Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:38 - ಪರಿಶುದ್ದ ಬೈಬಲ್‌

38-39 ಹೌದು, ದೇವರ ಪ್ರೀತಿಯಿಂದ ನಮ್ಮನ್ನು ಯಾವುದೂ ಬೇರ್ಪಡಿಸಲಾರದೆಂದು ನನಗೆ ನಿಶ್ಚಯವಾಗಿ ತಿಳಿದಿದೆ. ಮರಣವಾಗಲಿ ಜೀವವಾಗಲಿ ದೇವದೂತರಾಗಲಿ ದುರಾತ್ಮಗಳಾಗಲಿ ಈಗಿನ ಸಂಗತಿಗಳಾಗಲಿ ಮುಂದಿನ ಸಂಗತಿಗಳಾಗಲಿ ಯಾವ ಶಕ್ತಿಗಳೇ ಆಗಲಿ ಮೇಲಿನ ಸಂಗತಿಗಳಾಗಲಿ ಕೆಳಗಿನ ಸಂಗತಿಗಳಾಗಲಿ ಅಥವಾ ಇಡೀ ಜಗತ್ತಿನಲ್ಲಿರುವ ಯಾವುದೇ ಸಂಗತಿಗಳಾಗಲಿ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಸಾವಾಗಲಿ ಜೀವವಾಗಲಿ, ದೇವದೂತರಾಗಲಿ ದುರಾತ್ಮರಾಗಲಿ, ಈಗಿನ ಸಂತತಿಗಳೇ ಆಗಲಿ, ಭವಿಷ್ಯದ ಆಗುಹೋಗುಗಳೇ ಆಗಲಿ, ಯಾವ ಶಕ್ತಿಗಳೇ ಆಗಲಿ ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ತೋರಿಬಂದ ದೈವಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಹೇಗಂದರೆ ಮರಣವಾಗಲಿ ಜೀವವಾಗಲಿ ದೇವದೂತರಾಗಲಿ ದುರಾತ್ಮಗಳಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಏಕೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ವರ್ತಮಾನಕಾಲದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ, ಯಾವುದೇ ಶಕ್ತಿಯಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಕಶ್ಯಾಕ್ ಮಟ್ಲ್ಯಾರ್, ಮಿಯಾ ಖರೆಚ್ ಸಾಂಗ್ತಾ, ಕಾಚೆನ್‍ಬಿ ಅಮ್ಕಾ ತೆಚ್ಯಾ ಪ್ರೆಮಾತ್ನಾ ಎಗ್ಳುನ್ ಧುರ್ ಕರುಕ್ ಹೊಯ್ನಾ; ಮರ್‍ನಾಕ್ ಹೊಂವ್ದಿತ್, ಜಿವಾಕ್ ಹೊಂವ್ದಿತ್, ದೆವಾಚ್ಯಾ ದುತಾಕ್ನಿ ಹೊಂವ್ದಿತ್, ಕಸ್ಲೊಬಿ ಅಧಿಕಾರ್ ಹೊಂವ್ದಿತ್ ನಾತರ್ ಅಧಿಕಾರಿ ಹೊಂವ್ದಿತ್ ,ಅತ್ತಾಚ್ಯಾ ವಿಶಯಾಕ್ನಿ ಹೊಂವ್ದಿತ್, ಫಿಡೆ ಹೊತಲ್ಯಾ ವಿಶಯಾಕ್ನಿ ಹೊಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:38
20 ತಿಳಿವುಗಳ ಹೋಲಿಕೆ  

ನನ್ನ ಕುರಿಗಳಿಗೆ ನಾನು ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ಸಾಯುವುದಿಲ್ಲ, ಮತ್ತು ಅವುಗಳನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು.


ನಾವು ಬದುಕುವುದಾಗಿದ್ದರೆ, ಪ್ರಭುವಿಗೋಸ್ಕರ ಬದುಕುತ್ತೇವೆ; ಸಾಯುವುದಾಗಿದ್ದರೆ, ಪ್ರಭುವಿಗೋಸ್ಕರ ಸಾಯುತ್ತೇವೆ. ಆದ್ದರಿಂದ ಬದುಕಿದರೂ ಸತ್ತರೂ ನಾವು ಪ್ರಭುವಿಗೆ ಸೇರಿದವರಾಗಿದ್ದೇವೆ.


ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.


ಈಗ ಯೇಸು ಪರಲೋಕಕ್ಕೆ ಹೋಗಿರುವನು. ಆತನು ದೇವರ ಬಲಗಡೆಯಲ್ಲಿದ್ದಾನೆ. ಆತನು ದೇವದೂತರನ್ನೂ ಅಧಿಕಾರಿಗಳನ್ನೂ ಶಕ್ತಿಗಳನ್ನೂ ಆಳುತ್ತಿದ್ದಾನೆ.


ಭೂಲೋಕ ಮತ್ತು ಪರಲೋಕಗಳಲ್ಲಿರುವ ಎಲ್ಲವುಗಳು, ದೃಶ್ಯ ಮತ್ತು ಅದೃಶ್ಯವಾದವುಗಳು, ಆತ್ಮಿಕ ಶಕ್ತಿಗಳು, ಪ್ರಭುತ್ವಗಳು ಆತನ ಶಕ್ತಿಯಿಂದ ನಿರ್ಮಿತವಾಗಿವೆ. ಅಧಿಪತಿಗಳು ಮತ್ತು ಅಧಿಕಾರಿಗಳು ಆತನ ಶಕ್ತಿಯಿಂದ ನಿರ್ಮಿತರಾದರು. ಸಮಸ್ತವೂ ಕ್ರಿಸ್ತನ ಮೂಲಕವಾಗಿ ಆತನಿಗೋಸ್ಕರ ಸೃಷ್ಟಿಸಲ್ಪಟ್ಟವು.


ದೇವರು ತನಗೆ ವಿರೋಧವಾಗಿದ್ದ ದೊರೆತನಗಳನ್ನೂ ಅಧಿಕಾರಗಳನ್ನೂ ಸೋಲಿಸಿ, ಅವುಗಳನ್ನು ನಿರಾಯುಧರನ್ನಾಗಿ ಮಾಡಿ ಶಿಲುಬೆಯ ವಿಜಯೋತ್ಸವದಲ್ಲಿ ಅವುಗಳನ್ನು ಇಡೀ ಲೋಕದ ಎದುರಿನಲ್ಲಿ ಸೆರೆಯಾಳುಗಳನ್ನಾಗಿ ಮೆರವಣಿಗೆ ಮಾಡಿದನು.


ದೇವರು ಕ್ರಿಸ್ತನನ್ನು ಎಲ್ಲಾ ಅಧಿಪತಿಗಳಿಗಿಂತಲೂ ಅಧಿಕಾರಿಗಳಿಗಿಂತಲೂ ಶಕ್ತಿಗಳಿಗಿಂತಲೂ ರಾಜರುಗಳಿಗಿಂತಲೂ ಪ್ರಮುಖನನ್ನಾಗಿ ಮಾಡಿದನು. ಈ ಲೋಕದಲ್ಲಾಗಲಿ ಮುಂದಿನ ಲೋಕದಲ್ಲಾಗಲಿ ಕೊಡಲ್ಪಟ್ಟಿರುವ ಯಾವುದೇ ಹೆಸರುಳ್ಳವರಿಗಿಂತಲೂ ಕ್ರಿಸ್ತನು ಪ್ರಮುಖನಾಗಿದ್ದಾನೆ.


“ನಾನು ನಂಬಿದ್ದರಿಂದಲೇ ಮಾತಾಡಿದೆನು.” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ನಮ್ಮ ನಂಬಿಕೆಯು ಸಹ ಅದೇ ರೀತಿಯಲ್ಲಿದೆ. ನಾವು ನಂಬುವುದರಿಂದಲೇ ಮಾತಾಡುತ್ತೇವೆ.


ದೇವರು ತಾನು ಮಾಡಿದ ವಾಗ್ದಾನವನ್ನು ಖಂಡಿತವಾಗಿ ನೆರವೇರಿಸಬಲ್ಲನೆಂದು ಅಬ್ರಹಾಮನು ದೃಢವಾಗಿ ನಂಬಿದನು.


ಇದು ನಮಗೆ ಆಶ್ಚರ್ಯವಾದದ್ದೇನೂ ಅಲ್ಲ. ಏಕೆಂದರೆ ಸೈತಾನನು ತಾನೇ ಪ್ರಕಾಶರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುತ್ತಾನೆ.


ಈ ಮಹಾಪುರಷರೆಲ್ಲರೂ ತಾವು ಸಾಯುವವರೆಗೂ ನಂಬಿಕೆಯುಳ್ಳವರಾಗಿದ್ದರು. ದೇವರು ತನ್ನ ಜನರಿಗೆ ವಾಗ್ದಾನ ಮಾಡಿದ್ದವುಗಳನ್ನು ಆ ಜನರು ಪಡೆಯಲಿಲ್ಲ. ಮುಂದೆ ಬಹುಕಾಲದ ನಂತರ ಬರಲಿದ್ದ ಅವುಗಳನ್ನು ನೋಡಿ ಅವರು ಸಂತೋಷಗೊಂಡರು. ಅವರು ತಾವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಅಪರಿಚಿತರಂತೆ ಇದ್ದೇವೆ ಎಂಬುದನ್ನು ಒಪ್ಪಿಕೊಂಡರು.


ಜನರು ಮಾಡುವ ಪಾಪಕ್ಕೆ ಮರಣವೇ ಸಂಬಳ. ಆದರೆ ದೇವರ ಉಚಿತವಾದ ಕೊಡುಗೆಯು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ಹೌದು, ನಾವೆಲ್ಲರೂ ಪ್ರಭುವಿಗೋಸ್ಕರವೇ ಜೀವಿಸುವವರಾಗಿದ್ದೇವೆ. ನಾವು ಜೀವಿಸುವುದಾಗಲಿ ಸಾಯುವುದಾಗಲಿ ನಮಗೋಸ್ಕರವಲ್ಲ.


ಅನಂತರ ಅಂತ್ಯ ಬರುವುದು. ಕ್ರಿಸ್ತನು ಎಲ್ಲಾ ಅಧಿಪತಿಗಳನ್ನು, ಅಧಿಕಾರಗಳನ್ನು ಮತ್ತು ಶಕ್ತಿಗಳನ್ನು ನಾಶಮಾಡುವನು. ಬಳಿಕ ಕ್ರಿಸ್ತನು ತಂದೆಯಾದ ದೇವರಿಗೆ ರಾಜ್ಯವನ್ನು ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು