Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:9 - ಪರಿಶುದ್ದ ಬೈಬಲ್‌

9 ನಾನು ಧರ್ಮಶಾಸ್ತ್ರವನ್ನು ತಿಳಿದುಕೊಳ್ಳುವುದಕ್ಕಿಂತ ಮೊದಲು ಧರ್ಮಶಾಸ್ತ್ರವಿಲ್ಲದವನಾಗಿ ಜೀವಂತವಾಗಿದ್ದೆನು. ಆದರೆ ಧರ್ಮಶಾಸ್ತ್ರದ ಆಜ್ಞೆಯು ನನ್ನ ಬಳಿಗೆ ಬಂದಾಗ, ಪಾಪವು ಜೀವಿಸತೊಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಧರ್ಮಶಾಸ್ತ್ರದ ಅರಿವಿಲ್ಲದೆ ಒಮ್ಮೆ ನಾನು ಜೀವಿಸುತ್ತಿದ್ದೆನು; ಆಜ್ಞೆ ಎಂಬುದು ತಲೆದೋರಿದ ಕೂಡಲೇ ಪಾಪಕ್ಕೆ ಜೀವ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂತು, ನಾನು ಸತ್ತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಒಮ್ಮೆ ನಾನು ನಿಯಮವಿಲ್ಲದೆ ಜೀವಿಸುತ್ತಿದ್ದೆನು. ಆದರೆ ಯಾವಾಗ ಆಜ್ಞೆಯು ಬಂದಿತೋ ಆಗ ಪಾಪವು ಜೀವಂತವಾಯಿತು, ನಾನು ಸತ್ತವನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಎಕ್ ಎಳಾರ್ ಖಾಯ್ದೊ ಯೆಲ್ಲೊ ನಸಲ್ಲ್ಯಾ ತನ್ನಾ ಮಿಯಾ ಝಿತ್ತೊ ಹೊತ್ತೊ; ಜೆ ಕನ್ನಾ ಖಾಯ್ದೊ ಯೆಲೊ, ತನ್ನಾ ಮಾಜ್ಯಾ ಜಿವನಾತ್ ಪಾಪ್ ಚಿಗರ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:9
22 ತಿಳಿವುಗಳ ಹೋಲಿಕೆ  

ಆದರೆ ನೀತಿವಂತರಾಗಲು ಧರ್ಮಶಾಸ್ತ್ರವನ್ನು ಅವಲಂಬಿಸಿಕೊಂಡಿರುವವರು ಶಾಪಗ್ರಸ್ತರಾಗಿದ್ದಾರೆ. ಏಕೆಂದರೆ ಪವಿತ್ರ ಗ್ರಂಥವು ಹೇಳುವಂತೆ, “ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳನ್ನೆಲ್ಲಾ ಕೈಕೊಂಡು ನಡೆಯಬೇಕು. ಅವುಗಳಿಗೆ ಎಂದಾದರೂ ಅವಿಧೇಯನಾದವನು ಶಾಪಗ್ರಸ್ತನಾಗಿದ್ದಾನೆ.”


ಏಕೆಂದರೆ ಒಬ್ಬನ ಆಲೋಚನೆಯು ಅವನ ಪಾಪಾಧೀನಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ, ಅವನು ದೇವರಿಗೆ ವಿರೋಧವಾಗಿದ್ದಾನೆ. ಅವನು ದೇವರ ನಿಯಮಕ್ಕೆ ವಿಧೇಯನಾಗುವುದೂ ಇಲ್ಲ್ಲ, ವಿಧೇಯನಾಗಲು ಸಾಧ್ಯವಿರುವುದೂ ಇಲ್ಲ.


ನಾನು ಧರ್ಮಶಾಸ್ತ್ರಕ್ಕಾಗಿ ಜೀವಿಸುವುದನ್ನು ತೊರೆದುಬಿಟ್ಟೆನು. ನನ್ನನ್ನು ಧರ್ಮಶಾಸ್ತ್ರವೇ ಕೊಂದಿತು. ಈಗ ನಾನು ದೇವರಿಗಾಗಿ ಜೀವಿಸಬೇಕೆಂದು ಧರ್ಮಶಾಸ್ತ್ರದ ಪಾಲಿಗೆ ಸತ್ತುಹೋದೆನು. ನಾನು ಕ್ರಿಸ್ತನೊಂದಿಗೆ ಶಿಲುಬೆಗೇರಿಸಲ್ಪಟ್ಟೆನು.


ಧರ್ಮಶಾಸ್ತ್ರದಿಂದಾಗುವ ನೀತಿಯ ಬಗ್ಗೆ, “ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಜೀವವನ್ನು ಪಡೆದುಕೊಳ್ಳಲು ಬಯಸುವವನು, ಧರ್ಮಶಾಸ್ತವು ಹೇಳುವ ಕಾರ್ಯಗಳನ್ನು ಮಾಡಲೇಬೇಕು” ಎಂದು ಮೋಶೆ ಹೇಳಿದ್ದಾನೆ.


ಪಾಪವು ಆ ಆಜ್ಞೆಯನ್ನು ಬಳಸಿಕೊಂಡು ನನ್ನನ್ನು ವಂಚಿಸಿ, ನನ್ನಲ್ಲಿ ಆತ್ಮಿಕ ಮರಣವನ್ನು ಉಂಟುಮಾಡಿತು.


ಹಿಂದಿನ ಕಾಲದಲ್ಲಿ, ಧರ್ಮಶಾಸ್ತ್ರವು ನಮ್ಮನ್ನು ಸೆರೆಯಾಳುಗಳಂತೆ ಬಂಧಿಸಿತ್ತು. ಆದರೆ ನಮ್ಮ ಹಳೆಯ ಸ್ವಭಾವವು ಸತ್ತುಹೋದ ಕಾರಣ ನಾವು ಧರ್ಮಶಾಸ್ತ್ರದಿಂದ ಬಿಡುಗಡೆಯಾದೆವು. ಆದ್ದರಿಂದ ಈಗ ನಾವು ಲಿಖಿತ ನಿಯಮಗಳೊಡನೆ ಹಳೇ ರೀತಿಯಲ್ಲಿ ದೇವರ ಸೇವೆಮಾಡದೆ ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ದೇವರ ಸೇವೆ ಮಾಡುತ್ತೇವೆ.


ನನ್ನ ಸಹೋದರ ಸಹೋದರಿಯರೇ, ಇದೇ ರೀತಿಯಲ್ಲಿ ನಿಮ್ಮ ಹಳೆಯ ಸ್ವಭಾವವು ಸತ್ತುಹೋಯಿತು; ನೀವು ಕ್ರಿಸ್ತನ ದೇಹದ ಮೂಲಕ ಧರ್ಮಶಾಸ್ತ್ರದಿಂದ ಬಿಡುಗಡೆಯಾದಿರಿ. ಈಗ ನೀವು, ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಾತನಿಗೆ ಸೇರಿದವರಾಗಿದ್ದೀರಿ. ನಾವು ದೇವರಿಗೋಸ್ಕರ ಫಲವನ್ನು ಫಲಿಸುವುದಕ್ಕಾಗಿ ಕ್ರಿಸ್ತನಿಗೆ ಸೇರಿದವರಾಗಿದ್ದೇವೆ.


ಅದಕ್ಕೆ ಅವನು, “ನಾನು ಚಿಕ್ಕಂದಿನಿಂದಲೂ ಆ ಆಜ್ಞೆಗಳಿಗೆಲ್ಲಾ ವಿಧೇಯನಾಗಿದ್ದೇನೆ!” ಎಂದು ಹೇಳಿದನು.


ಹಿರಿಮಗನು ತಂದೆಗೆ, ‘ನಾನು ಗುಲಾಮನಂತೆ ನಿನಗೆ ಅನೇಕ ವರ್ಷಗಳವರೆಗೆ ಸೇವೆಮಾಡಿದೆನು! ನಾನು ಯಾವಾಗಲೂ ನಿನ್ನ ಅಪ್ಪಣೆಗಳಿಗೆ ವಿಧೇಯನಾದೆನು. ಆದರೆ ನೀನು ನನಗೋಸ್ಕರ ಎಂದೂ ಒಂದು ಆಡನ್ನಾಗಲಿ ಕೊಯ್ಯಲಿಲ್ಲ. ನನಗಾಗಿ ಮತ್ತು ನನ್ನ ಸ್ನೇಹಿತರಿಗಾಗಿ ನೀನೆಂದೂ ಒಂದು ಔತಣಕೂಟವನ್ನು ಏರ್ಪಡಿಸಲಿಲ್ಲ.


ಆ ಯುವಕನು, “ನಾನು ಇವೆಲ್ಲವುಗಳಿಗೆ ವಿಧೇಯನಾಗಿದ್ದೇನೆ. ನಾನು ಬೇರೆ ಏನಾದರೂ ಮಾಡಬೇಕೇ?” ಎಂದು ಕೇಳಿದನು.


ದುಷ್ಟರು ನನ್ನನ್ನು ಸುತ್ತುಗಟ್ಟಿದ್ದಾರೆ ಅವರು ಅಸಂಖ್ಯಾತರಾಗಿದ್ದಾರೆ. ನನ್ನ ಪಾಪಗಳು ನನ್ನನ್ನು ಹಿಡಿದಿರುವುದರಿಂದ ಅವುಗಳಿಂದ ತಪ್ಪಿಸಿಕೊಳ್ಳಲಾರೆ. ನನ್ನ ತಲೆಯ ಕೂದಲುಗಳಿಗಿಂತಲೂ ನನ್ನ ಪಾಪಗಳು ಹೆಚ್ಚಾಗಿವೆ. ನಾನು ಧೈರ್ಯವನ್ನು ಕಳೆದುಕೊಂಡಿರುವೆ.


ಆದರೆ ಪಾಪವು ಆ ಆಜ್ಞೆಯನ್ನೇ ಬಳಸಿಕೊಂಡು ನನ್ನಲ್ಲಿ ಎಲ್ಲಾ ಬಗೆಯ ದುರಾಶೆಗಳನ್ನು ಕೆರಳಿಸಿತು. ಆದ್ದರಿಂದ ಆ ಆಜ್ಞೆಯಿಂದಾಗಿ ಪಾಪವು ನನ್ನ ಬಳಿಗೆ ಬಂದಿತು. ಆದರೆ ಧರ್ಮಶಾಸ್ತ್ರವಿಲ್ಲದಿದ್ದರೆ, ಪಾಪಕ್ಕೆ ಅಧಿಕಾರವೇ ಇಲ್ಲ.


ನಾನು ಪಾಪದ ನಿಮಿತ್ತ ಆತ್ಮಿಕವಾಗಿ ಸತ್ತುಹೋದೆನು. ಜೀವವನ್ನು ತರಬೇಕಾಗಿದ್ದ ಆಜ್ಞೆಯೇ ನನಗೆ ಮರಣವನ್ನು ತಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು