Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:9 - ಪರಿಶುದ್ದ ಬೈಬಲ್‌

9 ಕ್ರಿಸ್ತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಆತನು ಮತ್ತೆ ಸಾಯಲು ಸಾಧ್ಯವಿಲ್ಲವೆಂಬುದು ನಮಗೆ ತಿಳಿದಿದೆ. ಈಗ ಮರಣಕ್ಕೆ ಆತನ ಮೇಲೆ ಯಾವ ಅಧಿಕಾರವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು ಇನ್ನು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯಾಕಂದರೆ ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕ್ರಿಸ್ತ ಯೇಸು ಮರಣದಿಂದ ಜೀವಿತರಾಗಿ ಎದ್ದು ಬಂದದ್ದರಿಂದ ಅವರು ಪುನಃ ಸಾಯಲಾರರೆಂದು ಬಲ್ಲೆವು. ಇನ್ನು ಮುಂದೆ ಅವರ ಮೇಲೆ ಮರಣಕ್ಕೆ ಅಧಿಕಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತಾಕ್ ಮರ್‍ನಾತ್ನಾ ಝಿತ್ತೊ ಕರುನ್ ಉಟ್ಟಲ್ಲೆ ಹಾಯ್, ಅನಿ ತೊ ಕನ್ನಾಚ್ ಮರಿನಾ ಮನುನ್ ಅಮ್ಕಾ ಗೊತ್ತ್ ಹಾಯ್. ಅನಿ ಫಿಡೆ ಮರ್‍ನಾಕ್ ಕನ್ನಾಚ್ ತೆಚೆ ವರ್‍ತಿ ಅದಿಕಾರ್ ಚಾಲ್ವುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:9
11 ತಿಳಿವುಗಳ ಹೋಲಿಕೆ  

ಪಾಪವು ನಿಮ್ಮ ಒಡೆಯನಾಗಿರುವುದಿಲ್ಲ. ಏಕೆಂದರೆ, ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ಈಗ ನೀವು ದೇವರ ಕೃಪೆಯಲ್ಲಿ ಜೀವಿಸುವವರಾಗಿದ್ದೀರಿ.


ನಾನೇ ಜೀವಿಸುವಾತನು. ನಾನು ಸತ್ತೆನು, ಆದರೆ ಇಗೋ ನೋಡು, ನಾನು ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿವೆ.


ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.


ಆದರೆ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೆ ಎಲ್ಲಾ ಜನರು ಸಾಯಲೇಬೇಕಾಯಿತು. ಆದಾಮನು ಪಾಪ ಮಾಡಿದ್ದರಿಂದ ಸತ್ತನು. ದೇವರ ಆಜ್ಞೆಗೆ ಅವಿಧೇಯನಾದದ್ದೇ ಆ ಪಾಪ. ಆದರೆ ಆದಾಮನು ಮಾಡಿದ ಪಾಪಕ್ಕೆ ಸರಿಸಮಾನವಾದ ಪಾಪವನ್ನು ಮಾಡಿಲ್ಲದವರು ಸಹ ಸಾಯಬೇಕಾಯಿತು. ಆದಾಮನು ಮುಂದಿನ ಕಾಲದಲ್ಲಿ ಬರಲಿದ್ದ ಒಬ್ಬಾತನಿಗೆ (ಕ್ರಿಸ್ತನಿಗೆ) ಮುನ್ಸೂಚನೆಯಾಗಿದ್ದನು.


ಆತನು ಯಾಜಕನಾದದ್ದು ವಂಶಾನುಗತವಾಗಿ ಬಂದ ನಿಯಮಗಳ ಮತ್ತು ಶಾಸ್ತ್ರಗಳ ಪ್ರಕಾರವಲ್ಲ. ಆತನು ನಾಶವಾಗದ ತನ್ನ ಜೀವಶಕ್ತಿಯಿಂದ ಯಾಜಕನಾದನು.


ಹೀಗಿರಲಾಗಿ, ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ, ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು ಮತ್ತು ನಾವು ಆತನ ಮರಣದಲ್ಲಿ ಪಾಲುಗಾರರಾದೆವು. ನಾವು ಜೀವಂತವಾಗಿ ಎದ್ದು ಹೊಸ ಜೀವಿತವನ್ನು ನಡೆಸಬೇಕೆಂದು ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು. ಕ್ರಿಸ್ತನು ತಂದೆಯ ಅದ್ಭುತವಾದ ಶಕ್ತಿಯ ಮೂಲಕ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಂತೆಯೇ ನಾವು ಜೀವಂತವಾಗಿ ಎದ್ದುಬಂದೆವು.


ಹೌದು, ಕ್ರಿಸ್ತನು ಪಾಪದ ಶಕ್ತಿಯನ್ನು ಸೋಲಿಸುವುದಕ್ಕಾಗಿ ಒಂದೇ ಸಲ ಸತ್ತನು; ಅದು ಎಲ್ಲಾ ಕಾಲಕ್ಕೂ ಸಾಕಾಗಿದೆ. ಈಗ ಆತನಲ್ಲಿ ಹೊಸ ಜೀವಿತವಿದೆ. ದೇವರೊಂದಿಗೆ ಜೀವಿಸುವುದೇ ಆ ಹೊಸ ಜೀವಿತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು