Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:19 - ಪರಿಶುದ್ದ ಬೈಬಲ್‌

19 ದೇವದೂತನು, “ನನ್ನ ಹೆಸರು ಗಬ್ರಿಯೇಲ. ನಾನು ದೇವರ ಸನ್ನಿಧಿಯಲ್ಲಿ ನಿಂತುಕೊಂಡಿರುವವನು. ನಿನಗೆ ಈ ಶುಭಸಮಾಚಾರವನ್ನು ತಿಳಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದಕ್ಕೆ ಆ ದೂತನು, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನೊಂದಿಗೆ ಮಾತನಾಡಿ ಈ ಶುಭವಾರ್ತೆಯನ್ನು ನಿನಗೆ ತಿಳಿಸುವುದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ದೇವದೂತನು, “ನಾನು ದೇವರ ಸನ್ನಿಧಿಯಲ್ಲಿ ಸೇವೆಮಾಡುವ ಗಬ್ರಿಯೇಲನು; ಈ ಶುಭಸಮಾಚಾರವನ್ನು ನಿನಗೆ ತಿಳಿಸುವುದಕ್ಕಾಗಿ ದೇವರ ಅಪ್ಪಣೆಯ ಪ್ರಕಾರ ಬಂದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆ ದೂತನು - ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನ ಕೂಡ ಮಾತಾಡಿ ಈ ಶುಭವರ್ತಮಾನವನ್ನು ನಿನಗೆ ತಿಳಿಸುವದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ಆ ದೂತನು ಉತ್ತರವಾಗಿ, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು. ನಿನ್ನ ಸಂಗಡ ಮಾತನಾಡುವುದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವುದಕ್ಕೂ ದೇವರು ನನ್ನನ್ನು ಕಳುಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ದೆವಾಚ್ಯಾ ದುತಾನ್ “ದೆವಾಚ್ಯಾ ಇದ್ರಾಕ್ ರ್‍ಹಾತಲೊ ಘಾಬ್ರಿಯೆಲ್ ಮಿಯಾ, ತುಜೆಕ್ಡೆ ಬೊಲುಕ್ ಅನಿ ತುಕಾ ಹಿ ಬರಿ ಖಬರ್ ಸಾಂಗುಕ್ ಮನುನ್ ದೆವಾನ್ ಮಾಕಾ ಧಾಡುನ್ ದಿಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:19
8 ತಿಳಿವುಗಳ ಹೋಲಿಕೆ  

ಎಲಿಜಬೇತಳು ಆರು ತಿಂಗಳ ಗರ್ಭಿಣಿಯಾಗಿದ್ದಾಗ, ದೇವರು ತನ್ನ ದೂತನಾದ ಗಬ್ರಿಯೇಲನನ್ನು ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಲ್ಲಿ ವಾಸಿಸುತ್ತಿದ್ದ ಒಬ್ಬ ಕನ್ಯೆಯ ಬಳಿಗೆ ಕಳುಹಿಸಿದನು. ಆಕೆಗೆ ದಾವೀದನ ಮನೆತನದ ಯೋಸೇಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯಳು.


“ಎಚ್ಚರವಾಗಿರಿ! ಈ ಚಿಕ್ಕ ಮಕ್ಕಳಿಗೆ ಬೆಲೆಯೇ ಇಲ್ಲವೆಂದು ನೆನೆಸಬೇಡಿ. ಇವರಿಗಾಗಿ ಪರಲೋಕದಲ್ಲಿ ದೂತರನ್ನು ನೇಮಿಸಲಾಗಿದೆ. ಆ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಸಮ್ಮುಖದಲ್ಲಿ ಇರುತ್ತಾರೆ.


ಆಗ ನಾನು ಮನುಷ್ಯನ ಧ್ವನಿಯನ್ನು ಕೇಳಿದೆ. ಈ ಧ್ವನಿಯು ಊಲಾ ನದಿಯ ಮೇಲಿಂದ ಬಂದಿತು. ಆ ಧ್ವನಿಯು, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಈ ಮನುಷ್ಯನಿಗೆ ತಿಳಿಸು” ಎಂದು ಆದೇಶ ಕೊಟ್ಟಿತು.


ಪರಲೋಕಕ್ಕೆ ಏರಿಹೋದ ಪ್ರಧಾನ ಯಾಜಕನೊಬ್ಬನು ನಮಗಿದ್ದಾನೆ. ಆತನೇ ದೇವರ ಮಗನಾದ ಯೇಸು. ಆದ್ದರಿಂದ ನಮಗಿರುವ ನಂಬಿಕೆಯಲ್ಲೇ ದೃಢವಾಗಿ ಸಾಗೋಣ.


ದೇವದೂತನು ಅವರಿಗೆ, “ಹೆದರಬೇಡಿರಿ, ಜನರೆಲ್ಲರಿಗೆ ಮಹಾಸಂತೋಷವನ್ನು ಉಂಟುಮಾಡುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ:


ಈಗ ಕೇಳು! ಈ ಸಂಗತಿಗಳು ನೆರವೇರುವ ತನಕ ನೀನು ಮೂಕನಾಗಿರುವೆ. ಏಕೆಂದರೆ ನೀನು ನನ್ನ ಮಾತನ್ನು ನಂಬಲಿಲ್ಲ. ಆದರೆ ನಾನು ಹೇಳಿದ ಈ ಸಂಗತಿಗಳು ಖಂಡಿತವಾಗಿ ನೆರವೇರುತ್ತವೆ” ಎಂದು ಹೇಳಿದನು.


ಆದ್ದರಿಂದ ಎಲ್ಲಾ ಸಮಯದಲ್ಲಿಯೂ ಸಿದ್ಧರಾಗಿರಿ. ನಡೆಯಲಿರುವ ಈ ಎಲ್ಲಾ ಸಂಗತಿಗಳನ್ನು ಎದುರಿಸಿ ಸುರಕ್ಷಿತವಾಗಿ ಮುಂದುವರಿಯಲು ಮತ್ತು ಮನುಷ್ಯಕುಮಾರನ ಮುಂದೆ ನಿಲ್ಲಲು ಬೇಕಾದ ಶಕ್ತಿಗಾಗಿ ಪ್ರಾರ್ಥಿಸಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು