Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:13 - ಪರಿಶುದ್ದ ಬೈಬಲ್‌

13 ಹಾಗಾದರೆ, ಒಳ್ಳೆಯದೇ ನನಗೆ ಮರಣವನ್ನು ಬರಮಾಡಿತೆಂದರ್ಥವೇ? ಇಲ್ಲ! ಆದರೆ ಪಾಪವು ಒಳ್ಳೆಯದನ್ನೇ ಬಳಸಿಕೊಂಡು ನನಗೆ ಮರಣವನ್ನು ಬರಮಾಡಿತು. ಇದರಿಂದಾಗಿ, ನಾನು ಪಾಪದ ನಿಜಸ್ವರೂಪವನ್ನು ಕಾಣುವಂತಾಯಿತು. ಪಾಪವು ಬಹು ಕೆಟ್ಟದ್ದೆಂದು ಆಜ್ಞೆಯ ಮೂಲಕ ಸ್ಪಷ್ಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹಾಗಾದರೆ ಒಳ್ಳೆಯದೆ ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ. ಪಾಪವೇ ಮರಣಕ್ಕೆ ಕಾರಣವಾದದ್ದು. ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು. ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಸ್ಪಷ್ಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹಾಗಾದರೆ ಹಿತಕರವಾದದ್ದೇ ನನಗೆ ಮೃತ್ಯುಕಾರಕವಾಯಿತೇ? ಇಲ್ಲವೇ ಇಲ್ಲ! ಹಾಗೆ ಮೃತ್ಯುಕಾರಕವಾದುದು ಪಾಪವೇ. ತನ್ನ ನಿಜಸ್ವರೂಪವನ್ನು ತೋರಿಸುವುದಕ್ಕಾಗಿ ಪಾಪವು ನನಗೆ ಹಿತಕರವಾದುದನ್ನು ಉಪಯೋಗಿಸಿಕೊಂಡು ನನಗೆ ಮರಣವನ್ನು ತಂದಿತು. ಹೀಗೆ ಪಾಪವು ಅದೆಷ್ಟು ಭೀಕರವಾದುದೆಂದು ಆಜ್ಞೆಯ ಮೂಲಕ ವ್ಯಕ್ತವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಹೇಳಬಾರದು. ಪಾಪವೇ ಮರಣಕ್ಕೆ ಕಾರಣವಾದದ್ದು; ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು; ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಕಾಣಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹಾಗಾದರೆ ಒಳ್ಳೆಯದಾಗಿರುವ ನಿಯಮವೇ ನನಗೆ ಮರಣಕ್ಕೆ ಕಾರಣವಾಯಿತೋ? ಎಂದಿಗೂ ಇಲ್ಲ! ಆದರೂ ಪಾಪವು ಪಾಪವೇ ಎಂದು ಕಾಣುವಂತೆ ಒಳ್ಳೆಯದಾಗಿರುವ ನಿಯಮದ ಮೂಲಕವೇ ಪಾಪವು ನನ್ನಲ್ಲಿ ಮರಣವು ಉಂಟಾಗುವಂತೆ ಮಾಡಿತು. ಈ ರೀತಿಯಾಗಿ ಆಜ್ಞೆಯ ಮೂಲಕ ಪಾಪವು ಘೋರವಾದದ್ದೇ ಎಂದು ಕಂಡುಬರಲು ಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ ತೆ ಬರೆಚ್ ಮಾಜ್ಯಾ ಮರ್‍ನಾಕ್ ಕಾರನ್ ಹೊಲೆ ಕಾಯ್? ಹೆಚೊ ಅರ್ತ್‍ ತೊ ನ್ಹಯ್! ಹೆ ಸಗ್ಳೆ ಪಾಪಾನ್ ಕರ್‍ಲ್ಯಾನ್; ಬರೆ ಅಸಲ್ಲೆ ವಾಪ್ರುನ್ ಪಾಪಾನ್ ಮರಾನ್ ಹಾನ್ಲ್ಯಾನ್. ಹೆಚ್ಯಾ ವೈನಾ ಪಾಪಾಚೊ ಸ್ವಬಾವ್ ಕಸ್ಲೊ ಮನುನ್ ದಿಸುನ್ ಯೆಲೊ, ಅನಿ ಅಶೆ ಹುಕುಮಾ ವೈನಾ ಪಾಪ್ ಕವ್ಡೊ ವಾಯ್ಟ್ ಮನ್ತಲೆ ಬರೆ ದಿಸುನ್ ಯೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:13
7 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರೋಧವಾಗಿದೆ ಎಂಬುದು ಇದರರ್ಥವೇ? ಇಲ್ಲ! ಜೀವವನ್ನು ಕೊಡುವಂಥ ಧರ್ಮಶಾಸ್ತ್ರವಿದ್ದಿದ್ದರೆ ಅದನ್ನು ಅನುಸರಿಸುವುದರ ಮೂಲಕ ನೀತಿವಂತರಾಗಬಹುದಾಗಿತ್ತು.


ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.


ಧರ್ಮಶಾಸ್ತ್ರ ಬಂದದ್ದರಿಂದ ಜನರಲ್ಲಿ ಹೆಚ್ಚು ಪಾಪಗಳು ಕಂಡುಬಂದವು. ಆದರೆ ಜನರು ಹೆಚ್ಚು ಪಾಪಗಳನ್ನು ಮಾಡಿದಾಗ, ದೇವರು ಅವರಿಗೆ ಹೆಚ್ಚು ಕೃಪೆಯನ್ನು ದಯಪಾಲಿಸಿದನು.


ಕೂಡಲೇ ಆ ಸ್ತ್ರೀಯರು ಭಯದಿಂದಲೂ ಸಂತೋಷದಿಂದಲೂ ಸಮಾಧಿಯಿಂದ ಹೊರಟರು. ನಡೆದ ಸಂಗತಿಯನ್ನು ಶಿಷ್ಯರಿಗೆ ತಿಳಿಸಲು ಅವರು ಓಡಿಹೋಗುತ್ತಿರಲು,


ಅವನು ಬಂದು ಆ ರೈತರನ್ನು ಕೊಲ್ಲುವನು! ಬಳಿಕ ಅವನು ಆ ತೋಟವನ್ನು ಬೇರೆ ಕೆಲವು ರೈತರಿಗೆ ಕೊಡುವನು.” ಜನರು ಈ ಸಾಮ್ಯವನ್ನು ಕೇಳಿ, “ಇಲ್ಲ! ಹಾಗೆಂದಿಗೂ ಆಗಬಾರದು!” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು