Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:4 - ಪರಿಶುದ್ದ ಬೈಬಲ್‌

4 ಕೈಚೀಲವನ್ನಾಗಲಿ ಹಣವನ್ನಾಗಲಿ ಅಥವಾ ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ನಿಂತುಕೊಂಡು ಜನರೊಡನೆ ಮಾತನಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೋಡಿರಿ, ನೀವು ಹೋಗುವಾಗ ಹಣದ ಚೀಲವನ್ನಾಗಲಿ, ಪ್ರವಾಸದ ಚೀಲವನ್ನಾಗಲಿ, ಕಾಲಿಗೆ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹಣದ ಚೀಲವನ್ನಾಗಲಿ ಹಸಿಬೆಯನ್ನಾಗಲಿ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ; ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹಣದ ಚೀಲವನ್ನಾಗಲಿ, ಪ್ರಯಾಣದ ಚೀಲವನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ; ದಾರಿಯಲ್ಲಿ ಯಾರನ್ನೂ ಕುಶಲ ವಿಚಾರ ಮಾಡಿಕೊಂಡಿರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಪಯ್ಸ್ಯಾಂಚಿ ಪಿಸ್ವಿ ಹೊಂವ್ದಿ, ಪಿಸ್ವಿ ಹೊಂವ್ದಿ ಚಪ್ಲಾ ಹೊಂವ್ದಿ ಘೆವ್‍ಕಾಶಿ; ವಾಟೆರ್ ಕೊನಾಕ್ಬಿ ನಮಸ್ಕಾರ್ ಕರುಕ್ ಇಬೆ ರಾವ್ನಕಾಶಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:4
13 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಅಪೊಸ್ತಲರಿಗೆ, “ಜನರಿಗೆ ಬೋಧಿಸುವುದಕ್ಕೆ ನಾನು ನಿಮ್ಮನ್ನು ಹಣವಿಲ್ಲದೆ, ಚೀಲವಿಲ್ಲದೆ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದೆನು. ಆದರೆ ನಿಮಗೆ ಏನಾದರೂ ಕೊರತೆ ಆಯಿತೇ?” ಎಂದು ಕೇಳಿದನು. ಅಪೊಸ್ತಲರು, “ಇಲ್ಲ” ಅಂದರು.


ಎಲೀಷನು ಗೇಹಜಿಗೆ, “ಹೊರಡಲು ಸಿದ್ಧನಾಗು. ನನ್ನ ಕೋಲನ್ನು ತೆಗೆದುಕೊಂಡು ಹೋಗು. ಯಾರ ಹತ್ತಿರವಾಗಲಿ ಮಾತನಾಡಲು ನಿಲ್ಲದಿರು! ನೀನು ಯಾರನ್ನಾದರೂ ಸಂಧಿಸಿದರೆ ಅವನಿಗೆ, ‘ಕ್ಷೇಮವಾಗಿರುವೆಯಾ?’ ಎಂದು ಕೇಳದಿರು. ಯಾರಾದರೂ ನಿನ್ನನ್ನು ‘ಕ್ಷೇಮವಾಗಿರುವೆಯಾ?’ ಎಂದು ಕೇಳಿದರೆ, ಅವನಿಗೆ ಉತ್ತರಿಸದಿರು. ಹೀಗೆ ನೀನು ಹೋಗಿ, ನನ್ನ ಕೋಲನ್ನು ಮಗುವಿನ ಮುಖದ ಮೇಲೆ ಇಡು” ಎಂದು ಹೇಳಿದನು.


ಒಳ್ಳೆಯದನ್ನೇ ದೃಷ್ಟಿಸು; ನಿನ್ನ ನೋಟವನ್ನು ನಿನ್ನ ಗುರಿಯ ಮೇಲೆ ಕೇಂದ್ರೀಕರಿಸು.


ನಂತರ ಅವಳು ಒಂದು ತಡಿಯನ್ನು ಕತ್ತೆಯ ಮೇಲೆ ಹಾಕಿ ತನ್ನ ಸೇವಕನಿಗೆ, “ಬೇಗ ಬಾ! ನಾವು ವೇಗವಾಗಿ ಸವಾರಿ ಮಾಡಿಕೊಂಡು ಹೋಗೋಣ. ನಾನು ನಿನಗೆ ಹೇಳಿದಾಗ ನಿಧಾನಿಸು!” ಎಂದು ಹೇಳಿದಳು.


ದಾವೀದನು ಅಹೀಮೆಲೆಕನಿಗೆ, “ನಿನ್ನ ಹತ್ತಿರ ಖಡ್ಗವಾಗಲಿ ಭರ್ಜಿಯಾಗಲಿ ಇದೆಯೇ? ರಾಜನ ಕಾರ್ಯಭಾರವು ಬಹುಮುಖ್ಯವಾದುದು. ನಾನು ಬೇಗ ಹೋಗಬೇಕಾಗಿದೆ. ನಾನು ಕತ್ತಿಯನ್ನಾಗಲೀ ಇತರ ಆಯುಧವನ್ನಾಗಲೀ ತರಲಿಲ್ಲ” ಎಂದು ಕೇಳಿದನು.


ಆದರೆ ಆ ಸೇವಕನು ಅವರಿಗೆ, “ನನ್ನನ್ನು ತಡೆಯಬೇಡಿ. ಯೆಹೋವನು ನನ್ನ ಪ್ರಯಾಣವನ್ನು ಯಶಸ್ವಿಗೊಳಿಸಿದ್ದಾನೆ. ಈಗ ನನ್ನನ್ನು ನನ್ನ ಒಡೆಯನ ಬಳಿಗೆ ಕಳುಹಿಸಿಕೊಡಿ” ಎಂದು ಹೇಳಿದನು.


ನಂತರ ಲಾಬಾನನು ಅವನಿಗೆ ಊಟವನ್ನು ಕೊಟ್ಟನು. ಆದರೆ ಆ ಸೇವಕನು ಊಟಮಾಡದೆ ಅವರಿಗೆ, “ನಾನು ಬಂದ ಉದ್ದೇಶವನ್ನು ತಿಳಿಸದೆ ಊಟಮಾಡುವುದಿಲ್ಲ” ಎಂದು ಹೇಳಿದನು. ಅದಕ್ಕೆ ಲಾಬಾನನು, “ಸರಿ, ಹೇಳು” ಅಂದನು.


ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಾಗಿ ಕರೆದು ಅವರನ್ನು ಇಬ್ಬರಿಬ್ಬರಾಗಿ ಹೊರಗೆ ಕಳುಹಿಸಿದನು. ಯೇಸು ಅವರಿಗೆ ದೆವ್ವಗಳ ಮೇಲೆ ಅಧಿಕಾರವನ್ನು ನೀಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು