Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:25 - ಪರಿಶುದ್ದ ಬೈಬಲ್‌

25 ದೇವರು ನನ್ನನ್ನು ರಕ್ಷಿಸುವನು! ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಮೂಲಕ ಆತನು ದಯಪಾಲಿಸುವ ರಕ್ಷಣೆಗಾಗಿ ಆತನಿಗೆ ಸ್ತೋತ್ರವಾಗಲಿ! ಆದ್ದರಿಂದ ನನ್ನ ಅಂತರಂಗದಲ್ಲಿ ನಾನು ದೇವರ ನಿಯಮಕ್ಕೆ ಗುಲಾಮನಾಗಿದ್ದೇನೆ. ಆದರೆ ನನ್ನ ಪಾಪಾಧೀನಸ್ವಭಾವದಲ್ಲಿ ನಾನು ಪಾಪದ ನಿಯಮಕ್ಕೆ ಗುಲಾಮನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ದೇವರೇ; ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಕೃತಜ್ಞತೆ ಸಲ್ಲಲಿ! ನನ್ನಷ್ಟಕ್ಕೆ ನಾನೇ ದೇವರ ನಿಯಮವನ್ನು ಮನಃಪೂರ್ವಕವಾಗಿ ಪಾಲಿಸಲು ಬಯಸುತ್ತೇನೆ. ನನ್ನ ಈ ದೇಹದಲ್ಲಾದರೋ ಪಾಪದ ನಿಯಮಕ್ಕೆ ಬದ್ಧನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಬಿಡಿಸುವವನು ಇದ್ದಾನೆಂಬದಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ. ಹೀಗಿರಲಾಗಿ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೆ ಆಳಾಗಿಯೂ ಶರೀರಭಾವದಿಂದ ಪಾಪವೆಂಬ ನಿಯಮಕ್ಕೆ ಆಳಾಗಿಯೂ ನಡಕೊಳ್ಳುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ದೇವರಿಗೆ ಸ್ತೋತ್ರ! ಏಕೆಂದರೆ ನನ್ನಷ್ಟಕ್ಕೆ ನಾನೇ ನನ್ನ ಮನಸ್ಸಿನಲ್ಲಿ ದೇವರ ನಿಯಮಕ್ಕೆ ಗುಲಾಮನಾಗಿಯೂ ನನ್ನ ಮಾಂಸಭಾವದ ದೇಹದಲ್ಲಿ ಪಾಪದ ನಿಯಮಕ್ಕೆ ಗುಲಾಮನಾಗಿಯೂ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ಅಮ್ಚ್ಯಾ ದೆವಾಕ್ ಧನ್ಯವಾದ್ ಹೊಂವ್ದಿತ್! ತಸೆ ಹೊಲ್ಯಾರ್ ಮಾಜಿ ಪರಿಸ್ಥಿತಿ ಕಶಿ ಕಾಯ್ ಮಟ್ಲ್ಯಾರ್: ಮಿಯಾ ಮಾಜ್ಯಾ ಬಳಾನ್ ಖಾಲಿ ಮನಾತ್ ಎವ್ಡೆಚ್ ದೆವಾಚ್ಯಾ ಖಾಯ್ದ್ಯಾಚಿ ಸೆವಾ ಕರ್‍ತಾ ಅನಿ ಎಕಾಕ್ಡೆ ಮಾಜೊ ಮಾನುಸ್ಪಾನಾಚೊ ಸ್ವಬಾವ್ ಪಾಪಾಚಿ ಸೆವಾ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:25
20 ತಿಳಿವುಗಳ ಹೋಲಿಕೆ  

ನೀವು ನುಡಿಯಿಂದಾಗಲಿ, ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಿಮ್ಮ ಪ್ರಭುವಾದ ಯೇಸುವಿಗಾಗಿ ಮಾಡಿರಿ. ನೀವು ಏನು ಮಾಡಿದರೂ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.


ಭೂಮ್ಯಾಕಾಶಗಳೇ, ಸಂತೋಷಪಡಿರಿ! ಪರ್ವತಗಳೇ, ಹರ್ಷಧ್ವನಿ ಮಾಡಿರಿ! ಯಾಕೆಂದರೆ ಯೆಹೋವನು ತನ್ನ ಜನರನ್ನು ಸಂತೈಸುತ್ತಾನೆ. ಆತನು ಬಡವರಿಗೆ ಕರುಣೆ ತೋರಿಸುತ್ತಾನೆ.


ಆದರೆ ನಾವು ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ಆತನು ನಮಗೆ ಜಯವನ್ನು ಕೊಡುತ್ತಾನೆ.


ಹಿಂದಿನ ಕಾಲದಲ್ಲಿ ನೀವು ಪಾಪಕ್ಕೆ ಗುಲಾಮರಾಗಿದ್ದಿರಿ. ಪಾಪವು ನಿಮ್ಮನ್ನು ತನ್ನ ಹಿಡಿತದಲ್ಲಿಟ್ಟುಕೊಂಡಿತ್ತು. ನಿಮಗೆ ಬೋಧಿಸಿದ ವಿಷಯಗಳಿಗೆ ನೀವು ಸಂಪೂರ್ಣವಾಗಿ ವಿಧೇಯರಾದ್ದರಿಂದ ದೇವರಿಗೆ ಸ್ತೋತ್ರವಾಗಲಿ.


ಪಾಪವು ನಿಮ್ಮ ಒಡೆಯನಾಗಿರುವುದಿಲ್ಲ. ಏಕೆಂದರೆ, ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ಈಗ ನೀವು ದೇವರ ಕೃಪೆಯಲ್ಲಿ ಜೀವಿಸುವವರಾಗಿದ್ದೀರಿ.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.


ವರ್ಣಿಸಲಸಾಧ್ಯವಾದ ದೇವರ ವರಕ್ಕಾಗಿ ಆತನಿಗೆ ಸ್ತೋತ್ರವಾಗಲಿ.


ಆಕೆ ಒಬ್ಬ ಮಗನನ್ನು ಹೆರುವಳು. ನೀನು ಆ ಮಗುವಿಗೆ ಯೇಸು ಎಂದು ಹೆಸರಿಡುವೆ. ನೀನು ಆತನಿಗೆ ಆ ಹೆಸರನ್ನೇ ಇಡು; ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು” ಎಂದು ಹೇಳಿದನು.


ಸೆರೆಮನೆಯಲ್ಲಿರುವವರಿಗೆ ನೀವು, ‘ಸೆರೆಮನೆಯಿಂದ ಹೊರಗೆ ಬನ್ನಿರಿ’ ಎಂದು ಹೇಳುವಿರಿ. ಅಂಧಕಾರದಲ್ಲಿರುವವರಿಗೆ, ‘ಕತ್ತಲೆಯಿಂದ ಹೊರಗೆ ಬನ್ನಿರಿ’ ಎಂದು ಹೇಳುವಿರಿ. ಪ್ರಯಾಣದಲ್ಲಿರುವವರು ತಿನ್ನುತ್ತಾ ಹೋಗುವರು. ಬೋಳುಬೆಟ್ಟಗಳಲ್ಲೂ ನಿಮಗೆ ಆಹಾರ ದೊರೆಯುವದು.


ಆ ಸಮಯದಲ್ಲಿ ನೀನು ಹೀಗೆನ್ನುವೆ: “ಯೆಹೋವನೇ, ನಾನು ನಿನ್ನನ್ನು ಸ್ತುತಿಸುವೆ! ನೀನು ನನ್ನ ಮೇಲೆ ಕೋಪಿಸಿಕೊಂಡಿರುವೆ. ಆದರೆ ಈಗ ನೀನು ನನ್ನ ಮೇಲೆ ಕೋಪಗೊಳ್ಳಬೇಡ! ನಿನ್ನ ಪ್ರೀತಿಯನ್ನು ನನ್ನ ಮೇಲೆ ತೋರಿಸು.


ಯಾವುದರ ಬಗ್ಗೆಯೂ ಚಿಂತಿಸಬೇಡಿ. ಆದರೆ ಪ್ರಾರ್ಥನೆ ಮಾಡುತ್ತಾ ನಿಮ್ಮ ಅಗತ್ಯತೆಗಳಿಗೆಲ್ಲಾ ದೇವರಲ್ಲಿ ವಿಜ್ಞಾಪಿಸಿರಿ. ನೀವು ಪ್ರಾರ್ಥನೆ ಮಾಡುವಾಗಲೆಲ್ಲಾ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.


ಪ್ರತಿಯೊಂದು ವಿಷಯದಲ್ಲಿಯೂ ತಂದೆಯಾದ ದೇವರಿಗೆ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ಯಾವಾಗಲೂ ಸ್ತೋತ್ರಮಾಡಿರಿ.


ನನಗೆ ಅಪರಾಧಿಯೆಂದು ತೀರ್ಪಾಗದಿರುವುದೇಕೆ? ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಜೀವವನ್ನು ತರುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪ ಮತ್ತು ಮರಣಗಳನ್ನು ತರುವ ನಿಯಮದಿಂದ ಬಿಡುಗಡೆ ಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು