Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:31 - ಪರಿಶುದ್ದ ಬೈಬಲ್‌

31 “ಅದೇ ಸಮಯದಲ್ಲಿ ಯೆಹೂದ್ಯ ಯಾಜಕನು ಆ ದಾರಿಯಲ್ಲಿ ಹೋಗುತ್ತಿದ್ದನು. ಯಾಜಕನು ಆ ಮನುಷ್ಯನನ್ನು ನೋಡಿದರೂ ಅವನಿಗೆ ಸಹಾಯಮಾಡದೆ, ತನ್ನ ಪ್ರಯಾಣವನ್ನು ಮುಂದುವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅದೇ ಮಾರ್ಗವಾಗಿ ಒಬ್ಬ ಯಾಜಕನು ಹಾದುಹೋಗಬೇಕಾಗಿ ಬಂದಿತು. ಈತನು, ಅವನನ್ನು ಕಂಡದ್ದೇ ಆಚೆ ಬಳಸಿಕೊಂಡು ಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಗ ಹೇಗೋ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ವಾರೆಯಾಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಗ ಒಬ್ಬ ಯಾಜಕನು ಅದೇ ಮಾರ್ಗವಾಗಿ ಬಂದು ಅವನನ್ನು ಕಂಡು, ದಾರಿಯ ಬೇರೆ ಕಡೆಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಹೆ ಹೊಲ್ಲ್ಯಾ ಎಕ್ ಉಲ್ಲ್ಯಾ ಎಳಾನ್, ಎಕ್ ಯಾಜಕ್ ಥೈತ್ನಾ ಪಾರ್ ಹೊವ್ನ್ ಜಾವ್‍ಲಾಗಲ್ಲೊ, ತೆನಿ ತ್ಯಾ ಮಾನ್ಸಾಕ್ ಬಗಟ್ಲ್ಯಾನ್, ಅನಿ ಕಡೆಕ್ನಾಚ್ ತೆಚ್ಯಾ ವಾಟೆನ್ ದಾಟುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:31
18 ತಿಳಿವುಗಳ ಹೋಲಿಕೆ  

ಅವಮಾನವು ನನ್ನನ್ನು ಜಜ್ಜಿಹಾಕಿದೆ! ನಾನು ನಾಚಿಕೆಯಿಂದ ಸಾಯುವಂತಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ, ಆದರೆ ಯಾರೂ ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ, ಆದರೆ ಯಾರೂ ಸಿಗಲಿಲ್ಲ.


“ನಿಮ್ಮಲ್ಲಿ ಕೆಲವು ಯಾಜಕರು ಆಲಯದ ಬಾಗಿಲುಗಳನ್ನು ಮುಚ್ಚಿ ಬೆಂಕಿಯನ್ನು ಸರಿಯಾದ ರೀತಿಯಲ್ಲಿ ಹಚ್ಚುವರು. ಆದರೆ ನಾನು ನಿಮ್ಮನ್ನು ಮೆಚ್ಚುವದಿಲ್ಲ. ನಿಮ್ಮ ಕಾಣಿಕೆಗಳನ್ನು ಸ್ವೀಕರಿಸುವದಿಲ್ಲ” ಇದು ಸರ್ವಶಕ್ತನಾದ ಯೆಹೋವನ ನುಡಿ.


ಕಳ್ಳರು ದಾರಿಯಲ್ಲಿ ಹೊಂಚುಹಾಕುತ್ತಾ ಜನರನ್ನು ಸೂರೆಮಾಡಲು ಕಾಯುತ್ತಿರುತ್ತಾರೆ. ಅದೇ ರೀತಿಯಲ್ಲಿ ಶೆಕೆಮಿಗೆ ಹೋಗುವ ದಾರಿಯಲ್ಲಿ ಯಾಜಕರು ಕಾಯುತ್ತಾ ಹಾದುಹೋಗುತ್ತಿರುವ ಜನರ ಮೇಲೆ ಬೀಳುವರು. ಅವರು ದುಷ್ಕೃತ್ಯಗಳನ್ನು ಮಾಡಿರುತ್ತಾರೆ.


“ಯಾಜಕರೇ, ಇಸ್ರೇಲ್ ಜನಾಂಗವೇ, ಅರಸನ ಪರಿವಾರದವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ. ಯಾಕೆಂದರೆ ನಿಮಗೆ ನ್ಯಾಯತೀರ್ಪು ಬಂದಿದೆ. “ಮಿಚ್ಪದಲ್ಲಿ ನೀವು ಉರುಲಿನಂತೆ ಇದ್ದಿರಿ. ತಾಬೋರಿನಲ್ಲಿ ನೆಲದ ಮೇಲೆ ಹರಡಿಸಿದ್ದ ಬಲೆಯಂತೆ ಇದ್ದಿರಿ.


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


ಇದಲ್ಲದೆ ಲೋಕದಲ್ಲಿ ಇನ್ನೂ ಕೆಲವು ಅನ್ಯಾಯಗಳನ್ನು ಗಮನಿಸಿದ್ದೇನೆ. ಅತಿವೇಗದ ಓಟಗಾರನಿಗೆ ಓಟದಲ್ಲಿ ಯಾವಾಗಲೂ ಗೆಲುವಾಗದು; ಬಲಿಷ್ಠವಾದ ಸೈನ್ಯಕ್ಕೆ ಯುದ್ಧದಲ್ಲಿ ಯಾವಾಗಲೂ ಜಯವಾಗದು; ಜ್ಞಾನಿಗೆ ಯಾವಾಗಲೂ ಆಹಾರ ದೊರಕದು; ಜಾಣನಿಗೆ ಯಾವಾಗಲೂ ಐಶ್ವರ್ಯ ದೊರೆಯದು; ಪ್ರವೀಣರಿಗೆ ಯಾವಾಗಲೂ ಹೊಗಳಿಕೆಬಾರದು; ಸಮಯ ಬಂದಾಗ, ಪ್ರತಿಯೊಬ್ಬರಿಗೂ ಕೇಡುಗಳಾಗುತ್ತವೆ.


ಬಡವರಿಗೆ ಸಹಾಯಮಾಡದವನು ತಾನೇ ಕೊರತೆಯಲ್ಲಿರುವಾಗ ಯಾರೂ ಅವನಿಗೆ ಸಹಾಯ ಮಾಡುವುದಿಲ್ಲ.


ನಾನು ಸುತ್ತಮುತ್ತ ನೋಡಿದರೂ ನನ್ನ ಸ್ನೇಹಿತರಲ್ಲಿ ಯಾರೂ ಕಾಣುತ್ತಿಲ್ಲ. ಓಡಿಹೋಗಲು ನನಗೆ ಯಾವ ಸ್ಥಳವೂ ಇಲ್ಲ. ನನ್ನನ್ನು ರಕ್ಷಿಸಲು ಯಾರೂ ಪ್ರಯತ್ನಿಸುತ್ತಿಲ್ಲ.


ನೊವೊಮಿಯು, “ಆಗಲಿ ಮಗಳೇ, ಹಾಗೆಯೇ ಮಾಡು” ಅಂದಳು. ರೂತಳು ಹೊಲಗಳಿಗೆ ಹೋದಳು. ಅವಳು ಅಲ್ಲಿ ಫಸಲು ಕೊಯ್ಯುವವರ ಹಿಂದೆ ಹೋಗಿ ಹಕ್ಕಲಾಯುತ್ತಾ ಎಲೀಮೆಲೆಕನ ಗೋತ್ರದವನಾದ ಬೋವಜನ ಹೊಲಕ್ಕೆ ಬಂದಳು.


ಅದಕ್ಕೆ ಆ ಯುವಕನು, “ನಾನು ಆಕಸ್ಮಿಕವಾಗಿ ಗಿಲ್ಬೋವದ ಶಿಖರದ ಮೇಲಿದ್ದೆ. ಸೌಲನು ತನ್ನ ಭರ್ಜಿಯ ಮೇಲೆ ಒರಗಿಕೊಂಡಿದ್ದನ್ನು ಅಲ್ಲಿಂದಲೇ ನಾನು ನೋಡಿದೆ. ಫಿಲಿಷ್ಟಿಯರ ರಥಗಳು ಮತ್ತು ಕುದುರೆಸವಾರರು ಸೌಲನ ಹತ್ತಿರಕ್ಕೆ ಬರುತ್ತಿದ್ದರು.


ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”


ಆಗ ಯೇಸು ಅವನಿಗೆ ಹೇಳಿದ್ದೇನೆಂದರೆ: “ಒಬ್ಬ ಮನುಷ್ಯನು ಜೆರುಸಲೇಮಿನಿಂದ ಇಳಿದು ಜೆರಿಕೊವಿನ ಮಾರ್ಗವಾಗಿ ಹೋಗುತ್ತಿದ್ದನು. ಕೆಲವು ದರೋಡೆಗಾರರು ಅವನನ್ನು ಸುತ್ತುಗಟ್ಟಿದರು. ಅವರು ಅವನ ಬಟ್ಟೆಯನ್ನು ಹರಿದುಹಾಕಿ ಅವನನ್ನು ಹೊಡೆದರು. ಅವನು ಮೇಲೇಳಲಾರದೆ ನೆಲದಮೇಲೆ ಬಿದ್ದುಕೊಂಡನು. ದರೋಡೆಗಾರರು ಅವನನ್ನು ನೆಲದ ಮೇಲೆಯೇ ಬಿಟ್ಟುಹೋದರು. ಅವನು ಸಾಯುವ ಸ್ಥಿತಿಯಲ್ಲಿದ್ದನು.


ನಂತರ, ಒಬ್ಬ ಲೇವಿಯು ಅದೇ ದಾರಿಯಲ್ಲಿ ಹೋಗುತ್ತಾ ಅವನ ಹತ್ತಿರ ಬಂದನು. ಲೇವಿಯು ಗಾಯಗೊಂಡಿದ್ದ ಮನುಷ್ಯನನ್ನು ನೋಡಿದರೂ ಅವನಿಗೆ ಸಹಾಯ ಮಾಡದೆ ತನ್ನ ಪ್ರಯಾಣವನ್ನು ಮುಂದುವರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು