Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:5 - ಪರಿಶುದ್ದ ಬೈಬಲ್‌

5 ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಜೀವಿಸುವ ಜನರು ತಮ್ಮ ಪಾಪಸ್ವಭಾವವು ಬಯಸುವ ಸಂಗತಿಗಳ ಬಗ್ಗೆ ಮಾತ್ರ ಆಲೋಚಿಸುತ್ತಾರೆ. ಆದರೆ ಆತ್ಮನಿಗನುಸಾರವಾಗಿ ಜೀವಿಸುವ ಜನರು ತಮ್ಮಿಂದ ಆತ್ಮನು ಅಪೇಕ್ಷಿಸುವ ಕಾರ್ಯಗಳ ಬಗ್ಗೆ ಆಲೋಚಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಶರೀರಭಾವವನ್ನು ಅನುಸರಿಸುವವರು ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ, ಪವಿತ್ರಾತ್ಮನನ್ನುಸರಿಸುವವರು ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯುವವರು ಶರೀರಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಮಗ್ನರಾಗಿರುತ್ತಾರೆ. ಪವಿತ್ರಾತ್ಮ ಅವರಿಗೆ ಅನುಸಾರವಾಗಿ ನಡೆಯುವವರಾದರೋ ಆತ್ಮಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಮಗ್ನರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಶರೀರಭಾವವನ್ನು ಅನುಸರಿಸುವವರು ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ. ಪವಿತ್ರಾತ್ಮನನ್ನನುಸರಿಸುವವರು ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮಾಂಸಭಾವದವರಾಗಿ ಬಾಳುವವರ ಮನಸ್ಸು ಅದಕ್ಕೆ ಸಂಬಂಧಪಟ್ಟವುಗಳ ಮೇಲಿರುತ್ತದೆ. ಆದರೆ ಪವಿತ್ರಾತ್ಮ ದೇವರಿಗೆ ಅನುಸಾರವಾಗಿ ಬಾಳುವವರ ಮನಸ್ಸು ಪವಿತ್ರಾತ್ಮ ದೇವರಿಗೆ ಸಂಬಂಧಪಟ್ಟವುಗಳ ಮೇಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮಾನ್ಸಾಚ್ಯಾ ಸ್ವಬಾವಾಕ್ ಖಾಲ್ತಿ ಹೊವ್ನ್ ಚಲ್ತಲಿ ಲೊಕಾ ಮಾನ್ಸಾಚೊ ಸ್ವಬಾವ್ ಕಾಯ್ ಸಾಂಗ್ತಾ ತೆ ಕರ್‍ತ್ಯಾತ್, ಖರೆ ಪವಿತ್ರ್ ಆತ್ಮ್ಯಾಚ್ಯಾ ಪರ್‍ಕಾರ್ ಚಲ್ತಲಿ ಲೊಕಾ ಪವಿತ್ರ್ ಆತ್ಮೊ ಕಶೆ ಚಲುಚೆ ಮನುನ್ ಸಾಂಗ್ತಾ ತಸೆ ಚಲ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:5
14 ತಿಳಿವುಗಳ ಹೋಲಿಕೆ  

ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ.


ದೇಹವು ಮಾನುಷ ತಂದೆತಾಯಿಗಳಿಂದ ಹುಟ್ಟಿದ್ದು. ಆದರೆ ಆತ್ಮಿಕ ಜೀವನವು ಆತ್ಮನಿಂದ ಹುಟ್ಟಿದ್ದು.


ಆದರೆ ನೀವು ನಿಮ್ಮ ಪಾಪಸ್ವಭಾವದ ಆಡಳಿತಕ್ಕೆ ಒಳಗಾಗಿಲ್ಲ. ದೇವರಾತ್ಮನು ನಿಮ್ಮಲ್ಲಿ ನಿಜವಾಗಿಯೂ ವಾಸವಾಗಿದ್ದರೆ, ನೀವು ಪವಿತ್ರಾತ್ಮನ ಆಡಳಿತಕ್ಕೆ ಒಳಗಾಗಿದ್ದೀರಿ ಯಾವನಲ್ಲಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ, ಅವನು ಕ್ರಿಸ್ತನಿಗೆ ಸೇರಿದವನಲ್ಲ.


ಆದರೆ ಯೇಸು ತನ್ನ ಶಿಷ್ಯರ ಕಡೆಗೆ ನೋಡಿ, ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ” ಎಂದು ಗದರಿಸಿದನು.


ನಾವು ಪ್ರಪಂಚದಲ್ಲಿ ಜೀವಿಸುತ್ತಿದ್ದೇವೆ. ಆದರೆ ಪ್ರಪಂಚದವರು ಹೊಡೆದಾಡುವ ರೀತಿಯಲ್ಲಿ ನಾವು ಹೊಡೆದಾಡುವುದಿಲ್ಲ.


ಪ್ರಭುವಿನ ಅಧಿಕಾರವನ್ನು ದ್ವೇಷಿಸುವ ಜನರನ್ನು ಮತ್ತು ತಮ್ಮ ಪಾಪಸ್ವಭಾವದ ಇಚ್ಚೆಗನುಸಾರವಾಗಿ ಕೆಟ್ಟಕಾರ್ಯಗಳನ್ನು ಮಾಡುವ ಜನರನ್ನು ದೇವರು ಹೀಗೆ ದಂಡಿಸುತ್ತಾನೆ. ಈ ಸುಳ್ಳುಬೋಧಕರು ತಮಗೆ ಬೇಕಾದದ್ದನ್ನೆಲ್ಲಾ ಮಾಡುತ್ತಾರೆ ಮತ್ತು ತಮ್ಮ ಬಗ್ಗೆ ಹೊಗಳಿಕೊಳ್ಳುತ್ತಾರೆ. ಪ್ರಭಾವದಿಂದ ಕೂಡಿರುವ ದೇವದೂತರ ಬಗ್ಗೆ ಕೆಟ್ಟದ್ದನ್ನು ಹೇಳಲು ಅವರು ಹೆದರುವುದಿಲ್ಲ.


ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಂಡುಬರುತ್ತದೆ.


ಜನರು ಭೂಮಿಗೆ ಸಂಬಂಧಪಟ್ಟವರು. ಅವರು ಭೂಮಿಯ ಮೊದಲನೆ ಮನುಷ್ಯನಂತಿದ್ದಾರೆ. ಆದರೆ ಪರಲೋಕಕ್ಕೆ ಸಂಬಂಧಪಟ್ಟವರು ಪರಲೋಕದ ಮನುಷ್ಯನಂತಿದ್ದಾರೆ.


ನಮ್ಮ ಶರೀರಭಾವವು ದೇವರಾತ್ಮನಿಗೆ ವಿರುದ್ಧವಾದ ಸಂಗತಿಗಳನ್ನು ಬಯಸುತ್ತದೆ. ದೇವರಾತ್ಮನು ನಮ್ಮ ಶರೀರಭಾವಕ್ಕೆ ವಿರುದ್ಧವಾದ ಸಂಗತಿಗಳನ್ನು ಬಯಸುತ್ತಾನೆ. ಆದ್ದರಿಂದ ನೀವು ನಿಜವಾಗಿಯೂ ಬಯಸುವಂಥವುಗಳನ್ನು ಮಾಡಲಾಗದಂತೆ ಅವು ಒಂದಕ್ಕೊಂದು ಹೋರಾಡುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು