Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:14 - ಪರಿಶುದ್ದ ಬೈಬಲ್‌

14 ಹಾಗಾದರೆ, ಇದರ ಬಗ್ಗೆ ಏನು ಹೇಳೋಣ? ದೇವರು ಅನ್ಯಾಯಗಾರನೇ? ಎಂದಿಗೂ, ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹಾಗಾದರೆ ಏನು ಹೇಳೋಣ? ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹೀಗಿರಲಾಗಿ, ನಾವು ಏನೆಂದು ಹೇಳೋಣ? ದೇವರಲ್ಲಿ ಅನ್ಯಾಯವಿದೆಯೆಂದು ಹೇಳೋಣವೆ? ಎಂದಿಗೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹಾಗಾದರೆ ಏನು ಹೇಳೋಣ? ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹಾಗಾದರೆ ನಾವು ಏನು ಹೇಳೋಣ? ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಶೆ ರ್‍ಹಾತಾನಾ ದೆವ್ ಅನ್ನ್ಯಾಯ್ ಕರುಕ್ ಲಾಗ್ಲಾ ಮನುನ್ ಅಮಿ ಮನುಕ್ ಹೊತಾ ಕಾಯ್? ತಸೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:14
18 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಪ್ರತಿಯೊಬ್ಬರೂ ಯೆಹೋವನಿಗೆ ಭಯಪಡುವವರಾಗಿರಬೇಕು. ಆತನು ನ್ಯಾಯವಂತನಾಗಿದ್ದಾನೆ. ಆತನಿಗೆ ಎಲ್ಲಾ ಜನರು ಸಮಾನರೇ. ಆತನು ಲಂಚ ಸ್ವೀಕರಿಸಿ ನ್ಯಾಯವನ್ನು ಬದಲಾಯಿಸುವದಿಲ್ಲ” ಎಂದು ಹೇಳಿದನು.


ಯೆಹೋವನ ಕಾರ್ಯಗಳೆಲ್ಲ ನೀತಿಯುಳ್ಳವುಗಳಾಗಿವೆ. ಆತನ ಪ್ರತಿಯೊಂದು ಕಾರ್ಯದಲ್ಲೂ ಆತನ ಶಾಶ್ವತ ಪ್ರೀತಿ ತೋರಿಬರುವುದು.


“ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು. ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಾಮಾಣಿಕನೂ ಆಗಿದ್ದಾನೆ.


ಯಜ್ಞವೇದಿಕೆಯಿಂದ ಹೀಗೆ ಹೇಳುವುದನ್ನೂ ನಾನು ಕೇಳಿಸಿಕೊಂಡೆನು: “ಹೌದು, ದೇವರಾದ ಪ್ರಭುವೇ, ಸರ್ವಶಕ್ತನೇ, ನಿನ್ನ ತೀರ್ಪುಗಳೆಲ್ಲಾ ಸತ್ಯವಾಗಿವೆ ಮತ್ತು ನ್ಯಾಯವಾಗಿವೆ.”


ಯೆಹೋವನು ಒಳ್ಳೆಯವನೆಂಬುವುದಕ್ಕೆ ಅವರು ದೃಷ್ಟಾಂತವಾಗಿರುವರು. ಆತನೇ ನನ್ನ ಬಂಡೆ. ಆತನು ಎಂದಿಗೂ ತಪ್ಪು ಮಾಡನು.


ದೇವರು ಅನ್ಯಾಯ ಮಾಡುವನೇ? ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕು ಮಾಡುವನೇ?


ಖಂಡಿತವಾಗಿಯೂ ನೀನು ಆ ಪಟ್ಟಣವನ್ನು ನಾಶಮಾಡುವುದಿಲ್ಲ. ಕೆಟ್ಟವರನ್ನು ಕೊಲ್ಲುವುದಕ್ಕಾಗಿ ನೀನು ಐವತ್ತು ಮಂದಿ ನೀತಿವಂತರನ್ನು ಕೊಲ್ಲುವುದಿಲ್ಲ. ಒಂದುವೇಳೆ ನೀನು ಕೊಂದರೆ, ಒಳ್ಳೆಯವರೂ ಕೆಟ್ಟವರೂ ಸರಿಸಮಾನರಾಗುವರು. ಅವರಿಬ್ಬರೂ ದಂಡನೆಗೆ ಗುರಿಯಾಗುವರು. ನೀನು ಲೋಕದವರಿಗೆಲ್ಲ ನ್ಯಾಯಾಧಿಪತಿ. ನೀನು ನ್ಯಾಯವಾದದ್ದನ್ನೇ ಮಾಡುವೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.


ಹೀಗಿರಲು, ಯೆಹೂದ್ಯರ ವೈಶಿಷ್ಟವೇನು? ಸುನ್ನತಿ ಮಾಡಿಸಿಕೊಂಡಿರುವುದರಲ್ಲಿ ಏನಾದರೂ ವಿಶೇಷತೆಯಿದೆಯೇ?


ನೀವು ಕಠಿಣರಾಗಿದ್ದೀರಿ ಮತ್ತು ಮೊಂಡರಾಗಿದ್ದೀರಿ. ಮಾರ್ಪಾಟಾಗಲು ನಿಮಗೆ ಇಷ್ಟವಿಲ್ಲ. ಆದ್ದರಿಂದ ನಿಮಗೆ ಬರಲಿರುವ ದಂಡನೆಯನ್ನು ನೀವು ಹೆಚ್ಚುಹೆಚ್ಚು ಮಾಡಿಕೊಳ್ಳುತ್ತಿದ್ದೀರಿ. ದೇವರು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ನಿಮಗೆ ಆ ದಂಡನೆಯಾಗುವುದು. ಆ ದಿನದಲ್ಲಿ ದೇವರ ನ್ಯಾಯವಾದ ತೀರ್ಪುಗಳನ್ನು ಜನರು ನೋಡುವರು.


ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಬುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಬಗ್ಗೆ ನಾನು ನಿನ್ನನ್ನು ಕೇಳಬಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನ್ನ ವಿಶ್ವಾಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ?


“ಯೋಬನೇ, ‘ನಾನು ದೇವರಿಗಿಂತ ನೀತಿವಂತನೆಂದು’ ನೀನು ಹೇಳುವುದು ನ್ಯಾಯವಲ್ಲ.


ಅವನು ಬಂದು ಆ ರೈತರನ್ನು ಕೊಲ್ಲುವನು! ಬಳಿಕ ಅವನು ಆ ತೋಟವನ್ನು ಬೇರೆ ಕೆಲವು ರೈತರಿಗೆ ಕೊಡುವನು.” ಜನರು ಈ ಸಾಮ್ಯವನ್ನು ಕೇಳಿ, “ಇಲ್ಲ! ಹಾಗೆಂದಿಗೂ ಆಗಬಾರದು!” ಅಂದರು.


ದೇವರು ಪಕ್ಷಪಾತ ಮಾಡದೆ ಎಲ್ಲರಿಗೂ ಒಂದೇ ರೀತಿಯಲ್ಲಿ ತೀರ್ಪು ಕೊಡುತ್ತಾನೆ.


ಇದರರ್ಥವೇನೆಂದರೆ, ಯೆಹೂದ್ಯರಲ್ಲದವರು ನೀತಿವಂತರಾಗಲು ಪ್ರಯತ್ನಿಸುತ್ತಿರಲಿಲ್ಲ. ಆದರೆ ಅವರನ್ನು ನೀತಿವಂತರನ್ನಾಗಿ ಮಾಡಲಾಯಿತು. ಅವರು ನಂಬಿಕೆಯಿಂದಲೇ ನೀತಿವಂತರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು