Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:17 - ಪರಿಶುದ್ದ ಬೈಬಲ್‌

17 ನಾವು ದೇವರ ಮಕ್ಕಳಾಗಿದ್ದರೆ, ಬಾಧ್ಯರಾಗಿದ್ದೇವೆ. ಹೌದು, ದೇವರಿಗೆ ಬಾಧ್ಯರಾಗಿದ್ದೇವೆ ಮತ್ತು ಕ್ರಿಸ್ತನೊಂದಿಗೆ ಬಾಧ್ಯರಾಗಿದ್ದೇವೆ. ಹೇಗೆಂದರೆ, ಕ್ರಿಸ್ತನ ಬಾಧೆಯಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು; ಕ್ರಿಸ್ತಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮಕ್ಕಳಾಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತನೊಂದಿಗೆ ಬಾಧ್ಯರು. ಹೇಗಂದರೆ ಕ್ರಿಸ್ತನಿಗೆ ಸಂಭವಿಸಿದ ಬಾಧೆಗಳಲ್ಲಿ ನಾವು ಪಾಲುಗಾರರಾಗುವದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾವು ಈಗ ಮಕ್ಕಳಾಗಿರುವುದಾದರೆ, ಬಾಧ್ಯರಾಗಿರುತ್ತೇವೆ; ದೇವರಿಗೆ ಬಾಧ್ಯರು ಮತ್ತು ಕ್ರಿಸ್ತ ಯೇಸುವಿನೊಂದಿಗೆ ಸಹಬಾಧ್ಯರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನ ಶ್ರಮೆಗಳಲ್ಲಿ ನಿಜವಾಗಿಯೂ ಪಾಲುಗಾರರಾಗಿದ್ದರೆ, ಅವರ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅಮಿ ತೆಚಿ ಪೊರಾ ಹೊಯ್ ಹೊಲ್ಯಾರ್, ತೆನಿ ಅಪ್ನಾಚ್ಯಾ ಲೊಕಾಕ್ನಿ ಮನುನ್ ಥವಲ್ಲ್ಯಾ ಆಶಿರ್ವಾದಾಚ್ಯಾ ಆಸ್ತಿಚೆ ವಾರಿಸ್ದಾರಿಬಿ ಹೊತಾಂವ್, ಕಶ್ಯಾಕ್ ಮಟ್ಲ್ಯಾರ್ ಅಮಿ ಕ್ರಿಸ್ತಾಚ್ಯಾ ಕಸ್ಟಾತ್ನಿ ಭಾಗ್ ಘೆಟ್ಲಾಂವ್ ತರ್ ತೆಚ್ಯಾ ಮಹಿಮೆತ್‍ಬಿ ಭಾಗ್ ಘೆತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:17
35 ತಿಳಿವುಗಳ ಹೋಲಿಕೆ  

ಆದ್ದರಿಂದ ಈಗ ನೀನು ಮೊದಲಿನಂತೆ ಗುಲಾಮನಲ್ಲ. ನೀನು ದೇವರ ಮಗನು. ನೀನು ದೇವರ ಮಗನಾಗಿರುವುದರಿಂದ ಆತನು ನಿನ್ನನ್ನು ಬಾಧ್ಯಸ್ತನನ್ನಾಗಿಯೂ ಮಾಡಿದ್ದಾನೆ.


ನೀವು ಕ್ರಿಸ್ತನವರಾಗಿದ್ದೀರಿ. ಆದ್ದರಿಂದ ನೀವು ಅಬ್ರಹಾಮನ ಸಂತಾನದವರು. ದೇವರು ಅವನಿಗೆ ಮಾಡಿದ ವಾಗ್ದಾನದ ಪ್ರಕಾರ ನೀವೆಲ್ಲರೂ ದೇವರ ಆಶೀರ್ವಾದಗಳನ್ನು ಪಡೆದುಕೊಳ್ಳುವಿರಿ.


ಇದು ಆ ರಹಸ್ಯಸತ್ಯ: ಯೆಹೂದ್ಯರಲ್ಲದವರು ಸುವಾರ್ತೆಯ ಮೂಲಕ ಕ್ರಿಸ್ತಯೇಸುವಿನಲ್ಲಿ ಇರುವವರಾಗಿ ಯೆಹೂದ್ಯರೊಂದಿಗೆ ಬಾಧ್ಯರೂ ಒಂದೇ ದೇಹಕ್ಕೆ ಸೇರಿದವರೂ ಅಬ್ರಹಾಮನಿಗುಂಟಾದ ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆ.


ಜಯಗಳಿಸುವವನು ಇದೆಲ್ಲವನ್ನು ಪಡೆಯುತ್ತಾನೆ. ನಾನು ಅವನ ದೇವರಾಗಿರುತ್ತೇನೆ, ಅವನು ನನ್ನ ಮಗನಾಗಿರುತ್ತಾನೆ.


ಆದರೆ ನೀವು ಕ್ರಿಸ್ತನ ಸಂಕಟಗಳನ್ನು ಹಂಚಿಕೊಳ್ಳುತ್ತಿರುವುದರಿಂದ ಸಂತೋಷಿಸಿರಿ. ಕ್ರಿಸ್ತನು ತನ್ನ ಮಹಿಮೆಯನ್ನು ತೋರ್ಪಡಿಸುವಾಗ ನೀವು ಸಂತೋಷಪಡುವಿರಿ ಮತ್ತು ಆನಂದಿಸುವಿರಿ.


ದೇವರು ತನ್ನ ಮಕ್ಕಳಿಗೆ ನೀಡುವ ಆಶೀರ್ವಾದಗಳಲ್ಲಿ ಈಗ ನಮಗೆ ನಿರೀಕ್ಷೆಯಿದೆ. ಅವು ನಿಮಗಾಗಿ ಪರಲೋಕದಲ್ಲಿ ಇಡಲ್ಪಟ್ಟಿವೆ. ಅವು ಹಾಳಾಗುವುದಿಲ್ಲ, ನಾಶವಾಗುವುದಿಲ್ಲ ಮತ್ತು ಸೌಂದರ್ಯವನ್ನು ಕಳೆದುಕೊಳ್ಳುವುದಿಲ್ಲ.


ದೇವರು ತನ್ನ ಕೃಪೆಯಿಂದ ನಮ್ಮನ್ನು ನೀತಿವಂತರನ್ನಾಗಿ ಮಾಡಿದನು. ನಾವು ನಿತ್ಯಜೀವವನ್ನು ಪಡೆಯುವಂತೆ ಆತನು ನಮಗೆ ಪವಿತ್ರಾತ್ಮನನ್ನು ಕೊಟ್ಟನು. ಅದೇ ನಮ್ಮ ನಿರೀಕ್ಷೆ.


ಹಾಗೆಯೇ ದೇವರು ತನ್ನ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವ ಜನರಿಗೆ ತನ್ನ ಸಂಕಲ್ಪವು ಸ್ಥಿರವಾದದ್ದು ಎಂಬುದನ್ನು ಸ್ಪಷ್ಟಪಡಿಸಲು ಆಣೆಯಿಟ್ಟು ನಿಶ್ಚಯಪಡಿಸಿದನು.


“ತಂದೆಯೇ, ನೀನು ನನಗೆ ಕೊಟ್ಟಿರುವ ಇವರು, ನಾನು ಇರುವಲ್ಲೆಲ್ಲಾ ನನ್ನೊಂದಿಗೆ ಇರಬೇಕೆಂದು ಮತ್ತು ನನ್ನ ಮಹಿಮೆಯನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲೇ ನೀನು ನನ್ನನ್ನು ಪ್ರೀತಿಸಿದ್ದರಿಂದ ನೀನೇ ನನಗೆ ಈ ಮಹಿಮೆಯನ್ನು ಕೊಟ್ಟೆ.


ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.


ನೀವು ಕ್ರಿಸ್ತನಲ್ಲಿ ನಂಬಿಕೆಯಿಟ್ಟದ್ದು ದೇವರ ಅನುಗ್ರಹದಿಂದಲೇ. ಅಷ್ಟು ಮಾತ್ರವೇ ಅಲ್ಲ, ಕ್ರಿಸ್ತನಿಗೋಸ್ಕರ ಕಷ್ಟಪಡುವುದೂ ಸಹ ನಿಮಗೆ ಅನುಗ್ರಹವಾಗಿ ದೊರೆಯಿತು. ಇವೆರಡೂ ಕ್ರಿಸ್ತನಿಗೆ ಮಹಿಮೆಯನ್ನು ಉಂಟುಮಾಡುತ್ತವೆ.


ನಿಮ್ಮ ವಿಷಯದಲ್ಲಿ ನಮಗೆ ಬಲವಾದ ನಿರೀಕ್ಷೆಯಿದೆ. ನೀವು ನಮ್ಮ ಬಾಧೆಗಳಲ್ಲಿ ಪಾಲುಗಾರರಾಗಿರುವುದರಿಂದ ನಮ್ಮ ಆದರಣೆಯಲ್ಲಿಯೂ ನೀವು ಪಾಲುಗಾರರಾಗುತ್ತೀರಿ ಎಂಬುದು ನನಗೆ ತಿಳಿದಿದೆ.


ಒಬ್ಬನು ಪಾಪ ಮಾಡಿದನು, ಆ ಒಬ್ಬನ ದೆಸೆಯಿಂದ ಮರಣವು ಎಲ್ಲಾ ಜನರ ಮೇಲೆ ಆಳ್ವಿಕೆ ನಡೆಸಿತು. ಆದರೆ ಈಗ ಕೆಲವು ಜನರು ದೇವರ ಪೂರ್ಣ ಕೃಪೆಯನ್ನು ಮತ್ತು ನೀತಿವಂತರನ್ನಾಗಿ ಮಾಡುವ ಆತನ ಉಚಿತವಾದ ಮಹಾ ಕೊಡುಗೆಯನ್ನು ಸ್ವೀಕರಿಸಿಕೊಳ್ಳುವರು. ನಿಶ್ಚಯವಾಗಿಯು ಅವರು ಯೇಸು ಕ್ರಿಸ್ತನೆಂಬ ಆ ಒಬ್ಬ ಪುರುಷನ ಮೂಲಕ, ನಿಜವಾದ ಜೀವವನ್ನು ಹೊಂದಿಕೊಳ್ಳುವರು ಮತ್ತು ಆಳುವರು.


ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.


“ನಾನು ಜಯಗಳಿಸಿ ನನ್ನ ತಂದೆಯೊಡನೆ ಆತನ ಸಿಂಹಾಸನದ ಮೇಲೆ ಕುಳಿತುಕೊಂಡೆನು. ಅಂತೆಯೇ ಜಯಗಳಿಸುವ ಪ್ರತಿಯೊಬ್ಬನೂ ನನ್ನ ಸಂಗಡ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು.


“ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ.


ಬಳಿಕ ಯೇಸು ತನ್ನ ಶಿಷ್ಯರಿಗೆ, “ನನ್ನನ್ನು ಹಿಂಬಾಲಿಸಲು ಅಪೇಕ್ಷಿಸುವವನು ತನಗೆ ಇಷ್ಟವಾದದ್ದನ್ನು ತ್ಯಜಿಸಬೇಕು. ಅವನು ತನಗೆ ಕೊಟ್ಟಿರುವ ಶಿಲುಬೆಯನ್ನು (ಸಂಕಟ) ಸ್ವೀಕರಿಸಿಕೊಂಡು ನನ್ನನ್ನು ಹಿಂಬಾಲಿಸಬೇಕು.


ಪವಿತ್ರಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: “ದೇವರು ತನ್ನನ್ನು ಪ್ರೀತಿಸುವ ಜನರಿಗೆ ಸಿದ್ಧಪಡಿಸಿರುವುದನ್ನು ಯಾವ ಕಣ್ಣೂ ಕಾಣಲಿಲ್ಲ. ಯಾವ ಕಿವಿಯೂ ಕೇಳಲಿಲ್ಲ. ಯಾವ ವ್ಯಕ್ತಿಯೂ ಊಹಿಸಿಕೊಳ್ಳಲಿಲ್ಲ.”


ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.


“ಈಗ ನಾನು ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತಿದ್ದೇನೆ. ಆತನ ಕೃಪಾವಾಕ್ಯವು ನಿಮ್ಮ ಭಕ್ತಿಯನ್ನು ವೃದ್ಧಿಪಡಿಸಿ ಪರಿಶುದ್ಧರ ಬಾಧ್ಯತೆಯಲ್ಲಿ ಪಾಲುಗಾರರನ್ನಾಗಿ ಮಾಡುವುದು.


ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


“ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು.


ಕ್ರಿಸ್ತನು ತನ್ನ ಮಹಿಮೆಯನ್ನು ಪ್ರವೇಶಿಸುವ ಮೊದಲು ಇಂಥ ಶ್ರಮೆಗಳನ್ನು ಅನುಭವಿಸಬೇಕು ಎಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.


ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”


ನಾವು ಕ್ರಿಸ್ತನ ಅನೇಕ ಬಾಧೆಗಳಲ್ಲಿ ಪಾಲುಗಾರರಾಗುತ್ತೇವೆ. ಅದೇ ರೀತಿಯಲ್ಲಿ, ಕ್ರಿಸ್ತನ ಮೂಲಕ ಹೇರಳವಾದ ಆದರಣೆಯು ನಮಗೆ ಬರುತ್ತದೆ.


ಕ್ರಿಸ್ತನನ್ನೂ ಪುನರುತ್ಥಾನದ ಶಕ್ತಿಯನ್ನೂ ತಿಳಿದುಕೊಂಡು ಆತನ ಸಂಕಟದಲ್ಲಿ ಪಾಲುಗಾರನಾಗಿ ಆತನ ಮರಣದಲ್ಲಿ ಆತನಂತಾಗಬೇಕೆಂಬುದೇ ನನ್ನ ಅಪೇಕ್ಷೆ.


ನಾನು ನಿಮಗಾಗಿ ಅನುಭವಿಸಿದ ಬಾಧೆಗಳಿಂದ ನನಗೆ ಸಂತೋಷವಾಗಿದೆ. ಕ್ರಿಸ್ತನು ಸಭೆಯೆಂಬ ತನ್ನ ದೇಹದ ಮೂಲಕ ಇನ್ನೂ ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಈ ಸಂಕಟಗಳಲ್ಲಿ ನಾನು ಅನುಭವಿಸಬೇಕಾದವುಗಳನ್ನು ಆತನ ದೇಹಕ್ಕೋಸ್ಕರ ನನ್ನ ದೇಹದಲ್ಲಿ ಅನುಭವಿಸುತ್ತೇನೆ.


ಈಗ, ಕೊನೆಯ ದಿನಗಳಲ್ಲಿ ದೇವರು ಮತ್ತೆ ನಮ್ಮ ಜೊತೆಯಲ್ಲಿ ತನ್ನ ಮಗನ ಮೂಲಕ ಮಾತನಾಡಿದನು. ದೇವರು ತನ್ನ ಮಗನ ಮೂಲಕ ಲೋಕವನ್ನೆಲ್ಲ ಸೃಷ್ಟಿಸಿ, ಸಮಸ್ತಕ್ಕೂ ಆತನನ್ನೇ ಬಾಧ್ಯಸ್ತನನ್ನಾಗಿ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು