Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:28 - ಪರಿಶುದ್ದ ಬೈಬಲ್‌

28 ಹೌದು, ಪ್ರಭುವು ಭೂಮಿಯ ಮೇಲಿನ ಜನರಿಗೆ ಬಹುಬೇಗನೆ ತೀರ್ಪನ್ನು ಪೂರ್ಣವಾಗಿ ತೀರಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅದೇ ಅಭಿಪ್ರಾಯದಿಂದ ಯೆಶಾಯನು ಮತ್ತೊಂದು ವಚನದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅದೇ ಅಭಿಪ್ರಾಯದಿಂದ ಯೆಶಾಯನು ಮತ್ತೊಂದು ವಚನದಲ್ಲಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಏಕೆಂದರೆ ಕರ್ತನು ತಮ್ಮ ವಾಕ್ಯವನ್ನು ಭೂಮಿಯ ಮೇಲೆ ಅಂತಿಮವಾಗಿಯೂ ತ್ವರಿತವಾಗಿಯೂ ನೆರವೇರಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಕಶ್ಯಾಕ್ ಮಟ್ಲ್ಯಾರ್ ಧನಿ ತಾಬೊಡ್ತೊಬ್ ಅಪ್ನಾಚೊ ಲೆಕ್ಕ್ ಜಗಾಕ್ನಾ ಸಮಾ ಕರುನ್ ಘೆತಾ.” ಮನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:28
11 ತಿಳಿವುಗಳ ಹೋಲಿಕೆ  

ಸರ್ವಶಕ್ತನೂ ಒಡೆಯನೂ ಆದ ಯೆಹೋವನು ಖಂಡಿತವಾಗಿಯೂ ಈ ದೇಶವನ್ನು ನಾಶಮಾಡುತ್ತಾನೆ.


ನಂತರ ಪರಲೋಕವು ತೆರೆದಿರುವುದನ್ನು ನಾನು ನೋಡಿದೆನು. ನನ್ನ ಎದುರಿನಲ್ಲಿ ಒಂದು ಬಿಳಿ ಕುದುರೆಯಿತ್ತು. ಕುದುರೆಯ ಮೇಲೆ ಕುಳಿತಿದ್ದ ಸವಾರನ ಹೆಸರು ನಂಬಿಗಸ್ತ ಮತ್ತು ಸತ್ಯವಂತ. ಆತನು ತನ್ನ ತೀರ್ಪುಗಳಲ್ಲಿಯೂ ಯುದ್ಧಗಳಲ್ಲಿಯೂ ನ್ಯಾಯವಂತನಾಗಿದ್ದನು.


ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”


ಏಕೆಂದರೆ ಆ ಸಮಯದಲ್ಲಿ ಮಹಾ ಸಂಕಟ ಇರುವುದು. ಲೋಕವು ಸೃಷ್ಟಿಯಾದಂದಿನಿಂದ ಇಂಥ ಸಂಕಟವು ಎಂದೂ ಸಂಭವಿಸಿಲ್ಲ. ಇನ್ನು ಮುಂದೆಯೂ ಸಂಭವಿಸುವುದಿಲ್ಲ.


ಈಗ ನೀವು ಆ ವಿಷಯಗಳೊಂದಿಗೆ ಯುದ್ಧ ಮಾಡಬಾರದು. ನೀವು ಹಾಗೆ ಮಾಡಿದ್ದಲ್ಲಿ ನಿಮ್ಮ ಸುತ್ತಲಿರುವ ಹಗ್ಗವು ಇನ್ನೂ ಬಿಗಿಯಾಗುವದು. ನಾನು ಕೇಳಿರುವ ಮಾತುಗಳು ಬದಲಾಗವು. ಯಾಕೆಂದರೆ ಅವು ಸರ್ವಶಕ್ತನಾದ ಯೆಹೋವನ ಮಾತುಗಳು. ಆತನು ಪ್ರಪಂಚವನ್ನು ಆಳುವಾತನು. ಆ ಸಂಗತಿಗಳೆಲ್ಲವೂ ಸಂಭವಿಸುವವು.


ಸರ್ವಶಕ್ತನಾದ ಯೆಹೋವನು ನೀತಿಯಿಂದ ನ್ಯಾಯತೀರಿಸುವನು. ಯೆಹೋವನು ಉನ್ನತೋನ್ನತನೆಂದು ಜನರೆಲ್ಲರೂ ಅರಿತುಕೊಳ್ಳುವರು. ಪರಿಶುದ್ಧನಾದ ದೇವರು ನ್ಯಾಯವಾದದ್ದನ್ನೇ ಮಾಡುವನು. ಜನರು ಆತನನ್ನು ಗೌರವಿಸುವರು.


ನಮ್ಮ ರಕ್ಷಕನಾದ ದೇವರೇ, ನೀತಿವಂತರ ಪ್ರಾರ್ಥನೆಗೆ ಸದುತ್ತರವನ್ನು ದಯಪಾಲಿಸು; ಅವರಿಗೋಸ್ಕರ ಮಹತ್ಕಾರ್ಯಗಳನ್ನು ನಡೆಸು. ಸರ್ವಭೂನಿವಾಸಿಗಳ ನಂಬಿಕೆಗೆ ನೀನೇ ಆಧಾರ.


ಆತನು ಭೂನಿವಾಸಿಗಳಿಗೆಲ್ಲಾ ನ್ಯಾಯವಾಗಿ ತೀರ್ಪುಮಾಡುವನು. ಆತನು ಜನಾಂಗಗಳಿಗೆಲ್ಲಾ ಯಥಾರ್ಥವಾಗಿ ತೀರ್ಪುಮಾಡುವನು.


ನಿನ್ನ ಜನರು ಸಮುದ್ರದ ಮರಳಿನಂತೆ ಬಹಳವಿರುವರು. ಆದರೆ ಅವರಲ್ಲಿ ಕೆಲವರೇ ಉಳಿದು ಕರ್ತನ ಬಳಿಗೆ ಬರುವರು. ಆ ಜನರು ದೇವರ ಬಳಿಗೆ ಹಿಂತಿರುಗುವರು. ಅದಕ್ಕಿಂತ ಮೊದಲು ನಿನ್ನ ದೇಶವು ನಾಶವಾಗುವದು. ದೇಶವು ನಾಶವಾಗುವದೆಂದು ದೇವರು ಪ್ರಕಟಿಸಿದ್ದಾನೆ. ಆ ಬಳಿಕ ದೇವರ ಒಳ್ಳೆತನವು ಆ ದೇಶಕ್ಕೆ ಬರುವದು. ಅದು ದಡತುಂಬಿ ಹರಿಯುವ ನದಿಯೋಪಾದಿಯಲ್ಲಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು