Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:77 - ಪರಿಶುದ್ದ ಬೈಬಲ್‌

77 ಪಾಪಕ್ಷಮೆಯ ಮೂಲಕವಾಗಿ ರಕ್ಷಣೆಯಾಗುವುದೆಂಬ ತಿಳುವಳಿಕೆಯನ್ನು ನೀನು ಜನರಿಗೆ ಕೊಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

77-78 ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಕ್ಷಮೆಯೆಂಬ ರಕ್ಷಣೆಯ ತಿಳಿವಳಿಕೆಯನ್ನು ಆತನ ಪ್ರಜೆಗೆ ತಿಳಿಸಿಕೊಡುವವನಾಗಿಯೂ ಇರುವಿ. ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

77 ಸರ್ವೇಶ್ವರನ ಮಾರ್ಗವನು ಸಜ್ಜುಗೊಳಿಸುವೆ, ಮುಂದಾಗಿ ತೆರಳಿ II ಪಾಪಕ್ಷಮೆಯನು ಸಾರುವೆ ಆತನ ಪ್ರಜೆಗೆ I ಈ ಮೂಲಕ ಜೀವೋದ್ಧಾರದ ಜ್ಞಾನವನ್ನೀಯುವೆ ಆ ಜನರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

77-78 ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಪರಿಹಾರವೆಂಬ ರಕ್ಷಣೆಯ ತಿಳುವಳಿಕೆಯನ್ನು ಆತನ ಪ್ರಜೆಗೆ ಕೊಡುವವನಾಗಿಯೂ ಇರುವಿ. ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

77 ನೀನು ಜನರ ಪಾಪಕ್ಷಮಾಪಣೆಯ ಮೂಲಕ ರಕ್ಷಣೆ ಹೊಂದುವ ತಿಳುವಳಿಕೆಯನ್ನು ಕೊಡುವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

77 ಅನಿ ತೆಚ್ಯಾ ಲೊಕಾಕ್ನಿ ತೆಂಚ್ಯಾ ಪಾಪಾನಿತ್ನಾ ಮಾಪ್ ಗಾವಲ್ಲ್ಯಾ ವೈನಾ, ಸುಟ್ಕೆಚಿ ಬುದ್ವಂತ್ಕಿ ದಿತಾ ಮನುನ್ ಸಾಂಗ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:77
19 ತಿಳಿವುಗಳ ಹೋಲಿಕೆ  

ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನ ಪಾಪಗಳನ್ನು ದೇವರು ಯೇಸುವಿನ ಮೂಲಕ ಕ್ಷಮಿಸುವನು. ಇದು ಸತ್ಯವೆಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.


ದೇವರಿಂದ ಆತನ ಬಲಗಡೆಗೆ ಏರಿಸಲ್ಪಟ್ಟಾತನೇ ಯೇಸು. ಎಲ್ಲಾ ಯೆಹೂದ್ಯರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದರ ಮೂಲಕ ಪಾಪಕ್ಷಮೆ ಹೊಂದಿಕೊಳ್ಳಲೆಂದು ದೇವರು ಯೇಸುವನ್ನು ನಮ್ಮ ನಾಯಕನನ್ನಾಗಿಯೂ ರಕ್ಷಕನನ್ನಾಗಿಯೂ ಮಾಡಿದ್ದಾನೆ.


ಪೇತ್ರನು ಅವರಿಗೆ, “ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ದೇವರು ನಿಮ್ಮ ಪಾಪಗಳನ್ನು ಕ್ಷಮಿಸುವನು. ಅಲ್ಲದೆ ದೇವರು ವಾಗ್ದಾನ ಮಾಡಿರುವ ಪವಿತ್ರಾತ್ಮನನ್ನು ಹೊಂದಿಕೊಳ್ಳುವಿರಿ.


ಆದ್ದರಿಂದ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿ. ಆಗ ಆತನು ನಿಮ್ಮ ಪಾಪಗಳನ್ನು ಕ್ಷಮಿಸುವನು.


ಆದ್ದರಿಂದ ಆತನೇ (ಯೇಸುವೇ) ದೇವರ ಮಗನೆಂದು ನಾನು ಜನರಿಗೆ ತಿಳಿಸುವೆನು” ಎಂದನು.


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ಪ್ರತಿಯೊಬ್ಬನೂ ದೇವರ ರಕ್ಷಣೆಯನ್ನು ಕಾಣುವನು!’ ಎಂಬುದಾಗಿ ಅಡವಿಯಲ್ಲಿ ಒಬ್ಬನು ಕೂಗುತ್ತಿದ್ದಾನೆ.”


ಯೋಹಾನನು ಜೋರ್ಡನ್ ನದಿಯ ಸುತ್ತಲಿರುವ ಪ್ರದೇಶದಲ್ಲೆಲ್ಲಾ ಸಂಚರಿಸಿ, ತಮ್ಮ ಪಾಪಪರಿಹಾರಕ್ಕಾಗಿ ಅವರು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಜನರಿಗೆ ತಿಳಿಸಿದನು.


ಕ್ರಿಸ್ತನ ರಕ್ತದ ಮೂಲಕವಾಗಿ ನಮಗೆ ಬಿಡುಗಡೆಯಾಯಿತು. ದೇವರ ಮಹಾ ಕೃಪೆಯಿಂದ ನಮ್ಮ ಪಾಪಗಳು ಕ್ಷಮಿಸಲ್ಪಟ್ಟವು.


ತಮ್ಮ ನೆರೆಮನೆಯವರಿಗೂ ತಮ್ಮ ಬಂಧುಬಳಗದವರಿಗೂ ಯಾರೂ ಯೆಹೋವನ ಬಗ್ಗೆ ಹೇಳಿಕೊಡಬೇಕಾಗಿಲ್ಲ. ಯಾಕೆಂದರೆ ಅತಿ ಕನಿಷ್ಠರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತುಬಿಡುವೆನು.” ಇದು ಯೆಹೋವನ ನುಡಿ.


ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು.


ಅದಕ್ಕೆ ಪೌಲನು, “ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದನು. ಅಲ್ಲದೆ ತನ್ನ ತರುವಾಯ ಬರುವಾತನಲ್ಲಿ ನಂಬಿಕೆ ಇಡಬೇಕೆಂದು ಅವರಿಗೆ ಹೇಳಿದನು. ಆ ವ್ಯಕ್ತಿಯೇ ಯೇಸು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು