Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:14 - ಪರಿಶುದ್ದ ಬೈಬಲ್‌

14 ಆದರೆ ನ್ಯಾಯತೀರ್ಪಿನ ದಿನದಲ್ಲಿ ನಿನ್ನ ಸ್ಥಿತಿಯು ಟೈರ್ ಮತ್ತು ಸಿದೋನ್‌ಗಳ ಸ್ಥಿತಿಗಿಂತಲೂ ಕಠಿಣವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಸಹನೀಯವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ನ್ಯಾಯತೀರ್ಪಿನಲ್ಲಿ ನಿಮ್ಮ ಗತಿಗಿಂತಲೂ ಟೈರ್ ಮತ್ತು ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ತಾಳಬಹುದಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಝಡ್ತಿಚ್ಯಾ ದಿಸಿ ತಿರ್ ಅನಿ ಸಿದೊನಾಕ್ ತುಮ್ಚ್ಯಾನ್ಕಿ ಜಾಸ್ತಿ ದಯಾ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:14
10 ತಿಳಿವುಗಳ ಹೋಲಿಕೆ  

“ಇತರ ಜನರಿಗೆ ತೀರ್ಪು ಮಾಡಬಲ್ಲೆವು” ಎಂದು ನಿಮ್ಮ ವಿಷಯದಲ್ಲಿ ಯೋಚಿಸಿಕೊಳ್ಳಬೇಡಿ. ಏಕೆಂದರೆ ನೀವು ಸಹ ಪಾಪಮಾಡಿ ಅಪರಾಧಿಗಳಾಗಿದ್ದೀರಿ. ನೀವೂ ಆ ಜನರಿಗೆ ತೀರ್ಪು ಮಾಡುತ್ತೀರಿ. ಆದರೆ ಅದೇ ಕಾರ್ಯಗಳನ್ನು ನೀವೂ ಮಾಡುತ್ತೀರಿ. ಆದ್ದರಿಂದ ನೀವು ಅವರಿಗೆ ತೀರ್ಪು ಮಾಡುವಾಗ, ನಿಜವಾಗಿಯೂ ನಿಮಗೇ ತೀರ್ಪು ಮಾಡಿಕೊಳ್ಳುವವರಾಗಿದ್ದೀರಿ.


ಯೆಹೂದ್ಯರಾದ ನಿಮಗೆ ಲಿಖಿತ ಧರ್ಮಶಾಸ್ತ್ರವಿದೆ ಮತ್ತು ಸುನ್ನತಿಯಾಗಿದೆ. ಆದರೆ ನೀವು ಧರ್ಮಶಾಸ್ತ್ರವನ್ನು ಮೀರಿ ನಡೆಯುತ್ತೀರಿ. ಹೀಗಿರಲು, ದೇಹದಲ್ಲಿ ಸುನ್ನತಿಯನ್ನು ಹೊಂದಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುವ ಜನರು ನಿಮ್ಮನ್ನು ಅಪರಾಧಿಗಳೆಂದು ತೋರ್ಪಡಿಸುತ್ತಾರೆ.


ಆ ತೀರ್ಪು ಏನೆಂದರೆ: ಬೆಳಕು ಈ ಲೋಕಕ್ಕೆ ಬಂದಿದೆ, ಆದರೆ ಜನರು ಬೆಳಕನ್ನು ಅಪೇಕ್ಷಿಸದೆ ಕತ್ತಲೆಯನ್ನೇ ಬಯಸಿದರು. ಏಕೆಂದರೆ ಅವರು ದುಷ್ಕೃತ್ಯಗಳನ್ನು ಮಾಡುತ್ತಿದ್ದರು.


“ಈ ಭೂಮುಖದಲ್ಲಿ ಅನೇಕ ಕುಟುಂಬಗಳಿವೆ. ಅವರೆಲ್ಲರಲ್ಲಿ ನಿಮ್ಮನ್ನು ಮಾತ್ರವೇ ನಾನು ವಿಶೇಷ ರೀತಿಯಲ್ಲಿ ಬಲ್ಲೆನು. ಆದರೆ ನೀವು ನನಗೆ ವಿರುದ್ಧವಾದಿರಿ. ಆದ್ದರಿಂದ ನಾನು ನೀವು ಮಾಡಿದ ಪಾಪಗಳಿಗೆ ನಿಮ್ಮೆಲ್ಲರನ್ನು ಶಿಕ್ಷಿಸುವೆನು.”


“ತೂರೇ, ಸೀದೋನೇ, ಫಿಲಿಷ್ಟಿಯ ದೇಶಗಳೇ, ನೀವು ನನಗೆ ಎಷ್ಟರವರು? ನಾನು ಮಾಡಿದುದಕ್ಕೆ ನೀವು ನನ್ನನ್ನು ಶಿಕ್ಷಿಸುತ್ತೀರಾ? ನೀವು ಒಂದುವೇಳೆ ನನ್ನನ್ನು ಶಿಕ್ಷಿಸುತ್ತಿದ್ದೀರಿ ಎಂದು ನೆನಸಬಹುದು. ಆದರೆ ನಾನು ಬೇಗನೇ ನಿಮ್ಮನ್ನು ಶಿಕ್ಷಿಸುವೆನು.


ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ತೂರಿನ ಜನರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಜನಾಂಗದ ಜನರನ್ನೆಲ್ಲಾ ಗುಲಾಮರನ್ನಾಗಿ ಎದೋಮಿಗೆ ಕಳುಹಿಸಿದರು. ಅವರು ತಮ್ಮ ಸಹೋದರರೊಂದಿಗೆ (ಇಸ್ರೇಲಿನೊಂದಿಗೆ) ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟರು.


ನ್ಯಾಯವಿಚಾರಣೆಯ ದಿನದಲ್ಲಿ ಈ ಊರಿನ ಗತಿಯು ಸೊದೋಮ್ ಮತ್ತು ಗೊಮೋರಗಳಿಗಿಂತ ಬಹಳ ಕೆಟ್ಟದ್ದಾಗಿರುವುದು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು