Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:76 - ಪರಿಶುದ್ದ ಬೈಬಲ್‌

76 “ಮಗುವೇ, ನೀನು ಮಹೋನ್ನತನ ಪ್ರವಾದಿ ಎನಿಸಿಕೊಳ್ಳುವೆ. ಪ್ರಭುವಿನ ಮುಂದೆ ಹೋಗಿ ಆತನ ಬರುವಿಕೆಗಾಗಿ ಜನರನ್ನು ಸಿದ್ಧಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

76 ಮಗುವೇ, ನೀನಾದರೋ ಪರಾತ್ಪರನಾದ ದೇವರ ಪ್ರವಾದಿಯೆನಿಸಿಕೊಳ್ಳುವಿ. ನೀನು ಕರ್ತನ ಮುಂದೆ ಹೋಗಿ ಆತನ ಹಾದಿಗಳನ್ನು ಸಿದ್ಧಮಾಡುವವನಾಗಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

76 ಸುಕುಮಾರಾ, ನೀನೆನಿಸಿಕೊಳ್ಳುವೆ ‘ಪರಾತ್ಪರನ ಪ್ರವಾದಿ’ I

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

76 ಮಗುವೇ, ನೀನಾದರೋ ಪರಾತ್ಪರನ ಪ್ರವಾದಿಯೆನಿಸಿಕೊಳ್ಳುವಿ. ನೀನು ಕರ್ತನ ಮುಂದೆ ಹೋಗಿ ಆತನ ಹಾದಿಗಳನ್ನು ಸಿದ್ಧಮಾಡುವವನಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

76 “ನನ್ನ ಮಗುವೇ, ನೀನಾದರೋ ಮಹೋನ್ನತರ ಪ್ರವಾದಿ ಎಂದು ಎನಿಸಿಕೊಳ್ಳುವೆ. ಯಾಕೆಂದರೆ, ನೀನು ಕರ್ತದೇವರ ಮಾರ್ಗಗಳನ್ನು ಸಿದ್ಧಮಾಡುವುದಕ್ಕೆ, ಅವರ ಮುಂದೆ ಹೋಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

76 “ಅನಿ ತುಕಾ, ಮಾಜ್ಯಾ ಪೊರಾ,ಮಹೊನ್ನತ್ ದೆವಾಚೊ ಪ್ರವಾದಿ ಮನುನ್ ಬಲ್ವುತ್ಯಾತ್. ಧನಿಯಾಚಿ ವಾಟ್ ತಯಾರ್ ಕರುಕ್, ತಿಯಾ ತೆಚ್ಯಾ ಫಿಡೆ-ಫಿಡೆ ಜಾತೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:76
22 ತಿಳಿವುಗಳ ಹೋಲಿಕೆ  

ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.


ಅದಕ್ಕೆ ಯೋಹಾನನು, “‘ಪ್ರಭುವಿಗಾಗಿ ನೇರವಾದ ದಾರಿಯನ್ನು ಸಿದ್ಧಗೊಳಿಸಿರಿ’ ಎಂದು ಅಡವಿಯಲ್ಲಿ ಕೂಗುವವನ ಸ್ವರವೇ ನಾನು” ಎಂದು ಪ್ರವಾದಿಯಾದ ಯೆಶಾಯನ ಮಾತುಗಳಲ್ಲೇ ಉತ್ತರಕೊಟ್ಟನು.


ಹೆರೋದನು ಯೋಹಾನನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟು ಕೊಲ್ಲಿಸಿರಲಿಲ್ಲ. ಜನರು ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರು.


“‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ’ ಎಂದು ಅಡವಿಯಲ್ಲಿ ಒಬ್ಬನು ಕೂಗುತ್ತಿದ್ದಾನೆ” ಎಂದು ಸ್ನಾನಿಕ ಯೋಹಾನನನ್ನೇ ಕುರಿತು ಪ್ರವಾದಿಯಾದ ಯೆಶಾಯ ಹೇಳಿದ್ದನು.


ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಈ ಜನರು ಮಹೋನ್ನತನಾದ ದೇವರ ಸೇವಕರು! ನೀವು ಹೇಗೆ ರಕ್ಷಣೆ ಹೊಂದಬಹುದೆಂಬುದನ್ನು ಅವರು ಹೇಳುತ್ತಿದ್ದಾರೆ!” ಎಂದು ಕೂಗುತ್ತಿದ್ದಳು.


ದೇವದೂತನು ಮರಿಯಳಿಗೆ, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸುವುದು. ಈ ಕಾರಣದಿಂದ ನಿನ್ನಲ್ಲಿ ಹುಟ್ಟುವ ಈ ಪವಿತ್ರಮಗುವು ‘ದೇವರ ಮಗ’ ಎನಿಸಿಕೊಳ್ಳುವನು.


ಆತನು ಮಹಾಪುರುಷನಾಗುವನು. ಜನರು ಆತನನ್ನು ಮಹೋನ್ನತನ (ದೇವರ) ಮಗನೆಂದು ಕರೆಯುವರು. ಪ್ರಭುವಾದ ದೇವರು ಆತನಿಗೆ ಆತನ ಪೂರ್ವಿಕನಾದ ದಾವೀದನ ಅಧಿಕಾರವನ್ನು ಕೊಡುವನು.


ಆದರೆ ‘ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮನುಷ್ಯನಿಂದ ಬಂದ ಅಧಿಕಾರದಿಂದ’ ಎಂದು ಹೇಳಿದರೆ, ಆಗ ಜನರು ನಮ್ಮ ಮೇಲೆ ಕೋಪಗೊಳ್ಳುತ್ತಾರೆ” ಎಂದು ಮಾತಾಡಿಕೊಂಡರು. ಜನರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರಿಂದ ಅವರು ಜನರಿಗೆ ಭಯಪಟ್ಟರು.


‘ನಾನು ಕ್ರಿಸ್ತನಲ್ಲ. ಆತನಿಗಾಗಿ ಹಾದಿಯನ್ನು ಸಿದ್ಧಪಡಿಸುವುದಕ್ಕಾಗಿ ಮಾತ್ರ ಕಳುಹಿಸಲ್ಪಟ್ಟಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.


ನನ್ನ ನಂತರ ಬರುವವನು ಆತನೇ. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಎಂದು ಹೇಳಿದನು.


“ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ.


‘ಅದು ಮನುಷ್ಯನಿಂದ ಬಂದಿತು’ ಎಂದರೆ ಜನರೆಲ್ಲರೂ ನಮ್ಮ ಮೇಲೆ ಕೋಪಗೊಳ್ಳುವರು. ಅವರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿ ಎಂದು ನಂಬಿರುವುದರಿಂದ ನಾವು ಅವರಿಗೆ ಹೆದರಬೇಕಾಗಿದೆ” ಎಂದು ಮಾತಾಡಿಕೊಂಡರು.


“ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದಕ್ಕೆ ಗುರುತಾಗಿ ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವೆನು. ಆದರೆ ನನ್ನ ಹಿಂದೆ ಬರುವವನು ನನಗಿಂತ ಹೆಚ್ಚಿನವನು. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು.


ಯೆಹೋವನು ಹೀಗೆನ್ನುತ್ತಾನೆ, “ನಾನು ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು. ಅವನು ಯೆಹೋವನಿಂದ ಪ್ರಾಪ್ತಿಯಾಗುವ ಭಯಂಕರವಾದ ಮಹಾ ನ್ಯಾಯತೀರ್ಪಿನ ಕಾಲದಲ್ಲಿ ಬರುವನು.


ಚೀಯೋನಿನಲ್ಲಿ ಜನಿಸಿದ ಪ್ರತಿಯೊಬ್ಬರೂ ದೇವರಿಗೆ ಗೊತ್ತು. ಮಹೋನ್ನತನಾದ ದೇವರೇ ಆ ಪಟ್ಟಣವನ್ನು ಕಟ್ಟಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು