Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:20 - ಪರಿಶುದ್ದ ಬೈಬಲ್‌

20 ಹೌದು, ದೆವ್ವಗಳೂ ನಿಮಗೆ ವಿಧೇಯವಾಗುತ್ತವೆ. ಈ ಅಧಿಕಾರ ನಿಮಗಿದೆ ಎಂಬುದರ ನಿಮಿತ್ತ ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂಬುದಕ್ಕಾಗಿ ಸಂತೋಷಪಡಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಮ್ಮ ಹೆಸರುಗಳು ಪರಲೋಕದಲ್ಲಿ ಬರೆದಿರುತ್ತವೆ ಎಂದು ಸಂತೋಷಪಡಿರಿ ಎಂಬದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೀಗಿದ್ದರೂ, ದೆವ್ವಗಳು ನಿಮಗೆ ಅಧೀನವಾಗಿವೆ ಎಂದು ಸಂತೋಷ ಪಡಬೇಡಿರಿ, ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಲಿಖಿತವಾಗಿವೆ ಎಂದು ಸಂತೋಷಿಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖರೆ ಗಿರೆ ತುಮಿ ಸಾಂಗಟಲ್ಲೆ ಆಯಿಕ್ತ್ಯಾತ್ ಮನುನ್ ಕುಶಿ ಹೊವ್‍ನಕಾಶಿ; ಸರ್‍ಗಾತ್ ತುಮ್ಚೆ ನಾವ್ ಲಿವಲ್ಲೆ ಹಾಯ್ ಮನುನ್ ಕುಶಿ ಹೊವಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:20
19 ತಿಳಿವುಗಳ ಹೋಲಿಕೆ  

ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರು ಬರೆಯಲ್ಪಟ್ಟಿಲ್ಲವೋ ಆ ವ್ಯಕ್ತಿಯನ್ನು ಬೆಂಕಿಯ ಕೆರೆಗೆ ಎಸೆಯಲಾಯಿತು.


ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.


ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.


ದೇವರ ಚೊಚ್ಚಲು ಮಕ್ಕಳ ಸಭೆಗೆ ನೀವು ಬಂದಿರುವಿರಿ. ಅವರ ಹೆಸರುಗಳನ್ನು ಪರಲೋಕದಲ್ಲಿ ಬರೆಯಲಾಗಿದೆ. ನೀವು ಜನರಿಗೆಲ್ಲ ತೀರ್ಪು ನೀಡುವ ದೇವರ ಬಳಿಗೂ ಪರಿಪೂರ್ಣರನ್ನಾಗಿ ಮಾಡಲ್ಪಟ್ಟ ಒಳ್ಳೆಯ ಜನರ ಆತ್ಮಗಳ ಬಳಿಗೂ ಬಂದಿರುವಿರಿ.


ಜಯಗಳಿಸುವ ಪ್ರತಿಯೊಬ್ಬನೂ ಈ ಜನರಂತೆ ಬಿಳಿಯ ವಸ್ತ್ರಗಳನ್ನು ಧರಿಸುತ್ತಾನೆ. ಆ ವ್ಯಕ್ತಿಯ ಹೆಸರನ್ನು ನಾನು ಜೀವಭಾದ್ಯರ ಪುಸ್ತಕದಿಂದ ತೆಗೆದು ಹಾಕುವುದಿಲ್ಲ. ಅವನು ನನಗೆ ಸೇರಿದವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಹೇಳುತ್ತೇನೆ.


“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.


ಯೆಹೋವನು ಹೇಳುವುದೇನೆಂದರೆ, “ಯಾವ ಪ್ರವಾದಿಗಳು ಸುಳ್ಳುದರ್ಶನವನ್ನು ನೋಡಿ ಸುಳ್ಳನ್ನು ಹೇಳಿದ್ದಾರೋ, ಅವರನ್ನು ಶಿಕ್ಷಿಸುವೆನು. ನನ್ನ ಜನರ ಮಧ್ಯೆಯಿಂದ ಅವರನ್ನು ತೆಗೆದುಬಿಡುವೆನು. ಅವರ ಹೆಸರುಗಳು ಇಸ್ರೇಲರ ವಂಶಾವಳಿ ಪಟ್ಟಿಯಲ್ಲಿ ಇರುವುದಿಲ್ಲ. ಅವರು ಇಸ್ರೇಲ್ ದೇಶಕ್ಕೆ ಹಿಂದಿರುಗಿ ಬರುವುದಿಲ್ಲ. ನಾನೇ ಒಡೆಯನಾದ ಯೆಹೋವನೆಂದು ಆಗ ನಿಮಗೆ ಗೊತ್ತಾಗುವುದು.


ಅವರ ಈ ಪಾಪವನ್ನು ಕ್ಷಮಿಸು. ನೀನು ಅವರನ್ನು ಕ್ಷಮಿಸುವುದಿಲ್ಲವಾದರೆ ನಿನ್ನ ಜೀವಭಾದ್ಯರ ಪಟ್ಟಿಯ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು” ಎಂದು ಪ್ರಾರ್ಥಿಸಿದನು.


ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ.


ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.


ಜೀವಬಾಧ್ಯರ ಪಟ್ಟಿಯಲ್ಲಿ ಹೆಸರು ಬರೆಯಲ್ಪಟ್ಟು ಚೀಯೋನಿನಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವವರು ಪರಿಶುದ್ಧರೆಂದು ಕರೆಯಲ್ಪಡುವರು. ಅವರೆಲ್ಲರೂ ಅಲ್ಲಿಯೇ ನೆಲೆಸುವರು.


ಜೀವಬಾಧ್ಯರ ಪುಸ್ತಕದಿಂದ ಅವರ ಹೆಸರುಗಳನ್ನು ಅಳಿಸಿಬಿಡು. ನೀತಿವಂತರ ಹೆಸರುಗಳೊಂದಿಗೆ ಅವರು ಹೆಸರುಗಳನ್ನು ಜೀವಬಾಧ್ಯರ ಪುಸ್ತಕದಲ್ಲಿ ಬರೆಯಬೇಡ.


ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ದುರಾತ್ಮಗಳನ್ನು ಬಿಡಿಸುವುದಕ್ಕೂ ಎಲ್ಲಾ ತರದ ವ್ಯಾಧಿ ಮತ್ತು ಕಾಯಿಲೆಗಳನ್ನು ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.


ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗಿ ಮರಣ ಹೊಂದುತ್ತಾನೆ. ಆದರೆ ಆತನನ್ನು ಕೊಲ್ಲಲು ಒಪ್ಪಿಸುವವನಿಗೆ ಬಹಳ ಕೇಡಾಗುತ್ತದೆ. ಅವನು ಹುಟ್ಟದೆ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದು ಹೇಳಿದನು.


ಆಗ ಯೂದನು ಆ ಹಣವನ್ನು ದೇವಾಲಯದೊಳಗೆ ಬಿಸಾಡಿ ಹೊರಟುಹೋಗಿ ನೇಣು ಹಾಕಿಕೊಂಡನು.


ಯೆಹೋವನೇ, ನೀನು ಇಸ್ರೇಲಿನ ಆಶಾಕಿರಣ, ಯೆಹೋವನೇ, ನೀನು ಜೀವಜಲದ ಬುಗ್ಗೆಯಂತಿರುವೆ, ಯಾರಾದರೂ ಯೆಹೋವನ ಅನುಸರಣೆಯನ್ನು ತ್ಯಜಿಸಿದರೆ ಅವರ ಜೀವನ ಬಹಳ ಮೊಟಕಾಗುತ್ತದೆ.


ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು