ನಾವು ಆತನ ಮರಣದಲ್ಲಿ ಪಾಲುಗಾರರಾದೆವು. ನಾವು ಜೀವಂತವಾಗಿ ಎದ್ದು ಹೊಸ ಜೀವಿತವನ್ನು ನಡೆಸಬೇಕೆಂದು ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು. ಕ್ರಿಸ್ತನು ತಂದೆಯ ಅದ್ಭುತವಾದ ಶಕ್ತಿಯ ಮೂಲಕ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಂತೆಯೇ ನಾವು ಜೀವಂತವಾಗಿ ಎದ್ದುಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ಅವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದಂತೆಯೇ ನಾವು ಸಹ ಹೊಸಜೀವವನ್ನು ಹೊಂದಿ ಬಾಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ಹೊಸಬರಾಗಿ ನಡಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹೀಗಿರುವಲ್ಲಿ ಯೇಸುವಿರೊಂದಿಗೆ ದೀಕ್ಷಾಸ್ನಾನದ ಮೂಲಕ ಅವರ ಮರಣದಲ್ಲಿ ಹೂಣಲಾದೆವು. ಆದ್ದರಿಂದ ತಂದೆಯ ಮಹಿಮೆಯ ಮೂಲಕ ಕ್ರಿಸ್ತ ಯೇಸು ಸತ್ತವರೊಳಗಿಂದ ಎಬ್ಬಿಸಲಾದಂತೆಯೇ ನಾವು ಹೊಸ ಜೀವವನ್ನು ಜೀವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತಸೆ ಹೊವ್ನ್ ಅಮ್ಚ್ಯಾ ಬಾಲ್ತಿಮಾ ವೈನಾ ಅಮಿ ತೆಚ್ಯಾ ಮರ್‍ನಾತ್ ವಾಟೊ ಘೆಟ್ಲ್ಯಾಂವ್ ಅನಿ ಅಮ್ಕಾ ತೆಚ್ಯಾ ವಾಂಗ್ಡಾ ಮಾಟಿ ದಿವ್ನ್ ಹೊಲಿ, ಅಶೆ ಜೆ ಕಶೆ ಕ್ರಿಸ್ತಾಕ್ ಬಾಬಾಚ್ಯಾ ಮಹಿಮೆಚ್ಯಾ ಬಳಾನ್ ಮರ್‍ನಾತ್ನಾ ಝಿತ್ತೊ ಕರುನ್ ಉಟ್ವುನ್ ಹೊಲೆ, ತಸೆಚ್ ಅಮಿಬಿ ಝಿತ್ತೆ ರ್‍ಹಾವ್ನ್ ಎಕ್ ನ್ಹವ್ಯಾ ಜಿವನಾತ್ ಚಲುಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:4
33 ತಿಳಿವುಗಳ ಹೋಲಿಕೆ  

ಯಾವನಾದರೂ ಕ್ರಿಸ್ತನಲ್ಲಿದ್ದರೆ, ಅವನು ಹೊಸ ಸೃಷ್ಟಿಯಾಗಿದ್ದಾನೆ. ಹಳೆಯ ಸಂಗತಿಗಳೆಲ್ಲಾ ಅಳಿದು ಹೋದವು; ಪ್ರತಿಯೊಂದೂ ಹೊಸದಾಯಿತು.


ನೀವು ಹೊಸ ಜೀವನವನ್ನು ಆರಂಭಿಸಿರುವಿರಿ. ಈ ಹೊಸ ಜೀವನದಲ್ಲಿ ನೀವು ನಿಮ್ಮನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ನೂತನರಾಗುತ್ತಿದ್ದೀರಿ. ದೇವರ ಬಗ್ಗೆ ನಿಜವಾದ ತಿಳುವಳಿಕೆಯನ್ನು ಈ ಹೊಸ ಜೀವನ ಕೊಡುತ್ತದೆ.


ಹಿಂದಿನ ಕಾಲದಲ್ಲಿ, ಧರ್ಮಶಾಸ್ತ್ರವು ನಮ್ಮನ್ನು ಸೆರೆಯಾಳುಗಳಂತೆ ಬಂಧಿಸಿತ್ತು. ಆದರೆ ನಮ್ಮ ಹಳೆಯ ಸ್ವಭಾವವು ಸತ್ತುಹೋದ ಕಾರಣ ನಾವು ಧರ್ಮಶಾಸ್ತ್ರದಿಂದ ಬಿಡುಗಡೆಯಾದೆವು. ಆದ್ದರಿಂದ ಈಗ ನಾವು ಲಿಖಿತ ನಿಯಮಗಳೊಡನೆ ಹಳೇ ರೀತಿಯಲ್ಲಿ ದೇವರ ಸೇವೆಮಾಡದೆ ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ದೇವರ ಸೇವೆ ಮಾಡುತ್ತೇವೆ.


ಆ ನೀರು ಈಗ ನಿಮ್ಮನ್ನು ರಕ್ಷಿಸುತ್ತಿರುವ ದೀಕ್ಷಾಸ್ನಾನದಂತಿದೆ. ದೀಕ್ಷಾಸ್ನಾನವು ಮೈಕೊಳೆಯನ್ನು ತೊಳೆಯುವಂಥದ್ದಲ್ಲ. ಅದು ಪರಿಶುದ್ಧ ಹೃದಯ ಬೇಕೆಂದು ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಯೇಸು ಕ್ರಿಸ್ತನು ಸಾವಿನಿಂದ ಎದ್ದುಬಂದದ್ದರಿಂದ ಅದು ನಿಮ್ಮನ್ನು ರಕ್ಷಿಸುತ್ತದೆ.


ಕ್ರಿಸ್ತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಆತನು ಮತ್ತೆ ಸಾಯಲು ಸಾಧ್ಯವಿಲ್ಲವೆಂಬುದು ನಮಗೆ ತಿಳಿದಿದೆ. ಈಗ ಮರಣಕ್ಕೆ ಆತನ ಮೇಲೆ ಯಾವ ಅಧಿಕಾರವೂ ಇಲ್ಲ.


ಕ್ರಿಸ್ತನು ಶಿಲುಬೆಯ ಮೇಲೆ ಕೊಲ್ಲಲ್ಪಟ್ಟಾಗ ಬಲಹೀನನಾಗಿದ್ದನು ಎಂಬುದೇನೊ ನಿಜ. ಆದರೆ ಈಗ ಆತನು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾನೆ. ಅಲ್ಲದೆ ನಾವು ಕ್ರಿಸ್ತನಲ್ಲಿ ಬಲಹೀನರೆಂಬುದೂ ನಿಜ. ಆದರೆ ನಾವು ನಿಮಗೋಸ್ಕರವಾಗಿ ಕ್ರಿಸ್ತನಲ್ಲಿ ದೇವರ ಶಕ್ತಿಯಿಂದ ಜೀವಿಸುತ್ತೇವೆ.


ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಕ್ರಿಸ್ತನಲ್ಲಿ ಪಾಲುಗಾರರಾದೆವು ಎಂಬುದನ್ನು ನೀವು ಮರೆತುಬಿಟ್ಟಿರಾ? ನಮ್ಮ ದೀಕ್ಷಾಸ್ನಾನದ ಮೂಲಕ ನಾವು ಆತನ ಮರಣದಲ್ಲಿ ಪಾಲುಗಾರರಾದೆವು.


ದೇವರಲ್ಲಿ ನೆಲೆಗೊಂಡಿದ್ದೇನೆ ಎಂದು ಹೇಳುವವನು, ಯೇಸು ಜೀವಿಸಿದಂತೆಯೇ ಜೀವಿಸಬೇಕು.


ದೇವರು ತನ್ನ ಶಕ್ತಿಯಿಂದ ಪ್ರಭು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ದೇವರು ನಮ್ಮನ್ನು ಸಹ ಜೀವಂತವಾಗಿ ಎಬ್ಬಿಸುವನು.


ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಸತ್ತುಹೋಗುವ ನಿಮ್ಮ ದೇಹಗಳಿಗೆ ಆತನು ಜೀವವನ್ನು ಸಹ ಕೊಡುತ್ತಾನೆ. ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನು ದೇವರೇ. ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ಆತನು ನಿಮ್ಮ ದೇಹಗಳಿಗೆ ಜೀವವನ್ನು ಕೊಡುತ್ತಾನೆ.


ಪ್ರಭುವಿಗೋಸ್ಕರ ನಾನು ನಿಮಗೆ ಇದನ್ನು ಹೇಳುತ್ತೇನೆ ಮತ್ತು ಎಚ್ಚರಿಸುತ್ತೇನೆ. ಅವಿಶ್ವಾಸಿಗಳಂತೆ ಇನ್ನು ಮೇಲೆ ಜೀವಿಸದಿರಿ. ಅವರ ಆಲೋಚನೆಗಳು ನಿಷ್ಪ್ರಯೋಜಕವಾಗಿವೆ.


ಜನರಿಗೆ ತಿಳಿದಿರುವ ಉದಾಹರಣೆಯ ಮೂಲಕ ನಾನು ಇದನ್ನು ನಿಮಗೆ ವಿವರಿಸುತ್ತೇನೆ. ಹಿಂದಿನ ಕಾಲದಲ್ಲಿ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೂ ದುಷ್ಟತ್ವಕ್ಕೂ ಗುಲಾಮರನ್ನಾಗಿ ಒಪ್ಪಿಸಿಕೊಟ್ಟಿದ್ದಿರಿ. ನೀವು ದುಷ್ಟತ್ವಕ್ಕಾಗಿ ಮಾತ್ರ ಜೀವಿಸಿದಿರಿ. ಅದೇ ರೀತಿಯಲ್ಲಿ ಈಗ ನೀವು ನಿಮ್ಮ ದೇಹದ ಅಂಗಗಳನ್ನು ನೀತಿಗೆ ಗುಲಾಮರನ್ನಾಗಿ ಒಪ್ಪಿಸಿಕೊಡಬೇಕು. ಆಗ ನೀವು ದೇವರಿಗಾಗಿ ಮಾತ್ರ ಜೀವಿಸುತ್ತೀರಿ.


ಯೇಸು ಮಾರ್ಥಳಿಗೆ, “ನಾನು ನಿನಗೆ ಹೇಳಿದ್ದನ್ನು ಜ್ಞಾಪಿಸಿಕೊಳ್ಳುವಿಯಾ? ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಿದೆನು” ಎಂದನು.


ಯೇಸು ಮರಣವೇದನೆಯನ್ನು ಅನುಭವಿಸಿದನು. ಆದರೆ ದೇವರು ಆತನನ್ನು ಬಿಡಿಸಿದನು. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಮರಣವು ಯೇಸುವನ್ನು ಹಿಡಿದುಕೊಳ್ಳಲಾಗಲಿಲ್ಲ.


ಯಜಮಾನರೇ, ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡಿರಿ. ಪರಲೋಕದಲ್ಲಿ ನಿಮಗೂ ಒಬ್ಬ ಯಜಮಾನನಿದ್ದಾನೆ ಎಂಬುದು ನಿಮ್ಮ ಜ್ಞಾಪಕದಲ್ಲಿರಲಿ.


ಹಿಂದಿನ ಕಾಲದಲ್ಲಿ ನೀವು ಕಗ್ಗತ್ತಲೆಯಾಗಿದ್ದಿರಿ. ಈಗಲಾದರೋ ನೀವು ಕರ್ತನಲ್ಲಿ ಪೂರ್ಣಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿಗೆ ಸೇರಿದ ಮಕ್ಕಳಂತೆ ಜೀವಿಸಿರಿ.


ಯೇಸು ಮಾಡಿದ ಮೊದಲನೆಯ ಅದ್ಭುತಕಾರ್ಯವಿದು. ಯೇಸು ಇದನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹತ್ವವನ್ನು ತೋರಿದನು. ಆತನ ಶಿಷ್ಯರೂ ಆತನಲ್ಲಿ ನಂಬಿಕೆ ಇಟ್ಟರು.


ಆದ್ದರಿಂದ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದು ಯೇಸುವನ್ನೇ ಹೊರತು ದಾವೀದನನ್ನಲ್ಲ! ಇದಕ್ಕೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ನಾವು ಆತನನ್ನು ಕಂಡೆವು!


ನಾವು ಕ್ರಿಸ್ತನೊಂದಿಗೆ ಸತ್ತಿದ್ದರೆ, ಆತನೊಂದಿಗೆ ಜೀವಿಸುತ್ತೇವೆ ಎಂಬುದೂ ನಿಶ್ಚಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು