Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:27 - ಪರಿಶುದ್ದ ಬೈಬಲ್‌

27 ಅಂತರಂಗವನ್ನು ನೋಡಬಲ್ಲ ದೇವರಿಗೆ ಪವಿತ್ರಾತ್ಮನ ಮನಸ್ಸಿನಲ್ಲಿರುವುದೆಲ್ಲಾ ಗೊತ್ತಿದೆ, ಏಕೆಂದರೆ ದೇವರ ಚಿತ್ತಕ್ಕನುಸಾರವಾಗಿಯೇ ಪವಿತ್ರಾತ್ಮನು ದೇವಜನರಿಗೋಸ್ಕರ ದೇವರಲ್ಲಿ ವಿಜ್ಞಾಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದರೆ ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅಂತರಂಗಗಳನ್ನು ಈಕ್ಷಿಸುವ ದೇವರು ಪವಿತ್ರಾತ್ಮರ ಇಂಗಿತವೇನೆಂದು ಬಲ್ಲರು. ಏಕೆಂದರೆ, ದೇವರ ಚಿತ್ತದ ಪ್ರಕಾರವೇ ಪವಿತ್ರಾತ್ಮರು ದೇವಜನರಿಗಾಗಿ ಬಿನ್ನವಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದರೆ ಹೃದಯಗಳನ್ನು ಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರು ಪವಿತ್ರಾತ್ಮರ ಮನಸ್ಸನ್ನು ಬಲ್ಲವರಾಗಿದ್ದಾರೆ. ಏಕೆಂದರೆ ಪವಿತ್ರಾತ್ಮರು ದೇವಜನರಿಗಾಗಿ ದೇವರ ಚಿತ್ತದ ಪ್ರಕಾರ ವಿಜ್ಞಾಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅನಿ ಅಮ್ಚ್ಯಾ ಮನಾನಿತ್ಲೊ ಘುಟ್ಟ್ ಗೊತ್ತ್ ಹೊತ್ತ್ಯಾ ದೆವಾಕ್ ಆತ್ಮ್ಯಾಚಿ ಆಶಾ ಕಾಯ್ ಮನುನ್ ಗೊತ್ತ್ ಹಾಯ್; ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಮರ್ಜಿ ಸರ್ಕೆ ರಾವ್ನ್, ದೆವಾಚ್ಯಾ ಖಾಸಿ ಲೊಕಾಂಚ್ಯಾ ಸಾಟ್ನಿಚ್ ತೊ ಮಾಗುನ್‍ಗೆತ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:27
28 ತಿಳಿವುಗಳ ಹೋಲಿಕೆ  

ನಾನೇ ಯೆಹೋವನು, ನಾನು ಮನುಷ್ಯನ ಹೃದಯದ ಆಳವನ್ನು ನೋಡಬಲ್ಲೆ, ಮನುಷ್ಯನ ಬುದ್ಧಿಯನ್ನು ಪರೀಕ್ಷಿಸಬಲ್ಲೆ. ಆದ್ದರಿಂದ ಪ್ರತಿಯೊಬ್ಬ ಮನುಷ್ಯನಿಗೆ ತಕ್ಕ ಪ್ರತಿಫಲವನ್ನು ನಾನು ನಿರ್ಧರಿಸಬಲ್ಲೆ. ಪ್ರತಿಯೊಬ್ಬ ಮನುಷ್ಯನಿಗೆ ಅವನ ಕೆಲಸಕ್ಕೆ ತಕ್ಕಂತೆ ಸರಿಯಾಗಿ ಫಲವನ್ನು ಕೊಡುವೆನು.


ಹೌದು, ಕ್ರಿಸ್ತನ ಮೂಲಕ ನಾವೆಲ್ಲರೂ ಒಬ್ಬ ಆತ್ಮನಿಂದ ನಮ್ಮ ತಂದೆಯಾದ ದೇವರ ಬಳಿಗೆ ಬರಲು ಶಕ್ತರಾಗಿದ್ದೇವೆ.


ದೇವಜನರು ದೋಷಿಗಳೆಂದು ಯಾರು ಹೇಳಬಲ್ಲರು? ಯಾರು ಇಲ್ಲ! ಕ್ರಿಸ್ತ ಯೇಸು ನಮಗೋಸ್ಕರ ಪ್ರಾಣಕೊಟ್ಟನು. ಅಷ್ಟೇ ಅಲ್ಲ, ಆತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಈಗ ಆತನು ದೇವರ ಬಲಗಡೆಯಲ್ಲಿದ್ದಾನೆ ಮತ್ತು ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಿದ್ದಾನೆ.


ಅಪೊಸ್ತಲರು ಹೀಗೆ ಪ್ರಾರ್ಥಿಸಿದರು: “ಪ್ರಭುವೇ, ನೀನು ಎಲ್ಲಾ ಜನರ ಮನಸ್ಸುಗಳನ್ನು ತಿಳಿದಿರುವೆ. ಈ ಕೆಲಸವನ್ನು ಮಾಡುವುದಕ್ಕಾಗಿ ಈ ಇಬ್ಬರಲ್ಲಿ ನೀನು ಯಾರನ್ನು ಆರಿಸಿಕೊಂಡಿರುವೆ ಎಂಬುದನ್ನು ನಮಗೆ ತೋರಿಸು. ಯೂದನು ಈ ಕೆಲಸಕ್ಕೆ ವಿಮುಖನಾಗಿ ತಾನು ಸೇರಬೇಕಿದ್ದಲ್ಲಿಗೆ ಹೊರಟುಹೋದನು. ಪ್ರಭುವೇ, ಅವನ ಸ್ಥಳದಲ್ಲಿ ಅಪೊಸ್ತಲನಾಗಿ ಯಾರು ನೇಮಕಗೊಳ್ಳಬೇಕೆಂಬುದನ್ನು ನಮಗೆ ತೋರಿಸು!”


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


ಜನರು ಬೆಳ್ಳಿಬಂಗಾರವನ್ನು ಬೆಂಕಿಗೆ ಹಾಕಿ ಶುದ್ಧಮಾಡುವರು. ಆದರೆ ಮನುಷ್ಯರ ಹೃದಯಗಳನ್ನು ಶುದ್ಧಮಾಡುವವನು ಯೆಹೋವನೇ.


ಎಲ್ಲಾ ಜನರ ಆಲೋಚನೆಗಳನ್ನು ಬಲ್ಲ ದೇವರು ಯೆಹೂದ್ಯರಲ್ಲದ ಜನರನ್ನೂ ಸ್ವೀಕರಿಸಿಕೊಂಡನು. ದೇವರು ನಮಗೆ ಪವಿತ್ರಾತ್ಮನನ್ನು ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮನನ್ನು ಕೊಟ್ಟು ಇದನ್ನು ರುಜುವಾತುಪಡಿಸಿದ್ದಾನೆ.


ದೇವರಿಗೆ ಇವು ಖಂಡಿತವಾಗಿ ತಿಳಿದಿವೆ. ನಮ್ಮ ಅಂತರಾಳದ ರಹಸ್ಯಗಳನ್ನು ಸಹ ಆತನು ಬಲ್ಲನು.


ನಾವು ಸುವಾರ್ತೆಯನ್ನು ತಿಳಿಸುತ್ತೇವೆ. ಏಕೆಂದರೆ ದೇವರು ನಮ್ಮನ್ನು ಪರಿಶೋಧಿಸಿದ್ದಾನೆ ಮತ್ತು ಸುವಾರ್ತೆಯನ್ನು ತಿಳಿಸಲು ನಮ್ಮನ್ನು ನೇಮಿಸಿದ್ದಾನೆ. ಆದುದರಿಂದ ಜನರನ್ನು ಮೆಚ್ಚಿಸಲು ಪ್ರಯತ್ನಿಸದೆ ನಮ್ಮ ಹೃದಯಗಳನ್ನು ಪರೀಕ್ಷಿಸುವಾತನಾದ ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತೇವೆ.


ನೀವು ಅವರಂತಾಗಬೇಡಿ. ನೀವು ಕೇಳುವುದಕ್ಕೆ ಮೊದಲೇ ನಿಮಗೆ ಏನೇನು ಬೇಕು ಎಂಬುದು ನಿಮ್ಮ ತಂದೆಗೆ ತಿಳಿದಿದೆ.


ಸರ್ವಶಕ್ತನಾದ ಯೆಹೋವನೇ, ನೀನು ಒಳ್ಳೆಯವರನ್ನು ಪರೀಕ್ಷಿಸುವೆ. ನೀನು ಒಬ್ಬ ವ್ಯಕ್ತಿಯ ಹೃದಯವನ್ನು ಮತ್ತು ಬುದ್ಧಿಯನ್ನು ಆಳವಾಗಿ ಪರೀಕ್ಷಿಸಿನೋಡುವೆ. ನಾನು ಅವರ ವಿರುದ್ಧ ನನ್ನ ಅಭಿಪ್ರಾಯಗಳನ್ನು ನಿನಗೆ ತಿಳಿಸಿದ್ದೇನೆ. ನೀನು ಅವರಿಗೆ ತಕ್ಕ ಶಿಕ್ಷೆಯನ್ನು ವಿಧಿಸಿರುವದನ್ನು ನನ್ನ ಕಣ್ಣುಗಳು ನೋಡಲಿ.


ಆದರೆ ಯೆಹೋವನೇ, ನೀನು ನ್ಯಾಯಪರನಾದ ತೀರ್ಪುಗಾರ. ಜನರ ಹೃದಯವನ್ನು ಮತ್ತು ಬುದ್ಧಿಯನ್ನು ಹೇಗೆ ಪರೀಕ್ಷಿಸಬೇಕೆಂದು ನಿನಗೆ ಗೊತ್ತು. ನಾನು ನನ್ನ ವಾದವನ್ನು ನಿನ್ನ ಮುಂದೆ ಮಂಡಿಸುತ್ತೇನೆ ಮತ್ತು ನೀನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು ಎಂದು ಅರಿಕೆ ಮಾಡಿಕೊಳ್ಳುತ್ತೇನೆ.


ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.


ಮತ್ತು ನೀವು ನನ್ನ ಹೆಸರಿನಲ್ಲಿ ಏನಾದರೂ ಬೇಡಿಕೊಂಡರೆ, ನಾನು ನಿಮಗೋಸ್ಕರ ಅದನ್ನು ನೆರವೇರಿಸುವೆನು. ಆಗ ಮಗನ ಮೂಲಕವಾಗಿ ತಂದೆಗೆ ಮಹಿಮೆ ಆಗುವುದು.


ಯೇಸು ಫರಿಸಾಯರಿಗೆ ಹೀಗೆಂದನು, “ನೀವು ಜನರ ಮುಂದೆ ನಿಮ್ಮನ್ನು ಒಳ್ಳೆಯವರೆಂದು ತೋರಿಸಿಕೊಳ್ಳುತ್ತೀರಿ. ಆದರೆ ನಿಜವಾಗಿಯೂ ನಿಮ್ಮ ಹೃದಯದಲ್ಲಿರುವುದು ದೇವರಿಗೆ ಗೊತ್ತು. ಜನರ ದೃಷ್ಟಿಯಲ್ಲಿ ಅಮೂಲ್ಯವಾದುವುಗಳು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿವೆ.


ಕೆಟ್ಟವರನ್ನು ದಂಡಿಸು, ಒಳ್ಳೆಯವರಿಗೆ ಸಹಾಯಮಾಡು. ದೇವರೇ ನೀನು ಒಳ್ಳೆಯವನು; ಮನುಷ್ಯರ ಅಂತರಾಳವನ್ನು ನೀನು ಪರಿಶೋಧಿಸಬಲ್ಲೆ.


ನೀವು ಮಾಡಿದ ತಪ್ಪುಗಳನ್ನು ಒಬ್ಬರಿಗೊಬ್ಬರು ಯಾವಾಗಲೂ ಹೇಳಿಕೊಳ್ಳಿರಿ. ಬಳಿಕ ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ನೀವು ಹೀಗೆ ಮಾಡಿದರೆ, ದೇವರು ನಿಮ್ಮನ್ನು ಗುಣಪಡಿಸುವನು. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಲವಾಗಿದೆ.


ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.


ಒಬ್ಬನ ಆಲೋಚನೆಯು ಅವನ ಪಾಪ ಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ ಅವನಿಗೆ ಆತ್ಮಿಕ ಮರಣವಾಗುತ್ತದೆ. ಆದರೆ ಒಬ್ಬನ ಆಲೋಚನೆಯು ಪವಿತ್ರಾತ್ಮನ ಹತೋಟಿಗೆ ಒಳಪಟ್ಟಿದ್ದರೆ, ಅವನಲ್ಲಿ ಜೀವವೂ ಸಮಾಧಾನವೂ ಇರುತ್ತದೆ.


ನನ್ನ ಒಡೆಯನೇ, ನೀನು ನನ್ನ ನರಳಾಟವನ್ನು ಕೇಳಿರುವೆ. ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ.


ನನ್ನ ದೇವರೇ, ಜನರ ಹೃದಯಗಳನ್ನು ಪರೀಕ್ಷಿಸುವೆ. ಜನರು ಒಳ್ಳೆಯ ಕಾರ್ಯವನ್ನು ಯಥಾರ್ಥವಾದ ಹೃದಯದಿಂದ ಮಾಡುವಾಗ ನೀನು ಸಂತೋಷಪಡುವೆ. ಈ ವಸ್ತುಗಳನ್ನೆಲ್ಲಾ ನಾನು ಶುದ್ಧಹೃದಯದಿಂದ ಕೊಡುತ್ತಿದ್ದೇನೆ. ಇಲ್ಲಿ ನೆರೆದುಬಂದಿರುವವರೆಲ್ಲರೂ ನಿನಗೆ ಕಾಣಿಕೆಯನ್ನು ಸ್ವಯಿಚ್ಛೆಯಿಂದ ಕೊಟ್ಟಿದ್ದಾರೆ.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.


ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ಸಂಪೂರ್ಣವಾಗಿ ತಿಳಿದುಕೊಂಡಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು